the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಆಟೋ ಚಾಲಕರಿಗೆ ಪರಿಹಾರ; 387 ಕೋಟಿಯಲ್ಲಿ ಬಿಡುಗಡೆಯಾಗಿದ್ದು 60 ಕೋಟಿಯಷ್ಟೇ

ಜಿ ಮಹಂತೇಶ್ by ಜಿ ಮಹಂತೇಶ್
June 26, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ಆಟೋ ಚಾಲಕರಿಗೆ ಪರಿಹಾರ ಮೊತ್ತ ಘೋಷಣೆ ಮಾಡಿ 2 ತಿಂಗಳು ಕಳೆದಿದ್ದರೂ ಬಹುತೇಕ ಆಟೋ ಚಾಲಕರಿಗೆ ಪರಿಹಾರದ ಹಣ ದೊರೆತಿಲ್ಲ.

ಆಟೋ ಚಾಲಕರಿಗೆ ತಲಾ ತಲಾ 5,000 ರು.ನಂತೆ ಧನ ಸಹಾಯ ನೀಡುವ ಉದ್ದೇಶಕ್ಕೆ 387.50 ಕೋಟಿ ರು.ಅನುದಾನ ಒದಗಿಸಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಈ ಪೈಕಿ 2020ರ ಜೂನ್‌ 25ರ ಅಂತ್ಯಕ್ಕೆ ಕೇವಲ 60.00 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಎಷ್ಟು ಮಂದಿ ಆಟೋ ಚಾಲಕರಿಗೆ ಪರಿಹಾರ ಧನ ದೊರೆತಿದೆ ಎಂಬ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ಒದಗಿಸಿಲ್ಲ.

ಲಾಕ್‌ಡೌನ್‌ ಪರಿಣಾಮದಿಂದ ಸಂಕಷ್ಟ ಅನುಭವಿಸುತ್ತಿರುವ ಆಟೋ ಚಾಲಕರಿಗೆ ಮತ್ತು ಕೆಎಸ್‌ಆರ್‌ಟಿಸಿ ಸೇರಿದಂತೆ 4 ಸಾರಿಗೆ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗೆ ಎಷ್ಟು ಪ್ರಮಾಣದಲ್ಲಿ ಪರಿಹಾರ ಧನ ವಿತರಿಸಲಾಗಿದೆ ಎಂದು ಆರ್ಥಿಕ ಇಲಾಖೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಪೂರ್ಣ ಮಾಹಿತಿ ಒದಗಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆಟೋ ಚಾಲಕರಿಗೆ ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಯ ಪರಿಹಾರ ಧನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಇಲಾಖೆ ಮಾಹಿತಿ ಒದಗಿಸಿದೆಯಾದರೂ ಖರ್ಚು ಮಾಡಿರುವ ಬಗ್ಗೆ ಸಾರಿಗೆ ಮತ್ತು ಒಳಾಡಳಿತ ಇಲಾಖೆ ಈವರೆವಿಗೂ ಒಂದೇ ಒಂದು ಮಾಹಿತಿಯನ್ನು ನೀಡಿಲ್ಲ ಎಂದು ಗೊತ್ತಾಗಿದೆ.

ಪರಿಹಾರ ಪಡೆಯಲು ಸರ್ಕಾರದ ಸೇವಾ ಸಿಂಧು ಆ್ಯಪ್ ಮೂಲಕ ಆಟೋ ಹಾಗೂ ಕ್ಯಾಬ್ ಚಾಲಕರು ಅರ್ಜಿ ಸಲ್ಲಿಸಿದ್ದಾರಾದರೂ ವಾಸ್ತವದಲ್ಲಿ ಸೇವಾ ಸಿಂಧು ಆ್ಯಪ್ ನಲ್ಲಿನ ಅರ್ಜಿಗಳ ಪರಿಶೀಲನೆಗೆ ಅನುಕೂಲವಾಗುವಂತಹ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿಲ್ಲ ಎನ್ನಲಾಗಿದೆ. ಹೀಗಾಗಿ ಆಟೋ ಚಾಲಕರಿಗೆ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿದು ಬಂದಿದೆ.

ನೇರ ನಗದು ಮೂಲಕ ನೆರವು ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮತ್ತು ಸಾರಿಗೆ ಮತ್ತು ಹಣಕಾಸು ಇಲಾಖೆಗಳ ನಡುವೆ ದತ್ತಾಂಶವೂ ಪರಿಣಾಮಕಾರಿಯಾಗಿ ಸಂಯೋಜಿತಗೊಂಡಿಲ್ಲ.ತಾಂತ್ರಿಕ ಅಡಚಣೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ಪರಿಹಾರ ಧನ ವಿತರಣೆಯಲ್ಲಿ ಮಾಡಿರುವ ವಿಳಂಬಕ್ಕೆ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆಟೋ ಮತ್ತು ಕ್ಯಾಬ್ ಚಾಲಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈಗಲೂ ಒದ್ದಾಡುತ್ತಿದ್ದಾರೆ. ಲಭ್ಯವಿರುವ ಮಾಹಿತಿಯಂತೆ 1.30 ಲಕ್ಷ ಅರ್ಜಿಗಳಷ್ಟೇ ಇಲಾಖೆಗೆ ಸ್ವೀಕೃತವಾಗಿದೆ. ಆದರೆ ರಾಜ್ಯದಲ್ಲಿ ಅಂದಾಜು 7.75 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರಿದ್ದಾರೆ.

ಚಾಸಿ ನಂಬರ್ ಮತ್ತು ಇತರೆ ವಿವರಗಳನ್ನು ಆನ್‌ಲೈನ್‌ ಮೂಲಕ ಒದಗಿಸಿದರೂ ತಂತ್ರಾಂಶ ಸ್ವೀಕರಿಸುತ್ತಿಲ್ಲ.ಹಲವು ಸಂದರ್ಭಗಳಲ್ಲಿ, ತಾಂತ್ರಿಕ ತೊಂದರೆಗಳಿಂದಾಗಿ ಚಾಲಕರ ಚಾಲನಾ ಪರವಾನಗಿ ಮತ್ತು ಆಧಾರ್‌ ಸಂಖ್ಯೆಯೂ ಸ್ವೀಕೃತಗೊಳ್ಳುತ್ತಿಲ್ಲ ಎನ್ನಲಾಗಿದೆ.

ಬಹುತೇಕ ಆಟೋ ಅಥವಾ ಟ್ಯಾಕ್ಸಿಗಳು ಚಾಲಕರ ಹೆಸರಿನಲ್ಲಿಲ್ಲ. ವಾಹನಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಮಾಲೀಕರ ಬಳಿ ಇರುತ್ತವೆ. ಆದರೆ ಅರ್ಜಿಯಲ್ಲಿ ಸಮಸ್ತ ದಾಖಲೆಗಳನ್ನು ಲಗತ್ತಿಸಬೇಕು. ಡ್ರೈವಿಂಗ್ ಲೈಸೆನ್ಸ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿ ಉಲ್ಲೇಖವಾದರೂ ಅರ್ಜಿ ಸ್ವೀಕೃತವಾಗುವುದಿಲ್ಲ ಎಂದು ಬಹುತೇಕ ಆಟೋ ಚಾಲಕರು ಆರೋಪಿಸುತ್ತಾರೆ.

ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಬಿಎಂಟಿಸಿಯ ಅಧಿಕಾರಿ, ಸಿಬ್ಬಂದಿಗೆ 2020ರ ಏಪ್ರಿಲ್‌ ಮತ್ತು ಮೇ ತಿಂಗಳ ವೇತನ ಭರಿಸಲು ತಿಂಗಳಿಗೆ 325.00 ಕೋಟಿ ರು. ನಂತೆ ಒಟ್ಟು 650.00 ಕೋಟಿ ರು. ಬಿಡುಗಡೆ ಮಾಡಿರುವುದು ಆರ್ಥಿಕ ಇಲಾಖೆಯ ಪತ್ರದಿಂದ ತಿಳಿದು ಬಂದಿದೆ.

Tags: Autorickshawb l santhoshB S YediyurappaBeneficiariesBJP governmentBMTCCab DriversCash Reliefchief ministerChief SecretaryCompensationcongressContingency FundCovid-19DisbursementEstimatesH D Devegowdah d kumaraswamyHomeDepartmentKSRTCLabour MinisterLaxmanSavadiLockdown ReliefN R SantoshN RavikumarNEKRTCNWKRTCSiddaramaiahState GovernmentSupplementaryT M Vijay BhaskarTransport
Advertisement Banner
Previous Post

ಎನ್‌ ಆರ್‌ ಸಂತೋಷ್‌ ರಂಗಪ್ರವೇಶ; ಪಶು ವೈದ್ಯಕೀಯ ವಿಶ್ವವಿದ್ಯಾಲಯ ಮೀನಮೇಷ

Next Post

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

ಜಿ ಮಹಂತೇಶ್

ಜಿ ಮಹಂತೇಶ್

Next Post

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

Discussion about this post

Recommended

ನಿಯಂತ್ರಣಕ್ಕೆ ಸಿಗದ ಕೋವಿಡ್‌; ಶೇ. 32.71ರಷ್ಟು ಏರಿಕೆಯಾಗಿರುವ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿತೇ?

5 years ago

ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd