the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

thefilestack by thefilestack
January 9, 2024
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ ಬೇಡಿಕೆಗೆ ಅನುಗುಣವಾಗಿ 6,242.53 ಕೋಟಿ ರು. ಅಧಿಕ ಸಹಾಯ ಧನ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ. ಇದನ್ನು ಪರಿಶೀಲಿಸಿರುವ ಹಣಕಾಸು ಇಲಾಖೆಯು  ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನ ಸೀಮಿತಗೊಳಿಸಬೇಕು ಎಂದು ನಿಲುವು ತಳೆದಿರುವುದು ಇದೀಗ ಬಹಿರಂಗವಾಗಿದೆ.

 

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಮತ್ತು 10 ಹೆಚ್‌ ಪಿ ವರೆಗಿನ ನೀರಾವರಿ ಪಂಪ್‌ ಸೆಟ್‌ಗಳ ಉಚಿತ ವಿದ್ಯುತ್‌ ಸರಬರಾಜು ಸಂಬಂಧಿಸಿದಂತೆ ವಿದ್ಯುತ್‌ ಸರಬರಾಜು  ಕಂಪನಿಗಳು ಸಲ್ಲಿಸಿರುವ ಅಧಿಕ ಸಹಾಯಧನ ಬಿಡುಗಡೆಯ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಇದೀಗ ತಲೆ ಮೇಲೆ ಕೈ ಹೊತ್ತು ಕುಳಿತಿದೆ.

 

ಬೊಕ್ಕಸಕ್ಕೆ ಹೊರೆಯಾದರೂ  ಗೃಹ ಜ್ಯೋತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ಅವರು ವಿಧಾನಸಭೆ ಅಧಿವೇಶನದಲ್ಲಿ ಲಿಖಿತ ಉತ್ತರ ನೀಡಿರುವ ಬೆನ್ನಲ್ಲೇ ಇದೀಗ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, 10 ಹೆಚ್‌ಪಿವರೆಗಿನ ಉಚಿತ ವಿದ್ಯುತ್‌ ಸರಬರಾಜು ಯೋಜನೆಗೆ 6,242.53 ಕೋಟಿ ರು. ಅಧಿಕ ಸಹಾಯಧನಕ್ಕಾಗಿ ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕೆಲ ( FD/423/EXP1/2023) ದಾಖಲೆಗಳು ಲಭ್ಯವಾಗಿವೆ.

 

ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನ ಸೀಮಿತಗೊಳಿಸಬೇಕು ಎಂದು ಆರ್ಥಿಕ ಇಲಾಖೆಯು ತಳೆದಿರುವ ನಿಲುವು ಇದೀಗ ಸರ್ಕಾರವನ್ನು ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಗಳಿವೆ.

 

‘ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನವನ್ನು ಸೀಮಿತಗೊಳಿಸಬೇಕು ಎನ್ನುವುದು ಆರ್ಥಿಕ ಇಲಾಖೆಯ ನಿಲುವಾಗಿದ್ದು ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಸರಬರಾಜು ಮಾಡಿ ಈಗ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಕೋರಲಾಗುತ್ತಿದೆ,’ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

 

2023-24ನೇ ಸಾಲಿನ ಆಯವ್ಯಯದಲ್ಲಿ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, 10 ಹೆಚ್‌ಪಿವರೆಗಿನ ನೀರಾವರಿ ವಿದ್ಯುತ್‌ ಪಂಪ್‌ಸೆಟ್‌ಗಳ ಉಚಿತ ವಿದ್ಯುತ್‌ ಸರಬರಾಜಿಗಾಗಿ 13,143 ಕೋಟಿ ರು.ಗಳ ಸಹಾಯಧನವನ್ನು ಹಂಚಿಕೆ ಮಾಡಿ ಒದಗಿಸಿದೆ. ಇದೇ ಆರ್ಥಿಕ ಸಾಲಿನ 2023ರ ಏಪ್ರಿಲ್‌ನಿಂದ ನವೆಂಬರ್‌ ಮಾಹೆಯಲ್ಲಿ ಈ ಯೋಜನೆಗಳಡಿ ಉಚಿತ ವಿದ್ಯುತ್‌ ಸರಬರಾಜುವಿಗಾಗಿ 14,803.53 ಕೋಟಿ ರು. ವಾಸ್ತವಿಕ ವಿದ್ಯುತ್‌ ಬೇಡಿಕೆ ಇದೆ ಎಂಬುದು ತಿಳಿದು ಬಂದಿದೆ.

 

ಏಪ್ರಿಲ್‌ನಲ್ಲಿ 2,549.65 ಕೋಟಿ ರು. ಬೇಡಿಕೆ ಪೈಕಿ 1,500.00 ಕೋಟಿ ರು. ಬಿಡುಗಡೆ ಮಾಡಿತ್ತು. ಬಾಕಿ 1,049.65 ಕೋಟಿ ರು. ಇತ್ತು. ಮೇ ತಿಂಗಳಿನಲ್ಲಿ 2,620.31 ಕೋಟಿ ರು. ಬೇಡಿಕೆ ಪೈಕಿ 1,500 ಕೋಟಿ ರು. ಬಿಡುಗಡೆ ಮಾಡಿತ್ತು. ಬಾಕಿ 1,120.31 ಕೋಟಿ ರು. ಕೊರತೆ ಕಂಡುಬಂದಿತ್ತು. 10,561 ಕೋಟಿ ರು  ಸಹಾಯಧನದ ಪೈಕಿ  ಬಿಡುಗಡೆಗೆ 2,582 ಕೋಟಿ ರು. ಬಾಕಿ ಇತ್ತು.

 

ಜೂನ್‌ನಲ್ಲಿ 1,466.23 ಕೋಟಿ ರು. ಬೇಡಿಕೆ ಪೈಕಿ 690.50 ಕೋಟಿ ರು. ಬಿಡುಗಡೆ ಮಾಡಿದ್ದ ಇಲಾಖೆಯು 775.73 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಜುಲೈನಲ್ಲಿ 1,833.38 ಕೋಟಿ ರು. ಬೇಡಿಕೆ ಇತ್ತಾದರೂ ಇದರಲ್ಲಿ 690.50 ಕೋಟಿಯನ್ನಷ್ಟೇ ಬಿಡುಗಡೆ ಮಾಡಿತ್ತು. ಹೀಗಾಗಿ 1,142.88 ಕೋಟಿ ರು ಕೊರತೆ ಕಂಡುಬಂದಿತ್ತು ಎಂಬುದು ಗೊತ್ತಾಗಿದೆ. ಸ

 

ಆಗಸ್ಟ್‌ನಲ್ಲಿ 1,122.09 ಕೋಟಿ ರು ಬೇಡಿಕೆ ಪೈಕಿ 1.045.00 ಕೋಟಿ ರು. ಬೇಡಿಕೆ ಪೈಕಿ 77.09 ಕೋಟಿ ರು. ಬಿಡುಗಡೆ ಮಾಡಿತ್ತು. ಸೆಪ್ಟಂಬರ್‌ನಲ್ಲಿ 1,962.29 ಕೋಟಿ ರು. ಬೇಡಿಕೆಯಲ್ಲಿ 1,045.00 ಕೋಟಿ ರು. ಬಿಡುಗಡೆ ಮಾಡಿದ್ದ ಇಲಾಖೆಯು 917.29 ಕೋಟಿ ರು. ಬಾಕಿ ಉಳಿಸಿಕೊಂಡಿತ್ತು. ಅಕ್ಟೋಬರ್‌ನಲ್ಲಿ 1,644.80 ಕೋಟಿ ರು. ಬೇಡಿಕೆ ಇತ್ತಾದರೂ ಇದರಲ್ಲಿ 1,045.00 ಕೋಟಿ ರು. ಬಿಡುಗಡೆಗೊಳಿಸಿ ಇನ್ನೂ 559.59 ಕೋಟಿ ರು. ಬಾಕಿ ಇರಿಸಿಕೊಂಡಿತ್ತು ಎಂಬುದು ತಿಳಿದು ಬಂದಿದೆ.

 

ಇದಲ್ಲದೇ ಹೆಚ್ಚುವರಿ ವಿದ್ಯುತ್‌ ಬಳಕೆಯಿಂದ ಬೇಡಿಕೆ ಹೆಚ್ಚಾಗಿರುವ ಕಾರಣ ಅಧಿಕ ಸಹಾಯಧನದ ರೂಪದಲ್ಲಿ  4,0479.68 ಕೋಟಿ ರು.ಗಳನ್ನು ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ್ದ ಅರ್ಥಿಕ ಇಲಾಖೆಯು 2,000 ಕೋಟಿ ರು.ಗಳನ್ನು ಮುಂಗಡ ಸಹಾಯಧನಕ್ಕೆ ಸಮ್ಮತಿ ವ್ಯಕ್ತಪಡಿಸಿ ಬಿಡುಗಡೆ ಮಾಡಿತ್ತು. ಈ ಮೊತ್ತವೂ ಸೇರಿದಂತೆ ಇದುವರೆಗೆ 10,561 ಕೋಟಿ ರು.ಗಳನ್ನು ಸಹಮತಿಸಿ ಬಿಡುಗಡೆ ಮಾಡಿದೆ.

 

ಆದರೆ 2023ರ ಏಪ್ರಿಲ್‌ರಿಂದ 2023ರ ನವೆಂಬರ್‌ವರೆಗೆ ಮುಂಗಾರು ಮಳೆ ಕೊರತೆ ಪರಿಣಾಮ  ಹೆಚ್ಚುವರಿ ವಿದ್ಯುತ್‌ ಬಳಕೆಯಿಂದಾಗಿ ಬೇಡಿಕೆಯು ಹೆಚ್ಚಾಗಿದೆ. ಹೀಗಾಗಿ ಒಟ್ಟಾರೆ 14,803.53 ಕೋಟಿ ರು. ವಾಸ್ತವಿಕ ಬೇಡಿಕೆ ಇರಿಸಿತ್ತು. ಇದೇ ಅವಧಿಯಲ್ಲಿ 8,561.00 ಕೋಟಿ ರು. (2,000 ಕೋಟಿ ಮುಂಗಡ ಸಹಾಯಧನ ಹೊರತುಪಡಿಸಿ), ಸಹಾಯಧನ, ಇದಲ್ಲದೇ ಹೆಚ್ಚುವರಿ ವಿದ್ಯುತ್‌ ಬಳಕೆಯಿಂದ ಹೆಚ್ಚಾಗಿರುವ ಬೇಡಿಕೆಗೆ ಅನುಗುಣವಾಗಿ 6,242 ಕೋಟಿ ರು ಕೋರಿದೆ. ಅಲ್ಲದೇ ಡಿಸೆಂಬರ್‌ ತಿಂಗಳಿನಿಂದ 2024 ಮಾರ್ಚ್‌ವರೆಗೂ ವಾಸ್ತವಿಕ ಬೇಡಿಕೆ ಹೆಚ್ಚಳವಾಗುವ ಸಂಭವವಿರುವುದು ಗೊತ್ತಾಗಿದೆ.

 

ಹೀಗಾಗಿ 2,582 ಕೋಟಿ ರು.ಗಳನ್ನು ಬಿಡುಗಡೆ ಮಾಡಬೇಕು ಎಂದು ಇಂಧನ ಇಲಾಖೆಯು ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ‘ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನವನ್ನು ಸೀಮಿತಗೊಳಿಸಬೇಕು ಎನ್ನುವುದು ಆರ್ಥಿಕ ಇಲಾಖೆಯ ನಿಲುವಾಗಿದ್ದು ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಸರಬರಾಜು ಮಾಡಿ ಈಗ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಕೋರುತ್ತಿದೆ,’ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿದೆ.

 

ಈ ಪ್ರಸ್ತಾವನೆಯ ಕುರಿತು ಆದೇಶಕ್ಕಾಗಿ ಕಡತವನ್ನು ಮಂಡಿಸಿದೆ ಎಂದು ತಿಳಿದು ಬಂದಿದೆ.

Tags: AdditionalBESCOMCHESCOMD K ShivakumarElectricityenergyESCOMSFinancegrantsGruha Jyotih d kumarswamyJeschomKSRTCL K AteqMESCOMPower DemandPower SubsidyShaktiSiddaramaiahaSubsidyಅನುದಾನಆಯವ್ಯಯಆರ್ಥಿಕಇಂಧನಕುಟೀರ ಜ್ಯೋತಿಗೃಹ ಜ್ಯೋತಿಡಿ ಕೆ ಶಿವಕುಮಾರ್ಬಾಕಿಭಾಗ್ಯ ಜ್ಯೋತಿವಿದ್ಯುತ್‌ಸಬ್ಸಿಡಿಸಹಮತಿಸಹಾಯ ಧನಸಿದ್ದರಾಮಯ್ಯಹಣಕಾಸುಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಬಿಎಂಎಸ್‌ ಖಾಸಗಿ ವಿಶ್ವವಿದ್ಯಾಲಯ ಅಧಿಸೂಚನೆ ಪ್ರಕಟ; ವಿವಾದವನ್ನು ಮೈಮೇಲೆ ಎಳೆದುಕೊಂಡಿತೇ?

Next Post

‘ಚನ್ನಮ್ಮನ ಕಿತ್ತೂರು ತಾಲೂಕು’; ಮರು ನಾಮಕರಣಗೊಳಿಸಲು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

thefilestack

thefilestack

Next Post

'ಚನ್ನಮ್ಮನ ಕಿತ್ತೂರು ತಾಲೂಕು'; ಮರು ನಾಮಕರಣಗೊಳಿಸಲು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

Recommended

ಡ್ರಗ್ಸ್‌ ದಂಧೆ; 3 ವರ್ಷದಲ್ಲಿ 30 ಕೋಟಿ ಮೌಲ್ಯದ 15,778 ಕೆ ಜಿ ಮಾದಕ ಪದಾರ್ಥ ವಶ

5 years ago

1,054 ಮಸೀದಿ, ಚರ್ಚ್‌ಗಳು ನೋಂದಣಿಯಾಗಿಲ್ಲ, ಸರ್ಕಾರದ ಸುಪರ್ದಿಗೆ ಪಡೆಯುವ ಪ್ರಸ್ತಾವವಿಲ್ಲ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd