the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍‌ಗಳ ಮೇಲೆ ಅಮಾನತು ತೂಗುಗತ್ತಿ

thefilestack by thefilestack
December 13, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍‌ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ ಕರ್ತವ್ಯ ಲೋಪ ಎಸಗಿರುವುದು ಇದೀಗ ಬಹಿರಂಗಗೊಂಡಿದೆ.

 

ವಿಶೇಷವೆಂದರೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಪಟ್ಟಿಯಲ್ಲಿ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ 15 ಮಂದಿ ಇನ್ಸ್‌ಪೆಕ್ಟರ್‍‌ಗಳು ಇದ್ದಾರೆ.

 

ಆಯಕಟ್ಟಿನ ಜಾಗಕ್ಕೆ ವರ್ಗಾವಣೆಗೊಂಡರೂ ಪೊಲೀಸ್‌ ಇನ್ಸ್‌ಪೆಕ್ಟರ್‍‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಆದೇಶಗಳನ್ನೇ ಧಿಕ್ಕರಿಸಿ ಉದ್ಧಟತನವನ್ನು ಈಗಲೂ ಮುಂದುವರೆಸಿದ್ದಾರೆ. ಈ ಕುರಿತು ಇಲಾಖೆ ಆಡಳಿತ ವಿಭಾಗದ ಡಿಜಿಪಿ ಸೌಮೇಂದು ಮುಖರ್ಜಿ ಅವರು ಶಿಸ್ತು ಕ್ರಮ ಜರುಗಿಸುವ ಸಂಬಂಧ ಕಾರಣ ಕೇಳಿ ನೋಟೀಸ್‌ ಜಾರಿಗೊಳಿಸಿದ್ದಾರೆ.

 

2023ರ ಡಿಸೆಂಬರ್‍‌ 7ರಂದು ಹೊರಡಿಸಿರುವ ಕಾರಣ ಕೇಳುವ ಸೂಚನಾ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಲ್ಲದೇ ವರ್ಗಾವಣೆಗೊಂಡ ಸ್ಥಳಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಇನ್ಸ್‌ಪೆಕ್ಟರ್ ‌ಗಳನ್ನು ಅಮಾನತುಗೊಳಿಸಿ ಇಲಾಖೆ ವಿಚಾರಣೆ ನಡೆಸಲು ಮುಂದಾಗಿದೆಯಾದರೂ ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಕಡೆಯ ಅವಕಾಶವನ್ನೂ ನೀಡಿದೆ.

 

2023ರ ಜೂನ್‌ 2, ಸೆ.16, ಸೆ.22, ಅಕ್ಟೋಬರ್‍‌ 3, ನವೆಂಬರ್‍‌ 17, 18 ಮತ್ತು 27ರಂದು ಪೊಲೀಸ್‌ ಇನ್ಸ್‌ಪೆಕ್ಟರ್‍‌ ವೃಂದದ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಪೊಲೀಸ್‌ ಇಲಾಖೆಯು ಆದೇಶ ಹೊರಡಿಸಿತ್ತು. ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ವರ್ಗಾವಣೆ ಪಟ್ಟಿಯು ಅನುಮೋದಿತಗೊಂಡಿತ್ತು. ಆದರೂ ಈ ಪೈಕಿ 44 ಇನ್ಸ್‌ಪೆಕ್ಟರ್‍‌ಗಳು ವರ್ಗಾವಣೆಗೊಂಡ ಜಾಗಕ್ಕೆ ವರದಿ ಮಾಡಿಕೊಂಡಿಲ್ಲ. ಇದು ಪೊಲೀಸ್‌ ಇಲಾಖೆಯಲ್ಲಿನ ಅಶಿಸ್ತಿಗೆ ಹಿಡಿದ ಕೈಗನ್ನಡಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

 

ವರ್ಗಾವಣೆಗೊಂಡಿದ್ದ ಇನ್ಸ್‌ಪೆಕ್ಟರ್‍‌ಗಳ ಪೈಕಿ 44 ಮಂದಿ ಇನ್ಸ್‌ಪೆಕ್ಟರ್‍‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ಹೀಗಾಗಿ ಇವರೆಲ್ಲರ ವಿರುದ್ಧವೂ ಕರ್ತವ್ಯಲೋಪ ಮತ್ತು ಹಿರಿಯ ಅಧಿಕಾರಿಗಳ ಆದೇಶವನ್ನು ಉಲ್ಲಂಘಿಸಿರುವ ಆಪಾದನೆ ಹೊರಿಸಿರುವುದು ನೋಟೀಸ್‌ನಿಂದ ತಿಳಿದು ಬಂದಿದೆ.

 

‘ನೀವುಗಳು ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ಇದುವರೆಗೂ ವರದಿ ಮಾಡಿಕೊಳ್ಳದೇ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತೀರಿ. ಸದರಿ ಪೊಲೀಸ್ ಠಾಣೆ ಮತ್ತು ಘಟಕಗಳಲ್ಲಿನ ಕಾರ್ಯನಿರ್ವಹಣೆ ಕುಂಠಿತಗೊಳ್ಳಲು ಪರೋಕ್ಷವಾಗಿ ಕಾರಣರಾಗಿದ್ದೀರಿ. ಕೆಸಿಎಸ್‌ (ನಡತೆ) ನಿಯಮಗಳು 2021) ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿದ್ದೀರಿ. ಈ ಮೂಲಕ ನಿಮ್ಮ ಕರ್ತವ್ಯದಲ್ಲಿ ಅತೀವ ಬೇಜವಾಬ್ದಾರಿ, ಉದ್ಧಟತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ತೋರಿ ಕರ್ತವ್ಯಲೋಪವೆಸಗಿರಿರುತ್ತೀರಿ,’ ಎಂದು ಸೂಚನಾ ಪತ್ರದಲ್ಲಿ ಆರೋಪ ಹೊರಿಸಿರುವುದು ಗೊತ್ತಾಗಿದೆ.

 

ವರ್ಗಾವಣೆ ಸಮಯದಲ್ಲಿ ವರದಿ ಮಾಡದೇ ಇರುವ ಗೈರು ಹಾಜರಿ ಅವಧಿಯನ್ನು ಇತ್ಯರ್ಥ ಪಡಿಸುವ ಬಗ್ಗೆ ಸರ್ಕಾರದ ಆದೇಶವನ್ನೂ ಹೊರಡಿಸಲಾಗಿದೆ.

 

ಅದೇ ರೀತಿ ‘ ನಿಮ್ಮ  ಬೇಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸಿ ನಿಮ್ಮನ್ನು ಕರ್ನಾಟಕ ರಾಜ್ಯ ಪೊಲೀಸ್‌ (ಶಿಸ್ತು ನಡವಳಿ)ನಿಯಮಗಳು 1965/89ರ ನಿಯಮ 5ರ ಪ್ರಕಾರ ಸೇವೆಯಿಂದಲೇ ಅಮಾನತುಗೊಳಿಸಿ ಮತ್ತು ನಿಯಮ 6ರ ಪ್ರಕಾರ ಇಲಾಖೆ ವಿಚಾರಣೆಗೆ ಉದ್ದೇಶಿಸಲಾಗಿದೆ,’ ಎಂದು ಸೂಚನಾ ಪತ್ರದಲ್ಲಿ ತಿಳಿಸಿರುವುದು ತಿಳಿದು ಬಂದಿದೆ.

 

ವರ್ಗಾವಣಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಪೊಲೀಸ್‌ ಇಲಾಖೆಯು ಕಡೆಯ ಅವಕಾಶವನ್ನೂ ನೀಡಿದೆ. ‘ಕೂಡಲೇ ವರದಿ ಮಾಡಿಕೊಳ್ಳದಿದ್ದಲ್ಲಿ ಅಮಾನತುಗೊಳಿಸಿ ನಿಮ್ಮ ವಿರುದ್ಧ ಮೇಲೆ ಸೂಚಿಸಿರುವಂತೆ ಏಕೆ ಶಿಸ್ತು ಕ್ರಮ ಜರುಗಿಸಬಾರದು,’ ಎಂಬ ವಿವರಣೆ ಸಲ್ಲಿಸಲು ಅವಕಾಶವನ್ನೂ ನೀಡಿದೆ.

 

ವರದಿ ಮಾಡಿಕೊಳ್ಳದ ಇನ್ಸ್‌ಪೆಕ್ಟರ್‍‌ಗಳ ಪಟ್ಟಿ

 

ಹರೀಶ್‌ ಬಿ ಸಿ (ಪಿಐ ಸಿಐಡಿ ಘಟಕ್ಕೆ ವರ್ಗಾವಣೆ ಆದೇಶದಲ್ಲಿ ಇರುವವರು), ಅರುಣ್‌ ಎಸ್‌ ಮುರುಗುಂಡಿ (ಲೋಕಾಯುಕ್ತ) ಈಶ್ವರಿ (ಲೋಕಾಯುಕ್ತ), ಕುಮಾರ್‍ ಎ ಪಿ ‌ ( ಲೋಕಾಯುಕ್ತ), ರವಿಕುಮಾರ್‍‌ ಆರ್‍‌ ಜಿ (ರಾಜ್ಯ ಗುಪ್ತವಾರ್ತೆ), ಸತೀಶ್‌ ಎಸ್‌ ಹೆಚ್‌ (ಲೋಕಾಯುಕ್ತ), ಎಸ್‌ ಎಸ್‌ತೇಲಿ (ಲೋಕಾಯುಕ್ತ), ಸಿದ್ದೇಶ ಎಂ ಡಿ (ಲೋಕಾಯುಕ್ತ), ವಿಜಯ್‌ ಎ ಮುರುಗುಂಡಿ (ಲೋಕಾಯುಕ್ತ), ಯೆರಿಸ್ವಾಮಿ (ವಿವಿಐಪಿ ಭದ್ರತೆ), ಗುರುಪ್ರಸಾದ್‌ (ಐಎಸ್‌ಡಿ), ಉದಯರವಿ (ಟಿಟಿಐ), ಮಂಜೇಗೌಡ (ಟಿಟಿಐ), ಷಣ್ಮುಖಪ್ಪ ಜಿ ಆರ್‍‌ (ಲೋಕಾಯುಕ್ತ), ರಾಘವೇಂದ್ರಬಾಬು (ಲೋಕಾಯುಕ್ತ),

 

ಸತೀಶ್‌ ಎಂ ಆರ್‍‌ (ಕಾವೂರು, ಮಂಗಳೂರು ನಗರ), ಲಕ್ಷ್ಮಯ್ಯ ಎಂ ಬಿ (ಲೋಕಾಯುಕ್ತ), ಕಾಳಪ್ಪ ಬಡಿಗೇರ್‍‌ (ಲೋಕಾಯುಕ್ತ), ಬಸಲಿಂಗಯ್ಯ ಸುಬ್ರಾಪುರ್‍‌ ಮಠ್‌ (ಸಿಐಡಿ), ಮಂಜುನಾಥ್‌ ಡಿ ಆರ್‍‌ (ಎಟಿಸಿ, ಬೆಂಗಳೂರು ಘಟಕ), ಮುನಿರೆಡ್ಡಿ (ಮಾಜಿ ಪ್ರಧಾನ ಮಂತ್ರಿಗಳ ಭದ್ರತೆ), ರೋಹಿತ್‌ ಸಿ ಇ (ಸಾಗರ ಗ್ರಾಮಾಂತರ ವೃತ್ತ), ಸಂದೀಪ್‌ ಪಿ ಕೌರಿ (ಎಸ್‌ ಆರ್‍‌ ಪುರ ವೃತ್ತ, ಚಿಕ್ಕಮಗಳೂರು), ಸತೀಶ್‌ ಜೆ ಜೆ (ಬರ್ಕೆ, ಮಂಗಳೂರು ನಗರ), ಶರಣಬಸಪ್ಪ (ಐಜಿಪಿ ಕಚೇರಿ, ಕಲ್ಬುರ್ಗಿ), ಶಿವಕುಮಾರ್‍‌ ಹೆಚ್‌ ಆರ್‍‌ (ಶೃಂಗೇರಿ ), ಶಿವಕುಮಾರ್‍‌ ಟಿ ಸಿ (ಲೋಕಾಯುಕ್ತ),

 

ಶಿವರಾಜು ಎಸ್‌ (ವಿವಿಐಪಿ ಭದ್ರತೆ, ಬೆಂಗಳೂರು), ಸುರೇಶ್‌ ಕೆ (ಸಂಚಾರ, ಯೋಜನೆ, ಬೆಂಗಳೂರು), ವರುಣ್‌ಕುಮಾರ್‍‌ ಎಂ ಆರ್‍‌ (ಲೋಕಾಯುಕ್ತ), ವಸಂತ್‌ ಎಸ್‌ ಹೆಚ್‌ (ಮಂಗಳೂರು ಪೂರ್ವ ಸಂಚಾರ ಠಾಣೆ), ವೆಂಕಟೇಶ್‌ ಎಸ್‌ ಹೆಚ್‌ (ಸಿಐಡಿ), ಚಂದ್ರಶೇಖರ್‍‌ ಎನ್‌ ಹರಿಹರ (ಕೋಟೆ, ಶಿವಮೊಗ್ಗ), ಸ್ವರ್ಣ ಜಿ ಎಸ್‌ (ಬಸವನಹಳ್ಳಿ ಚಿಕ್ಕಮಗಳೂರು), ಶ್ರೀನಿವಾಸ್‌ ಬಿ ಎಂ (ಲೋಕಾಯುಕ್ತ), ಬಸವರಾಜ್‌ ಎಸ್ ತೇಲಿ (ಸಿಐಡಿ), ಶ್ರೀಧರ್‍‌ ವಸಂತ್‌ ಸತಾರೆ (ಪಿಟಿಎಸ್‌ ಖಾನಾಪುರ), ಜೀವನ್‌ ಕೆ (ಲೋಕಾಯುಕ್ತ), ಮೋಹನ್‌ ಕುಮಾರ್‍‌ ಎಂ (ಲೋಕಾಯುಕ್ತ), ಲಕ್ಷ್ಮಿನಾರಾಯಣ ಕೆ (ಐಎಸ್‌ಡಿ), ರಾಮಪ್ಪ ವಿ ಸಾವಳಗಿ (ಡಿಎಸ್‌ಬಿ ಬೀದರ್‍‌), ಶರಣಪ್ಪಗೌಡ ಬಿ ಗೌಡರ್‍‌ (ಲೋಕಾಯುಕ್ತ), ಕರುಣೇಶ್‌ ಗೌಡ (ಲೋಕಾಯುಕ್ತ), ದೌಲತ್‌ ಎನ್‌ ಕುರಿ (ಡಿಎಸ್‌ಬಿ ಗದಗ್‌) ಅವರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ ಎಂಬುದು ತಿಳಿದು ಬಂದಿದೆ.

 

ಕಳೆದ ವರ್ಷದಲ್ಲಿಯೂ ಪೊಲೀಸ್‌ ಇನ್ಸ್‌ಪೆಕ್ಟರ್‍‌ಗಳು ಉದ್ಧಟತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ತೋರಿ, ಕರ್ತವ್ಯಲೋಪ ಎಸಗಿದ್ದರು. ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ 38 ಇನ್‌ಸ್ಪೆಕ್ಟರ್‌ಗಳು ವಿರುದ್ಧ ಕಠಿಣ ಕ್ರಮವನ್ನೂ ಕೈಗೊಂಡಿಲ್ಲ.

Tags: D K ShivakumarDerlictionDGIGPDR G ParameshwarDutyh d kumarswamyInspectorspolicePolice InspectorSiddaramaiahaSoumendu MukherjeTransfersಅನುಮೋದನೆಅಶಿಸ್ತುಆದೇಶಉದ್ಧಟತನಉಲ್ಲಂಘನೆಕರ್ತವ್ಯಕರ್ತವ್ಯ ಲೋಪಗೃಹ ಇಲಾಖೆಡಾ ಜಿ ಪರಮೇಶ್ವರಡಿ ಕೆ ಶಿವಕುಮಾರ್ಡಿಜಿಐಜಿಪಿಪೊಲೀಸ್‌ ಇನ್ಸ್‌ಪೆಕ್ಟರ್‌ಪೊಲೀಸ್‌ ಠಾಣೆಬೇಜವಾಬ್ದಾರಿಲೋಕಾಯುಕ್ತವರದಿವರ್ಗಾವಣೆಸಿದ್ದರಾಮಯ್ಯಸೌಮೆಂದು ಮುಖರ್ಜಿಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

‘ವಿದ್ಯುತ್‌ ತಂತಿ ಕಡಿತಗೊಂಡು ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ,’ ಎಂಬ ದೂರು ನಿರ್ಲಕ್ಷ್ಯಿಸಿದ್ದೇ ಸಾವಿಗೆ ಕಾರಣವಾಯಿತೇ?

Next Post

ಹಾಸಿಗೆ ಪೂರೈಕೆ ಟೆಂಡರ್‌; 50 ಲಕ್ಷ ರು. ವಂಚನೆ ಆರೋಪ, ಅನಂತ್‌ ನಾಯಕ್‌ ಸೇರಿ 4 ಮಂದಿ ವಿರುದ್ಧ ಎಫ್‌ಐಆರ್‍‌

thefilestack

thefilestack

Next Post

ಹಾಸಿಗೆ ಪೂರೈಕೆ ಟೆಂಡರ್‌; 50 ಲಕ್ಷ ರು. ವಂಚನೆ ಆರೋಪ, ಅನಂತ್‌ ನಾಯಕ್‌ ಸೇರಿ 4 ಮಂದಿ ವಿರುದ್ಧ ಎಫ್‌ಐಆರ್‍‌

Recommended

‘ದಿ ಫೈಲ್‌’ ವರದಿ ಪರಿಣಾಮ; ಪುಸ್ತಕಗಳ ತರಾತುರಿ ಆಯ್ಕೆಗೆ ತಡೆ, ಅವಧಿ ವಿಸ್ತರಣೆ

6 years ago

ಪ್ರತಾಪ್‌ ಸೋದರ ವಿಕ್ರಂ ಸಿಂಹ ವಿರುದ್ಧ ಪ್ರಕರಣ; ತಹಶೀಲ್ದಾರ್‍‌ ನೇತೃತ್ವದ ಮಹಜರು ವರದಿ ಬಹಿರಂಗ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd