the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LOKAYUKTA

ಎಸಿಬಿ; 5 ವರ್ಷದಲ್ಲಿ ಕೇವಲ 310 ಪ್ರಕರಣ ದಾಖಲು, 63 ಪ್ರಕರಣಗಳಲ್ಲಷ್ಟೇ ತನಿಖೆ ಮುಕ್ತಾಯ

thefilestack by thefilestack
August 16, 2022
in LOKAYUKTA
0
0
SHARES
0
VIEWS
Share on FacebookShare on Twitter

ಬೆಂಗಳೂರು; ಲಂಚ ಪ್ರಕರಣವೊಂದರಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಐಎಎಸ್‌ ಮಂಜುನಾಥ್‌ ಅವರೊಬ್ಬರನ್ನು ಬಂಧಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವು ಕಳೆದ ಮೂರು ವರ್ಷಗಳಲ್ಲಿ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಶ್ರೇಣಿಗೆ ಸೇರಿದ ಒಬ್ಬರೇ ಒಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿಲ್ಲ. ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರುಗಳನ್ನಾಧರಿಸಿ ಕ್ರಮವನ್ನೂ ಕೈಗೊಂಡಿಲ್ಲ.

 

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ ಆದೇಶ ಹೊರಡಿಸಿರುವ ಹೈಕೋರ್ಟ್‌, ಇಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ಸೂಚಿಸಿರುವ ಬೆನ್ನಲ್ಲೇ ಎಸಿಬಿ ಇದುವರೆಗೂ ನಡೆಸಿರುವ ದಾಳಿ, ದಾಖಲಾಗಿರುವ ದೂರುಗಳು, ತನಿಖೆ ಹಂತಗಳ ವಿವರಗಳು ಮುನ್ನೆಲೆಗೆ ಬಂದಿವೆ.

 

ಕಳೆದ 5 ವರ್ಷಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳವು ಒಟ್ಟು 310 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಒಟ್ಟು 76 ದಾಳಿ ಪ್ರಕರಣಗಳಲ್ಲಿ 371 ಮಂದಿ ಸರ್ಕಾರಿ ನೌಕರರ, ಅಧಿಕಾರಿಗಳ ಕಚೇರಿ, ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಪೈಕಿ ಕೇವಲ 63 ಪ್ರಕರಣಗಳಲ್ಲಷ್ಟೇ ತನಿಖೆ ಮುಕ್ತಾಯಗೊಂಡಿದೆ. ಈ ಪ್ರಕರಣಗಳಲ್ಲಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳವು ಒಟ್ಟು 223 ಪ್ರಕರಣಗಳಲ್ಲಿ ಶಿಫಾರಸ್ಸು ಮಾಡಿದೆ.

 

ಕಳೆದ 3 ವರ್ಷಗಳಲ್ಲಿ ಒಟ್ಟು 1,075 ದೂರುಗಳು ದಾಖಲಾಗಿವೆ. ಈ ಪೈಕಿ ಕಳೆದ 3 ವರ್ಷಗಳ ಅವಧಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಸಂಬಂಧ 76 ದಾಳಿ ಪ್ರಕರಣಗಳಿವೆ. 2019ರಲ್ಲಿ 379, 2020ರಲ್ಲಿ 296, 2021ರಲ್ಲಿ 360 ಮತ್ತು 2022ರ ಜನವರಿ ಅಂತ್ಯಕ್ಕೆ 40 ಸೇರಿ ಒಟ್ಟು 1,075 ದೂರು/ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2019ರಲ್ಲಿ 48, 2020ರಲ್ಲಿ 50, 2021ರಲ್ಲಿ 67, 2022ರ ಜನವರಿ ಅಂತ್ಯಕ್ಕೆ 3 ಸೇರಿದಂತೆ 168 ಪ್ರಕರಣಗಳು ದಾಖಲಾಗಿವೆ.

 

ಆದರೆ ಈ ಯಾವ ಪ್ರಕರಣಗಳಲ್ಲಿಯೂ ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ಅಧಿಕಾರಿಗಳ ಹೆಸರಿಲ್ಲ. ಬದಲಿಗೆ ಬೆರಳಣಿಕೆಯಷ್ಟು ಕೆಎಎಸ್‌ ಅಧಿಕಾರಿಗಳಿದ್ದಾರೆ. ಸಕಾಲ ಆಡಳಿತಾಧಿಕಾರಿ, ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು, ಹೆಚ್ಚುವರಿ ಆಯುಕ್ತರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಿಶೇಷ ಭೂ ಸ್ವಾಧೀನಾಧಿಕಾರಿ, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ, ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ, ಆರ್‌ಎಫ್‌ಒ, ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್ ಇಂಜಿನಿಯರ್‌, ಪೊಲೀಸ್‌ ಇನ್ಸ್‌ಪೆಕ್ಟರ್‌, ಜ್ಯೂನಿಯರ್‌ ಎಂಜಿನಿಯರ್‌, ಯೋಜನಾಧಿಕಾರಿ, ಫಿಸಿಯೋತೆರಪಿಸ್ಟ್‌, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಉಪ ನೋಂದಣಾಧಿಕಾರಿ, ಎಲೆಕ್ಟ್ರಿಕ್‌ ಇನ್ಸ್‌ಪೆಕ್ಟರ್‌, ಅಭಿವೃದ್ಧಿ ಅಧಿಕಾರಿ, ರಾಜಸ್ವ ನಿರೀಕ್ಷಕರು, ಯೋಜನಾ ನಿರ್ದೇಶಕರು, ಮೋಟಾರು ವಾಹನ ನಿರೀಕ್ಷಕರು, ಆರೋಗ್ಯಾಧಿಕಾರಿ, ಉಪನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ವ್ಯವಸ್ಥಾಪಕರು, ಸಹಾಯಕ ಕೃಷಿ ಅಧಿಕಾರಿ, ಸಹಾಯಕ ನಿಯಂತ್ರಕರಂತಹ ಮಧ್ಯಮ ಶ್ರೇಣಿಯ ಅಧಿಕಾರಿ, ನೌಕರರ ಮೇಲಷ್ಟೇ ದಾಳಿ ನಡೆಸಿದೆ.

 

ಹಾಗೆಯೇ 2016ರಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಎಸಿಬಿಯು 6 ವರ್ಷಗಳಿಂದಲೂ ಹಲವು ಪ್ರಕರಣಗಳು ತನಿಖೆ ಹಂತದಲ್ಲಿಯೇ ಇವೆ. ಇನ್ನು ಕೆಲವು ನ್ಯಾಯಾಲಯದ ವಿಚಾರಣೆ ಹಂತದಲ್ಲಿವೆ.

 

ಅಧಿಕಾರಿಗಳ ಪಟ್ಟಿ

ಬೆಂಗಳೂರು ನಗರ ಯೋಜನೆಯ ಜಂಟಿ ನಿರ್ದೇಶಕ ಎಂ ಸಿ ಶಶಿಕುಮಾರ್‌, ಕೆಎಐಡಿಬಿಯ ಅಧೀಕ್ಷಕ ರುದ್ರಪ್ರಸಾದ್‌, ಕರ್ನಾಟಕ ಉದ್ಯೋಗ ಮಿತ್ರದ ಜಂಟಿ ನಿರ್ದೇಶಕ ರೇವಣ್ಣಗೌಡ, ಕೆಎಂಎಫ್‌ನ ಹಾಲಿ ವ್ಯವಸ್ಥಾಪಕ ನಿರ್ದೇಶಕ ಬಿ ಸಿ ಸತೀಶ್‌, ಹಗರಿ ತನಿಖಾ ಠಾಣೆಯ ಅಧಿಆರಿ, ನೌಕರರು, ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಕೆ ಟಿ ಹಾಲಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಜಿ ಸಿ ಜಗದೀಶ್‌, ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ ಮಂಜುನಾಥ್‌, ಎಇಇ ಎನ್‌ ಅಪ್ಪೆರೆಡ್ಡಿ, ಚಿಕ್ಕಬಳ್ಳಾಪುರದ ತಾಲೂಕು ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಪಿ ಸಂಜೀವಪ್ಪ, ಸಾರಿಗೆ ಇಲಾಖೆಯ ಎಚ್‌ಎಸ್‌ ಹೇಮಂತ್‌ಕುಮಾರ್‌, ಐಎಂವಿ ಅಧಿಕಾರಿಗಳು, ತುಮಕೂರು ಜಿಲ್ಲೆಯ ಉಪ ವಿಭಾಗಾಧಿಕಾರಿ ಎನ್‌ ತಿಪ್ಪೇಸ್ವಾಮಿ, ಸೇಡಂ ಉಪ ನೋಂದಣಾಧಿಕಾರಿ, ಅಳಂದ ಸಾರಿಗೆ ಚೆಕ್‌ ಪೋಸ್ಟ್‌ ಅಧಿಕಾರಿಗಳು, ಮೋಟಾರು ವಾಹನ ನಿರೀಕ್ಷಕ ಎನ್‌ ಪ್ರಭಾಕರ, ಮುಖ್ಯ ಉಪ ಭದ್ರತಾ ಜಾಗೃತಾಧಿಕಾರಿ ಶ್ರೀಪತಿ ಮರಿಯಪ್ಪ ದೊಡ್ಡಲಿಂಗಣ್ಣನವರ, ಸಿಟಿಒ ಶ್ರೀಕಂಠಮೂರ್ತಿ, ನಿರಂಜನ್‌, ಎಸ್‌ ನಾಗರಾಜು, ಮತ್ತಿತರರು, ಉಪ ನೋಂದಣಾಧಿಕಾರಿ ಶಿವಾನಂದ ಎಸ್‌ ಪಾಟೀಲ್‌, ಅಬಕಾರಿ ಉಪ ಆಯುಕ್ತ ಮೇರುನಂದನ್‌ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆಸಿದ್ದ ಎಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಇನ್ನುಳಿದ ಪ್ರಕರಣಗಳು ನ್ಯಾಯಾಲಯದಲ್ಲಿವ ವಿಚಾರಣೆ , ತನಿಖಾ ಹಂತದಲ್ಲಿವೆ.

 

ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಸತೀಶ್‌ ಬಿ ಸಿ, ವಿಧಾನಸಭೆ ಸಚಿವಾಲಯದ ಹಿಂದಿನ ಕಾರ್ಯದರ್ಶಿ ಎಸ್‌ ಮೂರ್ತಿ, ಆರ್‌ಎಫ್‌ಓ ಎನ್‌ ರಾಮಕೃಷ್ಣ, ಸಹಕಾರ ಸಂಘಗಳ ಜಂಟಿ ನಿಬಂಧಕ ಪಾಂಡುರಂಗ ಡಿ ಗರಗ, ಕಿರಿಯ ಇಂಜಿನಿಯರ್‌ ಕೆ ಸುಬ್ರಹ್ಮಣ್ಯಮ್‌, ಬಿಬಿಎಂಪಿ ಪ್ರಥಮದರ್ಜೆ ಸಹಾಯಕ ಮಾಯಣ್ಣ , ಉಪ ನೋಂದಣಾಧಿಕಾರಿ ಪ್ರಭಾಕರ್ ಮಠದ್‌, ಬಮೂಲ್‌ ಉಪ ವ್ಯವಸ್ಥಾಪಕ ಡಾ ಎನ್‌ ಶಿವಶಂಕರ್‌, ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಎಂ ಬಿ ನಾರಾಯಣಸ್ವಾಮಿ ಸೇರಿದಂತೆ ಹಲವರ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಏನನ್ನೂ ವಶಪಡಿಸಿಕೊಂಡಿಲ್ಲ ಎಂಬುದು ದಾಖಲೆಗಳಿಂದ ತಿಳಿದು ಬಂದಿದೆ.

Tags: acbAnti Corruption Amendment ActAnti Corruption BureauBasavaraj BommaiCorruptionD K Shivakumarh d kumarswamyHigh CourtIAS OfficersIFSIPS OfficersSiddaramaiahಉಪ ಲೋಕಾಯುಕ್ತರುಎಚ್‌ ಡಿ ಕುಮಾರಸ್ವಾಮಿಎಸಿಬಿಐಎಎಸ್‌ಐಎಫ್‌ಎಸ್‌ಐಪಿಎಸ್‌ಕೆಎಎಸ್‌ ಅಧಿಕಾರಿಗಳುಕೆಂಪಯ್ಯ ಐಪಿಎಸ್‌ತನಿಖೆತನಿಖೆ ಮುಕ್ತಾಯದೂರು ದಾಖಲುಬಸವರಾಜ ಬೊಮ್ಮಾಯಯಿಭ್ರಷ್ಟಾಚಾರಭ್ರಷ್ಟಾಚಾರ ನಿಗ್ರಹ ದಳಲಂಚ ಪ್ರಕರಣಲೋಕಾಯುಕ್ತಸಿದ್ದರಾಮಯ್ಯಹೈಕೋರ್ಟ್‌
Advertisement Banner
Previous Post

ಪಂಪ್ಡ್‌ ಸ್ಟೋರೇಜ್‌ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ

Next Post

ಕೆಪಿಎಸ್ಸಿ ಪರೀಕ್ಷೆಗಳಲ್ಲಿ ಅಕ್ರಮ; ಒಂದೇ ವರ್ಷದಲ್ಲಿ 45 ಅಭ್ಯರ್ಥಿಗಳನ್ನು ಅನರ್ಹಗೊಳಿಸಿದ ಆಯೋಗ

thefilestack

thefilestack

Next Post

ಕೆಪಿಎಸ್ಸಿ ಪರೀಕ್ಷೆಗಳಲ್ಲಿ ಅಕ್ರಮ; ಒಂದೇ ವರ್ಷದಲ್ಲಿ 45 ಅಭ್ಯರ್ಥಿಗಳನ್ನು ಅನರ್ಹಗೊಳಿಸಿದ ಆಯೋಗ

Recommended

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

7 months ago

ಬಿಲ್ಡರ್‍‌, ಡೆವಲಪರ್ಸ್‌ಗಳಿಂದ 666. 97 ಕೋಟಿ ಭೂ ಕಂದಾಯ ಬಾಕಿ; ವಸೂಲಿಗೆ ಆಸಕ್ತಿ ವಹಿಸದ ಸರ್ಕಾರ

11 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd