the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

thefilestack by thefilestack
January 30, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿಲ್ಲ. ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ನಿರಾಕರಿಸಿದೆ. ಹೀಗಾಗಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರಿಗೆ ಇದು ಹಿನ್ನಡೆಯಾದಂತಿದೆ.

ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ ಮಾಡಿ ಆ ನಂತರ ಸಂಘದ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಸಚಿವ ಗೋಪಾಲಯ್ಯ, ವಿಧಾನಪರಿಷತ್‌ ಸದಸ್ಯ ಅ ದೇವೇಗೌಡ ಅವರು ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಇನ್ನಿತರೆ ಪದಾಧಿಕಾರಿಗಳನ್ನು ನೇರವಾಗಿ ಸಂಘದ ಎಲ್ಲಾ ಸದಸ್ಯರುಗಳಿಂದ ನಿರ್ದೇಶಕರ ಚುನಾವಣೆಯಲ್ಲಿಯೇ ಆಯ್ಕೆ ಮಾಡುವ ಸಂಬಂಧ ಉದ್ಧೇಶಿತ ಬೈಲಾ ತಿದ್ದುಪಡಿಗೆ ಒಪ್ಪದಿರಲು ಸಹಕಾರ ಇಲಾಖೆ ನಿಲುವು ತಾಳಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೊಂದು ಲಭ್ಯವಾಗಿದೆ.

ಸಂಘದಲ್ಲಿ ಒಟ್ಟು 5,20,721 ಮಂದಿ ಸದಸ್ಯರು ನೋಂದಣಿಯಾಗಿದ್ದಾರೆ. ಸಂಘದ ಬೈಲಾ 7(3)ರ ಪ್ರಕಾರ 11 ಜಿಲ್ಲಾ ಕ್ಷೇತ್ರಗಳಿಂದ 35 ಕಾರ್ಯಕಾರಿ ಸಮಿತಿ ಸದಸ್ಯರಿದ್ದಾರೆ. ಪದಾಧಿಕಾರಿಗಳ ನೇರ ಚುನಾವಣೆಗೆ ಬೈಲಾ ತಿದ್ದುಪಡಿ ಮಾಡಲು ಅಧ್ಯಕ್ಷರು, ಉಪಾಧ್ಯಕ್ಷರು, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿ ಒಟ್ಟು 5 ಸ್ಥಾನಗಳಿಗೆ ಯಾವ ಜಿಲ್ಲೆಯ ನಿರ್ದೇಶಕರ ಸಂಖ್ಯೆಯಲ್ಲಿ ಕಡಿಮೆ ಮಾಡಬೇಕು ಎಂಬ ಬಗ್ಗೆಯೂ ತೀರ್ಮಾನವಾಗಿಲ್ಲ ಎಂಬ ಸಂಗತಿ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಪದಾಧಿಕಾರಿಗಳ ನೇರ ಆಯ್ಕೆ ಮಾಡಲು 11 ಜಿಲ್ಲಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಮತಗಟ್ಟೆಯಲ್ಲಿಯೂ 6 ಪೆಟ್ಟಿಗೆಗಳನ್ನು ಇಡಬೇಕಿದೆ. ಇದರ ನಿರ್ವಹಣೆ ಮತ್ತು ಖರ್ಚು ವೆಚ್ಚಗಳು ಗಣನೀಯವಾಗಿ ಹೆಚ್ಚುತ್ತದೆ. ಈ ರೀತಿಯ ಬೈಲಾ ತಿದ್ದುಪಡಿಯನ್ನು ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಆಡಳಿತಾಧಿಕಾರಿ ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ ಎಂಬ ಬಗ್ಗೆ ಸರ್ಕಾರವನ್ನು ಕೋರಲು ಇಲಾಖೆ ಮುಂದಾಗಿದೆ ಎಂಬುದು ಗೊತ್ತಾಗಿದೆ.

‘ಸಂಘದ ಸದಸ್ಯರ ಪೈಕಿ ಶೇ.60ಕ್ಕಿಂತಲೂ ಹೆಚ್ಚಿನ ಸದಸ್ಯರು ಗ್ರಾಮೀಣ ಭಾಗದವರಾಗಿದ್ದು ಅವರೆಲ್ಲರೂ ಮೊಬೈಲ್‌ ಸಂಖ್ಯೆಯನ್ನು ಹೊಂದಿರುವುದಿಲ್ಲ. ವರ್ಚುವಲ್‌ ಸರ್ವ ಸದಸ್ಯರ ಸಭೆಗೆ ಭಾಗವಹಿಸಲು ಅಗತ್ಯವಿರುವ ಸ್ಮಾರ್ಟ್‌ ಫೋನ್‌ ಹೊಂದಿರುವ ಸಾಧ್ಯತೆ ಕಡಿಮೆ ಇದೆ. ಇವರುಗಳು ವರ್ಚುವಲ್‌ ಸರ್ವ ಸದಸ್ಯರ ಸಭೆಯಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ದೊಡ್ಡಮಟ್ಟದ ಸದಸ್ಯರನ್ನೊಳಗೊಂಡ ಸಂಘದ ಸದಸ್ಯರನ್ನು ಕರೆದು ಬೈಲಾ ತಿದ್ದುಪಡಿ ಅಂಶಗಳನ್ನೊಳಗೊಂಡ ದೊಡ್ಡಮಟ್ಟದ ತೀರ್ಮಾನದ ಬಗ್ಗೆ ಸದಸ್ಯರ ಅಭಿಪ್ರಾಯವನ್ನು ಏಕಕಾಲದಲ್ಲಿ ಸಂಗ್ರಹಿಸುವುದು ಕಷ್ಟಕರ. ಹೀಗಾಗಿ ಸಂಘದ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕ ಮಾಡಬೇಕು,’ ಎಂದು ಹಲವರು ಕೋರಿದ್ದರು.

ಮಹತ್ವವಾದ ಬೈಲಾ ತಿದ್ದುಪಡಿಯನ್ನು ಆಡಳಿತಾಧಿಕಾರಿಯವರ ಅವಧಿಯಲ್ಲಿ ಸಂಘಗಳ ಕಾಯ್ದೆ ಅಡಿಯಲ್ಲಿ ಮಾಡುವುದು ಸೂಕ್ತವೇ ಎಂಬ ಬಗ್ಗೆ ಸರ್ಕಾರದ ನಿರ್ದೇಶನ ಕೋರಿದ್ದ ಇಲಾಖೆ, ಅಂತಿಮವಾಗಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ಸಂಘಗಳ ಬೈಲಾ ತಿದ್ದುಪಡಿ ಮಾಡುವ ಅವಕಾಶವಿಲ್ಲ ಎಂದು ನಿಲುವು ತಾಳಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಶಂಕರಲಿಂಗೇ ಗೌಡ ಅವರನ್ನು ಆಡಳಿತಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಫೆ.21ರಿಂದ ಜಾರಿಗೆ ಬರುವಂತೆ ಶಂಕರಲಿಂಗೇಗೌಡ ಅವರು ಮುಂದಿನ 6 ತಿಂಗಳವರೆಗೂ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನೂತನ ಆಡಳಿತಾಧಿಕಾರಿಯಾಗಿರುವ ಶಂಕರಲಿಂಗೇಗೌಡ ಅವರು 6 ತಿಂಗಳ ಅವಧಿಯಲ್ಲಿ ಸಂಘದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ ಚುನಾಯಿತ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು.

Tags: B S YediyurappaBJP governmentBy LawChief SecretaryCo-OperationCovid-19D K ShivakumarH D Devegowdah d kumarswamyH D RevannaK GopalaiahKPCCOkkaligara SanghaPrinicipal SecretaryS T SomshekharSiddaramaiahTushar Girinath IASಅ ದೇವೇಗೌಡಆಡಳಿತಾಧಿಕಾರಿಎಚ್‌ ಡಿ ಕುಮಾರಸ್ವಾಮಿಎಚ್‌ ಡಿ ದೇವೇಗೌಡಎಚ್‌ ಡಿ ರೇವಣ್ಣಎಸ್‌ ಟಿ ಸೋಮಶೇಖರ್‌ಒಕ್ಕಲಿಗರ ಸಂಘಕಾಂಗ್ರೆಸ್‌ಕೆ ಗೋಪಾಲಯ್ಯಡಿ ಕೆ ಶಿವಕುಮಾರ್ತುಷಾರ್‌ಗಿರಿನಾಥ್‌ಪ್ರಧಾನ ಕಾರ್ಯದರ್ಶಿಬಿ ಎಸ್‌ ಯಡಿಯೂರಪ್ಪಬಿಜೆಪಿ ಸರ್ಕಾರಬೈಲಾಬೈಲಾ ತಿದ್ದುಪಡಿಮುಖ್ಯ ಕಾರ್ಯದರ್ಶಿಸಹಕಾರ ಇಲಾಖೆಸಿದ್ದರಾಮಯ್ಯ
Advertisement Banner
Previous Post

ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ವಿರುದ್ಧ ಕಡೆಗೂ ಎಫ್‌ಐಆರ್‌ ದಾಖಲು

Next Post

ಅಂತಿಮ ಪರಿಷ್ಕೃತ ಪಟ್ಟಿ; ಕರಿಗೌಡ ಸೇರಿ 8 ಐಎಎಸ್‌ ಅಧಿಕಾರಿಗಳು ಮತ್ತೆ ಅನರ್ಹರು?

thefilestack

thefilestack

Next Post

ಅಂತಿಮ ಪರಿಷ್ಕೃತ ಪಟ್ಟಿ; ಕರಿಗೌಡ ಸೇರಿ 8 ಐಎಎಸ್‌ ಅಧಿಕಾರಿಗಳು ಮತ್ತೆ ಅನರ್ಹರು?

Discussion about this post

Recommended

ಸುಲಿಗೆ; ಸರ್ಕಾರಕ್ಕೆ ಬರೆದ ಪತ್ರ, ಹೇಳಿಕೆಗಳಲ್ಲಿ ಸಚಿವ ತಿಮ್ಮಾಪುರ ಹೆಸರಿಲ್ಲ, ರಕ್ಷಣೆಗಿಳಿದಿದೆಯೇ ಲೋಕಾಯುಕ್ತ?

8 months ago

ರಾಜ್ಯಪಾಲರನ್ನೇ ತಪ್ಪು ದಾರಿಗೆ ಎಳೆದ ಸರ್ಕಾರ; ದಿ ಫೈಲ್‌ ವರದಿ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷ ತರಾಟೆ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd