the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಗಿಲ್ಲ ವೇತನಾನುದಾನ; 179 ಕೋಟಿ ವೆಚ್ಚ ಭರಿಸಲು ಮುಂದಾಗದ ಸರ್ಕಾರ

thefilestack by thefilestack
December 11, 2023
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; 1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೆ ವೇತನಾನುದಾನ ಮತ್ತು ಸೇವಾ ಭದ್ರತೆಯೇ ಇಲ್ಲ. ಅಷ್ಟೇ ಅಲ್ಲ ಈ ಶಾಲೆಗಳನ್ನ ವೇತನ ಅನುದಾನಕ್ಕೆ ಒಳಪಡಿಸಲು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವೂ ಇಲ್ಲ.

 

ಹೀಗೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್‌ ಮಧು ಬಂಗಾರಪ್ಪ ಅವರು ವಿಧಾನಪರಿಷತ್‌ನಲ್ಲಿ ಉತ್ತರ ನೀಡಿದ್ದಾರೆ.

 

ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮಧು ಬಂಗಾರಪ್ಪ ಅವರು ಖಾಸಗಿ ವಲಯದ ಕನ್ನಡ ಮಾಧ್ಯಮ ಶಾಲೆಗಳ ಸಿಬ್ಬಂದಿಗೆ ವೇತನ ಅನುದಾನ ಒದಗಿಸುವ ಸಂಬಂಧ ಯಾವುದೇ ಪ್ರಸ್ತಾವನೆಯೂ ಇಲ್ಲ ಎಂದು ಉತ್ತರಿಸಿದ್ದಾರೆ. ಸರ್ಕಾರದ ಈ ಉತ್ತರವು ಕನ್ನಡ ಮಾಧ್ಯಮ ಶಾಲೆಗಳ ಸಿಬ್ಬಂದಿಯನ್ನು ಮತ್ತಷ್ಟು ಕತ್ತಲೆಗೆ ದೂಡಿದಂತಾಗಿದೆ.

 

ಹಾಗೆಯೇ ಕನ್ನಡ ಮಾಧ್ಯಮವಿರುವ ಖಾಸಗಿ ಕಿರಿಯ ಮತ್ತು ಹಿರಿಯಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಿಬ್ಬಂದಿಯನ್ನು ವೇತನ ಅನುದಾನಕ್ಕೆ ಒಳಪಡಿಸಿದರೆ ವಾರ್ಷಿಕವಾಗಿ 179 ಕೋಟಿ ರು. ವೆಚ್ಚವಾಗುತ್ತದೆ ಎಂದು ಉತ್ತರದಲ್ಲಿ ವಿವರಿಸಿದ್ದಾರೆ.

 

1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೆ ವೇತನಾನುದಾನ ಮತ್ತು ಸೇವಾ ಭದ್ರತೆ ನೀಡಿಲ್ಲ. ಇದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಮಧು ಬಂಗಾರಪ್ಪ ಮಾಹಿತಿ ಒದಗಿಸಿದ್ದಾರೆ.

 

1995-2000ನೇ ಸಾಲಿನವರೆಗೆ ಖಾಸಗಿ ವಲಯದಲ್ಲಿ 133 ಪ್ರಾಥಮಿಕ ಶಾಲೆಗಳು ಆರಂಭವಾಗಿವೆ. ಇದರಲ್ಲಿ 487 ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, 206 ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ಒಟ್ಟಾರೆ 693 ಶಿಕ್ಷಕರಿದ್ದಾರೆ.

 

 

ಒಬ್ಬ ಶಿಕ್ಷಕರಿಗೆ ವಾರ್ಷಿಕವಾಗಿ 4,75,000 ರು. ವೆಚಚವಾಗುತ್ತದೆ. ಅದರಂತೆ 693 ಶಿಕ್ಷಕರಿಗೆ ಒಟ್ಟಾರೆ 32,91,75,000 ರು ವೆಚ್ಚವಾಗುತ್ತದೆ. 324 ಪ್ರೌಢಶಾಲೆಗಳಲ್ಲಿ ಅಂದಾಜು 2,592 ಶಿಕ್ಷಕರಿಗೆ ವೇತನ ನೀಡಬೇಕಿದೆ. ಒಬ್ಬರಿಗೆ 47,431 ರು. ನಂತೆ ಒಟ್ಟಾರೆ 2,592 ಶಿಕ್ಷಕರಿಗೆ 147,52,93,824 ರು. ವೆಚ್ಚವಾಗುತ್ತದೆ ಎಂದು ಉತ್ತರದಲ್ಲಿ ವಿವರಿಸಿದ್ದಾರೆ.

 

1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನರಹಿತ ಶಾಲಾ ಕಾಲೇಜಗಳಿಗೆ ಅನುದಾನ ನೀಡಿ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಸಮನ್ವಯ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದೆ.

 

ಸ್ವಾತಂತ್ರ್ಯಾನಂತರ ಅವಧಿಯಲ್ಲಿ ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಿತ್ತು. ಅದು 1986ರಲ್ಲಿ ನಿಂತು ಹೋಗಿದೆ. 2006 ರಲ್ಲಿಅಧಿಕಾರಕ್ಕೆ ಬಂದಿದ್ದ ಸಮ್ಮಿಶ್ರ ಸರಕಾರ ಮತ್ತು 2008 ರಲ್ಲಿಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರಗಳು 1986 ರಿಂದ 1995 ರವರೆಗೆ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ನೀಡಿವೆ.

 

ನಂತರ ಬಂದ ಸರಕಾರಗಳು 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸದೇ ಕನ್ನಡ ಶಾಲೆಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಈ ಶಾಲೆಗಳಲ್ಲಿ ಕಲಿಯುವ ಲಕ್ಷಾಂತರ ಬಡ ಮಕ್ಕಳು ಸರಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಈ ಶಾಲೆ ಶಿಕ್ಷಕರು 23 ವರ್ಷಗಳಿಂದ ಕನಿಷ್ಠ ಸಂಬಳಕ್ಕೆ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅವರ ಜೀವನ ಶೋಚನೀಯವಾಗಿದೆ.

Tags: D K Shivakumargrantsh d kumarswamyHigher PrimaryKannadaMadhu BangarappaMediumprimaryschoolssecondarySiddaramaiahaTeachersಅನುದಾನಅನುದಾನ ರಹಿತಅನುದಾನ ರಹಿತ ಶಾಲೆಗಳುಅನುದಾನಿತಕನ್ನಡ ಕಾವಲುಕನ್ನಡ ಮಾಧ್ಯಮಕನ್ನಡ ರಕ್ಷಣೆಡಿ ಕೆ ಶಿವಕುಮಾರ್ಮಧು ಬಂಗಾರಪ್ಪವೇತನವೇತನಾನುದಾನಶಾಲೆಶಿಕ್ಷಣಸಾಕ್ಷರತೆಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ

Next Post

ಬಿಜೆಪಿ ಸರ್ಕಾರದ ಅವಧಿಯ ಬೊಕ್ಕಸದಲ್ಲಿ 24,714.77 ಕೋಟಿ ರು ನಗದು ಬಾಕಿ; ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟಿದೆ?

thefilestack

thefilestack

Next Post

ಬಿಜೆಪಿ ಸರ್ಕಾರದ ಅವಧಿಯ ಬೊಕ್ಕಸದಲ್ಲಿ 24,714.77 ಕೋಟಿ ರು ನಗದು ಬಾಕಿ; ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟಿದೆ?

Recommended

ಪಿಂಚಣಿಗಳ ನಿರ್ದೇಶನಾಲಯದಲ್ಲಿ 2 ಸಾವಿರ ಕೋಟಿ ಅನುದಾನವಿದ್ದರೂ ಪರಿಶಿಷ್ಟರಿಗೆ ವೇತನವಿಲ್ಲ

3 years ago

ಆಯುಷ್‌ ಔಷಧ ಖರೀದಿ; ತಾಂತ್ರಿಕ ಸಮಿತಿ ವರದಿ ಬದಿಗೊತ್ತಿ 4(ಜಿ) ವಿನಾಯಿತಿ, 30 ಕೋಟಿಗೂ ಹೆಚ್ಚು ಅಕ್ರಮ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd