the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕೃಷ್ಣ ಮಠಕ್ಕೆ ಶ್ರೀಗಂಧ; ಡಿ ಸಿ ಶಿಫಾರಸ್ಸು ಬದಿಗಿರಿಸಿತೇ ಬಿಜೆಪಿ ಸರ್ಕಾರ?

thefilestack by thefilestack
September 14, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ಇಲ್ಲದ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ವಾರ್ಷಿಕ 10.00 ಕೆ ಜಿ ಶ್ರೀಗಂಧ ಮಂಜೂರು ಮಾಡಬಹುದು ಎಂದು ಜಿಲ್ಲಾಧಿಕಾರಿ ಶಿಫಾರಸ್ಸನ್ನು ಬದಿಗಿರಿಸಿ ಪ್ರತಿ ತಿಂಗಳಿಗೆ 10.00 ಕೆ ಜಿ ಯಂತೆ ವಾರ್ಷಿಕ 120 ಕೆ ಜಿ ಶ್ರೀಗಂಧವನ್ನು ಮಂಜೂರು ಮಾಡಲಿರುವ ಬಿಜೆಪಿ ಸರ್ಕಾರವು ಕೃಷ್ಣ ಭಕ್ತಿಯನ್ನು ಮೆರೆಯಲಿದೆ!

ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ನಮೂದಿಸಿದ ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಕ್ರಮವಾಗಿ 20 ಕೆ ಜಿ ಹಾಗೂ 10 ಕೆ ಜಿ ಶ್ರೀಗಂಧವನ್ನು ಮಂಜೂರು ಮಾಡಲು ಅವಕಾಶವಿದೆ. ಉಡುಪಿಯ ಶ್ರೀ ಕೃಷ್ಣ ಮಠವು ಈ ಎರಡೂ ಪಟ್ಟಿಯಲ್ಲಿ ಸೇರಿಲ್ಲ. ಒಂದು ವೇಳೆ ಇವೆರಡೂ ಪ್ರವರ್ಗಕ್ಕೆ ಒಳಗೊಂಡಿಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಶಿಫಾರಸ್ಸಿನ ಆಧಾರದ ಮೇಲೆ ವಾರ್ಷಿಕವಾಗಿ 10.00 ಕೆ ಜಿ ಶ್ರೀಗಂಧವನ್ನು ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಬೇಡಿಕೆ ಇವುಗಳಲ್ಲಿ ಯಾವುದು ಪ್ರಮಾಣ ಕಡಿಮೆ ಇರುತ್ತದೆಯೋ ಅದನ್ನು ಪರಿಗಣಿಸಬಹುದು ಎಂದು ಸರ್ಕಾರ ಆದೇಶಿಸಿತ್ತು.

ಆದರೆ ಈ ಆದೇಶವನ್ನೇ ಅರಣ್ಯ, ಪರಿಸರ ಇಲಾಖೆಯು ಬದಿಗಿರಿಸಿ ಪ್ರತಿ ಮಾಹೆ 10 ಕೆ ಜಿ ಯಂತೆ ವಾರ್ಷಿಕ 120 ಕೆ ಜಿ ಶ್ರೀಗಂಧವನ್ನು ಪ್ರತಿ ವರ್ಷ ಒದಗಿಸು ಹಾಗೂ ಶ್ರೀಗಂಧದ ಲಭ್ಯತೆ ಮೇರೆಗೆ ಈ ಪ್ರಮಾಣವನ್ನು ಹೆಚ್ಚಿಸಿ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ವಿಶೇಷವಾಗಿ ಗಂಧವನ್ನು ಸಮರ್ಪಿಸಿ ಭಕ್ತರಿಗೆ ಪ್ರಸಾದ ರೂಪವಾಗಿ ನೀಡಲು ತಿಂಗಳಿಗೆ ಪ್ರತಿ ಮಾಹೆ 50 ಕೆ ಜಿ ಯಂತೆ ವಾರ್ಷಿಕವಾಗಿ 6 ಕ್ವಿಂಟಾಲ್‌ ಶ್ರೀಗಂಧ ಒದಗಿಸಬೇಕು ಎಂದು ಕೃಷ್ಣಮಠ ಪರ್ಯಾಯ ಆದಮಾರು ಮಠವು ಸರ್ಕಾರಕ್ಕೆ ಕೋರಿತ್ತು.

ಸ್ವಾತಂತ್ರ್ಯ ಪೂರ್ವದಿಂದಲೂ ಶ್ರೀ ಕೃಷ್ಣನ ಪೂಜಾ ಕೈಂಕರ್ಯಗಳಿಗಾಗಿ ರಾಜರಿಂದ ಬಳವಳಿಯಾಗಿ ಬಂದ ಪ್ರದೇಶದಿಂದ ಶ್ರೀಗಂಧ ದೊರಕುತ್ತಿತ್ತು. ಆ ನಂತರ ಬ್ರಿಟಿಷರ ಕಾಲದಿಂದ ಪ್ರತಿ ವರ್ಷವೂ 1090 ಕೆ ಜಿ ಶ್ರೀಗಂಧವನ್ನು ಭೂಮಿ ನೋಡಿಕೊಂಡು ಸರ್ಕಾರವೇ ಒದಗಿಸುತ್ತಿತ್ತು. ಆದರೆ 2017ರಲ್ಲಿದ್ದ ಕಾಂಗ್ರೆಸ್‌ ಸರ್ಕಾರವು ಇದನ್ನು ರದ್ದುಗೊಳಿಸಿತ್ತು. ಇದನ್ನು ಪರಿಶೀಲಿಸಿ ಪುನಃ ಶ್ರೀಗಂಧವನ್ನು ಒದಗಿಸಿ ಅದನ್ನು ಭಕ್ತರಿಗೆ ವಿನಿಯೋಗಿಸಲು ಅನುಕೂಲ ಮಾಡಿಕೊಟ್ಟು ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀಕೃಷ್ಣಮಠ ಪರ್ಯಾಯ ಶ್ರೀ ಆದಮಾರು ಮಠದ ವ್ಯವಸ್ಥಾಪಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 2021ರ ಆಗಸ್ಟ್‌ 17ರಂದು ಪತ್ರ ಬರೆದಿದ್ದರು. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹಾಗೆಯೇ ಮಠವು 2021ರ ಏಪ್ರಿಲ್‌ 23ರಂದು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಪತ್ರ ಬರೆದಿತ್ತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರತಿ ವರ್ಷವೂ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು ಎಂದು ಕೋರಿಕೊಂಡಿತ್ತು. ಶ್ರೀಗಂಧವನ್ನು ಪಡೆಯಲು ಮಠವು ಕಾನೂನುಬದ್ಧವಾಗಿ ಹಕ್ಕು ಹೊಂದಿತ್ತಾದರೂ ಅದನ್ನು 2017ರ ಡಿಸೆಂಬರ್‌ 4ರಂದು ಹಿಂದಿನ ಕಾಂಗ್ರೆಸ್‌ ಸರ್ಕಾರವು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಮಠವು ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದಿತ್ತು.

‘ಉಚಿತವಾಗಿ ಶ್ರೀಗಂಧವನ್ನು ಪಡೆಯಲು ಮಠವು ಟೈಟಲ್‌ ಡೀಡ್‌ ಹೋಲ್ಡರ್‌ ಆಗಿದೆ. ಕರ್ನಾಟಕ ಅರಣ್ಯ ಸಂಹಿತೆ 97ರ ಪ್ರಕಾರ 29 ಧಾರ್ಮಿಕ ಸಂಸ್ಥೆಗಳಿಗೆ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು. ಹೀಗಾಗಿ ಶ್ರೀಗಂಧವನ್ನು ಮಠಕ್ಕೆ ಪೂರೈಕೆ ಮಾಡುವುದು ಸರ್ಕಾರದ ಹೊಣೆಗಾರಿಕೆಯಾಗಿದೆ,’ ಎಂದು ಏಪ್ರಿಲ್‌ 2021ರಂದು ಬರೆದಿದ್ದ ಪತ್ರದಲ್ಲಿ ವಿವರಿಸಲಾಗಿತ್ತು.

Tags: B S YediyurappaBasavaraj BommaiD K ShivakumarForest DepartmentForest Manualh d kumarswamyLord KrishnaN RavikumarNalinkumar KateelSandalwoodShree Krishna MuttShri Krishna MathaShri Krishna TempleSiddaramaiahUdupiUmesh Kattiಅರಣ್ಯ ಇಲಾಖೆಅರಣ್ಯ ಪಡೆ ಮುಖ್ಯಸ್ಥರುಉಡುಪಿಉಮೇಶ್‌ ಕತ್ತಿಎಚ್‌ ಡಿ ಕುಮಾರಸ್ವಾಮಿಕರ್ನಾಟಕ ಅರಣ್ಯ ಕೈಪಿಡಿಡಿ ಕೆ ಶಿವಕುಮಾರ್ಪರ್ಯಾಯ ಆದಮಾರು ಮಠಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಮುಜುರಾಯಿ ಸಚಿವರುಶಶಿಕಲಾ ಜೊಲ್ಲೆಶ್ರೀ ಕೃಷ್ಣಶ್ರೀ ಕೃಷ್ಣ ದೇವಸ್ಥಾನಶ್ರೀ ಕೃಷ್ಣ ಮಠಶ್ರೀಗಂಧಶ್ರೀಗಂಧ ಪೂರೈಕೆಸಿದ್ದರಾಮಯ್ಯ
Advertisement Banner
Previous Post

ಹೊರಟ್ಟಿ ವರದಿಗೆ 3 ವರ್ಷ, ಶಿಕ್ಷಕರಿಗಿಲ್ಲ ಹರ್ಷ; ನಿಲುವು ತಳೆಯುವಲ್ಲಿ ಸರ್ಕಾರ ವಿಫಲ

Next Post

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

thefilestack

thefilestack

Next Post

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

Discussion about this post

Recommended

19.39 ಲಕ್ಷ ಎಕರೆ ಗೋಮಾಳದ ಮೇಲೆ ಸಂಘ ಪರಿವಾರದ ಕಣ್ಣು; ಮಾನದಂಡಗಳಿದ್ದರೂ ಮತ್ತೊಂದು ನೀತಿ ಬೇಕಿತ್ತೇ?

4 years ago

ಪ.ಜಾತಿ, ಪ.ಪಂಗಡ ಉಪಯೋಜನೆ; ಆರ್ಥಿಕ ವರ್ಷ ಮುಗಿದರೂ ಇಲಾಖೆಗಳಲ್ಲಿ 9,219.36 ಕೋಟಿ ಉಳಿಕೆ

11 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd