the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

thefilestack by thefilestack
February 13, 2024
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದಲ್ಲಿ  ಬಿಡಿಗಾಸನ್ನೂ ಒದಗಿಸಿಲ್ಲ.

 

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರ್ಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರು. ಅನುದಾನ ಮೀಸಲಿರಿಸಿತ್ತು. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024ರ ಜನವರಿ 25ರಂದು ನಡೆದ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಕುರಿತಾಗಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಮಂಡಿಸಿದ್ದ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು 2023-24ನೇ ಸಾಲಿಗೆ 5,980.79 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಇದರಲ್ಲಿ ಡಿಸೆಂಬರ್‌ ಅಂತ್ಯಕ್ಕೆ 1,566.76 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನು 4,414.03 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

 

ಅದೇ ರೀತಿ ರಾಜ್ಯ ಸರ್ಕಾರವು ಇದೇ 20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2023-24ನೇ ಸಾಲಿಗೆ 9,511.38 ಕೋಟಿ ರು. ಅನುದಾನ ಒದಗಿಸಿತ್ತು. ಈ ಪೈಕಿ ಡಿಸೆಂಬರ್‌ ಅಂತ್ಯಕ್ಕೆ 7,064.03 ಕೋಟಿ ರು. ಬಿಡುಗಡೆ ಮಾಡಿದೆ. 2,447.35 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

 

ಶೂನ್ಯ ಬಿಡುಗಡೆ

 

ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿನ ಅಮೃತ್‌ ಮಿಷನ್‌ ಯೋಜನೆಗೆ ರಾಜ್ಯವು 320.00 ಕೋಟಿ ರು., ಕೇಂದ್ರವು 480.00 ಕೋಟಿ ರು., ಪ್ರಾಥಮಿಕ ಶಿಲ್ಕು 1,538.35 ಕೋಟಿ ರು ಸೇರಿ ಒಟ್ಟಾರೆ 2,338.05 ಕೋಟಿ ರು. ಒಟ್ಟು ಅನುದಾನವಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ.

 

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ರಾಜ್ಯವು 316.00 ಕೋಟಿ ರು., ಕೇಂದ್ರವು 474.00 ಕೋಟಿ ರು.,ಪ್ರಾಥಮಿಕ ಶಿಲ್ಕು 355.31 ಕೋಟಿ ರು ಸೇರಿ ಒಟ್ಟಾರೆ 1,145.31 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ಶೂನ್ಯ ಸಂಪಾದಿಸಿದೆ.

 

ಜಲಸಂಪನ್ಮೂಲ ಇಲಾಖೆಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯಲ್ಲಿ (ಇಆರ್‌ಎಂ)ನಲ್ಲಿ ರಾಜ್ಯವು 100 ಕೋಟಿ ರು.,. ಕೇಂದ್ರ ಸರ್ಕಾರವು 250 ಕೋಟಿ ರು., ಸೇರಿ ಒಟ್ಟಾರೆ 350 ಕೋಟಿ ರು. ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯವು ಈ ಯೋಜನೆಗೂ ತನ್ನ ಪಾಲಿನಲ್ಲಿ ನಯಾ ಪೈಸೆ ನೀಡಿಲ್ಲ.

 

ವಸತಿ ಇಲಾಖೆಯ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಯಲ್ಲಿ ರಾಜ್ಯವು 164.00 ಕೋಟಿ ರು., ಕೇಂದ್ರವು 246.00 ಕೋಟಿ ರು, ಪ್ರಾಥಮಿಕ ಶಿಲ್ಕು 838.10 ಕೋಟಿ ರು ಸೇರಿ ಒಟ್ಟು 1,248.10 ಕೋಟಿ ರು. ಅನುದಾನವಿದೆ. ಇಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ನೀಡಿಲ್ಲ.

 

ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ (ನಗರ) ಯೋಜನೆಗೆ ರಾಜ್ಯವು 90 ಕೋಟಿ ರು., ಕೇಂದ್ರವು 200 ಕೋಟಿ ರು., ಪ್ರಾಥಮಿಕ ಶಿಲ್ಕು 747.75 ಕೋಟಿ ರು. ಅನುದಾನವಿದೆ. ಸ್ವಚ್ಛ ಭಾರತ ಯೋಜನೆಗೂ ಕೇಂದ್ರ ಸರ್ಕಾರವು ಬಿಡಿಗಾಸನ್ನು ನೀಡಿಲ್ಲ. ರಾಜ್ಯವೂ ಇದೇ ಹಾದಿಯನ್ನೇ ಹಿಡಿದಿದೆ.

 

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ ರಾಜ್ಯವು 100.49 ಕೋಟಿ ರು., ಕೇಂದ್ರ ಸರ್ಕಾರವು 112.46 ಕೋಟಿ ರು ಸೇರಿ ಒಟ್ಟು 212.97 ಕೋಟಿ ರು. ಅನುದಾನ ನಿಗದಿಪಡಿಸಿಕೊಂಡಿದೆ. ಇದರಲ್ಲಿಯೂ ಎರಡೂ ಸರ್ಕಾರಗಳು ನಯಾಪೈಸೆಯನ್ನು ನೀಡಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಧಾನಮಂತ್ರಿ ಆದರ್ಶ ಯೋಜನೆಗೆ ಕೇಂದ್ರವು 100 ಕೋಟಿ ರು. ನೀಡಿದೆಯಾದರೂ ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸು ನೀಡಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯವು 131 ಕೋಟಿ ರು., ಕೇಂದ್ರವು 55 ಕೋಟಿ ರು. ಸೇರಿ ಒಟ್ಟಾರೆ 186 ಕೋಟಿ ರು. ಅನುದಾನ ನೀಡಬೇಕಿತ್ತು. ಆದರೆ ಡಿಸೆಂಬರ್‌ ಅಂತ್ಯಕ್ಕೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ.

Tags: Amrut Mission SchemebjpcentralcongressD K Shivkumargrantsh d kumarswamyHousingnarendra modiNirmala SitaramanPrime MinisterSiddaramaiahaSponseredಆರ್‌ ಅಶೋಕ್‌ಕಾರ್ಯಕ್ರಮಗಳುಕೇಂದ್ರಕೇಂದ್ರ ಪುರಸ್ಕೃತಕೇಂದ್ರದ ಅನುದಾನಡಿ ಕೆ ಶಿವಕುಮಾರ್ನರೇಂದ್ರ ಮೋದಿನಾಯಕನಿರ್ಮಲಾ ಸೀತಾರಾಮನ್‌ಪಾಲುಪ್ರತಿಪಕ್ಷಪ್ರಧಾನಿಬಿಜೆಪಿಮೆಟ್ರಿಕ್‌ರಾಜ್ಯವಸತಿ ಇಲಾಖೆವಿದ್ಯಾರ್ಥಿ ವೇತನವಿಪಕ್ಷಸರ್ಕಾರಸಿದ್ದರಾಮಯ್ಯಹಿಂದುಳಿದ ವರ್ಗಗಳುಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ

Next Post

ಮೈಷುಗರ್ಸ್‌; ಸರ್ಕಾರ, ಸಚಿವರನ್ನೇ ಕತ್ತಲಲ್ಲಿಟ್ಟು ಪರವಾನಗಿ ನವೀಕರಣ, ನಿಯಮ ಗಾಳಿಗೆ ತೂರಿದ ಆಯುಕ್ತ

thefilestack

thefilestack

Next Post

ಮೈಷುಗರ್ಸ್‌; ಸರ್ಕಾರ, ಸಚಿವರನ್ನೇ ಕತ್ತಲಲ್ಲಿಟ್ಟು ಪರವಾನಗಿ ನವೀಕರಣ, ನಿಯಮ ಗಾಳಿಗೆ ತೂರಿದ ಆಯುಕ್ತ

Recommended

ಡಿ ಕೆ ಶಿ ವಿರುದ್ಧ ಸಿಬಿಐ ತನಿಖೆ; ಸಭಾಧ್ಯಕ್ಷರ ಅನುಮತಿ ಪ್ರಶ್ನೆಯೇ ಉದ್ಭವಿಸದು ಎಂದ ಸಚಿವಾಲಯ

2 years ago

‘ಮೀಟಿಂಗ್‌ ಹಾಲ್‌’ಗೆ ಪುರುಷ ಅಪರಿಚಿತರನ್ನು ಒಳಗೆ ಬಿಟ್ಟು ಮಹಿಳಾ ಸಿಬ್ಬಂದಿಯಿಂದಲೇ ಬೀಗ; ವರದಿ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd