the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

thefilestack by thefilestack
July 14, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಬಹಿರಂಗವಾಗಿದೆ. ಜಿಲ್ಲಾ ವಿಪತ್ತು ನಿಧಿ ಬಳಸಿಕೊಂಡು ವೈದ್ಯಕೀಯ ಸಲಕರಣೆಗಳನ್ನು ಖರೀದಿಸುತ್ತಿರುವ ಜಿಲ್ಲಾಧಿಕಾರಿಗಳು ಶಾಸಕರಿಗೆ ಸಮಂಜಸವಾದ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ ಈಶ್ವರ ಖಂಡ್ರೆ ಬಹಿರಂಗಪಡಿಸಿದ್ದಾರೆ.

ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷದ ಶಾಸಕ ಮುರುಗೇಶ್‌ ನಿರಾಣಿ ಅವರ ಬಳಿ ಇದೆ ಎನ್ನಲಾಗಿರುವ ಪೆನ್‌ ಡ್ರೈವ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ ಇತ್ತ ಜಿಲ್ಲಾ ಮಟ್ಟದಲ್ಲಿಯೂ ಖರ್ಚಾಗಿರುವ ಎಸ್‌ಡಿಆರ್‌ಎಫ್‌ ನಿಧಿಯಲ್ಲೂ ಅಕ್ರಮ ನಡೆದಿದೆ ಎಂದು ಸಮಿತಿ ಮುಂದೆ ಬಹಿರಂಗಪಡಿಸಿರುವ ಈಶ್ವರ ಖಂಡ್ರೆ ಅವರು ಕೊರೊನಾ ಹೆಸರಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಗಳನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

‘ಸುಮಾರು 5.50 ಕೋಟಿ ರು. ಹಣ ಬಿಡುಗಡೆಯಾಗಿದ್ದು ಯಾವುದಕ್ಕೆ ಖರ್ಚು ಮಾಡಿದ್ದಾರೆನ್ನುವ ಮಾಹಿತಿ ಇಲ್ಲ. ಲ್ಯಾಬ್‌ಗಳು ಪ್ರಾರಂಭವಾಗಿಲ್ಲ. ಪಿಪಿಇ ಕಿಟ್‌, ಇನ್ನಿತರ ಸುರಕ್ಷತಾ ಸಾಮಗ್ರಿಗಳ ಬಗ್ಗೆ ಲೆಕ್ಕಪತ್ರಗಳಿಲ್ಲ,’ ಎಂದು 2020ರ ಮೇ 28ರಂದು ನಡೆದಿದ್ದ ಸಭೆಯಲ್ಲಿ ಪ್ರಸ್ತಾಪಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಕೊರೊನಾ ಹರಡುತ್ತಿರುವ ಪರಿಸ್ಥಿತಿಯಲ್ಲಿಯೂ ಸಾರ್ವಜನಿಕರ ಹಣ, ತೆರಿಗೆ ಪಾವತಿದಾರರ ಹಣ ಲೂಟಿ ಹೊಡೆದು ಅವ್ಯವಹಾರ ಮಾಡುತ್ತಿದ್ದಾರೆ. ಪಿಪಿಇ ಕಿಟ್‌, ಮಾಸ್ಕ್‌, ಸ್ಯಾನಿಟೈಸರ್‌, ಗ್ಲೋವ್ಸ್‌ ಇನ್ನಿತರೆ ಅವಶ್ಯಕ ಪರಿಕರಗಳನ್ನು ಒದಗಿಸಬೇಕು. ಎಸ್‌ಡಿಆರ್‌ಎಫ್‌ಗೆ ಕೊಡುವ ಹಣದಲ್ಲಿ ಜಿಲ್ಲಾಧಿಕಾರಿಗಳೇನು ಖರ್ಚು ಮಾಡುತ್ತಿದ್ದಾರೆಯೋ ಅದರ ಬಗ್ಗೆ ಪರಿಶೀಲನಾ ಸಭೆಯಲ್ಲಿ ಕೇಳಿದರೆ ಸಮಂಜಸವಾದ ಉತ್ತರ ನೀಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದಿರುವುದು ನಡವಳಿಯಿಂದ ಗೊತ್ತಾಗಿದೆ.

ಇದೇ ಸಭೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿತರಿಸಿರುವ ಕಿಟ್‌ಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಲ್ಲಿ 7 ಲಕ್ಷ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರಾದರೂ ಈ 7 ಲಕ್ಷ ಕಿಟ್‌ಗಳನ್ನು ಯಾವ ಕಡೆ ವಿತರಣೆ ಮಾಡಿದ್ದಾರೆ, ಯಾವ ವಿಧಾನಸಭೆ ಕ್ಷೇತ್ರಕ್ಕೆ ಎಷ್ಟೆಷ್ಟು ಕಿಟ್‌ಗಳನ್ನು ನೀಡಿದ್ದಾರೆ, ಒಂದು ವಿಧಾನಸಭೆ ಕ್ಷೇತ್ರಕ್ಕೆ 3,000 ಕಿಟ್‌ಗಳನ್ನು ನೀಡಿದರೆ ಮತ್ತೊಂದು ವಿಧಾನಸಭೆ ಕ್ಷೇತ್ರಕ್ಕೆ 30,000 ಕಿಟ್‌ಗಳನ್ನು ನೀಡಿದ್ದಾರೆ. ಯಾರ ಕೈಗೆ ನೀಡಿದ್ದಾರೆ, ಇವುಗಳನ್ನು ಯಾರು ವಿತರಣೆ ಮಾಡಿದರು ಎಂದು ಸಭೆಯಲ್ಲಿ ಈಶ್ವರ ಬಿ ಖಂಡ್ರೆ ಅವರು ಪ್ರಶ್ನಿಸಿರುವುದು ಸಮಿತಿ ನಡವಳಿಯಿಂದ ತಿಳಿದು ಬಂದಿದೆ.

‘ಈ ಕೂಡಲೇ ಕೋವಿಡ್‌ ನಿಯಂತ್ರಣಕ್ಕೆಂದು ಖರ್ಚು ಮಾಡಿರುವ ಎಲ್ಲಾ ಬಾಬತ್ತುಗಳ ಸಾರ್ವಜನಿಕ ಪರಿಶೀಲನೆ ಆಗಬೇಕು. ಹಲವು ಇಲಾಖೆಗಳಲ್ಲಿ ಯಾವುದೇ ಲೆಕ್ಕಪತ್ರ ಇಡದೇ ಬಹುಶಃ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರುಪಾಯಿಯನ್ನು ಲಪಟಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂಬ ಮಾಹಿತಿಯನ್ನು ಪರಿಶೀಲನೆ ಸಭೆಯಲ್ಲಿ ಶಾಸಕರಿಗೆ ಕೊಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ,’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ.

Tags: AccountsCommittieeCorruptionCovid-19Eshwar KhandreH D RevannaH K PatilK R RameshkumarKitKSDLWSMurugesh NiraniPPEPublicSanitizerSpeakerT A Sharavanaಅಕ್ರಮಈಶ್ವರ ಖಂಡ್ರೆಎಚ್‌ ಕೆ ಪಾಟೀಲ್‌ಎಚ್‌ ಡಿ ಕುಮಾರಸ್ವಾಮಿಕೆ ಆರ್‌ ರಮೇಶ್‌ಕುಮಾರ್‌ಕೆಪಿಸಿಸಿಕೊರೊನಾ ವೈರಸ್‌ಕೋವಿಡ್‌-19ಜಿಲ್ಲಾ ವಿಪತ್ತು ನಿಧಿಬಿ ಎಸ್‌ ಯಡಿಯೂರಪ್ಪಮುಖ್ಯ ಕಾರ್ಯದರ್ಶಿವೈದ್ಯಕೀಯ ಸಲಕರಣೆಗಳುಸಾರ್ವಜನಿಕ ಲೆಕ್ಕಪತ್ರ ಸಮಿತಿಸಿದ್ದರಾಮಯ್ಯ
Advertisement Banner
Previous Post

ಆಪ್ತ ಕಾರ್ಯದರ್ಶಿ ವಿಶ್ವನಾಥ ಹಿರೇಮಠರಿಗಷ್ಟೇ ಗ್ರೂಪ್‌ ಎ ಹುದ್ದೆ; ಯಡಿಯೂರಪ್ಪರಿಂದ ಸ್ವಜನಪಕ್ಷಪಾತ?

Next Post

ಕೋವಿಡ್‌-19; 33.00 ಕೋಟಿ ಮೊತ್ತದ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆಯ ತರಾತುರಿ?

thefilestack

thefilestack

Next Post

ಕೋವಿಡ್‌-19; 33.00 ಕೋಟಿ ಮೊತ್ತದ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆಯ ತರಾತುರಿ?

Discussion about this post

Recommended

ಆರ್‌ಟಿಪಿಸಿಆರ್‌; ಐಎಎಸ್‌ ಮಂಜುಶ್ರೀ ಸೇರಿ ಹಿರಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ ಮಾಜಿ ಶಾಸಕ

6 years ago

ಐಎಂಎ ಮನ್ಸೂರ್‌ಖಾನ್‌ ಖರೀದಿಸಿರುವ 5 ಲಕ್ಷ ಷೇರು ಮುಟ್ಟುಗೋಲು; ಆರ್ಥಿಕ ಇಲಾಖೆಗೆ ಮೊರೆ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd