the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಜೀವ ಬೆದರಿಕೆ ಆರೋಪ; ಪ್ರಿಯಾಂಕ ಖರ್ಗೆ ಅವರ ಮತ್ತೊಬ್ಬ ಆಪ್ತನ ವಿರುದ್ಧವೂ ಎಫ್‌ಐಆರ್

thefilestack by thefilestack
January 2, 2025
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮಾರಕಾಸ್ತ್ರದಿಂದ ಹಲ್ಲೆ ಮತ್ತು ಜೀವ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಎನ್ನಲಾಗಿರುವ ರಾಜೀವ್‌ ಜ್ಯಾನೆ ಸೇರಿದಂತೆ ಮೂವರ ವಿರುದ್ಧ ಕಲ್ಬುರ್ಗಿ ಸ್ಟೇಷನ್‌ ಬಜಾರ್‍‌ ಠಾಣೆಯಲ್ಲಿ ಎಫ್‌ಐಆರ್‍‌ ದಾಖಲಾಗಿದೆ.

 

ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಎಂದು ಹೇಳಲಾಗಿದ್ದ ರಾಜು ಕಪನೂರು ಎಂಬುವರ ವಿರುದ್ಧ ಎಫ್‌ಐಆರ್‍‌ ದಾಖಲಾಗಿತ್ತು. ಇದೀಗ ಅವರ ಮತ್ತೊಬ್ಬ ಆಪ್ತ ಎಂದು ಹೇಳಲಾಗಿರುವ ರಾಜೀವ್‌ ಜ್ಯಾನೆ ವಿರುದ್ಧ ದಾಖಲಾಗಿರುವ ಎಫ್‌ಐಆರ್‍‌ ಮುನ್ನೆಲೆಗೆ ಬಂದಿದೆ.

 

ಗುತ್ತಿಗೆದಾರ ಎಂದು ಹೇಳಲಾಗಿರುವ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಪ್ರಿಯಾಂಕ ಖರ್ಗೆ ಅವರ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷ ಬಿಜೆಪಿಗೆ, ರಾಜೀವ್‌ ಜ್ಯಾನೆ ವಿರುದ್ಧ ದಾಖಲಾಗಿರುವ ಎಫ್‌ಐಆರ್‍‌ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

 

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 126 (2), 3(5), 351(2) 352, 49 ಅಡಿಯಲ್ಲಿ ಮೊಕದ್ದಮೆ ದಾಖಲಿಸಿದೆ. ಎಫ್‌ಐಆರ್‍‌ನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಶೇಷವೆಂದರೇ ಈ ಪ್ರಕರಣದಲ್ಲಿ ದೂರುದಾರನಾದ ಕಲ್ಬುರ್ಗಿಯ ಸಿದ್ರಾಮಯ್ಯ ಹಿರೇಮಠ ಎಂಬುವರು ಸ್ಟೇಷನ್‌ ಬಜಾರ್‍‌ ಪೊಲೀಸ್‌ ಠಾಣೆ ಮತ್ತು ಕಲ್ಬುರ್ಗಿ ದಕ್ಷಿಣ ವಿಭಾಗದ ಪೊಲೀಸ್‌ ಸಹಾಯಕ ಆಯುಕ್ತರಿಗೆ ವಿಡಿಯೋ ದಾಖಲಾತಿ ಸಮೇತ ಮೂರು ಬಾರಿ ದೂರು ನೀಡಿದ್ದರು. ಆದರೆ ಇವರ ವಿರುದ್ಧ ಎಫ್‌ಐಆರ್‍‌ ದಾಖಲಾಗಿರಲಿಲ್ಲ.

 

ಹೀಗಾಗಿ ಸಿದ್ರಾಮಯ್ಯ ಹಿರೇಮಠ್‌ ಅವರು ಹೈಕೋರ್ಟ್‌ನ ಕಲ್ಬುರ್ಗಿ ಪೀಠದಲ್ಲಿ ರಿಟ್‌ ಆಫ್‌ ಮ್ಯಾಂಡ್‌ಮಸ್‌ ದಾಖಲಿಸಿದ್ದರು.

 

 

ಇದೀಗ ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಸ್ಟೇಷನ್ ಬಜಾರ್‍‌ ಪೊಲೀಸ್‌ ಠಾಣೆಯಲ್ಲಿ ರಾಜೀವ್‌ ಜ್ಯಾನೆ ಅವರು ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‍‌ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

 

ಎಫ್‌ಐಆರ್‍‌ನಲ್ಲೇನಿದೆ?

 

ಹಳೇ ಜೇವರ್ಗಿ ರಸ್ತೆಯ ಮಹಿಳಾ ಪದವಿ ಕಾಲೇಜು ಎದುರುಗಡೆ ರಸ್ತೆಯಲ್ಲಿ ಸಿದ್ರಾಮಯ್ಯ ಹಿರೇಮಠ್‌ ಎಂಬುವರು 2024ರ ನವೆಂಬರ್‍‌ 15ರಂದು ಹೋಗುತ್ತಿರುವಾಗ ಅನಾಮಧೇಯ ವ್ಯಕ್ತಿಗಳು ಬೈಕ್‌ ಮೇಲೆ ಬಂದು ಕಾರಿನ ಗ್ಲಾಸ್‌ ಒಡೆದು ಹಾಕಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಎಫ್‌ಐಆರ್‍‌ನಿಂದ ಗೊತ್ತಾಗಿದೆ.

 

 

 

‘ಕಾರಿನ ಬಾಗಿಲು ಮತ್ತು ಗಾಜು ತೆರೆದಿದ್ದರೆ ನನ್ನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡುವ ಉದ್ದೇಶದಿಂದ ಅವರು ಬಂದಿದ್ದಾರೆ ಎಂದು ತಿಳಿಯಿತು. ಇವರು ಪೂರ್ವ ತಯಾರಿ ನಡೆಸಿಕೊಂಡು ಬಂದಿದ್ದರು. ನನ್ನ ಮೇಲೆ ಅಟ್ಯಾಕ್‌ ಮಾಡಲು ನಾನು ಕಾರು ತೆಗೆದುಕೊಂಡು ಬರುವುದನ್ನು ನೋಡುತ್ತಿದ್ದರು. ಕಾರಿನ ಕಿಟಕಿ, ಬಾಗಿಲು ತೆಗೆಯದೇ ಇದ್ದಾಗ ನೋಡುತ್ತೇನೆ ಎಂದು ಎರಡು ವ್ಯಕ್ತಿಗಳು ಮುಂದೆ ಬನ್ನಿ ಎಂದು ಕರೆದರು. ಬೈಕ್‌ ಮೇಲೆ ಬಂದ ಅವರು ನನಗೆ ಖಲಾಸ ಕರತಾ ಹೂ ಎಂದು ಹೇಳಿ ಹೋಗಿದ್ದಾರೆ,’ ಎಂದು ಎಫ್‌ಐಆರ್‍‌ನಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

 

‘ಇವರಿಗೆ ನನ್ನ ಮೇಲೆ ಹಲ್ಲೆ ಮಾಡುವ ಉದ್ದೇಶದಿಂದ ಬಂದಿದ್ದರು ಎಂಬುದು ಅವರು ಮಾಡಿದ ಕೃತ್ಯದಿಂದ ತಿಳಿಯುತ್ತದೆ. ಇವರು ನನಗೆ ಪರಿಚಯ ಸಹ ಇರುವುದಿಲ್ಲ. ನನ್ನ ಹತ್ಯೆಗೆ ಇವರನ್ನು ಕಳಿಸಿ ಪ್ರಚೋದನೆ ನೀಡಿದ ರಾಜೀವ್ ಜಾನೆ ಮತ್ತು ಪಬ್ಲಿಕ್‌ ಟಿವಿ ವರದಿಗಾರ ಪ್ರವೀಣ್ ರೆಡ್ಡಿ, ಸಂಜಯ ಪಾಟೀಲ್ ಅವರನ್ನು ಬೈಕ್‌ ಮೆಲೆ ಕಳಿಸಿದ್ದರು. ಇದು ನನ್ನ ಕೊಲೆಗೆ ಮಾಡಿರುವ ಸಂಚು. ಆದ್ದರಿಂದ ನನಗೆ ಜೀವ ಬೆದರಿಕೆ ಇದೆ. ಸಾಕಷ್ಟು ಬಾರಿ ರಾಜೀವ್‌ ಜಾನೆ ಮತ್ತು ಪ್ರವೀಣ್ ರೆಡ್ಡಿ ನನ್ನನ್ನು ಮುಗಿಸುವ ಹುನ್ನಾರ ಮಾಡುತ್ತಿದ್ದರು,’ ಎಂದೂ ಎಫ್‌ಐಆರ್‍‌ನಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಹಲ್ಲೆ ಮಾಡಲು ಬಂದಿದ್ದ ಸಂಜಯ್ ಪಾಟೀಲ್ ಎಂಬಾತನ ಮೆಲೆ 11 ಕ್ರಿಮಿನಲ್ ಪ್ರಕರಣ ಪ್ರಕರಣಗಳು ಬ್ರಹ್ಮಪೂರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ. ( ಸಿಸಿ ನಂ 17111/2022, , 17099/2022/ 15174/2022, 15173/2022, 15151/2022, 15035/2022, 15032/2022, 15031/2022, 14998/2022, 11644/2022) ಇಂತಹ ಭಯಾನಕ ಕೃತ್ಯಗಳನ್ನು ಎಸಗಿರುವ ಕೃತ್ಯಗಳನ್ನು ಎಸಗಿರುವ ವ್ಯಕ್ತಿಗಳನ್ನು ನನ್ನ ಮೇಲೆ ಬಿಟ್ಟು ಕೊಲೆಗೆ ಯತ್ನ ಮಾಡಿದ ಇವರ ಹಿಂದಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಸಿದ್ರಾಮಯ್ಯ ಹಿರೇಮಠ್‌ ಎಂಬುವರು ಕೋರಿರುವುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

 

 

ರಾಜೀವ್ ಜಾನೆ, ಪ್ರವೀಣ ರೆಡ್ಡಿ, ಹಾಗೂ ನನ್ನ ಮೇಲೆ ಹಲ್ಲೆ ಮಾಡಲು ಬಂದಿದ್ದ ಸಂಜಯ ಪಾಟೀಲ್‌ ಅವರ ಮೊಬೈಲ್, ಸಿಡಿಆರ್‍‌, ಪರಿಶೀಲನೆಗೆ ಒಳಪಡಿಸಬೇಕು.

 

 

ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ನನ್ನಜೀವಕ್ಕೆ ಏನಾದರೂ ಹಾನಿಯಾದರೆ ಇವರುಗಳೇ ನೇರವಾಗಿ ಹೊಣೆಗಾರರಾಗುತ್ತಾರೆ ಎಂದು ವಿವರಿಸಿರುವುದು ಗೊತ್ತಾಗಿದೆ.

Tags: B Y VijyendraBasavarajBazarbjpBommaiD K Shivakumarh d kumarswamyHigh CourtKalburgiKhargeMandamuspolicePriyankr ashokSiddaramaiahaStationWrit Petitionಅರ್ಜಿಆರ್‌ ಅಶೋಕ್‌ಎಫ್‌ಐಆರ್‌ಕಲ್ಬುರ್ಗಿಕಲ್ಬುರ್ಗಿ ಪೀಠಕೊಲೆಖರ್ಗೆಜೀವ ಬೆದರಿಕೆಪೀಠಪೊಲೀಸ್‌ ಸ್ಟೇಷನ್‌ಪ್ರಿಯಾಂಕಪ್ರಿಯಾಂಕ್‌ಬಜಾರ್ಬಿ ವೈ ವಿಜಯೇಂದ್ರಬೆದರಿಕೆಮಲ್ಲಿಕಾರ್ಜುನರಿಟ್‌ವಿಭಾಗೀಯಸಿದ್ದರಾಮಯ್ಯಸಿದ್ರಾಮಯ್ಯಸ್ಟೇಷನ್ಹತ್ಯೆಹಿರೇಮಠ್‌ಹೈಕೋರ್ಟ್‌
Advertisement Banner
Previous Post

ಸರ್ಕಾರಿ ನೌಕರರ ಆಸ್ತಿ ವಿವರ; ಮಾಹಿತಿ ನೀಡದ ಮುಖ್ಯಸ್ಥರ ವರ್ತನೆಗೆ ಗರಂ, ರಂಗ ಪ್ರವೇಶ ಮಾಡಿದ ಲೋಕಾಯುಕ್ತ

Next Post

ಆದಿ ಯೋಗಿ ಶಿವ ದೇಗುಲಕ್ಕೆ ರಸ್ತೆ; ಆಶ್ರಯ ಜಮೀನು, ಗೋಮಾಳದ ಮೇಲೆ ಕಣ್ಣು ಹಾಕಿದ ಇಶಾ ಫೌಂಡೇಷನ್

thefilestack

thefilestack

Next Post

ಆದಿ ಯೋಗಿ ಶಿವ ದೇಗುಲಕ್ಕೆ ರಸ್ತೆ; ಆಶ್ರಯ ಜಮೀನು, ಗೋಮಾಳದ ಮೇಲೆ ಕಣ್ಣು ಹಾಕಿದ ಇಶಾ ಫೌಂಡೇಷನ್

Recommended

6 ತಿಂಗಳಾದರೂ ಪ್ರಗತಿಯ ಹಳಿ ಹತ್ತದ ಬಿಜೆಪಿ ಸರ್ಕಾರ; ಬಯಲಾಯಿತು ಅಧಿಕಾರಿಗಳ ಮೈಗಳ್ಳತನ

6 years ago

ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಶ್ವಾನದಳ ಸೇವೆ!; ರಾಜ್ಯ ಪೊಲೀಸ್ ಶ್ವಾನ ದಳದ ಮೇಲೆ ಅವಿಶ್ವಾಸವೇ?

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd