the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ಜೇನು ಕುರುಬರು ಮತ್ತು ಸೋಲಿಗರು ಬಂದು ಕಿತ್ತು ಗುಡ್ಡೆ ಹಾಕಿ ಲೆಕ್ಕ ಹಾಕಿಕೊಳ್ಳಿ’; ಅಧಿಕಾರಿಯಿಂದ ನಿಂದನೆ

thefilestack by thefilestack
June 14, 2025
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ‘ಜೇನು ಕುರುಬರು ಮತ್ತು ಸೋಲಿಗರು ನನ್ನ ಹತ್ತಿರ ಬಂದು ಕಿತ್ತು ಗುಡ್ಡೆ ಹಾಕಿಕೊಂಡು ಲೆಕ್ಕ ಹಾಕಿಕೊಳ್ಳಿ. ಸರ್ಕಾರವು ಎಲ್ಲವನ್ನು ಫ್ರೀ ಕೊಟ್ಟು ತಿಂದು ತಿಂದು ಗೂಳಿ ಹಾಗಿ ಆಗಿರುತ್ತಾರೆ. ಫ್ರೀ ಕೊಡುವುದರಿಂದ ನಮ್ಮ ಕಾಫಿ ತೋಟಕ್ಕೂ ಕೆಲಸಕ್ಕೆ ಬರುವುದಿಲ್ಲ,’

 

ಹೀಗೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್‍‌ ಎಂಬುವರು ಸೋಲಿಗರು ಮತ್ತು ಜೇನುಕುರುಬರನ್ನು ಜಾತಿ ಹೆಸರಿಡಿದು  ಹಂಗಿಸಿದ್ದಾರೆ ಎಂದು ಆರೋಪವೊಂದು ಕೇಳಿ ಬಂದಿದೆ.

 

ಈ ಸಂಬಂಧ ಪಿರಿಯಾಪಟ್ಟಣದ ರೇಣಿಗೇಟ್‌ ಹಾಡಿಕೊಪ್ಪದ ಶಾಂತರಾಜು ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್‌ ಸಿ ಮಹದೇವಪ್ಪ  ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

 

2025ರ ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಾಟಿ ಕೋಳಿ ಸಾಕಾಣಿಕೆಗಾಗಿ ಶೆಡ್‌ ನಿರ್ಮಾಣ ಮಾಡಲು ಮಂಜೂರಾಗಿದ್ದ ಸಾಲ ಸೌಲಭ್ಯ ನೀಡಲು  ಪರಿವೀಕ್ಷಣೆಗೆ ಬಂದಿದ್ದ   ಸಂದರ್ಭದಲ್ಲಿ ಚಂದ್ರಶೇಖರ್‍‌ ಎಂಬುವರು ಅರ್ಜಿದಾರರನ್ನು ಜಾತಿ ಹೆಸರಿಡಿದು  ಹಂಗಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿರುವುದು ಗೊತ್ತಾಗಿದೆ.

 

ದೂರಿನಲ್ಲೇನಿದೆ?

 

‘ನಿನಗೆ ಕೊಡಗು ಜಿಲ್ಲೆಯ ಬಸವನಹಳ್ಳಿಯ ತಮ್ಮಯ್ಯ ಗೊತ್ತ ಎಂದು ಕೇಳಿದರು. ಗೊತ್ತಿಲ್ಲ ಸರ್ ಎಂದೆ. ಅವನು ಜೇನು ಕುರುಬನಾ ಎಂದು ಕೇಳಿದರು. ಏಕೆ ಸರ್ ಎಂದು ಕೇಳಿದೆ. ನಾನು ಕೊಡಗು ಜಿಲ್ಲೆಯಲ್ಲಿ ಅಂಬೇಡ್ಕರ್‍‌ ಅಭಿವೃದ್ಧಿ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಡೆದ ಕಾರ್ಯಕ್ರಮಗಳ ಬಗ್ಗೆ ಅರ್ಜಿ ನೀಡಿದ್ದಾನೆ. ಇದಕ್ಕೆ ನೀನೇ ಕಾರಣ. ನೀನು ಸೋಲಿಗ, ನೀವುಗಳು ಜೇನು ಕುರುಬರು ಮತ್ತು ಸೋಲಿಗರು ಬಂದು ನನ್ನ ಹತ್ತಿರ ಕಿತ್ತು ಗುಡ್ಡೆ ಹಾಕಿಕೊಂಡು 1, 2 ಎಂದು ಲೆಕ್ಕ ಹಾಕಿಕೊಳ್ಳಿ ಎಂದು ಅಶ್ಲೀಲವಾಗಿ ಕೆಟ್ಟ ಪದಗಳಿಂದ ನನ್ನನ್ನು ಮತ್ತು ನಮ್ಮ ಸಮುದಾಯವನ್ನು ನಿಂದಿಸಿರುತ್ತಾರೆ,’ ಎಂದು  ಶಾಂತರಾಜು ಎಂಬುವರು ದೂರಿನಲ್ಲಿ ಘಟನೆಯನ್ನು ವಿವರಿಸಿರುವುದು ತಿಳಿದು ಬಂದಿದೆ.

 

 

 

ಬುಡಕಟ್ಟು ಜನಾಂಗವಾಗಿರುವ ಜೇನು ಕುರುಬರು ಮತ್ತು ಸೋಲಿಗರ ಪುನಶ್ಚೇತನಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಿದೆ. ಶೈಕ್ಷಣಿಕವಾಗಿ, ಪೌಷ್ಠಿಕ ಆಹಾರ, ವಸತಿ, ರಸ್ತೆ ಮುಂತಾದವುಗಳನ್ನು ಕಾರ್ಯಗತಗೊಳಿಸಲು ಸಮಾಜ ಕಲ್ಯಾಣ ಅಧಿಕಾರಿಯನ್ನೂ ನಿಯೋಜಿಸಿದೆ. ಆದರೆ ಚಂದ್ರಶೇಖರ್ ಎಂಬುವರು ಟೆಂಡರ್‍‌ದಾರರ ಜತೆ ಶಾಮೀಲಾಗಿ ಉಚಿತವಾಗಿ ನೀಡುವ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಲು ಲಂಚ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿರುವುದು ಗೊತ್ತಾಗಿದೆ.

 

‘ಪೌಷ್ಠಿಕ ಆಹಾರ ಕಿಟ್‌ಗಳನ್ನು ಮೂರು ಕೇಂದ್ರಗಳಿಂದ ತಲಾ 20ರಂತೆ ಒಟ್ಟು 60 ಕಿಟ್‌ಗಳನ್ನು ಇಳಿಸದೇ ಹಣದ ರೂಪದಲ್ಲಿ ಪಡೆದಿರುತ್ತಾರೆ. ಈ ವಿಚಾರವಾಗಿ ನಾವು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಇದನ್ನು ಪರಿವೀಕ್ಷಣೆ ಮಾಡಿದಾಗ ಸಾಬೀತಾಗಿದೆ. ನಮ್ಮ ಸಮುದಾಯದ ಮಕ್ಕಳಿಗೆ ಸ್ಕಾಲರ್‍‌ ಶಿಪ್‌, ನಿರುದ್ಯೋಗ ಭತ್ಯೆ ಮತ್ತು ಇನ್ನಿತರೆ ಸೌಲಭ್ಯ ಕೊಡಿಸುವಲ್ಲಿ ತಾತ್ಸಾರ ಮಾಡಿರುತ್ತಾರೆ,’ ಎಂದು ದೂರಿನಲ್ಲಿ ಆಪಾದಿಸಿರುವುದು ತಿಳಿದು ಬಂದಿದೆ.

 

ಅಲ್ಲದೇ ‘ಸೌಲಭ್ಯ ಕೇಳಲು ಹೋದರೇ ಶರ್ಟ್ ತೋಳನ್ನು ಹಿಂದಕ್ಕೆ ಎಳೆದುಕೊಂಡು ಗದರಿಸಿ ಕಳಿಸುತ್ತಾರೆ. ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ತಿಂದು ತಿಂದು ಗೂಳಿ ಹಾಗಿ ಆಗಿರುತ್ತಾರೆ. ಫ್ರೀ ಕೊಡುವುದರಿಂದ ಇವರು ನಮ್ಮ ಕಾಫಿ ತೋಟಕ್ಕೆ ಕೆಲಸಕ್ಕೆ ಬರುವುದಿಲ್ಲ ಎಂದು ಹಂಗಿಸಿ ಕಳಿಸುತ್ತಾರೆ, ‘ ಎಂದು ದೂರಿನಲ್ಲಿ ಆರೋಪಿಸಿರುವುದು ಗೊತ್ತಾಗಿದೆ.

 

 

ಚಂದ್ರಶೇಖರ್‍‌ ಅವರು ಈ ಹಿಂದೆ ಗಿರಿಜನರಿಗೆ ಸೌಲಭ್ಯ ಕೊಡಲು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದರು. ಜೈಲಿಗೂ ಸಹ ಹೋಗಿದ್ದರು. ಶೋಷಿತ ಸಮುದಾಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಮಾಡಲು ನಿಯೋಜಿತ ಅಧಿಕಾರಿಯೇ ಹೀಗೆ ವರ್ತಿಸಿದ್ದಾರೆ. ಇವರ ಅವಧಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಇವುಗಳನ್ನು ತನಿಖೆ ಮಾಡಿಸಬೇಕು ಎಂದು ದೂರುದಾರರು ಆಗ್ರಹಿಸಿರುವುದು ದೂರರ್ಜಿಯಿಂದ  ತಿಳಿದು ಬಂದಿದೆ.

 

2025 ರ ಮೇ 15ರಂದೇ ಬೈಲುಕುಪ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಎಫ್‌ಐಆರ್‍‌ ಕೂಡ ಆಗಿದೆ. ಈತ ಪ್ರಭಾವಿ ವ್ಯಕ್ತಿ ಆಗಿರುವ ಕಾರಣ ಸಾಕ್ಷಿ ಹಾಗೂ ಇನ್ನಿತರೆ ವಿಷಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಇವರನ್ನು ತಕ್ಷಣವೇ ಅಮಾನತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿರುವುದು ಗೊತ್ತಾಗಿದೆ.

Tags: AdvisorAmbedkarBasavanahallibjpCasteChamarajanagarComplaintD K ShivakumarFIRfoodGowdah d kumarswamyHarrasementJenuKitsKodaguKurubaLeaglMantharmysoreMysore DistrictOfficerPiriyapattanaPonnannar ashokSiddaramaiahasocialSoligaWelfareಅಂಬೇಡ್ಕರ್‌ಅಭಿವೃದ್ಧಿಅರ್‍‌ ಅಶೋಕ್‌ಅವಮಾನಆರ್‌ ಅಶೋಕ್‌ಕರ್ತವ್ಯಾಧಿಕಾರಿಕಲ್ಯಾಣಕುರುಬಕೊಡಗುಜಾತಿ ದೌರ್ಜನ್ಯಜಾತಿ ನಿಂದನೆಜಿಲ್ಲೆಜೇನುಡಾ ಹೆಚ್‌ ಸಿ ಮಹದೇವಪ್ಪಡಿ ಕೆ ಶಿವಕುಮಾರ್ತಾಲೂಕುನಿಗಮನಿಂದನೆನಿರ್ದೇಶಕನಿರ್ದೇಶಕಲಪಿರಿಯಾಪಟ್ಟಣಬಿ ವೈ ವಿಜಯೇಂದ್ರಬಿಜೆಪಿಮುಖ್ಯಮಂತ್ರಿಮೈಸೂರುವಿಶೇಷಶಾಂತರಾಜುಸಮಾಜಸಹಾಯಕಸಿದ್ದರಾಮಯ್ಯಸೋಲಿಗಹೀಯಾಳಿಕೆಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

‘ಜೇನು ಕುರುಬರು ಮತ್ತು ಸೋಲಿಗರು ಬಂದು ಕಿತ್ತು ಗುಡ್ಡೆ ಹಾಕಿ ಲೆಕ್ಕ ಹಾಕಿಕೊಳ್ಳಿ’; ಅಧಿಕಾರಿಯಿಂದ ನಿಂದನೆ

Next Post

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

thefilestack

thefilestack

Next Post

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

Recommended

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿ; ತುಂಡು ಗುತ್ತಿಗೆ ಹಿಂದಿದೆ ಅವ್ಯವಹಾರದ ವಾಸನೆ!

6 years ago

ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್‌ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd