the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಡಿಸಿಎಂ ಹುದ್ದೆಗೆ ವರಿಷ್ಠರಿಂದ ಸಿಗದ ಖಚಿತ ಭರವಸೆ; ಶ್ರೀರಾಮುಲು, ಈಶ್ವರಪ್ಪ ಅಸಮಾಧಾನ!

thefilestack by thefilestack
July 28, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಬೆಂಗಳೂರು; ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ವರಿಷ್ಠರಿಂದ ಯಾವುದೇ ಭರವಸೆ ದೊರೆತಿಲ್ಲ. ಹೀಗಾಗಿ ಅಸಮಾಧಾನಿತರಾಗಿರುವ ಶ್ರೀರಾಮುಲು ಬಳ್ಳಾರಿಗೆ ತೆರಳಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಈ ಬೆಳವಣಿಗೆ ನಡುವೆಯೇ ಮತ್ತೊಬ್ಬ ಹಿರಿಯ ಮುಖಂಡ ಕೆ ಎಸ್‌ ಈಶ್ವರಪ್ಪ ಅವರು ಸಹ ಮೌನಕ್ಕೆ ಜಾರಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗುವ ಬಗ್ಗೆ ಅವರಿಗೂ ಭರವಸೆ ಸಿಕ್ಕಿಲ್ಲ. ಹೀಗಾಗಿ ಅವರು ಸಹ ಅಸಮಾಧಾನಿತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಇದರ ಬೆನ್ನಲ್ಲೇ ಶ್ರೀರಾಮುಲು ಯಾರ ಸಂಪರ್ಕಕ್ಕೂ ಸಿಗದಿರುವುದು ಮತ್ತು ಈಶ್ವರಪ್ಪ ಅಸಮಾಧಾನಿತರಾಗಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿವೆ.

ಬರಿಗೈಯಿಂದ ವಾಪಾಸಾದರೇ ಶ್ರೀರಾಮುಲು?

ಶ್ರೀರಾಮುಲು ದೆಹಲಿಗೂ ತೆರಳಿದ್ದರು. ವರಿಷ್ಠರನ್ನೂ ಭೇಟಿಯಾಗಿದ್ದರು. ವಾಲ್ಮೀಕಿ ಸಮಾಜವನ್ನು ಕಡೆಗಣಿಸಲಾಗಿದೆಯಲ್ಲದೆ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಅಸಮಾಧಾನವೂ ಸಮಾಜದಲ್ಲಿದೆ. ಹೀಗಾಗಿ ವಾಲ್ಮೀಕಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರಕಿಸಿಕೊಡಬೇಕು ಎಂದು ವರಿಷ್ಠರ ಬಳಿ ಅಳಲನ್ನು ತೋಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಆ ಸಂದರ್ಭದಲ್ಲಿ ವರಿಷ್ಠರಿಂದ ಶ್ರೀರಾಮುಲು ಅವರಿಗೆ ಯಾವುದೇ ಖಚಿತ ಭರವಸೆ ಸಿಗಲಿಲ್ಲ. ಹೀಗಾಗಿ ದೆಹಲಿಯಿಂದ ಬರಿಗೈಯಲ್ಲಿ ಮರಳಿದ್ದರು. ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಇತ್ತು.

ಆದರೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಹಲವು ಗಂಟೆಗಳಾದರೂ ವರಿಷ್ಠರಿಂದ ಯಾವುದೇ ಸುಳಿವು ಸಿಗದ ಕಾರಣ ಮುನಿಸಿಕೊಂಡು ಬಳ್ಳಾರಿಗೆ ದೌಡಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀರಾಮುಲು ಅವರ ಹೆಸರು ಅಂತಿಮಗೊಂಡಿದೆ. ಅಧಿಕೃತವಾಗಿ ಘೋಷಣೆಯಾಗುವವರೆಗೂ ಏನನ್ನೂ ಹೇಳಲಾಗದು ಎಂದು ಮತ್ತೊಂದು ಮೂಲಗಳು ಹೇಳುತ್ತಿವೆ.

ಆಪ್ತ ಸಹಾಯಕನ ಪ್ರಕರಣ ಮುಳುವಾಯಿತೇ?

ಕೆಲ ದಿನಗಳ ಹಿಂದೆಯೇ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಪ್ಪ ಎಂಬಾತನ ಮೇಲೆ ಹಣ ವಸೂಲಿ ಮಾಡಿದ ಆರೋಪವನ್ನು ಖುದ್ದು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರೇ ಸಿಸಿಬಿಗೆ ಲಿಖಿತ ದೂರು ದಾಖಲಿಸಿದ್ದರು. ಈ ಬೆಳವಣಿಗೆಯಿಂದ ಶ್ರೀರಾಮುಲು ವಿಚಲಿತರಾಗಿದ್ದರು.

ಕಡೇ ಗಳಿಗೆಯಲ್ಲಿ ಶ್ರೀರಾಮುಲು ನೇರವಾಗಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಕರಣವನ್ನು ಸುಖಾಂತ್ಯಗೊಳಿಸಲು ನಡೆಸಿದ ಯತ್ನದಲ್ಲಿ ಸಫಲರಾಗಿದ್ದರು. ಅಲ್ಲದೆ ಕೆಲವೇ ಗಂಟೆಗಳಲ್ಲಿ ರಾಜಪ್ಪ ಅವರನ್ನು ಸಿಸಿಬಿ ಪೊಲೀಸರು ಬಿಟ್ಟು ಕಳಿಸಿದ್ದರು. ಆದರೆ ಈ ಪ್ರಕರಣವು ದೆಹಲಿಯಲ್ಲಿರುವ ವರಿಷ್ಠರ ಗಮನಕ್ಕೂ ಹೋಗಿತ್ತು. ಈ ಕಾರಣದಿಂದಲೇ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಸ್ಥಾನ ಮಾತ್ರವಲ್ಲದೆ ಸಚಿವರನ್ನಾಗಿ ತೆಗೆದುಕೊಳ್ಳುವ ಬಗ್ಗೆಯೂ ಗೊಂದಲದಲ್ಲಿದ್ದಾರೆ ಎಂದು ಹೇಳಲಾಗಿದೆ.

ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಹೈಕಮಾಂಡ್‌ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಭ್ರಷ್ಟಾಚಾರದಂತಹ ಗಂಭೀರ ಆರೋಪವನ್ನು ಎದುರಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೇ ಬೇಡವೇ ಎಂಬ ಬಗ್ಗೆಯೂ ಗಾಢವಾಗಿ ಆಲೋಚಿಸುತ್ತಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.

ಇದರ ಬೆನ್ನಲ್ಲೇ ಮತ್ತೊಬ್ಬ ಮುಖಂಡ ಕೆ ಎಸ್‌ ಈಶ್ವರಪ್ಪ ಅವರು ಕೂಡ ಅಸಮಾಧಾನಿತರಾಗಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ತಮ್ಮ ಹೆಸರನ್ನೂ ಯಡಿಯೂರಪ್ಪ ಅವರು ಸೂಚಿಸಬಹುದಿತ್ತು. ಆದರೀಗ ನೂತನ ಸಂಪುಟದಲ್ಲಿ ತಮ್ಮ ಹೆಸರೂ ಇಲ್ಲ ಎಂದು ಖಚಿತಪಡಿಸಿಕೊಂಡು ಏಕಾಂತಕ್ಕೆ ಜಾರಿದ್ದಾರೆ ಎಂದು ಕೆಲ ಮೂಲಗಳು ತಿಳಿಸಿವೆ..

Tags: B S YediyurappaB SriramuluBasavaraja BommaiCabinetD K ShivakumarDCMh d kumarswamyK S EshwarappaSiddaramaiahಉಪ ಮುಖ್ಯಮಂತ್ರಿ ಸ್ಥಾನಎಚ್‌ ಡಿ ಕುಮಾರಸ್ವಾಮಿಡಿ ಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಬಿ ಶ್ರೀರಾಮುಲುಸಚಿವ ಸಂಪುಟಸಿದ್ದರಾಮಯ್ಯ
Advertisement Banner
Previous Post

ಆಮಿಷ; ಜಸ್ಟೀಸ್‌ ಇಂದ್ರಕಲಾ ಸೇರಿ 5 ಮಂದಿಗೆ ಯುವರಾಜಸ್ವಾಮಿ ವಂಚಿಸಿದ್ದು 18.32 ಕೋಟಿ

Next Post

ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

thefilestack

thefilestack

Next Post

ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

Discussion about this post

Recommended

ರಮೇಶ್‌ ಜಾರಕಿಹೊಳಿಯ ಜಲ ಸಂಪನ್ಮೂಲ ಇಲಾಖೆಯಲ್ಲಿ ಹರಿದಿಲ್ಲ ಸಾಧನೆ ಹೊಳೆ

5 years ago

ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

1 year ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd