the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ನಿನಗೆಷ್ಟೋ ಧೈರ್ಯ, ಜೀವಂತ ಸುಡಿಸುತ್ತೇನೆ’; ಹಲ್ಲೆ ನಡೆಸಿದ್ದ ಕೆಎಸ್‌ಆರ್‍‌ಟಿಸಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‍‌

thefilestack by thefilestack
March 16, 2024
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ರಾಯಸಂದ್ರ ರವಿಕುಮಾರ್‍‌ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಅವರ ವಿರುದ್ದ ಎಫ್‌ಐಆರ್‍‌ ದಾಖಲಾಗಿದೆ.

 

ರಾಯಸಂದ್ರ ರವಿಕುಮಾರ್‍‌ ಅವರ ಮೇಲೆ ಶಾಸಕ ಹಾಗೂ ಕೆಎಸ್‌ಆರ್‍‌ಟಿಸಿ ಅಧ್ಯಕ್ಷ   ಶ್ರೀನಿವಾಸ್‌ ಮತ್ತು ಅವರ ಸಂಗಡಿಗರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಸಹ ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಘಟನೆ ನಡೆದು 2 ದಿವಸದ ನಂತರ ಎಫ್‌ಐಆರ್‍‌ ದಾಖಲಿಸಿರುವುದು ಗೊತ್ತಾಗಿದೆ.

 

ಶಾಸಕ ಶ್ರೀನಿವಾಸ್‌ ಅವರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‍‌ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಹದಗೆಟ್ಟಿದೆ ಮತ್ತು ಹಲ್ಲೆ, ಕೊಲೆ, ಅತ್ಯಾಚಾರ ಪ್ರಕರಣಗಳಂತಹ ಅಪರಾಧಗಳ ಸಂಖ್ಯೆಯೂ ಹೆಚ್ಚಿವೆ ಎಂದು ಸದನದಲ್ಲಿ ಪ್ರತಿಪಕ್ಷಗಳು ಆರೋಪಿಸಿದ್ದವು. ಇದರ ಬೆನ್ನಲ್ಲೇ ಸ್ವತಃ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆಯೇ ಕಾಂಗ್ರೆಸ್‌ ಶಾಸಕ ಶ್ರೀನಿವಾಸ್‌ ಮತ್ತವರ ಗುಂಪೊಂದು ಹಲ್ಲೆ ನಡೆಸಿರುವುದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಹಳಿ ತಪ್ಪಿದೆ ಎಂಬ ಆರೋಪಕ್ಕೆ ಮತ್ತೊಂದು ಸಾಕ್ಷ್ಯ ಲಭಿಸಿದಂತಾಗಿದೆ.

 

ವಿಶೇಷವೆಂದರೇ ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರ ಸ್ವಕ್ಷೇತ್ರದಲ್ಲಿಯೇ ಈ ಹಲ್ಲೆ ನಡೆದಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

 

ಎಫ್‌ಐಆರ್‍‌ನಲ್ಲೇನಿದೆ?

 

ರಸ್ತೆ, ಚರಂಡಿ ಮತ್ತಿತರ ನಾಗರಿಕ ಮೂಲಭೂತ ಸೌಲಭ್ಯಗಳ ಕಾಮಗಾರಿ ನಡೆಸುವ ಸಂಬಂಧ ಪಂಚಾಯತ್‌ರಾಜ್‌ ಇಲಾಖೆಯು ಕರೆದಿದ್ದ ಟೆಂಡರ್‍‌ನಲ್ಲಿ ಪ್ರಥಮದರ್ಜೆ ಗುತ್ತಿಗೆದಾರ ರಾಯಸಂದ್ರ ರವಿಕುಮಾರ್‍‌ ಅವರು ಕಡಿಮೆ ದರ ನಮೂದಿಸಿದ್ದರಿಂದಾಗಿ ಸಿವಿಲ್‌ ಕಾಮಗಾರಿಯ ಗುತ್ತಿಗೆ ದೊರೆತಿತ್ತು.

 

ಈ ಸಂಬಂಧ ಕಾರ್ಯಪಾಲಕ ಇಂಜಿನಿಯರ್‍‌ ಅವರು 2024ರ ಫೆ.21ರಂದು ಅಂಚೆ ಮೂಲಕ ರವಿಕುಮಾರ್‍‌ ಅವರಿಗೆ ಗುತ್ತಿಗೆಯ ಸಮ್ಮತಿ ದಾಖಲೆಗಳನ್ನು ರವಾನಿಸಿದ್ದರು. 2024ರ ಫೆ.27ರಿಂದ ಈ ಗುತ್ತಿಗೆ ಸಮ್ಮತಿ ಪತ್ರವು ಜಾರಿಯಾಗಿತ್ತು.

 

ಗುತ್ತಿಗೆ ಸಮ್ಮತಿ ಪತ್ರ ಕೈ ಸೇರಿದ ನಂತರ ರವಿಕುಮಾರ್‍‌ ಅವರು 2024ರ ಮಾರ್ಚ್‌ 14ರಂದು ಮಧ್ಯಾಹ್ನ ಕುಣಿಗಲ್‌ ಮುಖ್ಯ ರಸ್ತೆಯಲ್ಲಿರುವ ಕೆ ಲಕ್ಕಪ್ಪ ವೃತ್ತದ ಬಳಿ ಇರುವ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗಕ್ಕೆ ಭೇಟಿ ನೀಡಿದ್ದರು. ಗುತ್ತಿಗೆ ಕರಾರನ್ನು ಮಾಡಿಕೊಳ್ಳುವ ಸಂಬಂಧ ಸಹಾಯಕ ಇಂಜಿನಿಯರ್‍‌ ಲಿಂಗರಾಜು ಅವರು ತಕರಾರು ತೆಗೆದಿದ್ದರು.

 

ಈ ಕುರಿತು ಅಧಿಕಾರಿಗಳಿಗೆ ರವಿಕುಮಾರ್‍‌ ಅವರು ಚರ್ಚಿಸಿದ್ದರು. ಆದರೆ ಕಡೇ ಗಳಿಗೆಯಲ್ಲಿ ಈ ಕಾಮಗಾರಿಯು ರದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದು ಕಾನೂನುಬಾಹಿರ ಮತ್ತು ಏಕಪಕ್ಷೀಯವಾಗಿ ಕೂಡಿದೆ ಎಂದು ರವಿಕುಮಾರ್‍‌ ಅವರು ಸ್ಥಳದಲ್ಲಿಯೇ ಆರೋಪಿಸಿದ್ದರು. ಅಲ್ಲದೇ ಅನಿರ್ದಿಷ್ಟಾವಧಿಯ ಪ್ರತಿಭಟನೆಯನ್ನೂ ನಡೆಸಿದ್ದರು.

 

ಇದೇ ಹೊತ್ತಿನಲ್ಲಿ ಗುಬ್ಬಿ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಮತ್ತು ಅವರ 10 ಮಂದಿ ಬೆಂಬಲಿಗರು ಏಕಾಏಕೀ ಧರಣಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.

 

‘ಮಾನಸಿಕ ಸ್ಥಿಮಿತ ಕಳೆದುಕೊಂಡ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಅವರು ಯಾವನೋ ಅವನು ರಾಯಸಂದ್ರ ರವಿ ಎಂದು ಕಿರುಚಾಡಿ ನನ್ನ ಕ್ಷೇತ್ರದಲ್ಲಿ ನನ್ನ ಅನುಮತಿ ಇಲ್ಲದೇ ಕಾಮಗಾರಿ ಮಂಜೂರು ಮಾಡಿಸಿಕೊಳ್ಳಲು ಎಷ್ಟು ಧೈರ್ಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನಗೆ ತಾಕತ್ತಿದ್ದರೆ ಕೆಲಸ ಮಾಡು ನಿನ್ನೊಂದಿಗೆ ನಿನ್ನ ಕೆಲಸ ಮಾಡಿಸುವ ಯಂತ್ರೋಪಕರಣದೊಂದಿಗೆ ಜೀವಂತ ಸುಡಿಸುತ್ತೇನೆ ಎಂದು ಕೂಗಾಡಿದರು,’ ಎಂದು ರವಿಕುಮಾರ್‍‌ ಅವರು ದೂರಿನಲ್ಲಿ ಘಟನೆಯನ್ನು ವಿವರಿಸಿದ್ದಾರೆ.

 

ಹಲ್ಲೆಗೊಳಗಾಗಿರುವ ರಾಯಸಂದ್ರ ರವಿಕುಮಾರ್‍‌

 

ಈ ವೇಳೆ ‘ನನ್ನ ಮೇಲೆ ಏಕಾಏಕೀ ಕೈಗಳಿಂದ ಮನಸೋ ಇಚ್ಛೆ ಗುದ್ದಿ ಜೋರಾಗಿ ಹಿಮ್ಮುಖನಾಗಿ ಬೀಳುವಂತೆ ತಳ್ಳಿದಾಗ ಕತ್ತಿನ ಹಿಂಭಾಗ ಹಾಗೂ ಬೆನ್ನಿನ ಮೇಲೆ ರಕ್ತ ಹೆಪ್ಪುಗಟ್ಟಿದ ಗಾಯಗಳಾದವು. ನಂತರ ಅವರ ಜೊತೆ ಬಂದಿದ್ದವರು ಸಹ ಕೈ ಕಾಲುಗಳಿಂದ ತುಳಿದು ಕಾಲಿನಿಂದ ಒದ್ದರು. ದೇಹದ ಹಲವಾರು ಕಡೆ ಮೂಗೇಟು ಗಾಯಗಳನ್ನು ಮಾಡಿದರು. ನಂತರ ನನ್ನನ್ನು ಎತ್ತಿ ಕಾರಿಗೆ ಎತ್ತಿ ಹಾಕಿಕೊಳ್ಳಿರೋ ಎಲ್ಲಿಯಾದರೂ ತೆಗೆದುಕೊಂಡು ಹೋಗಿ ಸಾಯಿಸಿ ಬಿಡೋಣ ಎಂದು ಕೊಲೆ ಮಾಡುವ ಉದ್ದೇಶದಿಂದ ಧರಣಿ ನಡೆಯುತ್ತಿದ್ದ ಸ್ಥಳದಿಂದ ಎಳೆದುಕೊಂಡು ಹೋಗಿದ್ದರು,’ ಎಂದು ರವಿಕುಮಾರ್‍‌ ಅವರು ಘಟನೆಯನ್ನು ಮತ್ತಷ್ಟು ವಿವರಿಸಿರುವುದ ಗೊತ್ತಾಗಿದೆ.

 

ಈ ಸಂಬಂಧ ರವಿಕುಮಾರ್‍‌ ಅವರು ನೀಡಿದ್ದ ದೂರಿನ ಮೇರೆಗೆ 48 ಗಂಟೆಗಳ ನಂತರ ಗುಬ್ಬಿ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಮತ್ತು ಅವರ ಸಂಗಡಿಗರ ವಿರುದ್ಧ ಐಪಿಸಿ ಸೆಕ್ಷನ್‌ 1860, 511, 506, 504, 143, 149, 323, 363 ಅಡಿಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

Tags: AttackChairmancongressD K ShivakumarGoondaGubbih d kumarswamyKSRTCRavikumarRayasandraS R SrinivasSiddaramaiahaಆರ್‌ ಅಶೋಕ್‌ಆಸ್ಪತ್ರೆಎಫ್‌ಐಆರ್‌ಎಸ್‌ ಆರ್‍‌ ಶ್ರೀನಿವಾಸ್‌ಕಾಂಗ್ರೆಸ್‌ಕುಣಿಗಲ್‌ಕೆ ಎನ್‌ ರಾಜಣ್ಣಗುತ್ತಿಗೆಗೂಂಡಾ ವರ್ತನೆಗೂಂಡಾಗಿರಿಜೀವಂತಡಾ ಜಿ ಪರಮೇಶ್ವರ್‌ತುಮಕೂರುಪಂಚಾಯತ್‌ರಾಜ್‌ಪದಾಧಿಕಾರಿಪ್ರತಿಪಕ್ಷಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಬಿ ವೈ ವಿಜಯೇಂದ್ರಬಿಜೆಪಿಬೆದರಿಕೆಮಾರಣಾಂತಿಕಶಾಸಕಸಿವಿಲ್‌ ಕಾಮಗಾರಿಸಿವಿಲ್‌ ಗುತ್ತಿಗೆದಾರಹಲ್ಲೆ
Advertisement Banner
Previous Post

1,200 ಕೋಟಿ ಮೊತ್ತದ ಬಾಂಡ್‌ ಖರೀದಿಸಿದ್ದ ಮೇಘಾಗೂ ರಾಜ್ಯ ಅನಿಲ ನೀತಿಯಿಂದ 1,787 ಕೋಟಿ ಲಾಭ!

Next Post

ಬಿಳಿ ಹಾಳೆ ಮೇಲೆ ಸಲ್ಲಿಸಿದ್ದ ಬಿಲ್‌ಗಳಿಗೂ ಮಾನ್ಯತೆ; ಆದಾಯ ತೆರಿಗೆಯಲ್ಲೂ 1.41 ಕೋಟಿ ರು. ನಷ್ಟ

thefilestack

thefilestack

Next Post

ಬಿಳಿ ಹಾಳೆ ಮೇಲೆ ಸಲ್ಲಿಸಿದ್ದ ಬಿಲ್‌ಗಳಿಗೂ ಮಾನ್ಯತೆ; ಆದಾಯ ತೆರಿಗೆಯಲ್ಲೂ 1.41 ಕೋಟಿ ರು. ನಷ್ಟ

Recommended

36,689 ನಕಲಿ ಆಧಾರ್‌ ಪ್ರಕರಣ ಪತ್ತೆ; ಸಾಮಾಜಿಕ ಭದ್ರತೆ ಪಿಂಚಣಿ ಪಾವತಿಯಲ್ಲೂ ಅಕ್ರಮ?

3 years ago

ಬಳಸಿದ್ದು 0.38 ಗುಂಟೆ, ಪ್ರಾಧಿಕಾರ ನೀಡಿದ್ದು 5 ನಿವೇಶನ; ಬೇಕಾಬಿಟ್ಟಿ ನಿರ್ಧಾರ, ಪ್ರಾಧಿಕಾರಕ್ಕೆ ಆರ್ಥಿಕ ನಷ್ಟ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd