the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಪತ್ರಿಕೆಗಳಿಗೆ 21.70 ಕೋಟಿ ಸೇರಿ ಇತರೆ ಜಾಹೀರಾತುಗಳಿಗೆ 100 ಕೋಟಿ ವೆಚ್ಚ; ಆರ್ಥಿಕ ಬಿಕ್ಕಟಿನಲ್ಲೂ ಪ್ರಚಾರದ ಗೀಳು

thefilestack by thefilestack
February 26, 2024
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸರ್ಕಾರದ ಸಾಧನೆ ಯೋಜನೆಗಳ ಕುರಿತಾದ ಮಾಹಿತಿಯನ್ನು ಪ್ರಚಾರ ಮಾಡಲು ಕಾಂಗ್ರೆಸ್‌ ಸರ್ಕಾರವು ಕಳೆದ 9 ತಿಂಗಳಲ್ಲಿ ಜಾಹೀರಾತುಗಳಿಗೆ ಬರೋಬ್ಬರಿ 100 ಕೋಟಿ ರು. ವೆಚ್ಚ ಮಾಡಿದೆ.

 

ವಿಧಾನಪರಿಷತ್‌ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಖಿತ ಉತ್ತರ ಒದಗಿಸಿದ್ದಾರೆ.

 

ಶಾಲಾ ಮಕ್ಕಳ ಉತ್ತರ ಪತ್ರಿಕೆಗಳಿಗೂ ಹಣವನ್ನು ಭರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿರುವ ಹೊತ್ತಿನಲ್ಲಿಯೇ ಜಾಹೀರಾತುಗಳಿಗೆ 100 ಕೋಟಿ ರು. ವೆಚ್ಚ ಮಾಡಿರುವುದು ಮುನ್ನೆಲೆಗೆ ಬಂದಿದೆ.

 

ಜಾಹೀರಾತಿನ ವೆಚ್ಚದ ವಿವರ

 

ಗ್ಯಾರಂಟಿ ಯೋಜನೆಗಳಿಗೆ 3,28,21,162 ರು., 100 ದಿನಗಳ ಪ್ರಗತಿಗೆ 6,05,02,650 ರು., ಕರ್ನಾಟಕ ಸಂಭ್ರಮ-50ಕ್ಕೆ 3,47,94,791 ರು., ಸಂವಿಧಾನ ಪೀಠಿಕೆ 83,93,143 ರು., ಮೈಸೂರು ದಸರಾಕ್ಕೆ 1,10,69,349 ರು., ಬಸ್‌ ಶೆಲ್ಟರ್‍‌ಗಳಲ್ಲಿ ಜಾಹೀರಾತಿಗೆ 3,05,56,117 ರು., ಖಾಸಗಿ ಒಡೆತನದ ಪ್ರಚಾರ ಫಲಕಗಳ ಮೂಲಕ ಪ್ರಚಾರಕ್ಕೆ 51,19,540 ರು., ವಸ್ತು ಪ್ರದರ್ಶನಕ್ಕೆ 1,11,26,383 ರು., ರು ಪಾವತಿಸಲಾಗಿದೆ.

 

ಹಿಂದುಳಿದ ವರ್ಗ ಹಾಗೂ ಬ್ರಾಹ್ಮಣ ಸಮುದಾಯದ ಪತ್ರಿಕೆಗಳ ಪ್ರೋತ್ಸಾಹ ಧನ ರೂಪದ ಜಾಹೀರಾತಿಗೆ 21,70, 00,000 ರು., ವೆಚ್ಚ ಮಾಡಲಾಗಿದೆ. ಆದರೆ ಹಿಂದುಳಿದ ವರ್ಗ ಮತ್ತು ಬ್ರಾಹ್ಮಣ ಸಮುದಾಯದ ಪತ್ರಿಕೆಗಳ ವಿವರ ಮತ್ತು ಜಾಹೀರಾತು ಮೊತ್ತ ಪಾವತಿಸಿರುವ ಮೊತ್ತದ ವಿವರಗಳನ್ನು ಒದಗಿಸಿಲ್ಲ.

 

ಪತ್ರಿಕಾ ಮಾಧ್ಯಮಗಳಿಗೆ 33,81,00,000 ರು.,ವಿದ್ಯುನ್ಮಾನ ಮಾಧ್ಯಮಗಳಿಗೆ 13,92,00,000 ರು., ಇತರೆ ಸಮೂಹ ಮಾಧ್ಯಮಗಳಿಗೆ 11,92,00,000 ರು.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರದಲ್ಲಿ ವಿವರಿಸಿದ್ದಾರೆ.

 

2019-20ರಿಂದ 2023ರ ಜನವರಿವರೆಗೆ ಹಿಂದಿನ ಬಿಜೆಪಿ ಸರ್ಕಾರವು ಒಟ್ಟಾರೆ 4 ವರ್ಷಗಳಲ್ಲಿ ಟಿವಿ, ಮುದ್ರಣ ಮಾಧ್ಯಮ, ಸಾಮಾಜಿಕ ಜಾಲತಾಣಗಳಿಗೆ 173.33 ಕೋಟಿ ರು. ವೆಚ್ಚ ಮಾಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರವು ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ಕೇವಲ 9 ತಿಂಗಳಲ್ಲಿ 47.73 ಕೋಟಿ ರು. ವೆಚ್ಚ ಮಾಡಿದೆ.

 

2023-24ನೇ ಸಾಲಿನಲ್ಲಿ ಬಸ್‌ ಬ್ಯ್ರಾಂಡಿಂಗ್‌ ಮೂಲಕ ಯೋಜನೆಗಳನ್ನು ಪ್ರಚಾರ ಮಾಡಲು ಪ್ರತ್ಯೇಕ ಅನುದಾನ ಒದಗಿಸಿಲ್ಲ.

 

ಇಲಾಖೆಗೆ ಒದಗಿಸಿದ್ದ ಒಟ್ಟು ಅನುದಾನದಲ್ಲಿಯೇ ಇದಕ್ಕಾಗಿ 9,01,50,676 ರು., ವೆಚ್ಚ ಮಾಡಲಾಗಿದೆ.

 

 

ವಿಶೇಷವೆಂದರೇ ಕಾಂಗ್ರೆಸ್‌ ಶಾಸಕ ನರೇಂದ್ರಸ್ವಾಮಿ ಅವರ ಪತ್ನಿ ನಿರ್ದೇಶಕರಾಗಿರುವ ಬೆನಕ ಆಟೋ ಮೇಷನ್‌ ಕಂಪನಿಗೆ 41,00,194 ರು. ಪಾವತಿಸಲಾಗಿದೆ. ಉಳಿದಂತೆ ಸಾಯಿ ಅಡ್ವೈಟೈಸರ್ಸ್‌ 6,35,76,489 ರು., ಕೆಎಂಸಿ ಅಂಡ್‌ ಎ ಗೆ 1,43,43,742 ರು., ಶಿವ ಆಡ್ಸ್‌ಗೆ 71,80,455 ರು., ರಿಪ್ಪಲ್‌ ಮೀಡಿಯಾಕ್ಕೆ 9,49,796 ರು. ಪಾವತಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒದಗಿಸಿರುವ ಉತ್ತರದಿಂದ ತಿಳಿದು ಬಂದಿದೆ.

 

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಆರೇ ಆರು ತಿಂಗಳಲ್ಲಿ 18 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿದ್ದರು.

 

https://stack.thefile.in/2023/12/governance/20531/

 

2019ರಿಂದ 2023ರವರೆಗೆ ಹಿಂದಿನ ಬಿಜೆಪಿ ಸರ್ಕಾರವೂ ಸಹ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಒಟ್ಟಾರೆ 173.33 ಕೋಟಿ ರು.ಗಳನ್ನು ಜಾಹೀರಾತಿಗೆ ವೆಚ್ಚ ಮಾಡಿತ್ತು.

 

2019-20ರಲ್ಲಿ ಟಿ ವಿ ವಾಹಿನಿಗಳೀಗೆ 15.25 ಕೋಟಿ ರು., 2020-21ರಲ್ಲಿ 17.45 ಕೋಟಿ , 2021-22ರಲ್ಲಿ 36.58 ಕೋಟಿ ರು., 2022-23 (2023 ಜನವರಿ 31ವರೆಗೆ) 42.23 ಕೋಟಿ ರು. ಸೇರಿ 111.51 ಕೋಟಿ ರು. ವೆಚ್ಚ ಮಾಡಿತ್ತು.

 

ಅದೇ ರೀತಿ ಮುದ್ರಣ ಮಾಧ್ಯಮಗಳಿಗೆ 2019-20ರಲ್ಲಿ 6.79 ಕೋಟಿ ರು., 2020-21ರಲ್ಲಿ 9.75 ಕೋಟಿ ರು., 2021-22ರಲ್ಲಿ 13.26 ಕೋಟಿ ರು., 2022-23ರಲ್ಲಿ 26.28 ಕೋಟಿ ರು ಸೇರಿ 56.08 ಕೋಟಿ ರು.,ವೆಚ್ಚ ಮಾಡಿತ್ತು.

 

 

ಹಾಗೆಯೇ ಸಾಮಾಜಿಕ ಜಾಲತಾಣಗಳಿಗೆ 2019-20ರಲ್ಲಿ 0.48 ಲಕ್ಷ, 2020-21ರಲ್ಲಿ 0.48 ಲಕ್ಷ ರು., 2021-22ರಲ್ಲಿ 1.18 ಲಕ್ಷ ರು., 2022-23ರಲ್ಲಿ 3.60 ಲಕ್ಷ ರು. ಸಶೇರಿ ಒಟ್ಟಾರೆ 5.70 ಲಕ್ಷ ರು. ವೆಚ್ಚ ಮಾಡಿತ್ತು.

 

ಇನ್ನು 2020-21ರಲ್ಲಿ    ವರ್ಣ ಜಾಹೀರಾತುಗಳಿಗೆ 175,66,6,429 ರು., 2021-22ರಲ್ಲಿ 341,073,768 ರು., 2022-23ರಲ್ಲಿ 567,216,692 ರು.ಗಳನ್ನು ವೆಚ್ಚ ಮಾಡಲಾಗಿದೆ.

 

ರಾಜ್ಯದ ಶೇ.99ರಷ್ಟು ತಾಲೂಕುಗಳು ಬರಪೀಡಿತವಾಗಿವೆ. ಬಹುತೇಕ ತಾಲೂಕು ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡಿರುವ ಖಾಸಗಿ ಟ್ಯಾಂಕರ್‍‌ಗಳ ಮಾಲೀಕರಿಗೆ ಹಣ ಪಾವತಿಯಾಗಿಲ್ಲ.

 

ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೋವಿಡ್‌ ಜಾಗೃತಿ ಹೆಸರಿನಲ್ಲಿ 11 ಕೋಟಿ ರು. ವೆಚ್ಚ ಮಾಡಿದ್ದರು.

https://stack.thefile.in/2020/10/legislature/5377/

 

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೋದಿ ಹುಟ್ಟುಹಬ್ಬಕ್ಕೂ ಜಾಹೀರಾತು ನೀಡಿದ್ದರು. ಇದಕ್ಕಾಗಿ ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು. ವೆಚ್ಚವಾಗಿತ್ತು.

 

 

https://stack.thefile.in/2021/09/governance/8804/

 

ಮೋದಿ ಹುಟ್ಟುಹಬ್ಬಕ್ಕೆ ಪ್ರಾಯೋಜಿತ ಪುರವಣಿಗೆಗೆ ಜಾಹೀರಾತು ನೀಡಿದ್ದ 44.85 ಲಕ್ಷ ರು. ಮಾಹಿತಿಗಳನ್ನೂ ಹಿಂದಿನ ಸರ್ಕಾರವು ಮುಚ್ಚಿಟಿತ್ತು.

 

 

ಕೋವಿಡ್‌ ಪರಿಹಾರ ನೀಡಲು ಚೌಕಾಸಿ ಮಾಡಿದ್ದ ಯಡಿಯೂರಪ್ಪ ಅವರು  ತಮಿಳುನಾಡಿನ ರಾಜಕೀಯ ವಿಶ್ಲೇಷಣೆಗೆ 25 ಲಕ್ಷ ರು.ಗಳನ್ನು ರಾಜ್ಯ ಸರ್ಕಾರದಿಂದ ಭರಿಸಿದ್ದರು.

 

https://stack.thefile.in/2021/09/governance/8994/

 

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ ಖರ್ಚಾಗಿತ್ತು. ಅಲ್ಲದೇ ಜಾಹೀರಾತಿಗೆ 6.62 ಕೋಟಿ ವೆಚ್ಚವಾಗಿತ್ತು.

 

https://stack.thefile.in/2021/10/legislature/9118/

 

ಕೋವಿಡ್ ಲಸಿಕೆ ಅಭಿಯಾನಕ್ಕಾಗಿ   3 ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಅಭಿಯಾನದ  ಗುರಿ ಮುಟ್ಟಿರಲಿಲ್ಲ.

 

https://stack.thefile.in/2021/10/governance/9212/

 

ಸರ್ಕಾರದ ಸಾಧನೆ ಬಿಂಬಿಸಲು ಬಸವರಾಜ ಬೊಮ್ಮಾಯಿ ಅವರು ತಮ್ಮ  ಆರೇ ಆರು ತಿಂಗಳಲ್ಲಿ ಜಾಹೀರಾತಿಗೆ 26.84 ಕೋಟಿ ವೆಚ್ಚ ಮಾಡಿದ್ದರು.

 

https://stack.thefile.in/2022/02/legislature/10974/

 

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರಕ್ಕೆ ಜಾಹೀರಾತಿಗೆ 1.02 ಕೋಟಿ ವೆಚ್ಚವಾಗಿತ್ತು.

 

https://stack.thefile.in/2021/10/governance/9224/

 

ಅನುಭವ ಮಂಟಪದಲ್ಲಿ   ಸಿ ಎಂ ಭಾಷಣದ ನೇರ ಪ್ರಸಾರಕ್ಕೆ 42.26 ಲಕ್ಷ ವೆಚ್ಚವಾಗಿತ್ತು.

 

https://stack.thefile.in/2021/09/governance/8614/

 

ಕೋವಿಡ್‌ ಜಾಹೀರಾತು ಪೈಕಿ ನೀಡಿದ್ದ  1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು ದೊರೆತಿತ್ತು.

 

https://stack.thefile.in/2021/09/governance/8584/

ಸಿವಿಲ್‌ ಗುತ್ತಿಗೆದಾರರಿಗೂ ಬಾಕಿ ವೇತನ ನೀಡಿಲ್ಲ. ಹೀಗಿದ್ದರೂ ಸಹ ದೃಶ್ಯ, ಮುದ್ರಣ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರಕ್ಕೆ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

Tags: AdvertisementB S YediyurappaBasavaraj BommaiD K Shivakumarh d kumarswamySiddaramaiahaಏಜೆನ್ಸಿಕೋವಿಡ್‌ ಜಾಹೀರಾತುಗೃಹ ಜ್ಯೊತಿಗೃಹ ಲಕ್ಷ್ಮಿಗ್ಯಾರಂಟಿಜಾಹೀರಾತುಟಿ ವಿದೃಶ್ಯನರೇಂದ್ರಸ್ವಾಮಿಪ್ರಗತಿಬಸವರಾಜ ಬೊಮ್ಮಾಯಿಬಸ್‌ ಶೆಲ್ಟರ್‌ಬಿ ಎಸ್‌ ಯಡಿಯೂರಪ್ಪಬೆನಕ ಆಟೋಮೇಷನ್‌ಬ್ರಾಹ್ಮಣಮುದ್ರಣಯುವ ನಿಧಿಯೋಜನೆವಿಧಾನ ಪರಿಷತ್‌ವಿಧಾನಸಭೆವೆಚ್ಚಶಕ್ತಿಶಾಸಕಸಮುದಾಯಸರ್ಕಾರದ ಸಾಧನೆಸಾರ್ವಜನಿಕಹಿಂದುಳಿದ ವರ್ಗ
Advertisement Banner
Previous Post

ಕಲ್ಲಿದ್ದಲು ಸಾಗಾಣಿಕೆಯಲ್ಲಿ ಅಕ್ರಮ ಆರೋಪ; ಟ್ರಕ್‌ಗಳ ಹೊಂದಿರದ ಬಿಡ್ಡರ್‍‌ಗೇ ಟೆಂಡರ್‍‌!

Next Post

1,054 ಮಸೀದಿ, ಚರ್ಚ್‌ಗಳು ನೋಂದಣಿಯಾಗಿಲ್ಲ, ಸರ್ಕಾರದ ಸುಪರ್ದಿಗೆ ಪಡೆಯುವ ಪ್ರಸ್ತಾವವಿಲ್ಲ

thefilestack

thefilestack

Next Post

1,054 ಮಸೀದಿ, ಚರ್ಚ್‌ಗಳು ನೋಂದಣಿಯಾಗಿಲ್ಲ, ಸರ್ಕಾರದ ಸುಪರ್ದಿಗೆ ಪಡೆಯುವ ಪ್ರಸ್ತಾವವಿಲ್ಲ

Recommended

ಕಾಕಂಬಿ ಹಗರಣ; ಸಾಕ್ಷ್ಯ, ಪುರಾವೆಗಳಿದ್ದರೂ ಪ್ರಕರಣ ಮುಕ್ತಾಯಗೊಳಿಸಿದ ಲೋಕಾ ಪೊಲೀಸ್‌

2 years ago

ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd