the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಪ್ರತ್ಯೇಕ ರಾಜ್ಯದ ಗುಂಗಿನಲ್ಲೇ ಮುಳುಗಿದ ಕತ್ತಿ;ಅರಣ್ಯ ಇಲಾಖೆಯಲ್ಲೇ 4,199 ಕಡತಗಳು ವಿಲೇವಾರಿಗೆ ಬಾಕಿ

thefilestack by thefilestack
July 8, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ್ಗೆ ಹೂಂಕರಿಸುವ ಸಚಿವ ಉಮೇಶ್‌ ವಿ ಕತ್ತಿ ಅವರು ನಿಭಾಯಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೇ ಧೂಳಿಡಿದು ಕೂತಿವೆ. ಸಚಿವಾಲಯ ವಾಹಿನಿ, ಇ-ಆಫೀಸ್‌ ಸೇರಿ ಒಟ್ಟು 4,199 ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

 

ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜೂನ್‌ 23ರಂದು ನಡೆದ ಸಭೆಯಲ್ಲಿ ಕಡತಗಳು ವಿಲೇವಾರಿಯಾಗದೇ ಕುರಿತು ಚರ್ಚೆಯಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಇರುವ ಕಡತಗಳ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿವೆ. ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕಡತ ವಿಲೇವಾರಿ ಕುರಿತು ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸದಿರುವುದೇ 4,199 ಕಡತಗಳು ಬಾಕಿ ಇರುವುದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ನಡೆಯುವ ಕೆಡಿಪಿ ಸಭೆಯಲ್ಲಿಯೂ ಎಲ್ಲಾ ಇಲಾಖೆಗಳ ಕಡತಗಳ ವಿಲೇವಾರಿ ಕುರಿತು ಚರ್ಚೆ ನಡೆಯುತ್ತಾದರೂ ಅರಣ್ಯ ಇಲಾಖೆಯಲ್ಲಿ ಮಾತ್ರ ವಿಲೇವಾರಿಯಾಗದ ಕಡತಗಳು ಬೆಟ್ಟದಂತೆ ಏರುತ್ತಿದೆ.

 

2022ರ 16ರಿಂದ ಜೂನ್‌ 15ರವರೆಗಿನ ಅಂಕಿ ಅಂಶಗಳ ಪ್ರಕಾರ ಸಚಿವಾಲಯ ವಾಹಿನಿಯಲ್ಲಿ 2,399 ಮತ್ತು ಇ-ಆಫೀಸ್‌ನಲ್ಲಿ 1,800 ಕಡತಗಳು ಸೇರಿ ಒಟ್ಟು 4,199 ಕಡತಗಳು ಬಾಕಿ ಇವೆ. ಈ ಪೈಕಿ 03 ವರ್ಷಗಳಿಗಿಂತ ಹಳೆಯದಾದ ಕಡತಗಳ ಸಂಖ್ಯೆ 1,069ರಷ್ಟಿದೆ. ಇದರಲ್ಲಿ ನ್ಯಾಯಾಲಯ, ಲೋಕಾಯುಕ್ತ, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಇಲಾಖೆ ವಿಚಾರಣೆ, ಅರಣ್ಯ ವಿಮೋಚನಾ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ಹೆಚ್ಚಿರುವುದು ನಡವಳಿಯಿಂದ ತಿಳಿದು ಬಂದಿದೆ.

 

ಕರ್ತವ್ಯಲೋಪ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಣಕಾಸು ದುರುಪಯೋಗ ಸೇರಿದಂತೆ ಇನ್ನಿತರೆ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಗುರಿಯಾಗಿರುವ ಅಧಿಕಾರಿ, ನೌಕರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಭಾಗದಲ್ಲಿ ಇದುವರೆಗೆ ಒಟ್ಟು 25 ಕಡತಗಳು ಬಾಕಿ ಇವೆ. ಕಾರಣ ಕೇಳುವ ನೋಟೀಸ್‌ಗೆ ಆಪಾದಿತರೆಂದು ಹೇಳಲಾಗಿರುವ ಬಹುತೇಕ ಅಧಿಕಾರಿಗಳಿಂದ ಉತ್ತರವೂ ಇಲಾಖೆಗೆ ಸ್ವೀಕೃತವಾಗಿಲ್ಲ ಎಂದು ಗೊತ್ತಾಗಿದೆ.

 

ಇನ್ನು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 797 ಪ್ರಕರಣಗಳು ಚಾಲ್ತಿಯಲ್ಲಿವೆ. ಈ ಪೈಕಿ ಸರ್ವೋಚ್ಛ ನ್ಯಾಯಾಲಯದಲ್ಲಿ 70, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 493, ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ 138, ಇತರೆ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ಬಾಕಿ ಇವೆ.

 

ಅರಣ್ಯ ಇಲಾಖೆಯಲ್ಲಿ ಕಡತ ವಿಲೇವಾರಿ ಮತ್ತು ವಿವಿಧ ಪ್ರಕರಣಗಳು ಬಾಕಿ ಇದ್ದರೂ ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸುತ್ತಿಲ್ಲ. ಬದಲಿಗೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇರಿಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಕಾರಣ ಅಧಿಕಾರಿಶಾಹಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

Tags: Basvaraj BommaiD K ShivakumarDeparment EnquiryFiles PendingForest Departmenth d kumarswamyHigh CourtKATSiddaramaiahUmesh Kattiಅಧಿಕಾರಿಶಾಹಿಅರಣ್ಯ ಇಲಾಖೆಆಪಾದಿತರುಉನ್ನತ ನ್ಯಾಯಾಲಯಉಮೇಶ್‌ ಕತ್ತಿಎಚ್‌ ಡಿ ಕುಮಾರಸ್ವಾಮಿಕಡತಗಳ ವಿಲೇವಾರಿಕರ್ತವ್ಯಲೋಪಕರ್ನಾಟಕ ಆಡಳಿತ ನ್ಯಾಯಮಂಡಳಿಕೆಎಟಿಡಿ ಕೆ ಶಿವಕುಮಾರ್ಪರಿಸರ ಇಲಾಖೆಪ್ರತ್ಯೇಕ ರಾಜ್ಯಬಸವರಾಜ ಬೊಮ್ಮಾಯಿಭ್ರಷ್ಟಾಚಾರ ನಿಗ್ರಹ ದಳಲೋಕಾಯುಕ್ತ ಪ್ರಕರಣಗಳುಸರ್ವೋಚ್ಛ ನ್ಯಾಯಾಲಯಸಿದ್ದರಾಮಯ್ಯಹೈಕೋರ್ಟ್‌
Advertisement Banner
Previous Post

‘ದಿ ಫೈಲ್‌-ವಾರ್ತಾಭಾರತಿ’ ವರದಿ ಪರಿಣಾಮ; ದಾನಿಗಳಿಂದ ಹಣ ಸಂಗ್ರಹಣೆಗೆ ಸೂಚಿಸಿದ್ದ ಸುತ್ತೋಲೆ ಹಿಂತೆಗೆತ

Next Post

ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

thefilestack

thefilestack

Next Post

ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

Recommended

ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ

4 years ago

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

8 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd