the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಬಜೆಟ್‌ ಲೊಳಲೊಟ್ಟೆ; ಹೊಸ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಢೀಕರಿಸಲು ಹೆಣಗಾಡುತ್ತಿರುವ ಸರ್ಕಾರ

thefilestack by thefilestack
January 26, 2023
in GOVERNANCE
0

photo credit; basavarajbommai official twitter account

0
SHARES
0
VIEWS
Share on FacebookShare on Twitter

ಬೆಂಗಳೂರು; ಹಿಂದಿನ ಬಜೆಟ್‌ (2022-23)ನಲ್ಲಿ ಒದಗಿಸಿದ್ದ ಒಟ್ಟು ಅನುದಾನದಲ್ಲಿಯೇ 15,460 ಕೋಟಿ ರು.ಗಳನ್ನು ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿರುವ ಸರ್ಕಾರವು ಇದೀಗ 2023-24ನೇ ಸಾಲಿನ ಆಯವ್ಯಯದಲ್ಲಿ ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಹೆಣಗಾಡುತ್ತಿದೆ. ಅಲ್ಲದೇ ಹಲವು ಹಳೆಯ ಕಾರ್ಯಕ್ರಮಗಳನ್ನೂ ಕೈಬಿಡುವ ಬಗ್ಗೆಯೂ ಚಿಂತಿಸಿದೆ. ಹಾಗೆಯೆ ಹೆಚ್ಚಿನ ಅನುದಾನ ಬೇಡಿಕೆಯು ಶೇ. 10ರ ಮಿತಿಯೊಳಗೇ ಇರಬೇಕು ಎಂದು ಆರ್ಥಿಕ ಇಲಾಖೆಯು ಎಲ್ಲಾ ಇಲಾಖೆಗಳಿಗೆ ಸೂಚಿಸಿದೆ.

 

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಪ್ರಿಯ ಬಜೆಟ್‌ ಮಂಡಿಸಲು ಅಣಿಯಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಂಪನ್ಮೂಲ ಕ್ರೋಢೀಕರಿಸಲು ಕಷ್ಟಸಾಧ್ಯ ಎಂದು ಆರ್ಥಿಕ ಇಲಾಖೆಯು ಅಲವತ್ತುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

2023-24ನೇ ಸಾಲಿನ ಆಯವ್ಯಯದಲ್ಲಿ ಕಾರ್ಯಕ್ರಮಗಳ ಸೇರ್ಪಡೆ ಮತ್ತು ಇಲಾಖೆಗಳ ಪ್ರಸ್ತಾವನೆಗಳ ಕುರಿತು ಆರ್ಥಿಕ ಇಲಾಖೆಯು 2023ರ ಜನವರಿ 9ರಂದು ಎಲ್ಲಾ ಇಲಾಖೆಗಳಿಗೆ ಹೊರಡಿಸಿರುವ ಟಿಪ್ಪಣಿಯಲ್ಲಿ ಹೊಸ ಕಾರ್ಯಕ್ರಮಗಳ ಕುರಿತಾಗಿ ಸೂಚನೆಗಳನ್ನು ನೀಡಿದೆ. ಆರ್ಥಿಕ ಇಲಾಖೆಯು ಬರೆದಿರುವ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಇಲಾಖೆಗಳು ಹಳೆಯ ಕಾರ್ಯಕ್ರಮಗಳನ್ನು ಕೈಬಿಡದೆ ಹೊಸ ಕಾರ್ಯಕ್ರಮಗಳನ್ನು ಕೈಗೊಂಡಾಗ ಯೋಜನೆಗಳ/ಕಾರ್ಯಕ್ರಮಗಳು ದ್ವಿಗುಣಗೊಳ್ಳುವ ಸಾಧ್ಯತೆ ಇರುತ್ತದೆ. ಜೊತೆಗೆ ಚಾಲ್ತಿಯಲ್ಲಿರುವ ಕಾರ್ಯಕ್ರಮಗಳ ಸಂಖ್ಯೆಯು ಹಾಗೂ ಬೇಕಾಗುವ ಅನುದಾನವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳಲು ಕಷ್ಟಸಾಧ್ಯವಾಗಿರುತ್ತದೆ. ಇಲಾಖೆಗಳು ಮೊದಲಿಗೆ ಅನುದಾನವನ್ನು ಬದ್ಧತೆಗಳಿಗೆ ಗುರುತಿಸಿಕೊಂಡು ಆ ನಂತರ ಆರ್ಥಿಕ ಇಲಾಖೆಯು ಸೂಚಿಸಿರುವ ಮಿತಿಯೊಳಗೆ ಹೊಸ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಬೇಕು,’ ಎಂದು ಪತ್ರದಲ್ಲಿ ವಿವರಿಸಿದೆ.

 

ಹಾಗೆಯೇ ಹಳೆಯ ಕಾರ್ಯಕ್ರಮಗಳು ಅಗತ್ಯವಿಲ್ಲವೆಂದು ಕಂಡುಬಂದಲ್ಲಿ ಅವುಗಳನ್ನು ಕೈಬಿಡುವುದು ಒಳಗೊಂಡಂತೆ ತರ್ಕಬದ್ಧ ಕಾರ್ಯಕ್ರಮಗಳು, ಯೋಜನೆಗಳ ಪಟ್ಟಿಯನ್ನೊಳಗೊಂಡ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದೂ ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

2022-23ನೇ ಸಾಲಿನ ಅರ್ಥಿಕ ವರ್ಷಾಂತ್ಯದ ಕೊನೆಯಲ್ಲಿದ್ದರೂ 32 ಇಲಾಖೆಗಳು ಶೇ. 50ರ ಗಡಿಯನ್ನು ದಾಟಿಲ್ಲ. ಕೆಲ ಇಲಾಖೆಗಳು ಶೇ. 30ರ ಗಡಿಯನ್ನೂ ದಾಟಿ ಬಂದಿಲ್ಲ. ಬಹುತೇಕ ಇಲಾಖೆಗಳು ಕಳಪೆ ಪ್ರದರ್ಶನ ತೋರಿವೆ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ವಿಧಾನಪರಿಷತ್‌ಗೆ ಒದಗಿಸಿದ್ದ ಪಟ್ಟಿಯು ಹೆಚ್ಚಿನ ಪುಷ್ಠಿ ನೀಡಿದಂತಾಗಿತ್ತು.

 

2022-23ರ ಸಾಲಿನ ಬಜೆಟ್‌ನಲ್ಲಿ ಒಟ್ಟು ಅನುದಾನದಲ್ಲಿಯೆ 15,460 ಕೋಟಿ ಬಾಕಿ ಉಳಿಸಿಕೊಂಡು ಕೇವಲ ಶೇ.47ರಷ್ಟು ಪ್ರಗತಿ ಸಾಧಿಸಿತ್ತು. ಪ್ರಸಕ್ತ ಸಾಲಿನ ಆರ್ಥಿಕ ವರ್ಷ (2022-23) ಪೂರ್ಣಗೊಳ್ಳಲು ಇನ್ನು ಕೇವಲ ಮೂರೇ ಮೂರು ತಿಂಗಳಿದ್ದರೂ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಂಚಿಕೆ ಮಾಡಿದ್ದ ಒಟ್ಟು ಅನುದಾನದ ಪೈಕಿ ನವೆಂಬರ್‌ ಅಂತ್ಯದವರೆಗೆ 8,199 ಕೋಟಿ ರು. ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ. ಅದೇ ರೀತಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಕಾರ್ಯಕ್ರಮಗಳ ಪೈಕಿ ಇನ್ನೂ 122 ಕಾರ್ಯಕ್ರಮಗಳಿಗೆ ಚಾಲನೆಯೇ ದೊರೆತಿಲ್ಲ ಎಂಬುದನ್ನು ಸ್ಮರಿಸಬಹುದು.

 

ಜಲಸಂಪನ್ಮೂಲ ಸೇರಿದಂತೆ ಒಟ್ಟು 13 ಇಲಾಖೆಗಳಿಗೆ 2022-23ನೇ ಸಾಲಿನಲ್ಲಿ ನಿಗದಿಪಡಿಸಿದ್ದ ಒಟ್ಟು 81,627.03 ಕೋಟಿ ರು ಪೈಕಿ ಸೆಪ್ಟಂಬರ್‌ ಅಂತ್ಯಕ್ಕೆ ಕೆವಲ 21,698.64 ಕೋಟಿ ರು. ಮಾತ್ರ ಬಿಡುಗಡೆ ಮಾಡಿತ್ತು. ಇದು ಒಟ್ಟು ಅನುದಾನದಲ್ಲಿ ಶೇ. 40ಕ್ಕಿಂತ ಕಡಿಮೆ ಬಿಡುಗಡೆಯಾಗಿತ್ತು. ಇನ್ನೂ 59, 928.39 ಕೋಟಿ ರು. ಬಿಡುಗಡೆಗೆ ಬಾಕಿ ಉಳಿಸಿಕೊಂಡಿತ್ತು.

 

ಕೃಷಿ ಇಲಾಖೆ ಸೇರಿದಂತೆ ಒಟ್ಟು 13 ಇಲಾಖೆಗಳಿಗೆ ಶೇ.40ಕ್ಕಿಂತ ಕಡಿಮೆ ಬಿಡುಗಡೆಯಾಗಿದೆ. ನಗರಾಭಿವೃದ್ಧಿ ಇಲಾಖೆಗೆ ನಿಗದಿಪಡಿಸಿದ್ದ ಒಟ್ಟು 23,191.32 ಕೋಟಿ ರು. ಪೈಕಿ ಸೆಪ್ಟಂಬರ್‌ ಅಂತ್ಯಕ್ಕೆ ಕೇವಲ 5,315.20 ಕೋಟಿ ರು. ಮಾತ್ರ ಬಿಡುಗಡೆಯಾಗಿತ್ತು. ಇನ್ನೂ 17,876.12 ಕೋಟಿ ರ. ಬಿಡುಗಡೆಗೆ ಬಾಕಿ ಉಳಿಸಿಕೊಂಡಿತ್ತು. ಅದೇ ರೀತಿ ಜಲ ಸಂಪನ್ಮೂಲ ಇಲಾಖೆಯಲ್ಲಿ 20,815.53 ಕೋಟಿ ರು. ಪೈಕಿ 6,171.16 ಕೋಟಿ ರು. ಬಿಡುಗಡೆ ಮಾಡಿ 14,644.42 ಕೋಟಿ ರು. ಬಾಕಿ ಉಳಿಸಿಕೊಂಡಿದ್ದನ್ನು ಸ್ಮರಿಸಬಹುದು.

Tags: Basvaraj BommaiBudgetD K ShivakumarFinacial YearFinance Departmenth d kumarswamyISN PrasadNew ProgrammeSiddaramaiahaSpentಅನುಅನಅನುದಾನಅನುದಾನ ಬೇಡಿಕೆಆಯವ್ಯಯಆರ್ಥಿಕ ಇಲಾಖೆಆರ್ಥಿಕ ವರ್ಷಕಷ್ಟಸಾಧ್ಯಡಿ ಕೆ ಶಿವಕುಮಾರ್ಬದ್ಧತಾ ವೆಚ್ಚಬಸವರಾಜ ಬೊಮ್ಮಾಯಿಮುಖ್ಯ ಕಾರ್ಯದರ್ಶಿಮುಂದುವರೆದ ಯೋಜನೆಗಳುಯೋಜನಾ ವೆಚ್ಚಸಂಪನ್ಮೂಲ ಕ್ರೋಢೀಕರಣಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿಹೊಸ ಕಾರ್ಯಕ್ರಮ
Advertisement Banner
Previous Post

ಖಾಸಗಿ ಸಂಸ್ಥೆಗಳಿಗೆ 1,000 ಎಕರೆ ಪರಿಹಾರಾತ್ಮಕ ಅರಣ್ಯ ಜಮೀನು; ತಡೆಹಿಡಿದಿದ್ದ ನೀತಿ ಪುನರ್‌ ಪರಿಶೀಲನೆ

Next Post

ಹಂಪಿ ಉತ್ಸವಕ್ಕೆ 4 ಕೋಟಿ; ವಿಜಯನಗರ ಜಿಲ್ಲೆಯ ದಲಿತ ವಿದ್ಯಾರ್ಥಿಗಳಿಗೆ ಬಿಡಿಗಾಸಿನ ಪ್ರೋತ್ಸಾಹ ಧನವೂ ಇಲ್ಲ

thefilestack

thefilestack

Next Post

ಹಂಪಿ ಉತ್ಸವಕ್ಕೆ 4 ಕೋಟಿ; ವಿಜಯನಗರ ಜಿಲ್ಲೆಯ ದಲಿತ ವಿದ್ಯಾರ್ಥಿಗಳಿಗೆ ಬಿಡಿಗಾಸಿನ ಪ್ರೋತ್ಸಾಹ ಧನವೂ ಇಲ್ಲ

Recommended

ಎಸ್‌ಎಲ್‌ಪಿ ದಾಖಲಿಸುವಲ್ಲಿ ವಿಳಂಬ; ನ್ಯಾಯಾಲಯಗಳ ಮುಂದೆ ಮುಜುಗರ, ಖಜಾನೆಗೆ ಭಾರೀ ನಷ್ಟ!

12 months ago

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

9 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd