the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಬಿಎಸ್‌ವೈ, ನಿರಾಣಿ ವಿರುದ್ಧದ ಪ್ರಕರಣ ಮುಕ್ತಾಯ; ಕಡತ ನೀಡಲು ಎಸಿಬಿ ನಿರಾಕರಣೆ

thefilestack by thefilestack
January 27, 2021
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು; ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ತನಿಖೆ ಪ್ರಕ್ರಿಯೆ ಆರಂಭಿಸದೆಯೇ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಮುರುಗೇಶ್‌ ನಿರಾಣಿ ಮತ್ತು ನಿವೃತ್ತ ಐಎಎಸ್‌ ಅಧಿಕಾರಿ ವಿ ಪಿ ಬಳಿಗಾರ್‌ ಅವರನ್ನು ದೋಷಮುಕ್ತಗೊಳಿಸಿರುವ ಭ್ರಷ್ಟಾಚಾರ ನಿಗ್ರಹ ದಳವು ಈ ಸಂಬಂಧದ ಕಡತವನ್ನು ಆರ್‌ಟಿಐ ಅಡಿಯಲ್ಲಿ ದೂರುದಾರನಿಗೆ ನೀಡಲು ನಿರಾಕರಿಸಿದೆ.

ಕಡತವನ್ನು ಮಾಹಿತಿ ಹಕ್ಕು ಕಾಯ್ದೆ ಕಲಂ 8(1)(ಜಿ) ಅಡಿಯಲ್ಲಿ ನೀಡಲು ಅವಕಾಶವಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಕಡತವನ್ನು ಮುಚ್ಚಿಡಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ದೂರರ್ಜಿಯನ್ನು ಮುಕ್ತಾಯಗೊಳಿಸಿರುವ ಬಗ್ಗೆ ದೂರುದಾರನಿಗೇ ಅಧಿಕೃತವಾಗಿ ಹಿಂಬರಹ ನೀಡಿದ ನಂತರ ಮಾಹಿತಿಯನ್ನು ಬಹಿರಂಗಪಡಿಸದಿರಲು ಎಸಿಬಿ ಮೇಲೆ ಒತ್ತಡವಿದೆಯೇ ಎಂಬ ಪ್ರಶ್ನೆಗಳೂ ಕೇಳಿ ಬಂದಿವೆ.

ದಿನೇಶ್‌ ಕಲ್ಲಹಳ್ಳಿ ಅವರು ದಾಖಲಿಸಿದ್ದ ದೂರನ್ನು ಪರಿಶೀಲಿಸಿದ್ದ ಎಸಿಬಿ ಪೊಲೀಸರು ‘ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಈ ಜಮೀನನ್ನು ಡಿ ನೋಟಿಫೈ ಮಾಡಿರುವುದು ಕಂಡು ಬರುವುದಿಲ್ಲ. ದೂರರ್ಜಿಯಲ್ಲಿನ ಆರೋಪಗಳು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿಲ್ಲ,’ ಎಂಬ ಕಾರಣವನ್ನು ಮುಂದೊಡ್ಡಿ ಅರ್ಜಿಯನ್ನು ಮುಕ್ತಾಯಗೊಳಿಸಿದ್ದಾರೆ. ಈ ಕುರಿತು ದೂರುದಾರನಿಗೆ 2020ರ ನವೆಂಬರ್‌ 24ರಂದು ಹಿಂಬರಹವನ್ನು ನೀಡಿ ದೂರರ್ಜಿಯನ್ನು ಎಸಿಬಿಯು ಮುಕ್ತಾಯಗೊಳಿಸಿತ್ತು. ಈ ಕುರಿತು ‘ದಿ ಫೈಲ್‌’ 2021ರ ಜನವರಿ 22ರಂದು ವರದಿ ಪ್ರಕಟಿಸಿತ್ತು.

ದೂರರ್ಜಿಯನ್ನು ಮುಕ್ತಾಯಗೊಳಿಸಿದ ನಂತರ ಸಂಬಂಧಿತ ಕಡತವನ್ನೂ ಮುಕ್ತಾಯಗೊಳಿಸಲಾಗಿರುತ್ತದೆ. ದೂರರ್ಜಿಗೆ ಸಂಬಂಧಿಸಿದಂತೆ ಕಡತ ಒದಗಿಸುವುದಕ್ಕೂ ಮಾಹಿತಿ ಹಕ್ಕು ಕಾಯ್ದೆಯ 8(1)(ಜಿ)ಯಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ ಒಂದಕ್ಕೊಂದು ಸಂಬಂಧವೇ ಇರದಿದ್ದರೂ ಅದನ್ನು ಮುಂದಿಟ್ಟುಕೊಂಡು ಕಡತವನ್ನು ನೀಡದಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

8(1)(ಜಿ)ಯಲ್ಲೇನಿದೆ?

ಯಾವ ಮಾಹಿತಿಯನ್ನು ಬಹಿರಂಗಪಡಿಸುವುದರಿಂದ ಯಾರೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಅಪಾಯವುಂಟಾಗುತ್ತದೆಯೋ ಅಂತಹ ಮಾಹಿತಿ ಅಥವಾ ಕಾನೂನು ಜಾರಿಯ ಅಥವಾ ಬದ್ಧತೆಯ ಉದ್ದೇಶಗಳಿಗಾಗಿ ರಹಸ್ಯವಾಗಿ ನೀಡಿದ ಮಾಹಿತಿಯ ಅಥವಾ ಸಹಾಯದ ಮೂಲವನ್ನು ಗುರುತಿಸಬಹುದಾದಂತಹ ಮಾಹಿತಿಯನ್ನು ನೀಡಲು ಅವಕಾಶವಿಲ್ಲ. ಕಾಯ್ದೆಯ ಈ ಅಂಶಗಳಿಗೂ ದೂರರ್ಜಿಯನ್ನು ಮುಕ್ತಾಯಗೊಳಿಸಿರುವುದಕ್ಕೂ ಸಂಬಂಧವೇ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

ಪ್ರಕರಣದ ಹಿನ್ನೆಲೆ

ಅತ್ತಿಬೆಲೆ ಹೋಬಳಿಯ ಕಿತ್ತಿಗಾನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಕೋಟ್ಯಂತರ ರು. ಬೆಲೆ ಬಾಳುವ ಒಟ್ಟು 9 ಎಕರೆ 20 ಗುಂಟೆ ಜಮೀನನ್ನು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಭೂ ಸ್ವಾಧೀನದಿಂದ ಅಕ್ರಮವಾಗಿ ಕೈ ಬಿಡಲಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು 2019ರ ಸೆ. 30ರಂದು ದಾಖಲೆ ಸಮೇತ ದೂರು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಮುರುಗೇಶ್‌ ನಿರಾಣಿ ಮತ್ತು ಐಎಎಸ್‌ ಅಧಿಕಾರಿ ವಿ ಪಿ ಬಳಿಗಾರ್‌ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿತ್ತು. ಕ್ರಿಮಿನಲ್‌ ದುರ್ನಡತೆ ಸೆಕ್ಷನ್‌ 13(1)(ಡಿ) ಅಪರಾಧಿಕ ಒಳ ಸಂಚು 120(ಬಿ), ಐಪಿಸಿ 201, 202, 379 ,411, 420, 427, 447, 468, 471 ಮತ್ತು 409 ಸೆಕ್ಷನ್‌ಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಭೂ ಸ್ವಾಧೀನದಿಂದ ಕೈಬಿಟ್ಟಿರುವ ಜಾಗದಲ್ಲಿ ಖಾಸಗಿ ಬಡಾವಣೆ ಮತ್ತು ಅಪಾರ್ಟ್‌ಮೆಂಟ್‌ ನಿರ್ಮಾಣದ ಉದ್ದೇಶವಿತ್ತು. ಭೂ ಸ್ವಾಧೀನ ಪರಿಹಾರ ಹಣ ಪಡೆಯುವ ಬದಲಿಗೆ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಜಾಗ ನೀಡಿದರೆ ಲಾಭ ಗಳಿಸಬಹುದು ಎಂಬ ಆರ್ಥಿಕ ಲೆಕ್ಕಾಚಾರವಿದೆ. ಭೂ ಮಾಲೀಕರ ಮನವಿಯನ್ನು ಪರಿಗಣಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್‌ ನಿರಾಣಿ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವೆಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು ದೂರಿದ್ದರು.

ಆನೇಕಲ್‌ ತಾಲೂಕಿನ ಅತ್ತಿಬೆಲೆ ಹೋಬಳಿ ಕಿತ್ತಿಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 132, 133/2, 130/4, 133/1, 135/5ರಲ್ಲಿನ 9 ಎಕರೆ 20 ಗುಂಟೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಎಐಡಿಬಿ)ಯು ಬೊಮ್ಮಸಂದ್ರ 4ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿತ್ತು.

ಕಿತ್ತಿಗಾನಹಳ್ಳಿಯ 9 ಎಕರೆ 20 ಗುಂಟೆ ಜಮೀನನ್ನು ಕೆಎಐಡಿಬಿಯು 1993ರ ಸೆ.19ರಂದು ಪ್ರಾಥಮಿಕ ಅಧಿಸೂಚನೆ ಮತ್ತು 1994 ಜುಲೈ 15ರಂದು ಅಂತಿಮ ಅಧಿಸೂಚನೆ, 1996ರ ಜುಲೈ 22ರಂದು ಕಲಂ 24(4) ಅಧಿಸೂಚನೆ ಹೊರಡಿಸಿತ್ತು. ಆದರೆ 14 ವರ್ಷಗಳ ಕಾಲ ಈ ಜಮೀನನ್ನು ಕೆಐಎಡಿಬಿಯು ತನ್ನ ವಶಕ್ಕೆ ಪಡೆದಿರಲಿಲ್ಲ. ಅಲ್ಲದೆ ಜಮೀನು ಅಭಿವೃದ್ಧಿಪಡಿಸಿ ಯಾವುದೇ ಸಂಸ್ಥೆಗಳಿಗೆ ಹಂಚಿಕೆ ಮಾಡುವ ಯಾವುದೇ ಪ್ರಕ್ರಿಯೆಯನ್ನೂ ನಿರ್ವಹಿಸಿರಲಿಲ್ಲ. ಹಾಗೆಯೇ 1998ರ ಡಿಸೆಂಬರ್‌ 15ರಂದು ನಡೆದಿದ್ದ 217ನೇ ಸಭೆಯಲ್ಲಿ ಜಮೀನನ್ನು ಭೂ ಮಾಲೀಕರ ಪರವಾಗಿ ರೀ ಕನ್ವೆ ಮಾಡಲು ನಿರ್ಣಯಿಸಲಾಗಿತ್ತು ಎಂಬುದು ಎಸಿಬಿ ನೀಡಿರುವ ಹಿಂಬರಹದಿಂದ ತಿಳಿದು ಬಂದಿದೆ.

ಭೂ ಮಾಲೀಕ ಪಿಳ್ಳಾರೆಡ್ಡಿ, ತಿಮ್ಮಾರೆಡ್ಡಿ ಮತ್ತು ಶಿವಕುಮಾರ್‌ ಎಂಬುವರು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು 2009ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಕೈಗಾರಿಕೆ ಸಚಿವರಾಗಿದ್ದ ಮುರುಗೇಶ್‌ ನಿರಾಣಿ ಅವರಿಗೆ ಮನವಿ ಮಾಡಿದ್ದರು. ಈ ಮನವಿಯನ್ನಾಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಂದೂ ಕಾರ್ಯದರ್ಶಿಯಾಗಿದ್ದ (ಪ್ರಸ್ತುತ ರಾಜಕೀಯ ಕಾರ್ಯದರ್ಶಿ) ಐಎಎಸ್‌ ಅಧಿಕಾರಿ ಎಂ ಲಕ್ಷ್ಮಿನಾರಾಯಣ ಅವರು ಮನವಿಗಳನ್ನಾಧರಿಸಿ ಕ್ರಮ ಕೈಗೊಳ್ಳಬೇಕೆಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2009ರ ಜೂನ್‌ 6ರಂದು ನಿರ್ದೇಶಿಸಿದ್ದರು.

ಈ ಜಮೀನನ್ನು ವ್ಯವಸಾಯೇತರ ಉದ್ದೇಶದ ಉಪಯೋಗಕ್ಕೆ ಅಂದಿನ ಜಿಲ್ಲಾಧಿಕಾರಿಯು ಭೂಪರಿವರ್ತನೆ ಆದೇಶ ಹೊರಡಿಸಿದ್ದರು. ಭೂ ಸ್ವಾಧೀನದಿಂದ ಕೈ ಬಿಡುವ ಸಂದರ್ಭದಲ್ಲಿ ಈ ಜಾಗದಲ್ಲಿ 120 ಮನೆಗಳು ನಿರ್ಮಾಣವಾಗಿದ್ದವು. 14 ವರ್ಷಗಳ ಹಿಂದೆಯೇ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಅಭಿವೃದ್ಧಿಪಡಿಸಿರಲಿಲ್ಲ ಎಂಬ ಮಾಹಿತಿ ಎಸಿಬಿ ನೀಡಿರುವ ಹಿಂಬರಹದಿಂದ ಗೊತ್ತಾಗಿದೆ.

Tags: acbadgpAnekal Planning AuthorityB L SanthsohB S YediyurappaBJP KarnatakaChief SecretaryD K ShivakumarDinesh KallahalliDNotificationh d kumarswamyJagadish ShettarKPCCM. B. PatilMurugesh NiraniN RavikumarP Ravikumarr ashokRSSSiddaramaiahಆನೇಕಲ್‌ ಯೋಜನಾ ಪ್ರಾಧಿಕಾರಆರ್‌ ಅಶೋಕ್‌ಆರ್‌ಎಸ್‌ಎಸ್‌ಎಂ ಬಿ ಪಾಟೀಲ್‌ಎಚ್‌ ಡಿ ಕುಮಾರಸ್ವಾಮಿಎಡಿಜಿಪಿಎನ್‌ ರವಿಕುಮಾರ್‌ಎಸಿಬಿಕೆಪಿಸಿಸಿಜಗದೀಶ್‌ ಶೆಟ್ಟರ್‌ಡಿ ಕೆ ಶಿವಕುಮಾರ್ಡಿ ನೋಟಿಫಿಕೇಷನ್‌ದಿನೇಶ್‌ ಕಲ್ಲಹಳ್ಳಿಪಿ ರವಿಕುಮಾರ್‌ಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಬಿಜೆಪಿ ಕರ್ನಾಟಕಮುಖ್ಯ ಕಾರ್ಯದರ್ಶಿಮುರುಗೇಶ್‌ ನಿರಾಣಿಸಿದ್ದರಾಮಯ್ಯ
Advertisement Banner
Previous Post

ಲೈಸೆನ್ಸ್‌ಗೆ ‘ಪಿಂಕ್‌’ ನೋಟ್‌ ಕೊಡಿ; ವಾಟ್ಸಾಪ್‌ ಸಂದೇಶ ಕಳಿಸಿ ಭ್ರಷ್ಟಾಚಾರ ಬೆಂಬಲಿಸಿದ ಅಧಿಕಾರಿ

Next Post

ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಗೋಲ್ಮಾಲ್‌

thefilestack

thefilestack

Next Post

ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಗೋಲ್ಮಾಲ್‌

Discussion about this post

Recommended

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಮೇಲೆ ಮುಗಿಬಿದ್ದ ಸಂಘ ಪರಿವಾರ!

6 years ago

ಪ್ಯಾನಿಕ್‌ ಬಟನ್‌ ಟೆಂಡರ್‍‌ ಅಕ್ರಮದ ಮತ್ತೊಂದು ಮುಖ; ಒಂದೆಡೆ ಸಿಐಡಿ ತನಿಖೆ, ಇನ್ನೊಂದೆಡೆ ಅರ್ಹತೆಯ ಮಾನ್ಯತೆ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd