the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

thefilestack by thefilestack
September 3, 2021
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ.

‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಮತ್ತಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುವ ಸಂಭವವವಿದೆ.,’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕಲ್ಬುರ್ಗಿಯಲ್ಲಿ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮದರಸಗಳಲ್ಲಿ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ ಎಂದು ಹಿಂದಿನ ಹಜ್‌ ಮತ್ತು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಸದನಕ್ಕೆ ನೀಡಿದ್ದ ಲಿಖಿತ ಉತ್ತರ ಮುನ್ನೆಲೆಗೆ ಬಂದಿದೆ.

ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣದಲ್ಲಿ ಯಾವ ಯಾವ ವಿಷಯಗಳ ಕುರಿತು ಬೋಧನೆ ಮಾಡಲಾಗುತ್ತದೆ, ಮದರಸ ಶಿಕ್ಷಣಕ್ಕೆ ಸರ್ಕಾರ ಯಾವ ಯಾವ ರೀತಿಯ ಸೌಲಭ್ಯವನ್ನು ನೀಡುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅನಂದ್‌ ಸಿಂಗ್‌ ಅವರು 2021ರ ಜನವರಿ 29ರಂದು ಉತ್ತರಿಸಿದ್ದರು.

ಲಿಖಿತ ಉತ್ತರದಲ್ಲೇನಿದೆ?

‘ಮದರಸಗಳಲ್ಲಿ ಇಸ್ಲಾಂ ಧರ್ಮದಂತೆ ದಿನನಿತ್ಯ ಹಾಗೂ ವಿವಿಧ ಹಬ್ಬಗಳಲ್ಲಿ ಸಲ್ಲಿಸುವ ಪ್ರಾರ್ಥನೆ ಮತ್ತು ಇಡೀ ಜೀವನದಲ್ಲಿ ದೇವರು ಕುರಾನಿನಲ್ಲಿ ಮತ್ತು ಪೈಗಂಬರ್‌ ಅವರು ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧನೆ ನೀಡಲಾಗುತ್ತಿದೆ,’ ಎಂದು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಅವರು ಉತ್ತರಿಸಿದ್ದರು.

ಇದಲ್ಲದೆ ರಾಜ್ಯದ ಕನ್ನಡ ಭಾಷೆ, ಕಂಪ್ಯೂಟರ್‌ ಶಿಕ್ಷಣವನ್ನು ಸಹ ನೀಡುವುದಲ್ಲದೆ ಶಿಕ್ಷಣಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣದಲ್ಲೂ ಭಾಗವಹಿಸುವಂತೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಉತ್ತರಿಸಿದ್ದ ಆನಂದ್‌ ಸಿಂಗ್‌, ಮದರಸಾದ ಆಧುನೀಕರಣಕ್ಕಾಗಿ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿರುವುದು ಉತ್ತರದಿಂದ ತಿಳಿದು ಬಂದಿದೆ.

ಧಾರ್ಮಿಕ ಶಿಕ್ಷಣವನ್ನು ಉನ್ನತ ಶಿಕ್ಷಣ ಹಾಗೂ ಸರ್ಕಾರದ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲೂ ಪರಿಗಣಿಸಿ ಅಳವಡಿಸಿಕೊಳ್ಳುವಂತೆ ಸಮಾಜದ ಒಂದು ವರ್ಗ ಒತ್ತಡ ತಂದರೆ ಸರ್ಕಾರದ ನಿಲುವೇನು ಎಂದು ರವಿಕುಮಾರ್‌ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಆನಂದ್‌ಸಿಂಗ್‌ ‘ಇಂತಹ ಯಾವುದೇ ಬೇಡಿಕೆಗಳು ಸರ್ಕಾರದ ಮುಂದೆ ಇರುವುದಿಲ್ಲ,’ ಎಂದು ಹೇಳಿದ್ದರು. ಹಾಗೆಯೇ ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣವನ್ನು ಎಸ್‌ಎಸ್‌ಎಲ್‌ಸಿಗೆ ತತ್ಸಮಾನ ಎಂದು ಪರಿಗಣಿಸುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದೂ ಉತ್ತರಿಸಿದ್ದರು.

Tags: Anand SinghAshwath Narayanb l santhoshBasavaraj BommaiBJP Karnatakac t raviEducation DepartmentHaj MinisterMadarasaMecca Saudi ArabiaMuhammadMuslim CommunityN Ravikumar MLCPaigambarPrimary Secondary Educationproclaimer of the Qur'anProphet of IslamQuranReligiou EducationShashikala JolleTerrorism ActivitiesTerroristಆನಂದ್‌ ಸಿಂಗ್‌ಎನ್‌ ರವಿಕುಮಾರ್‌ ಎಂಎಲ್‌ಸಿಕುರಾನ್‌ಧಾರ್ಮಿಕ ಶಿಕ್ಷಣಪೈಗಂಬರ್‌ಪ್ರವಾದಿಪ್ರಾಥಮಿಕ ಮತ್ತು ಪ್ರೌಢಶಿಕ್ಷಣಬಸವರಾಜ ಬೊಮ್ಮಾಯಿಬಿ ಎಲ್‌ ಸಂತೋಷ್‌ಬಿಜೆಪಿ ಕರ್ನಾಟಕಭಯೋತ್ಪಾದಕ ಚಟುವಟಿಕೆಭಯೋತ್ಪಾದಕರುಮದರಸಮುಸ್ಲಿಂ ಸಮುದಾಯಮುಹಮ್ಮದ್‌ಮೆಕ್ಕಾವಿಧಾನ ಪರಿಷತ್‌ಶಶಿಕಲಾ ಜೊಲ್ಲೆಶಿಕ್ಷಣ ಇಲಾಖೆಸಿ ಟಿ ರವಿ
Advertisement Banner
Previous Post

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

Next Post

ಭ್ರಷ್ಟಾಚಾರ; 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸದ ಸರ್ಕಾರ

thefilestack

thefilestack

Next Post

ಭ್ರಷ್ಟಾಚಾರ; 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸದ ಸರ್ಕಾರ

Discussion about this post

Recommended

ಸಚಿವಾಲಯ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಮುಂಚೂಣಿಯಲ್ಲಿವೆ ನಗರಾಭಿವೃದ್ಧಿ, ಕಂದಾಯ ಇಲಾಖೆ

3 years ago

ಶಾಸಕರಿಗೆ ‘ನಿದ್ರಾ’ ಮಾದರಿ ಹಾಸಿಗೆ, ದಿಂಬು ಖರೀದಿ; ಕಾಯರ್ ಬೋರ್ಡ್‌ ಬದಿಗಿರಿಸಿದ ಸರ್ಕಾರ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd