the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಮಿನಿ ಫುಡ್‌ ಪಾರ್ಕ್‌ ಯೋಜನೆ ; ನಿರ್ದಿಷ್ಟ ಅನುದಾನ ಮೀಸಲಿರಿಸದೇ ಆಯವ್ಯಯದಲ್ಲಿ ಘೋಷಣೆ

thefilestack by thefilestack
May 13, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ರಾಜ್ಯದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳು ಪೋಲಾಗುವುದನ್ನು ತಪ್ಪಿಸುವ ಉದ್ದೇಶದಿಂದ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ ಸರ್ಕಾರವು ಈ ಉದ್ದೇಶಕ್ಕೆ ನಿರ್ದಿಷ್ಟವಾದ ಮೀಸಲು ಅನುದಾನವನ್ನೇ ಉಲ್ಲೇಖಿಸಿಲ್ಲ. ನಿರ್ದಿಷ್ಟ ಅನುದಾನ ಒದಗಿಸದಿದ್ದಲ್ಲಿ ಈ ಯೋಜನೆಯು ಅನುಷ್ಠಾನಗೊಳಿಸುವುದು ಸಾಧ್ಯವಾಗುವುದಿಲ್ಲ ಎಂಬ ಅಭಿಪ್ರಾಯವನ್ನು ಇಲಾಖೆಯು ವ್ಯಕ್ತಪಡಿಸಿದೆ.

 

ಕೃಷಿ ಇಲಾಖೆ ಅಡಿಯಲ್ಲಿ ಘೋಷಿಸಿರುವ ನೂತನ ಯೋಜನೆಗಳ ಪೈಕಿ ಮಿನಿ ಆಹಾರ ಪಾರ್ಕ್‌ ಯೋಜನೆಯೂ ಒಂದಾಗಿತ್ತು. ಈ ಸಂಬಂಧ ಕನಾಟಕ ಆಹಾರ ನಿಗಮವು ವಿಸ್ತೃತ ಯೋಜನೆ ವರದಿಯನ್ನು ಸಲ್ಲಿಸಿತ್ತು. ಆದರೂ ಯೋಜನೆ ಅನುಷ್ಠಾನಕ್ಕಾಗಿ ನಿರ್ದಿಷ್ಟವಾದ ಮೀಸಲು ಅನುದಾನವನ್ನೇ ಒದಗಿಸಿಲ್ಲ ಎಂಬ ಅಂಶ ಇದೀಗ ಬಹಿರಂಗವಾಗಿದೆ. ಈ ಸಂಬಂಧ ಟಿಪ್ಪಣಿ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಎಲ್ಲಾ ಯೋಜನೆಗಳಿಗೂ ತ್ವರಿತಗತಿಯಲ್ಲಿ ಸರ್ಕಾರಿ ಆದೇಶಗಳನ್ನು ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಯಾ ಇಲಾಖೆ ಘೋಷಣೆಗಳ ಅನುಷ್ಠಾನಕ್ಕಾಗಿ ಅನುದಾನದ ಮೂಲಗಳನ್ನು ಹುಡುಕಲಾರಂಭಿಸಿದ್ದಾರೆ.

 

ಮಿನಿ ಆಹಾರ ಪಾರ್ಕ್‌ ಯೋಜನೆ ಅನುಷ್ಠಾನಕ್ಕೆ ಯಾವುದೇ ನಿರ್ದಿಷ್ಟ ಮೀಸಲು ಅನುದಾನವನ್ನು ಉಲ್ಲೇಖಿಸದ ಕಾರಣ ರಾಜ್ಯದಲ್ಲಿ 5 ಮಿನಿ ಆಹಾರ ಪಾರ್ಕ್‌ಗಳನ್ನು ಮೊದಲ ವರ್ಷದಲ್ಲಿ 50.00 ಕೋಟಿ ರು.ಗಳ ಅನುದಾನಕ್ಕೆ ಪ್ರಸ್ತಾಪಿಸಿದೆ. ಆದರೆ ಈ ಅನುದಾನವನ್ನು ಹೊಂದಿಸಲು ಮಾಡಿಕೊಂಡಿರುವ ಪರ್ಯಾಯ ವ್ಯವಸ್ಥೆ ಬಗ್ಗೆ ಯಾವುದೇ ಬಾಹ್ಯ ಮೂಲವನ್ನು ವಿವರಿಸಿಲ್ಲ ಎಂಬ ಅಂಶ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸುವುದರಿಂದ ಕ್ಲಸ್ಟರ್‌ ವಿಧಾನದಲ್ಲಿ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಉದ್ಯಮಿಗಳನ್ನು ಉತ್ತೇಜಿಸಲು ಆಧುನನಿಕ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ದಿಪಡಿಸುವ ಗುರಿ ಹೊಂದಿದೆ.

 

ಪಿಎಂಎಫ್‌ಎಂಇ ಯೋಜನೆಯಡಿ ಒಂದು ಜಿಲ್ಲೆ ಒಂದು ಉತ್ಪನ್ನವಾಗಿ ಗುರುತಿಸಿರುವ ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಅನುಷ್ಠಾನಗೊಳಿಸಬಹುದು. ಈ ಯೋಜನೆ ಅನುಷ್ಠಾನಗೊಳಿಸಿದ್ದಲ್ಲಿ ರೈತರು ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿ ರೈತರ ಆದಾಯ ಹೆಚ್ಚಿಸಿ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಲು ಸಹಾಯವಾಗುತ್ತದೆ. ಆದರೆ ಈ ಹೊಸ ಯೋಜನೆಗೆ ಅವಶ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಿದಲ್ಲಿ ಸಹಮತಿ ನೀಡಬಹುದು ಎಂದು ಯೋಜನಾ ಇಲಾಖೆಯು ಹೇಳಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

‘ಈ ಯೋಜನೆಗೆ ಹಣಕಾಸು ಇಲಾಖೆಯು ಹೊಸ ಲೆಕ್ಕಶೀರ್ಷಿಕೆ ಸೃಷ್ಟಿಸಿ ಅಥವಾ ಈಗಾಗಲೇ ಇರುವ ಯೋಜನೆಗಳ ಜತೆಗೆ ಹೆಚ್ಚುವರಿಯಾಗಿ ಈ ಯೋಜನೆಯನ್ನೂ ಸೇರಿಸಿ ಅನುದಾನವನ್ನು ಒದಗಿಸಿದ್ದಲ್ಲಿ ಈ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಬಹುದು. ಅನುದಾನವನ್ನು ಒದಗಿಸದಿದ್ದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗುವುದಿಲ್ಲ,’ ಎಂಬ ಅಭಿಪ್ರಾಯವನ್ನು ಇಲಾಖೆಯು ನೀಡಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಮಿನಿ ಆಹಾರ ಪಾರ್ಕ್‌ಗಳನ್ನು ಹೊಂದಿರದೇ ಇರುವ ರಾಜ್ಯದ 5 ಜಿಲ್ಲೆಗಳಲ್ಲಿ ಆರಂಭಿಕ ಹಂತದಲ್ಲಿ ಸ್ಥಾಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನೀತಿಯಡಿಯಲ್ಲಿ ಈಗಾಗಲೇ ಭೂಮಿ ಹೊಂದಿರುವವರಿಗೆ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೊದಲ ಆದ್ಯತೆ ನೀಡಲು ಸರ್ಕಾರವು ಉದ್ದೇಶಿಸಿದೆ.

 

2022-23ನೇ ಮೊದಲ ವರ್ಷದಲ್ಲಿ 50.00 ಕೋಟಿ ರು.ಗಳನ್ನು ನಿಗದಿಪಡಿಸಿ ಪ್ರಥಮ ವರ್ಷದಲ್ಲಿ 5 ಪಾರ್ಕ್‌ಗಳನ್ನು ಸ್ಥಾಪಿಸಿ ನಂತರದ ವರ್ಷದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಣೆ ಮಾಡಲಿದೆ. ಈ ಹೊಸ ಯೋಜನೆಗೆ ಅನುಷ್ಠಾನಕ್ಕೆ ಬೇಕಾದ ಒಟ್ಟು ಮೊತ್ತವು ರಾಜಸ್ವ ಹಾಗೂ  ಬಂಡವಾಳ ವೆಚ್ಚವಾಗಿ ವಿಂಗಡಿಸಿ ಪುನರಾವರ್ತಿತ ಹಾಗೂ ಒಂದು ಬಾರಿಯ ಅಂದಾಜು ಮೊತ್ತವಾಗಿದ್ದು ಇದು ಅನುದಾನದ ರೂಪದಲ್ಲಿದ್ದು ಮರುಕಳಿಸದ ಸ್ವರೂಪದಲ್ಲಿರುತ್ತದೆ ಎಂಬ ಅಂಶವು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Tags: Agricultural ProductsBasavaraj BommaiBudgeth d kumarswamyHorticulture ProductsJob CreationMini Food ParkPlanning Statistics DepartmentSiddaramaiahಅನುದಾನಅನುಷ್ಠಾನಗೊಳ್ಳದ ಯೋಜನೆಆಯವ್ಯಯಇಲಾಖೆ ಘೋಷಣೆಉದ್ಯಮಿಗಳಿಗೆ ಉತ್ತೇಜನಉದ್ಯೋಗ ಸೃಷ್ಟಿಎಚ್‌ ಡಿ ಕುಮಾರಸ್ವಾಮಿಒಂದು ಜಿಲ್ಲೆ ಒಂದು ಉತ್ಪನ್ನಕಲ್ಯಣ ಕರ್ನಾಟಕಕೃಷಿ ಉತ್ಪನ್ನಡಿ ಕೆ ಶಿವಕುಮಾರ್ತೋಟಗಾರಿಕೆ ಉತ್ಪನ್ನಬಜೆಟ್‌ ಘೋಷಣೆಬಂಡವಾಳ ವೆಚ್ಚಬಸವರಾಜ ಬೊಮ್ಮಾಯಿಬಾಹ್ಯ ಮೂಲಮಿನಿ ಫುಡ್‌ ಪಾರ್ಕ್‌ಮುಂದುವರೆದ ಯೋಜನೆಮೌಲ್ಯವರ್ಧನೆಯೋಜನೆಗೆ ಸಹಮತಿರೈತರ ಆದಾಯರೈತರ ಆದಾಯ ದ್ವಿಗುಣಸಿದ್ದರಾಮಯ್ಯಸ್ಥಳೀಯ ಉದ್ಯೋಗಹಣಕಾಸು ಇಲಾಖೆಹೊಸ ಯೋಜನೆ
Advertisement Banner
Previous Post

ಬೈಯಪ್ಪನಹಳ್ಳಿ, ಕಲ್ಬುರ್ಗಿಯಲ್ಲಿ 17 ಎಕರೆ ಗೋಮಾಳದ ಮೇಲೂ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

Next Post

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ; ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ಹಿರೇಮಠ್‌ ವಿರುದ್ಧ ದೂರು

thefilestack

thefilestack

Next Post

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ; ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ಹಿರೇಮಠ್‌ ವಿರುದ್ಧ ದೂರು

Recommended

ಸುಲಿಗೆ; ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಮತ್ತೊಬ್ಬ ಎಸ್ಪಿಯ ಹೆಸರು ಬಾಯ್ಬಿಟ್ಟ ಮಧ್ಯವರ್ತಿ ಗಿರಿರಾಜ್‌?

8 months ago

ಮೈಷುಗರ್ಸ್‌ನ ಕಬ್ಬು ಅರೆಯುವ ಘಟಕ ಎಲ್‌ಆರ್‍‌ಒಟಿ, ಎಥನಾಲ್‌ಗೆ ಪಿಪಿಪಿ ಮಾದರಿ; ಪುರಾವೆ ಮುನ್ನೆಲೆಗೆ

10 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd