the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು. ಸಾಲ ಎತ್ತುವಳಿ; ಆರ್‍‌ಬಿಐ ಕದ ತಟ್ಟಿದ ಸರ್ಕಾರ

thefilestack by thefilestack
February 19, 2024
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರವು ಎಂಟು ತಿಂಗಳಲ್ಲಿ ಸಾರ್ವಜನಿಕ ಸಾಲವಾಗಿ   32,289 ಕೋಟಿ ರು.ಗಳನ್ನು  ಎತ್ತಿತ್ತು. ಇದರ  ಬೆನ್ನಲ್ಲೇ ಇದೀಗ ಭಾರತೀಯ ರಿಸರ್ವ್‌ ಬ್ಯಾಂಕ್‌ ಮೂಲಕ ಮುಕ್ತ ಮಾರುಕಟ್ಟೆಯಿಂದ ಕೊನೆಯ  ತ್ರೈಮಾಸಿಕದಲ್ಲಿ  58,000 ಕೋಟಿ ರು‌.  ಎತ್ತುವಳಿ ಮಾಡಲು ಹೊರಟಿದೆ.

 

ಕರ್ನಾಟಕ ಸರ್ಕಾರ ಸೇರಿದಂತೆ ಇತರೆ ರಾಜ್ಯಗಳು ಸಹ 2024 ಜನವರಿ ಮತ್ತು ಮಾರ್ಚ್‌ ಅಂತ್ಯಕ್ಕೆ ಒಟ್ಟಾರೆ 4,13,452 ಕೋಟಿ ರು.ಗಳ ಸಾಲವನ್ನು ಎತ್ತುವಳಿ ಮಾಡಲಾಗುವುದು ಎಂದು ಆರ್‍‌ಬಿಐಗೆ ತಿಳಿಸಿವೆ. ಈ ಪೈಕಿ ಕರ್ನಾಟಕ ಸರ್ಕಾರವು ಅಭಿವೃದ್ಧಿ ಯೋಜನೆಗಳಿಗಾಗಿ ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು ಸಾಲ ಪಡೆಯುವುದಾಗಿ  ಆರ್‍‌ಬಿಐಗೆ ತಿಳಿಸಿದೆ. ದಕ್ಷಿಣದ ನೆರೆಯ ರಾಜ್ಯಗಳಿಗಿಂತಲೂ ಕರ್ನಾಟಕವು ಅತೀ ಹೆಚ್ಚಿನ ಮೊತ್ತದಲ್ಲಿ ಮುಕ್ತ ಮಾರುಕಟ್ಟೆಯಿಂದ ಸಾಲ ಪಡೆಯಲು ಮುಂದಾಗಿರುವುದು ಗೊತ್ತಾಗಿದೆ.

 

ಈ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌ 2023ರ ಡಿಸೆಂಬರ್‍‌ 29ರಂದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಗ್ಯಾರಂಟಿ ಯೋಜನೆಗಳಿಗೆ ಸಾಲದ ಮೂಲಕ ಅನುದಾನ ಒದಗಿಸಲಾಗುವುದು ಎಂದು 2023ರ ಜುಲೈನಲ್ಲಿ ನಡೆದಿದ್ದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಕೇಳಿದ್ದ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಉತ್ತರಿಸಿದ್ದರು. ಇದರ ಬೆನ್ನಲ್ಲೇ  ಆರ್ಥಿಕ ವರ್ಷ ಪೂರ್ಣಗೊಳ್ಳುವ ಮುನ್ನವೇ ಮಾರುಕಟ್ಟೆ ಸಾಲದ ರೂಪದಲ್ಲಿ ಆರ್‍‌ಬಿಐನಿಂದ 58,000 ಕೋಟಿ ರು. ಸಾಲ ಎತ್ತಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

2023-24 ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 6,254 ಕೋಟಿ ರೂ. ಸಾಲ ಎತ್ತುವಳಿ ಮಾಡಲು ಮುಂದಾಗಿದೆ. ಅಲ್ಲದೇ ಮುಕ್ತ ಮಾರುಕಟ್ಟೆಯಲ್ಲಿ 78,363 ಕೋಟಿ ರು., ಸಾಲ ಎತ್ತುವಳಿ ಮಾಡಲು ಅಂದಾಜಿಸಿದೆ. ಉಳಿದಂತೆ ಎಲ್ಐಸಿ, ಎನ್ ಎಸ್ಎಸ್ಎಫ್, ಎನ್ ಸಿಡಿಸಿಯಿಂದ 1,201 ಕೋಟಿ ರೂ. ಸಾಲವಾಗಿ ಒಟ್ಟು ಅಂದಾಜು 85,818 ಕೋಟಿ ರೂ. ಸಾಲ ಮಾಡಲು ಅಂದಾಜಿಸಿತ್ತು ಎಂದು ತಿಳಿದು ಬಂದಿದೆ.

 

2024ರ ಜನವರಿ 2ರಿಂದ ಜನವರಿ 30ರ ಅಂತ್ಯಕ್ಕೆ ಒಟ್ಟಾರೆ ಅಂತ್ಯಕ್ಕೆ 26,000 ಕೋಟಿ ರು. ಸಾಲ ಎತ್ತಲು ಆರ್‍‌ಬಿಐನ ಕದ ತಟ್ಟಿತ್ತು. ಜನವರಿ 2ರಂದು 6,000 ಕೋಟಿ ರು., ಜನವರಿ 9ರಂದು 7,000 ಕೋಟಿ ರು., ಜನವರಿ 16ರಂದು 5,000 ಕೋಟಿ ರು., ಜನವರಿ 23ರಂದು 5,000 ಕೋಟಿ ರು, ಜನವರಿ 30ರಂದು 3,000 ಕೋಟಿ ರು. ಸಾಲದ ಮೊತ್ತವನ್ನು ನಮೂದಿಸಿರುವುದು ಪತ್ರಿಕೆ ಹೇಳಿಕೆಯಿದ ತಿಳಿದು ಬಂದಿದೆ.

 

ಫೆಬ್ರುವರಿ 6ರಂದು 5,000 ಕೋಟಿ ರು., ಫೆ.13ರಂದು 5,000 ಕೋಟಿ ರು., ಫೆ.20ರಂದು 5,000 ಕೋಟಿ ರು., ಫೆ.27ರಂದು 5,000 ಕೋಟಿ ರು.,

 

ಮಾರ್ಚ್‌ 5ರಂದು 5,000 ಕೋಟಿ ರು., ಮಾರ್ಚ್‌ 12 ರಂದು 4,000 ಕೋಟಿ ರು., ಮಾರ್ಚ್‌ 19ರಂದು 3,000 ಕೋಟಿ ರು., ಸಾಲ ಎತ್ತಲು ತಿಳಿಸಿದೆ.

 

ವಿಶೇಷವೆಂದರೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಕ್ಟೋಬರ್ 17ರಿಂದಲೇ ಆರ್‍‌ಬಿಐ ಮೂಲಕ ರಾಜ್ಯ ಅಭಿವೃದ್ಧಿ ಸಾಲದ ರೂಪದಲ್ಲಿ ಮುಕ್ತ ಮಾರುಕಟ್ಟೆಯಿಂದ ಸಾಲದ ಎತ್ತುವಳಿ ಆರಂಭಿಸಿತ್ತು.

https://stack.thefile.in/2023/12/governance/20527/

ರಾಜ್ಯ ಸರ್ಕಾರವು ಅಕ್ಟೋಬರ್‌ 17ರಿಂದಲೇ  ಆರ್‍‌ಬಿಐ ಮೂಲಕ ಬಹಿರಂಗ ಮಾರುಕಟ್ಟೆಯಲ್ಲಿ  1,000 ಕೋಟಿ ರೂ. ಸಾಲ ಎತ್ತುವಳಿ  ಮಾಡಿದೆ. ಅ.23ರಂದು 2,000 ಕೋಟಿ ರೂ., ಅ.31ರಂದು 2,000 ಕೋಟಿ ರೂ., ನ.1ರಂದು 3,000 ಕೋಟಿ ರೂ., ನ.21ರಂದು 1,000 ಕೋಟಿ ರೂ., ಡಿ.5ರಂದು 4,000 ಕೋಟಿ ರೂ., ಡಿ.12ರಂದು 4,000 ಕೋಟಿ ರೂ. ಸಾಲ ಎತ್ತುವಳಿ ಮಾಡಿದೆ. ಡಿ.19ರಂದು 4,000 ಕೋಟಿ ರೂ. ಡಿ.26ರ‌ಂದು 3,000 ಕೋಟಿ ರೂ. ಸೇರಿದಂತೆ 23,000 ಕೋಟಿ ರು. ಸಾಲ ಮಾಡಿರುವುದು ಗೊತ್ತಾಗಿದೆ.

https://stack.thefile.in/2024/02/governance/22180/

ಇದೇ ತ್ರೈಮಾಸಿಕದಲ್ಲಿ ಆಂಧ್ರಪ್ರದೇಶ 16,000 ಕೋಟಿ ರು. ಸಾಲ ಎತ್ತುವಳಿ ಮಾಡಿದೆ.ಕೇರಳ ಸರ್ಕಾರವು 7,600 ಕೋಟಿ ರು., ತೆಲಂಗಾಣವು 13,000 ಕೋಟಿ ರು., ತಮಿಳುನಾಡು 37,000 ಕೋಟಿ ರು., ಸಾಲ ಮಾಡಲಿದೆ.

Tags: arket LoansD K Shivakumarh d kumarswamyLoanMarket Loanopen marketr ashokSiddaramaiahaSrinivas Kota Pujariಆರ್‌ ಬಿ ಐಕಾಂಗ್ರೆಸ್‌ ಗ್ಯಾರಂಟಿಗಳುಕೋಟಾ ಶ್ರೀನಿವಾಸ ಪೂಜಾರಿಕೋವಿಡ್‌ಗ್ಯಾರಂಟಿಡಿ ಕೆ ಶಿವಕುಮಾರ್ಬಡ್ಡಿಬಸನಗೌಡ ಪಾಟೀಲ್‌ ಯತ್ನಾಳ್‌ಮರು ಪಾವತಿಮಾರುಕಟ್ಟೆ ಸಾಲಮುಕ್ತ ಮಾರುಕಟ್ಟೆಸಾಲಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

Next Post

ಹೊಸ ಕಲ್ಲಿದ್ದಲು ನೀತಿ ದೋಷಪೂರಿತ, ಲೂಟಿಗೆ ದಾರಿ; ಪೂರ್ವಭಾವಿ ಎಚ್ಚರಿಕೆ ನಿರ್ಲಕ್ಷ್ಯಿಸಿದ ಕೇಂದ್ರ

thefilestack

thefilestack

Next Post

ಹೊಸ ಕಲ್ಲಿದ್ದಲು ನೀತಿ ದೋಷಪೂರಿತ, ಲೂಟಿಗೆ ದಾರಿ; ಪೂರ್ವಭಾವಿ ಎಚ್ಚರಿಕೆ ನಿರ್ಲಕ್ಷ್ಯಿಸಿದ ಕೇಂದ್ರ

Recommended

ಅಬಕಾರಿ ಲೇಬಲ್‌ ಮುದ್ರಣ; ಕಪ್ಪುಪಟ್ಟಿ, ಕ್ರಿಮಿನಲ್ ಆರೋಪಿತ ಕಂಪನಿಗೆ ಆದೇಶ, ಕಮಿಷನ್‌ ವ್ಯವಹಾರ?

3 years ago

ಆತ್ಮನಿರ್ಭರ ; ಹಣದ ವಿವರ ಬಹಿರಂಗಪಡಿಸದ ಬಿಜೆಪಿ ಸರ್ಕಾರದಿಂದ 40,724 ಕೋಟಿ ರು. ಯೋಜನೆ ಸಿದ್ಧ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd