the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಯುಯುಸಿಎಂಎಸ್‌ನಲ್ಲಿ ‘ವ್ಯಾಪಕ ಹಗರಣ’; ಸಿಐಡಿ ತನಿಖೆಗೆ ನಕಾರ, ಸಿಎಂ ಸೂಚನೆಯನ್ನೇ ಧಿಕ್ಕರಿಸಿದ ಇಲಾಖೆ

thefilestack by thefilestack
May 13, 2024
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸಮಗ್ರ ವಿಶ್ವವಿದ್ಯಾಲಯದ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್‌) ತಂತ್ರಾಂಶವನ್ನು ವಿಶ್ವವಿದ್ಯಾಲಯಗಳು ಬಳಸದೇ ಇರುವುದು ಸೇರಿದಂತೆ ಇನ್ನಿತರೆ ವಿಚಾರಗಳಲ್ಲಿ ನಡೆದಿದೆ ಎನ್ನಲಾಗಿರುವ  ವ್ಯಾಪಕ  ಅಕ್ರಮಗಳ ಕುರಿತಾಗಿ ಸಿಐಡಿ ತನಿಖೆ  ನಡೆಸಲು ಉನ್ನತ ಶಿಕ್ಷಣ ಇಲಾಖೆಯು ನಿರಾಕರಿಸಿದೆ.

 

ಖಾಸಗಿ ತಂತ್ರಾಂಶ ಬಳಕೆ ಮಾಡಿರುವುದು ಸೇರಿದಂತೆ ಯುಯುಸಿಎಂಎಸ್‌ನಲ್ಲಿ ವ್ಯಾಪಕ ಹಗರಣ ನಡೆದಿದೆ. ಈ ಕುರಿತು ಸಿಐಡಿ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿ ಟಿಪ್ಪಣಿ ಹಾಕಿದ್ದರು. ಆದರೀಗ ಈ ಕುರಿತಾಗಿ ಸಿಐಡಿ ತನಿಖೆಯೇ ಅವಶ್ಯಕತೆ ಇಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಕಸದ ಬುಟ್ಟಿಗೆ ಎಸೆದಿದ್ದಾರೆ.

 

ಯುಯುಸಿಎಂಎಸ್‌ ಪ್ರಕರಣವು ವ್ಯಾಪಕ ಹಗರಣದಂತೆ ಕಂಡು ಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ತನಿಖೆಗೆ ವಹಿಸಿ 60 ದಿನದೊಳಗೆ ವರದಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಅವರು ಸೂಚಿಸಿದ್ದರೇ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದರಲ್ಲಿ ಯಾವುದೇ ಹಗರಣ ನಡೆದಿಲ್ಲ, ಸಿಐಡಿ ತನಿಖೆಯೇ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

 

ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಈ ನಡೆಯು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯನ್ನೇ ಧಿಕ್ಕರಿಸಿದಂತಿದೆ.

 

ಈ ಸಂಬಂಧ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ಹಲವು ದಾಖಲಾತಿಗಳನ್ನು ಪಡೆದುಕೊಂಡಿದೆ.

 

ಸಿದ್ದರಾಮಯ್ಯರ ಟಿಪ್ಪಣಿಯಲ್ಲೇನಿದೆ?

 

ಉನ್ನತ ಶಿಕ್ಷಣ ಇಲಾಖೆಯಡಿಯ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಹೊಸ ತಂತ್ರಾಂಶ ಖರೀದಿ, ಅಭಿವೃದ್ಧಿ ಮತ್ತು ಲೈಸೆನ್ಸ್‌ ನವೀಕರಣಗಳನ್ನು ಕೈಗೆತ್ತಿಕೊಳ್ಳದೇ ಸರ್ಕಾರದಿಂದ ಅಭಿವೃದ್ಧಿಪಡಿಸಲಾಗಿರುವ ಯುಯುಸಿಎಂಎಸ್‌ ತಂತ್ರಾಂಶ ಬಳಕೆಗೆ ಸ್ಪಷ್ಟ ನಿರ್ದೇಶನವಿದೆ. ಆದರೂ ವಿಶ್ವವಿದ್ಯಾಲಯಗಳು, ಇಲಾಖೆಯ ಅಧಿಕಾರಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ (ಪ್ರಕರಣ ಸಂಖ್ಯೆ 12468/2020) ಆದೇಶವನ್ನು ಉಲ್ಲಂಘಿಸಲಾಗುತ್ತಿದೆ.

 

ಖಾಸಗಿ ಕಂಪನಿಗಳ ಸೇವೆ ಪಡೆದುಕೊಂಡು 100ಕ್ಕೂ ಅಧಿಕ ಕೋಟಿ ರುಪಾಯಿ ಸರ್ಕಾರದ ಹಣದ ಪೋಲಾಗಲು ಕಾರಣರಾಗಿರುತ್ತಾರೆ. ಈ ಪ್ರಕರಣವು ನ್ಯಾಯಾಲಯದ ನಿಂದನೆ ಹಾಗೂ ಭ್ರಷ್ಟಾಚಾರದ ನಿಗ್ರಹದ ಕಾಯ್ದೆಯ ವ್ಯಾಪ್ತಿಗೆ ಬರುತ್ತಿದ್ದು ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡು ದುರುಪಯೋಗವಾದ ಹಣ ವಸೂಲಿ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ವಕೀಲ ಅವಿನಾಶ್‌ ಗೌಡ ಅವರು ಕೋರಿರುತ್ತಾರೆ.

 

‘ಪ್ರಕರಣದ ಕುರಿತು ಈ ಮೊದಲು ದೂರುಗಳು ಸ್ವೀಕೃತವಾಗಿದ್ದು ಯಾವುದೇ ಕ್ರಮಕೈಗೊಳ್ಳದಿರುವುದು ಕಂಡು ಬಂದಿರುತ್ತದೆ. ಇದೊಂದು ವ್ಯಾಪಕ ಹಗರಣದಂತೆ ಕಂಡುಬರುತ್ತಿದ್ದು ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು ಸಿಐಡಿಗೆ ವಹಿಸಿ ತನಿಖೆ ನಡೆಸಿ 60 ದಿನದೊಳಗೆ ವರದಿ ಸಲ್ಲಿಸಬೇಕು,’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ 2024ರ ಜನವರಿ 2ರಂದು ಸೂಚಿಸಿದ್ದರು.

 

 

ಆದರೆ ಈ ಸೂಚನೆಯನ್ನು ಉನ್ನತ ಶಿಕ್ಷಣ ಇಲಾಖೆಯು ನೇರವಾಗಿ ಧಿಕ್ಕರಿಸಿದೆ. ಸಿಐಡಿ ತನಿಖೆಗೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ 9 ದಿನದೊಳಗೇ ಉನ್ನತ ಶಿಕ್ಷಣ ಇಲಾಖೆಯು ಸಿಐಡಿ ತನಿಖೆಗೆ ವಹಿಸುವ ಅವಶ್ಯಕತೆಯೇ ಇಲ್ಲ ಎಂದು ಪ್ರತಿಪಾದಿಸಿದೆ.

 

‘ಮುಖ್ಯಮಂತ್ರಿಗಳ ಕಚೇರಿ ಪತ್ರದನ್ವಯ ಯುಯುಸಿಎಂಎಸ್‌ ತಂತ್ರಾಂಶವನ್ನು ಹೊರತುಪಡಿಸಿ ಬೇರೆ ಯಾವುದೇ ಖಾಸಗಿ ತಂತ್ರಾಂಶವನ್ನು ಬಳಸಬಾರದೆಂಬ ಸರ್ಕಾರದ ನಿರ್ದೇಶನವನ್ನು ಉಲ್ಲಂಘಿಸಿ ಖಾಸಗಿ ಕಂಪನಿಗಳ ಸೇವೆಗಳನ್ನು ಬಳಸಿಕೊಂಡಿರುವವರೆಂಬ ದೂರಿಗೆ ವಿಶ್ವವಿದ್ಯಾಲಯಗಳಿಂದ ಸವಿಸ್ತಾರ ವರದಿಯನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಪಡೆಯಲಾಗುವುದು. ಹಾಗೂ ನ್ಯೂನತೆಗಳು ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸದರಿ ಪ್ರಕರಣವನ್ನು ಈ ಹಂತದಲ್ಲಿ ಸಿಐಡಿ ತನಿಖೆಗೆ ವಹಿಸುವ ಅವಶ್ಯಕತೆ ಇರುವುದಿಲ್ಲ,’ ಎಂದು ಉನ್ನತ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಡಾ ಭಾಗ್ಯವಾನ್‌ ಅವರು ಟಿಪ್ಪಣಿ ಹಾಳೆಯಲ್ಲಿ ದಾಖಲಿಸಿರುವುದು ಗೊತ್ತಾಗಿದೆ.

 

 

2021-22ನೇ ಸಾಲಿನಲ್ಲಿ ಯುಯುಸಿಎಂಎಸ್‌ ನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಫಲಿತಾಂಶ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಪದವಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ.

 

2023-24ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಮತ್ತು ಅಂತಿಮ ಪದವಿಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಯುಯುಸಿಎಂಎಸ್‌ ಪರೀಕ್ಷಾ ಮಾಡ್ಯುಲ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ರೀತಿಯಲ್ಲಿ ಯುಯುಸಿಎಂಎಸ್‌ ತಂತ್ರಾಂಶವನ್ನು ಹಂತಹಂತವಾಗಿ ಉನ್ನತ ಶಿಕ್ಷಣ ಇಲಾಖೆಯಡಿಯ 30 ವಿಶ್ವವಿದ್ಯಾಲಯಗಳಲ್ಲಿ ಬಳಸಿಕೊಳ್ಳಲಾಗಿದೆ ಎಂದು ಭಾಗ್ಯವಾನ್‌ ಅವರು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

ಪ್ರಸ್ತುತ ಉನ್ನತ ಶಿಕ್ಷಣ ಇಲಾಖೆಯಡಿ 30 ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ 3,273 ಕಾಲೇಜುಗಳಲ್ಲಿನ ಸುಮಾರು 12 ಲಕ್ಷ ವಿದ್ಯಾರ್ಥಿಗಳು ಯುಯುಸಿಎಂಎಸ್‌ ತಂತ್ರಾಂಶದ ಮುಖಾಂತರವೇ ಪ್ರವೇಶಾತಿ, ಪರೀಕ್ಷೆ ಮತ್ತು ಶೈಕ್ಷಣಿಕ ಇತರೆ ವಿಭಾಗಗಳಲ್ಲಿನ ಆನ್‌ಲೈನ್‌ ಚಟುವಟಿಕೆ ನಡೆಸಲು ಬಳಸಲಾಗಿದೆ.

 

‘ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ (ಸಂಖ್ಯೆ ಮುಮಮಂ ಅ.ಕಾ/7078693/2024 ದಿನಾಂ 02.01.2024)ಯಲ್ಲಿ ಉತ್ತಮ ಯುಯುಸಿಎಂಎಸ್‌ ತಂತ್ರಾಂಶವಿದ್ದರೂ ಪರಿಣಾಮಕಾರಿಯಾಗಿ ಬಳಸಿಕೊಳ್ಳದೇ ವಿಶ್ವವಿದ್ಯಾಲಯಗಳು ಖಾಸಗಿ ತಂತ್ರಾಂಶಗಳನ್ನು ಬಳಸಿಕೊಳ್ಳುತ್ತಿವೆ ಎಂಬ ಕಾರಣವೇ ಹೊರತು ಯುಯುಸಿಎಂಎಸ್‌ ಬಗ್ಗೆ ಯಾವುದೇ ಆಕ್ಷೇಪ ಎತ್ತಿರುವುದಿಲ್ಲ. ಈ ಅಂಶಗಳ ಹಿನ್ನೆಲೆಯಲ್ಲಿ ಯುಯುಸಿಎಂಎಸ್‌ನ್ನು ಬಲಪಡಿಸಲು ಸಚಿವ ಸಂಪುಟ ಅನುಮೋದನೆಗೆ ಕಳಿಸಿರುವ ಕರಡು ಸಚಿವ ಸಂಪುಟ ಟಿಪ್ಪಣಿಗೂ ಮುಖ್ಯಮಂತ್ರಿಗಳ ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ ಸಂಬಂಧವಿರುವುದಿಲ್ಲ,’ ಎಂದು ಭಾಗ್ಯವಾನ್‌ ಅವರು ಸ್ಪಷ್ಟಪಡಿಸಿರುವುದು ಗೊತ್ತಾಗಿದೆ.

Tags: bengaluruCollgescouncilDR C N Ashwanth NarayanDR M C SudhakareducationFirst Gradeh d kumarswamyHigherKuvempuLaw GraduatemysoreOnlinepost-graduateSiddaramaiahaTumakuruUndergraduateUniversitiesUUCMSvice chancellorsಅಂಕಿ ಅಂಶಆರ್‌ ಅಶೋಕ್‌ಉನ್ನತ ಶಿಕ್ಷಣಉಲ್ಲಂಘನೆಏಕೀಕರಣಒಪ್ಪಂದಕುಲಪತಿಗಳುಕುಲಾಧಿಪತಿಗಳುಖಾಸಗಿ ತಂತ್ರಾಂಶಚಟುವಟಿಕೆಟಿಪ್ಪಣಿಡಾ ಎಂ ಸಿ ಸುಧಾಕರ್‌ಡಾ ಸಿ ಎನ್ ಅಶ್ವಥ್‌ನಾರಾಯಣ್ಡಿ ಕೆ ಶಿವಕುಮಾರ್ಡಿಜಿಟಲ್‌ತಂತ್ರಾಂಶತನಿಖೆನಿರ್ದೇಶನಪದವಿ ವಿದ್ಯಾರ್ಥಿಗಳುಪರೀಕ್ಷೆಪ್ರವೇಶಾತಿಫಲಿತಾಂಶಮುಖ್ಯಮಂತ್ರಿಮೌಲ್ಯಮಾಪನಯುಯುಸಿಎಂಎಸ್‌ವಿಶ್ವವಿದ್ಯಾಲಯಗಳುಶೂನ್ಯಶೈಕ್ಷಣಿಕಶೈಕ್ಷಣಿಕಲಸಾಫ್ಟ್‌ವೇರ್‌ಸಾಫ್ಟ್‌ವೇರ್‌ ಕಂಪನಿಗಳುಸಿಐಡಿಸಿದ್ದರಾಮಯ್ಯಹಣಕಾಸು ನಿರ್ವಹಣೆಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಚಾಣಕ್ಯ ವಿವಿ ಅಧಿನಿಯಮಕ್ಕೆ ತಿದ್ದುಪಡಿ ಪ್ರಸ್ತಾವ; ಅಂದು ವಿರೋಧ, ಇಂದು ಸಮ್ಮತಿಯೇ?

Next Post

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 314.06 ಕೋಟಿ ರು. ನಷ್ಟ; ಸಿಎಜಿ ಗೌಪ್ಯ ಪತ್ರ

thefilestack

thefilestack

Next Post

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 314.06 ಕೋಟಿ ರು. ನಷ್ಟ; ಸಿಎಜಿ ಗೌಪ್ಯ ಪತ್ರ

Recommended

ವಿಎಲ್‌ಟಿ, ಪ್ಯಾನಿಕ್‌ ಬಟನ್‌ ಅಳವಡಿಕೆ ಹಿಂದಿದೆ 1,200 ಕೋಟಿ ಹಗರಣ!; ರಾಜ್ಯದಲ್ಲೂ ದೆಹಲಿ ಮಾದರಿ ಅಕ್ರಮ?

2 years ago

ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್‌ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd