the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಶಾಸಕ ಪ್ರಶಸ್ತಿ; ಬಿಎಸ್‌ವೈ ಓಲೈಕೆಗಿಳಿದು ರಮೇಶ್‌ಕುಮಾರ್‌ ಹೆಸರು ಕೈಬಿಡಲಾಗಿತ್ತೇ?

thefilestack by thefilestack
November 23, 2021
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ನ ಶಾಸಕ ಹಾಗೂ ಮಾಜಿ ಸ್ಪೀಕರ್‌ ಕೆ ಆರ್‌ ರಮೇಶ್‌ಕುಮಾರ್‌ ಅವರ ಹೆಸರನ್ನೂ ಆಯ್ಕೆ ಸಮಿತಿಯು ಅಂತಿಮಗೊಳಿಸಿತ್ತು. ಕಡೇ ಗಳಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ಶಾಸಕ ಬಿ ಎಸ್‌ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ಆಯ್ಕೆ ಸಮಿತಿಯು ತೀರ್ಮಾನಿಸಿತ್ತು ಎಂಬ ಅಂಶ ಇದೀಗ ಆರ್‌ಟಿಐನಿಂದ ಬಹಿರಂಗವಾಗಿದೆ.

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿರುವ ಸಂಬಂಧ ‘ದಿ ಫೈಲ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಉತ್ತರಿಸಿರುವ ಕರ್ನಾಟಕ ವಿಧಾನಸಭೆ ಸಚಿವಾಲಯವು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಬಂಧ ಅಖೈರುಗೊಳಿಸಿದ್ದ ಶಾಸಕರ ಪಟ್ಟಿಯನ್ನು ಒದಗಿಸಿಲ್ಲ.

2021ನೆ ಸಾಲಿನ ಕರ್ನಾಟಕ ವಿಧಾನಸಭೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲು 2021ರ ಸೆಪ್ಟಂಬರ್‌ 21ರಂದು ಸಭೆ ಸೇರಿದ್ದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿಯು ವಿಧಾನಸಭೆಯ ಸದಸ್ಯರುಗಳ ಸಾಧನೆಗಳನ್ನು ಪರಿಶೀಲಿಸಿತ್ತು. ಆದರೆ ಯಾವ್ಯಾವ ಶಾಸಕರ ಸಾಧನೆಗಳನ್ನು ಪರಿಶೀಲಿಸಿದೆ ಎಂಬ ಮಾಹಿತಿಯನ್ನು ಆರ್‌ಟಿಐನಲ್ಲಿ ಒದಗಿಸಿಲ್ಲ.

‘ಪ್ರಶಸ್ತಿಗೆ ನಾವು ಹಲವು ಹೆಸರನ್ನು ಪರಿಶೀಲಿಸಿದೆವು. ಅದರೆ, ಆಯ್ಕೆ ಕ್ಲಿಷ್ಟಕರವಾಗಿತ್ತು. ಯಡಿಯೂರಪ್ಪನವರ ಆಯ್ಕೆಯು ಸರ್ವಾನುಮತದಿಂದ ಕೂಡಿದೆ,’ ಎಂದು ಕಾಗೇರಿ ಹೇಳಿದ್ದನ್ನು ಸ್ಮರಿಸಬಹುದು.

‘ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿ’ ನೀಡುವ ವಿಚಾರವಾಗಿ ಸಮಿತಿಯು ವಿಧಾನಸಭೆಯ ಸದಸ್ಯರುಗಳ ಸಾಧನೆಗಳನ್ನು ಪರಿಶೀಲಿಸಿತು. ನಂತರ ಸಭೆಯಲ್ಲಿ ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗಾಗಿ ಬಿಜೆಪಿ ಪಕ್ಷದ ಸದಸ್ಯರಾದ ಬಿ ಎಸ್‌ ಯಡಿಯೂರಪ್ಪ ಹಾಗೂ ಕಾಂಗ್ರೆಸ್‌ ಪಕ್ಷದ ಸದಸ್ಯರಾದ ಕೆ ಆರ್‌ ರಮೇಶ್‌ಕುಮಾರ್‌ ಇವರುಗಳ ಹೆಸರುಗಳನ್ನು ಅಂತಿಮಗೊಳಿಸಿ ಇವರಿಬ್ಬರಲ್ಲಿ ಒಬ್ಬ ಸದಸ್ಯರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡುವ ಕುರಿತು ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಸಭಾಧ್ಯಕ್ಷರಿಗೆ ವಹಿಸಲಾಗಿತ್ತು,’ ಎಂಬುದು ಆರ್‌ಟಿಐ ನಿಂದ ತಿಳಿದು ಬಂದಿದೆ.

ಆಯ್ಕೆಗೆ ಮಾರ್ಗಸೂಚಿಗಳೇನು?

ವಿಧಾನಸಭಾ ಸದಸ್ಯರು ಸಾರ್ವಜನಿಕ ಜೀವನದಲ್ಲಿ ಶಾಸಕರಾಗಿ ಮತಕ್ಷೇತ್ರಕ್ಕೆ ನೀಡಿರುವ ಕೊಡುಗೆಯ ಪರಿಗಣನೆ

ತಮ್ಮ ಮತ ಕ್ಷೇತ್ರಗಳಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿ ಗಳಿಸಿರುವ ಅನುಭವದ ಪರಿಗಣನೆ

ಸದನದಲ್ಲಿ ನಡೆಯುವ ಚರ್ಚೆಗಳಲ್ಲಿ ಸದಸ್ಯರು ತೋರಿಸುವ ಕೌಶಲ್ಯ

ಸಾರ್ವಜನಿಕ ಹಿತಾಸಕ್ತಿ ಇರುವಂತಹ ವಿಷಯಗಳ ಬಗ್ಗೆ ಸದಸ್ಯರಿಗೆ ಇರುವ ಆಸಕ್ತಿ

ಸದನದಲ್ಲಿ ಸದಸ್ಯರು ಪ್ರಸ್ತಾಪಿಸುವ ವಿಷಯ ಹಾಗೂ ಅದರ ಗಂಭೀರತೆಯ ಪರಿಗಣನೆ

ಸದನದಲ್ಲಿ ವಿಷಯಗಳನ್ನು ಪ್ರಸ್ತುತಪಡಿಸುವ ವಿಧಾನ ಹಾಗೂ ಸದನದ ಸಂಪ್ರದಾಯಗಳ ಬಗ್ಗೆ ಅವರಿಗೆ ಇರುವ ಮನೋಭಾವನೆ

ಕನ್ನಡ ಭಾಷೆಯಲ್ಲಿ ಹೊಂದಿರುವ ಪಾಂಡಿತ್ಯ

ಸದನದ ಒಳಗೆ ಹಾಗೂ ಹೊರಗೆ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆ ನಿಯಮಗಳ ಅರಿವು, ಅವುಗಳ ಪಾಲನೆ

ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಅನುಸರಿಸಲು ಗ್ರಹಿಸುವಲ್ಲಿನ ಸಾಮರ್ಥ್ಯ

ವಿಧಾನಮಂಡಲದ/ವಿಧಾನಸಭೆಯ ಸಮಿತಿಗಳಲ್ಲಿನ ಭಾಗವಹಿಸುವಿಕೆ

ಶಾಸಕರಾಗಿ ಸದನದ ಒಳಗೆ ಹಾಗೂ ಹೊರಗೆ ಸದಸ್ಯರ ನಡವಳಿಕೆ

ಸದನದಲ್ಲಿ ಹಾಜರಾತಿ

ಇತರೆ ಸದಸ್ಯರುಗೊಳೊಂದಿಗೆ ತೋರ್ಪಡಿಸುವ ಸೌಹಾರ್ದಯುತ ಸಂಬಂಧ ಸದನದಲ್ಲಿ ಕೇಳಲಾದ ಪ್ರಶ್ನೆಗಳ ಗುಣಮಟ್ಟ, ವ್ಯಾಪ್ತಿ ಮತ್ತು ಪ್ರಸ್ತುತಪಡಿಸುವ ವಿಧಾನ

ಸದನದಲ್ಲಿ ಉಂಟಾಗುವ ಪ್ರತಿರೋಧದ ಪರಿಸ್ಥಿತಿಗಳ ಕಾರ್ಯನಿರ್ವಹಣೆ ಸಂದರ್ಭದಲ್ಲಿ ತೋರಿಸುವ ಸಹಕಾರ

ಪ್ರಶಸ್ತಿಗೆ ಆಯ್ಕೆ ಮಾಡುವ ಸಮಿತಿಯು ವಿಧಾನಸಭೆ ಸದಸ್ಯರ ಜೇಷ್ಠತೆಯನ್ನು ಪರಿಶೀಲಿಸಿರುವುದು ಗೊತ್ತಾಗಿದೆ. ಮಾರ್ಗಸೂಚಿಗಳ ಅನ್ವಯ ಪ್ರಶಸ್ತಿಗೆ ಶಾಸಕರುಗಳ ಪಟ್ಟಿಯನ್ನು ತಯಾರಿಸಲಾಗಿತ್ತೇ ಅಥವಾ ಇಲ್ಲವೇ ಎಂಬುದನ್ನು ವಿಧಾನಸಭೆ ಸಚಿವಾಲಯವು ಆರ್‌ಟಿಐನಲ್ಲಿ ಮಾಹಿತಿ ಒದಗಿಸಿಲ್ಲ.

ಸ್ಪೀಕರ್‌ ಕಾಗೇರಿ ನೇತೃತ್ವದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಅವರು ಸಮಿತಿಯ ಸದಸ್ಯರಾಗಿದ್ದರು.

Tags: B S YediyurappaBest MLAD K Shivakumarh d kumarswamyK R Ramesh KumarkarnatakaKarnataka Legislative AssemblyMLA'SSiddaramaiahVishweshwar Hegde Kageriಅತ್ಯುತ್ತಮ ಶಾಸಕಎಚ್‌ ಡಿ ಕುಮಾರಸ್ವಾಮಿಕೆ ಆರ್‌ ರಮೇಶ್‌ ಕುಮಾರ್‌ಡಿ ಕೆ ಶಿವಕುಮಾರ್ಬಿ ಎಸ್‌ ಯಡಿಯೂರಪ್ಪವಿಧಾನಸಭೆವಿಧಾನಸಭೆ ಅಧಿವೇಶನಸಿದ್ದರಾಮಯ್ಯ
Advertisement Banner
Previous Post

ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ,ಫೀಸ್‌ ಕಟ್ಟೋಕೆ ಆಗೋಲ್ವಾ; ಡಿಸಿಯಿಂದ ಪೋಷಕರಿಗೆ ಅವಮಾನ

Next Post

ತಡವಾಗಿ ಆಗಮನ, ಹಾಜರಾತಿಯಲ್ಲಿ ಸಹಿಯಿಲ್ಲ, ಶಿಸ್ತಿಲ್ಲ; ಕಚೇರಿಗಳಲ್ಲಿ ಆಡಿದ್ದೇ ಆಟ ಹೂಡಿದ್ದೇ ಲಗ್ಗೆ

thefilestack

thefilestack

Next Post

ತಡವಾಗಿ ಆಗಮನ, ಹಾಜರಾತಿಯಲ್ಲಿ ಸಹಿಯಿಲ್ಲ, ಶಿಸ್ತಿಲ್ಲ; ಕಚೇರಿಗಳಲ್ಲಿ ಆಡಿದ್ದೇ ಆಟ ಹೂಡಿದ್ದೇ ಲಗ್ಗೆ

Recommended

ಕೆಎಸ್‌ಡಿಎಲ್‌ ಉತ್ಪನ್ನಗಳ ಸರಬರಾಜು; 4 (ಜಿ) ವಿನಾಯಿತಿ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ

2 years ago

5 ಲಕ್ಷ ರು. ಸುಲಿಗೆ ಆರೋಪ ಪ್ರಕರಣ; ಐಪಿಎಸ್‌, ಡಿವೈಎಸ್ಪಿ ವಿರುದ್ಧ ತನಿಖೆಗೆ ಡಿಜಿಐಜಿಪಿಗೆ ಮನವಿ ಸಲ್ಲಿಸಿದ ವಕೀಲ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd