the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಶೂನ್ಯ ಬಡ್ಡಿ ದರದಲ್ಲಿ ಸಾಲ; ಬೊಕ್ಕಸಕ್ಕೆ 117 ಕೋಟಿ ರು., ಹೊರೆ, ಬಡ್ಡಿ ಮನ್ನಾ ಯೋಜನೆಗೆ ಬೇಕು 260 ಕೋಟಿ

thefilestack by thefilestack
January 22, 2024
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ ಪ್ರತೀ ವರ್ಷ 117 ಕೋಟಿ ರು. ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದೆ ಎಂಬ ಲೆಕ್ಕಾಚಾರವನ್ನೂ ಮುಂದಿಟ್ಟಿದೆ.  

 

2024-25ನೇ ಸಾಲಿನ ಆಯವ್ಯಯದಲ್ಲಿ ಹೊಸ ಯೋಜನೆಗಳನ್ನು ಪ್ರಸ್ತಾವಿಸಿರುವ ಸಹಕಾರ ಇಲಾಖೆಯು ಈ ಕುರಿತು ವಿವರಣೆ ನೀಡಿದೆ.   ಶೂನ್ಯ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದ ರೈತರ ಪೈಕಿ ಇನ್ನೂ 2.52 ಲಕ್ಷ ರೈತರು 3,900 ಕೋಟಿ ರು. ಸಾಲ ಮರು ಪಾವತಿಸಲು ಬಾಕಿ ಇರಿಸಿಕೊಂಡಿದ್ದಾರೆ.  

 

ಬರಗಾಲದ ಹಿನ್ನೆಲೆಯಲ್ಲಿ ಶೇ.3ರ ಬಡ್ಡಿ ದರವನ್ನು ಶೂನ್ಯಕ್ಕಿಳಿಸಿಲು ಪ್ರಸ್ತಾವಿಸಿರುವ ಸಹಕಾರ ಇಲಾಖೆಯು ಈ ಯೋಜನೆಯನ್ನು ಜಾರಿಗೊಳಿಸಿದರೆ ಸರ್ಕಾರದ ಬೊಕ್ಕಸಕ್ಕೆ 117 ಕೋಟಿ ರು ಹೊರೆ ಬೀಳಲಿದೆ ಎಂದು ಅಂಕಿ ಅಂಶಗಳನ್ನು ಒದಗಿಸಿದೆ. ಸಹಕಾರ ಇಲಾಖೆಯು ಸಲ್ಲಿಸಿರುವ ಈ ಪ್ರಸ್ತಾವನೆಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಲ್ಲದೇ ಸುಸ್ತಿದಾರರ ಸಾಲಗಳ ಮೇಲಿನ ಬಡ್ಡಿ ಮನ್ನಾ ಯೋಜನೆ ಅನುಷ್ಠಾನಗೊಳಿಸಲು 260 ಕೋಟಿ ರು. ಅನುದಾನ ಬೇಕಿದೆ ಎಂದು ಬೇಡಿಕೆ ಸಲ್ಲಿಸಿದೆ.

 

ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಸಹಕಾರ  ಇಲಾಖೆಯು ಒದಗಿಸಿರುವ ಅಂದಾಜು ವೆಚ್ಚದ ಪಟ್ಟಿಯು ಮುನ್ನೆಲೆಗೆ ಬಂದಿದೆ.

 

ಪ್ರತೀ ವರ್ಷ ಶೂನ್ಯ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಯೋಜನೆ ಅಡಿಯಲ್ಲಿ 60,000 ರೈತರಿಗೆ 2,000 ಕೋಟಿ ರು.ಗಳನ್ನು ಪಿಕಾರ್ಡ್‌ ಬ್ಯಾಂಕ್‌ಗಳ ಮೂಲಕ ಒದಗಿಸಲು ಪ್ರಸ್ತಾವಿಸಿದೆ.   ಪ್ರತೀ ಜಿಲ್ಲೆಯ 2 ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಅಂಗಳದಲ್ಲಿ ಹೊಸದಾಗಿ ಉಗ್ರಾಣಗಳನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಲು ಇಲಾಖೆಯು ಪ್ರಸ್ತಾವಿಸಿದೆ. ಒಟ್ಟಾರೆ 64 ಟಿಎಪಿಸಿಎಂಸಿಗಳಿಗೆ ತಲಾ 1 ಕೋಟಿ ರು. ಮತ್ತು 4.50 ಕೋಟಿ ರು.ಗಳನ್ನು ಶೆ.7ರಷ್ಟು ಬಡ್ಡಿ ರಿಯಾಯಿತಿ ಘೋಷಿಸಲಿದೆ ಎಂದು ತಿಳಿದು ಬಂದಿದೆ.  

 

ಎಪಿಎಂಸಿಗಳಲ್ಲಿ ಸ್ಮಾರ್ಟ್‌ ಆಡಳಿತ ಕೇಂದ್ರಗಳನ್ನು ಸ್ಥಾಪಿಸಲಿದೆ. ಸದ್ಯ ಎಪಿಎಂಸಿಗಳಲ್ಲಿರುವ ತೂಕದ ಯಂತ್ರಗಳನ್ನು ಬದಲಾಯಿಸಿ ಡಿಜಿಟಲ್‌ ವ್ಯವಸ್ಥೆಗೊಳಪಡಿಸಲು 15 ಕೋಟಿ ರು.ಗಳನ್ನು ಒದಗಿಸಲಿದೆ. ರಾಯಚೂರುನಲ್ಲಿ 5 ಎಕರೆ ವಿಸ್ತೀರ್ಣದಲ್ಲ ಶೀತಲ ಗೃಹ ನಿರ್ಮಾಣ ಮಾಡಲು ಪ್ರಸ್ತಾವಿಸಿರುವುದು ಗೊತ್ತಾಗಿದೆ.   ಅದೇ ರೀತಿ ಯಲಬುರ್ಗಾ, ವಿಜಯಪುರ, ರಾಣೆಬೆನ್ನೂರು, ಬ್ಯಾಡಗಿ, ಗದಗ್‌ನಲ್ಲಿ ತಲಾ 10 ಕೋಟಿ ರು. ವೆಚ್ಚದಲ್ಲಿ ಒಟ್ಟಾರೆ 50 ಕೋಟಿ ರು. ವೆಚ್ಚದಲ್ಲಿ ಶೀತಲ ಗೃಹಗಳನ್ನು ನಿರ್ಮಿಸಲಿದೆ.

 

ಅಂತರಾಷ್ಟ್ರೀಯ ಮಟ್ಟದಲ್ಲಿ ಹೈಟೆಕ್‌ ಹೂವಿನ ಮಾರುಕಟ್ಟೆಯನ್ನು ಚಿಕ್ಕಬಳ್ಳಾಪುರದ ದೊಡ್ಡಮರಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಮಿಸಲಿದೆ. ಇದಕ್ಕಾಗಿ 25 ಕೋಟಿ ರು.ಗಳನ್ನು ಕಾಯ್ದಿರಿಸಲಿದೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಿದೆ.  

 

ರೈತರ ಆತ್ಮಹತ್ಯೆ, ಬರ, ರೈತರ ಸಾಲಮನ್ನಾ ಕುರಿತಾದ ವಿಷಯಗಳು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ  ರಾಜ್ಯದ ಸಹಕಾರ ಸಂಘಗಳಲ್ಲಿ ಕೃಷಿ ಸಾಲ ಪಡೆದಿದ್ದ 31.65 ಲಕ್ಷ ರೈತರು 25,547.02 ಕೋಟಿ ರು. ಸಾಲ ಹೊರಬಾಕಿ ಹೊಂದಿದ್ದಾರೆ ಎಂಬ ಅಂಕಿ ಅಂಶಗಳನ್ನು ವಿಧಾನಸಭೆಗೆ ಮಂಡಿಸಲಾಗಿತ್ತು.  

 

ರೈತರ ಸಾಲ ಮನ್ನಾ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಬೆಳಗಾವಿ ಅಧಿವೇಶನದಲ್ಲಿ ಈಗಾಗಲೇ ರಾಜ್ಯ ಸರ್ಕಾರವು ಸ್ಪಷ್ಟಪಡಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ರೈತರು ಪಡೆದಿರುವ 50 ಸಾವಿರ ಮತ್ತು 1 ಲಕ್ಷ ರು. ಸಾಲವನ್ನು ಮನ್ನಾ ಮಾಡುವ ಸಂಬಂಧ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ರೈತರಿಗೆ ಸಂಬಂಧಿಸಿದಂತೆ ನೀಡಿರುವ ಹಸಿರು ಪಟ್ಟಿಗೆ ಆರ್ಥಿಕ ಇಲಾಖೆಯು ಕೊಕ್ಕೆ ಹಾಕಿತ್ತು.  

 

2023ರ ನವೆಂಬರ್‍‌ 20ರ ಅಂತ್ಯಕ್ಕೆ ಸಹಕಾರ ಸಂಘಗಳಲ್ಲಿ 29.75 ಲಕ್ಷ ರು. ರೈತರು 21,912.14 ಕೋಟಿ ರು.ಗಳ ಅಲ್ಪಾವಧಿ ಸಾಲ ಮತ್ತು 1.91 ಲಕ್ಷ ರೈತರು 3,634.88 ಕೋಟಿ ರು.ಗಳ  ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ಹೀಗೆ ಒಟ್ಟು 31.65 ಲಕ್ಷ ರು. ರೈತರು 25,547.02 ಕೋಟಿ ರ.ಗಳ ಕೃಷಿ ಸಾಲದ ಹೊರಬಾಕಿ ಹೊಂದಿರುತ್ತಾರೆ ಎಂಬ ಅಂಕಿ ಅಂಶಗಳನ್ನು ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು ಸದನಕ್ಕೆ ಒದಗಿಸಿದ್ದರು. 

 

ರಾಜ್ಯದಲ್ಲಿ ಹೊಸದಾಗಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅಂದರೆ 2023ರ ಮೇ 20ರಿಂದ 2023ರ ನವೆಂಬರ್‍‌ 1ರವರೆಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಹಾಗೂ ಶೇ. 3ರ ಬಡ್ಡಿ ದರದಲ್ಲಿ  ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಿತ್ತು. ಈ ಪೈಕಿ 5.00 ಲಕ್ಷ ರು.ವರೆಗಿನ ಅಲ್ಪಾವಧಿ ಕೃಷಿ ಸಾಲವನ್ನು 2,372 ರೈತರಿಗೆ ವಿತರಿಸಿತ್ತು ಎಂದು ಮಾಹಿತಿ ಒದಗಿಸಿದ್ದರು.

 

https://stack.thefile.in/2023/12/legislature/21192/

 

 

ಅಲ್ಪಾವಧಿ ಕೃಷಿ ಸಾಲ 1038085.94 ಲಕ್ಷ ರು., ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ 38160.32 ಲಕ್ಷ ರು., ಸೇರಿ ಒಟ್ಟು ಕೃಷಿ ಸಾಲ1076246.00 ಲಕ್ಷ ರು. ಸಾಲ ವಿತರಿಸಿದೆ.  

 

https://stack.thefile.in/2021/12/governance/9801/

 

 

‘ಅಲ್ಲದೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿಗಳನ್ನು ಬಿಡುಗಡೆಗೊಳಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಹಕಾರ ಸಂಘಗಳ ನಿಬಂಧಕರ ಕಚೇರಿಯಿಂದಲೂ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿವೆ. ಮುಂಬರುವ ದಿನಗಳಲ್ಲಿ 18,965 ಸಂಖ್ಯೆಯ ರೈತರು ಹಸಿರು ಪಟ್ಟಿಗೆ ಸೇರುವುದರಿಂದ ಈ ಒಂದು ಪ್ರಕರಣದಲ್ಲಿ ಅನುದಾನ ಒದಗಿಸಿದ ಪಕ್ಷದಲ್ಲಿ ಬಹಳ ವರ್ಷಗಳವರೆಗೂ ಅನುದಾನ ಒದಗಿಸುತ್ತ ಇರಬೇಕಾಗುವುದು ಆದ್ದರಿಂದ 2021ರ ಮಾರ್ಚ್‌ 6ರಂದು ತಳೆದಿದ್ದ ನಿಲುವಿಗೇ ಬದ್ಧವಾಗಿರಬೇಕು,’ ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯ ನೀಡಿತ್ತು.

https://stack.thefile.in/2021/02/governance/6668/

 

 

ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲಾ ಪೈಪ್‌ಲೈನ್‌ ಪ್ರಕರಣಗಳನ್ನು ತೆರವುಗೊಳಿಸಿ ಈ ಯೋಜನೆಯನ್ನು ಮುಕ್ತಾಯಗೊಳಿಸಲು ನಿರ್ದೇಶಿಸಲಾಗಿತ್ತು. ಅಲ್ಲದೆ ಹೆಚ್ಚುವರಿ ಅನುದಾನವನ್ನೂ ಒದಗಿಸಲಾಗಿತ್ತು. ಹೀಗಾಗಿ ಈ ಯೋಜನೆಯನ್ನು ಪುನರ್‌ ತೆರೆಯುವ ಹಾಗೂ ಈ ಪ್ರಕರಣಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಪ್ರಮೇಯವೇ ಇಲ್ಲ ಎಂದು ಆರ್ಥಿಕ ಇಲಾಖೆಯು 2021ರ ಮಾರ್ಚ್‌ 6ರಂದು ಹಿಂಬರಹ ನೀಡಿತ್ತು.

 

 

https://stack.thefile.in/2020/06/governance/3941/

 

 

2021ರ ಸೆ.7ರ ಹೊತ್ತಿಗೆ 20,697 ರೈತರ ಅರ್ಹತೆ ಗುರುತಿಸಲು ಬಾಕಿ ಇತ್ತು. ಇದರಲ್ಲಿ ಪ್ರಮುಖವಾಗಿ 12,237 ರೈತರ ಪಡಿತರ ಚೀಟಿಗಳು ರೈತರು ದಾಖಲೆ ಸಲ್ಲಿಸುವಾಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ದತ್ತಾಂಶಕ್ಕೆ ತಾಳೆ ಇತ್ತು. ಆದರೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಸಾಲ ಮನ್ನಾ ವಿಶೇಷ ಕೋಶವು ಈ ಪಡಿತರ ಚೀಟಿಗಳನ್ನು ತಂತ್ರಾಂಶದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸರಿ ಇದೆ ಎಂದು ದೃಢೀಕರಿಸಿರಲಿಲ್ಲ.

Tags: Agircultral ProductsB S Yediyurappabjpco operationD K ShivakumarFarmers Loansh d kumarswamyInterestK N RajannaLoan DisbursementLoansprimarySiddaramaiahaSubsidyTAPCMSWare Housesಅನುದಾನಅಪೆಕ್ಸ್‌ ಬ್ಯಾಂಕ್‌ಅಲ್ಪಾವಧಿಆಯವ್ಯಯಉಗ್ರಾಣಕೃಷಿಕೃಷಿ ಪತ್ತಿನ ಸಹಕಾರ ಸಂಘಗಳುಕೆ ಎನ್‌ ರಾಜಣ್ಣಗದಗ್‌ಡಿಸಿಸಿ ಬ್ಯಾಂಕ್ದೀರ್ಘಾವಧಿನಬಾರ್ಡ್‌ನೆರವುಪ್ರಾಥಮಿಕಬಡ್ಡಿ ಮನ್ನಾಬಡ್ಡಿಮನ್ನಾಬೆಳಗಾವಿಬೊಕ್ಕಸಬ್ಯಾಡಗಿಭೂ ಅಭಿವೃದ್ಧಿ ಬ್ಯಾಂಕ್‌ಮನ್ನಾಮಾರುಕಟ್ಟೆಮುಖ್ಯಮಂತ್ರಿಯಲಬುರ್ಗಾರಾಣೆಬೆನ್ನೂರುರಾಯಚೂರುರಿಯಾಯಿತಿರೈತರ ಬಡ್ಡಿವ್ಯವಸಾಯಶೀತಲ ಗೃಹಶೂನ್ಯ ಬಡ್ಡಿ ದರಸಬ್ಸಿಡಿಸರ್ಕಾರಸಹಕಾರ ಇಲಾಖೆಸಹಕಾರ ಬ್ಯಾಂಕ್‌ಸಹಕಾರ ಸಂಘಗಳುಸಾಲ ಮನ್ನಾಸಾಲ ವಸೂಲಿಸಿದ್ದರಾಮಯ್ಯಸುಸ್ತಿದಾರರಹಣಕಾಸುಹೆಚ್‌ ಡಿ ಕುಮಾರಸ್ವಾಮಿಹೊಸ ಯೋಜನೆ
Advertisement Banner
Previous Post

7,000 ಲ್ಯಾಪ್‌ಟಾಪ್‌ ಖರೀದಿ; ಕಟ್ಟಡ ಕಾರ್ಮಿಕರ ಕಲ್ಯಾಣ  ಮಂಡಳಿಯಲ್ಲಿ 23 ಕೋಟಿ ರು. ಹಗರಣ

Next Post

ಶ್ಯಾಮ್‌ ಭಟ್‌ ನೇಮಕ; ಸಿಎಂ, ಸಚಿವರು, ಸ್ಪೀಕರ್‌, ಸಭಾಪತಿಗಳ ಒಮ್ಮತದ ತೀರ್ಮಾನ

thefilestack

thefilestack

Next Post

ಶ್ಯಾಮ್‌ ಭಟ್‌ ನೇಮಕ; ಸಿಎಂ, ಸಚಿವರು, ಸ್ಪೀಕರ್‌, ಸಭಾಪತಿಗಳ ಒಮ್ಮತದ ತೀರ್ಮಾನ

Recommended

ರದ್ದಾಗಿರುವ ಇಲಾಖೆಗೆ ಶರಣಬಸಪ್ಪ‌ ಸಚಿವ; ಮುಜುಗರಕ್ಕೆ ಸಿಲುಕಿದ ರಾಜ್ಯಪಾಲ, ಮುಖ್ಯಮಂತ್ರಿ

3 years ago

ರಾಜ್ಯ ಸ್ವಾಮ್ಯದಲ್ಲಿ ನಡೆಸುವ ಚಿಂತನೆಯಿಲ್ಲ, ಪ.ಬಂಗಾಳದ ಮಾದರಿಯೂ ಇಲ್ಲ; ಕೈಚೆಲ್ಲಿತು ಕಾಂಗ್ರೆಸ್‌ ಸರ್ಕಾರ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd