the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಸಿಎಂ ಆಪ್ತ ಶಿವಣ್ಣ ವಿರುದ್ಧದ ಪ್ರಕರಣ; ವರದಿ ಸಲ್ಲಿಸಲು ಪೊಲೀಸ್‌ ಅಧಿಕಾರಿಗಳ ಮೀನಮೇಷ

thefilestack by thefilestack
September 2, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ  ಸಮಾರಂಭದ ವೇದಿಕೆಯಲ್ಲಿ ಭಾಗವಹಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಬಿ ಎಸ್‌ ಶಿವಣ್ಣ ಎಂಬುವರ ವಿರುದ್ಧ ಕ್ರಮ ಜರುಗಿಸುವ ಸಂಬಂಧದ ವರದಿಯನ್ನು ಪೊಲೀಸ್‌ ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಲು ಮೀನಮೇಷ ಎಣಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

 

ವಿಚಾರಣೆ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿರುತ್ತದೆ ಎಂದು ಸಹಾಯಕ ಪೊಲೀಸ್‌ ಕಮಿಷನರ್‌ ಅವರು ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರಿಗೆ ಹಿಂಬರಹ ನೀಡಿದ್ದಾರಾದರೂ ಈ ವರದಿಯು ಇನ್ನೂ ಸರ್ಕಾರದ ಕೈಸೇರಿಲ್ಲ. ಇದರ ನಡುವೆಯೇ ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ವರದಿ ಸಲ್ಲಿಸಲು ಪೊಲೀಸ್‌ ಆಯುಕ್ತರಿಗೆ  2023ರ ಸೆ.1ರಂದು ಪತ್ರ ಬರೆದಿದ್ದಾರೆ.  ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಚಿವ ಎನ್‌ ಚೆಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ನಿಯೋಗದಲ್ಲಿ ಬಿ ಎಸ್‌ ಶಿವಣ್ಣ ಅವರು ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಒಳಾಡಳಿತ ಇಲಾಖೆಯು ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

 

ಪೊಲೀಸ್‌ ಆಯುಕ್ತರಿಗೆ ಬರೆದಿರುವ ಪತ್ರದಲ್ಲೇನಿದೆ?

 

ಕಾನೂನು ಉಲ್ಲಂಘನೆ ಮಾಡಿ ಭದ್ರತಾ ಲೋಪವೆಸಗಿ ಕಾಣಿಸಿಕೊಂಡಿದ್ದು ಇವರ ವಿರುದ್ಧ ಕಾನೂನು ಕ್ರಮಜರುಗಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌  ಅವರು  ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಕೋರಿದ್ದರು. ಈ ಸಂಬಂಧ ವರದಿ ಸಲ್ಲಿಸಲು 2023ರ ಜೂನ್‌ 7ರಂದು ಪತ್ರ ಬರೆಯಲಾಗಿತ್ತು. ಆದರೆ ತಮ್ಮಿಂದ ವರದಿಯು ಸ್ವೀಕೃತವಾಗಿರುವುದಿಲ್ಲ. ಕೋರಿರುವ ವರದಿಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಪತ್ರದಲ್ಲಿ ನಿರ್ದೇಶಿಸಿರುವುದು ಗೊತ್ತಾಗಿದೆ.

 

 

ಈ ಪ್ರಕರಣ ಸಂಬಂಧ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರು ಸಲ್ಲಿಸಿದ್ದ  ದೂರಿಗೆ ಸಹಾಯಕ ಪೊಲೀಸ್‌ ಕಮಿಷನರ್ ನಾರಾಯಣಸ್ವಾಮಿ ಅವರು 2023ರ ಜುಲೈ 10ರಂದು ಹಿಂಬರಹ ನೀಡಿದ್ದರು. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಿಂಬರಹದಲ್ಲೇನಿದೆ?

 

ಮುಖ್ಯಮಂತ್ರಿಗಳ ಪದಗ್ರಹಣ ವೇದಿಕೆಯ ಸಮಾರಂಭದಲ್ಲಿ ಬಿ ಎಸ್‌ ಶಿವಣ್ಣ ಎಂಬ ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿ ಕಾನೂನುಬಾಹಿರವಾಗಿ ಮತ್ತು ಪೊಲೀಸ್‌ ಅಧಿಕಾರಿಗಳ ಭದ್ರತೆಗಳ ಪಡೆಯನ್ನು ಮರೆ ಮಾಚಿ ಹಾಗೂ ಕಾನೂನು ಶಿಷ್ಟಾಚಾರ ಉಲ್ಲಂಘನೆ ಮಾಡಿರುತ್ತಾರೆ ಎಂದು  ರಾಜ್ಯಪಾಲರಿಗೆ ದೂರು ಅರ್ಜಿ ಸಲ್ಲಿಸಿದ್ದರು. ಈ ದೂರು ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಬಿ ಎಸ್‌ ಶಿವಣ್ಣ ಅವರನ್ನು ವಿಚಾರಣೆ ಮಾಡಲಾಗಿರುತ್ತದೆ. ನೀವು ಆರೋಪಿಸಿರುವ ಆರೋಪಗಳನ್ನು ಅಲ್ಲಗಳೆದಿರುತ್ತಾರೆ. ಹಾಗೂ ವಿಚಾರಣೆ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿರುತ್ತದೆ ಎಂದು ಹಿಂಬರಹದಲ್ಲಿ ತಿಳಿಸಿರುವುದು ಗೊತ್ತಾಗಿದೆ.

 

ಕ್ರಿಮಿನಲ್‌ ಆರೋಪ ಎದುರಿಸುತ್ತಿರುವ ವ್ಯಕ್ತಿ ಮುಖ್ಯಮಂತ್ರಿಗಳ ಪದಗ್ರಹಣ ಪ್ರಮಾಣ ವಚನ ಸ್ವೀಕಾರ ಸಮಾರಂಭದ ರಾಜ್ಯಪಾಲರು ಪ್ರಮಾಣ ವಚನ ಬೋಧಿಸುವ ವೇದಿಕೆಯಲ್ಲಿ ಗಣ್ಯಾತಿಗಣ್ಯರು ಆಸೀನರಾಗಿದ್ದು ಭದ್ರತೆ , ಶಿಷ್ಟಾಚಾರವನ್ನು ಹಾಗೂ ಕಾನೂನನ್ನು ಉಲ್ಲಂಘಿಸಿ ವೇದಿಕೆ ಮೇಲೆ ಕಾಣಿಸಿಕೊಂಡಿರುವ ಆರೋಪ ಕುರಿತು ನಿಯಮಾನುಸಾರ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ನಿಯಮ 72ರ ಅಡಿಯಲ್ಲಿ ವಿಧಾನ ಪರಿಷತ್‌ ಅಧಿವೇಶನದಲ್ಲಿ ಎಚ್‌ ವಿಶ್ವನಾಥ್‌ ಅವರು ಗಮನ ಸೆಳೆದಿದ್ದರು.

 

ಇದಕ್ಕೆ ಉತ್ತರಿಸಿದ್ದ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು, ಪೊಲೀಸ್‌ ಆಯುಕ್ತರು ಈ ದೂರನ್ನು ವಿವಿಐಪಿ ಭದ್ರತೆ ಅವರಿಗೆ ವಹಿಸಿ ಕೂಲಂಕಷವಾಗಿ ವಿಚಾರಣೆ ಕೈಗೊಂಡು ಮುಂದಿನ ಕ್ರಮದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ವಿವಿಐಪಿ ಭದ್ರತೆ ವಿಭಾಗದಿಂದ ವರದಿ ಬಾಕಿ ಇದ್ದು ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಉತ್ತರ ನೀಡಿದ್ದನ್ನು ಸ್ಮರಿಸಬಹುದು.

 

ಬಿ ಎಸ್‌ ಶಿವಣ್ಣ ಅವರು ಅಲೆಯನ್ಸ್‌ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪಡೆದಿದ್ದು ಕೂಡ ವಿವಾದಕ್ಕೀಡಾಗಿತ್ತು. ಅಲ್ಲದೆ ಸಂಬಂಧ ಉನ್ನತ ಶಿಕ್ಷಣ ಇಲಾಖೆಗೆ ಜಯಲಿಂಗನಗೌಡ ಎಂಬುವರು ದೂರು ಸಲ್ಲಿಸಿದ್ದರು.

 

https://stack.thefile.in/2020/12/governance/6213/

 

ಲೋಹಿಯಾ ವಿಚಾರ ವೇದಿಕೆಯನ್ನು ಮುನ್ನೆಡೆಸುತ್ತಿರುವ ಬಿ ಎಸ್‌ ಶಿವಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವುದನ್ನು ಸ್ಮರಿಸಬಹುದು.

Tags: Allaince UniversityB DayanandcouncilD K ShivakumarDoctrateGovernerh d kumarswamyH VishwanathKantirava StaduimOath CeremoneyPolice CommissionerSiddaramaiahaಅಡಗೂರುಒಳಾಡಳಿತ ಇಲಾಖೆಕಾನೂನು ಉಲ್ಲಂಘನೆಗೌರವ ಡಾಕ್ಟರೇಟ್‌ಡಾ ಬಿ ಎಸ್‌ ಶಿವಣ್ಣಡಿ ಕೆ ಶಿವಕುಮಾರ್ಥಾವರ್‍‌ ಚಂದ್‌ ಗೆಹ್ಲೋಟ್‌ಪೊಲೀಸ್‌ ಆಯುಕ್ತರುಬಿ ಎಸ್‌ ಶಿವಣ್ಣಬೆಂಗಳೂರು ನಗರಭದ್ರತಾ ಲೋಪಮುಖ್ಯಮಂತ್ರಿರಾಜ್ಯಪಾಲರುವಿಧಾನ ಪರಿಷತ್‌ಸಿಎಂ ಆಪ್ತಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಖಾಸಗಿ ಸಂಸ್ಥೆಗೆ ಕನಿಷ್ಟ ದರದಲ್ಲಿ 5 ಎಕರೆ ಮಂಜೂರು; ಬೊಕ್ಕಸಕ್ಕೆ ಅಂದಾಜು 9.80 ಕೋಟಿ ರು.ನಷ್ಟ!

Next Post

ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ

thefilestack

thefilestack

Next Post

ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ

Recommended

ದಲಿತ ಅಧಿಕಾರಿ ಮೇಲೆ ಜಾತಿ ದೌರ್ಜನ್ಯ, ಕಿರುಕುಳ; ಅಜಯ್‌ ನಾಗಭೂಷಣ್‌ ವಿರುದ್ಧ ಆರೋಪ ರುಜುವಾತು

3 years ago

ರಾಜಕೀಯ ಹಸ್ತಕ್ಷೇಪ, ಲಂಚ; ಸಚಿವಾಲಯ, ಇಲಾಖೆಗಳಲ್ಲಿ ವಿಲೇವಾರಿಯಾಗಿಲ್ಲ 1.48 ಲಕ್ಷ ಕಡತಗಳು

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd