the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ

thefilestack by thefilestack
February 10, 2024
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧದ ವಿಚಾರಣೆ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶಿಸಿರುವುದು ಇದೀಗ ಬಹಿರಂಗವಾಗಿದೆ.

 

ಸತೀಶ್‌ ಕುಮಾರ್‍‌ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಮೊದಲು ಪತ್ರ ಬರೆದಿದ್ದ ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ ಅವರು ಆ ನಂತರ ನಡೆದ ಬೆಳವಣಿಗೆಯಲ್ಲಿ ವಿಚಾರಣೆ ಕೈಬಿಡಬೇಕು ಎಂದು ಬರೆದಿದ್ದ ಪತ್ರ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ದೇಶನ ನೀಡಿದ್ದಾರೆ.

 

ವಿಶ್ವನಾಥ್‌ ಅವರ ನಡೆಯು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದ್ದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಅವರು ಹೊರಡಿಸಿರುವ  ಟಿಪ್ಪಣಿಯೂ ಮುನ್ನಲೆಗೆ ಬಂದಿದೆ.

 

ಡಾ ವೆಂಕಟೇಶಯ್ಯ ಅವರು 2024ರ ಜನವರಿ 10ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೀಶ್‌ಕುಮಾರ್‍‌ ಸಿಂಗ್‌ ಅವರಿಗೆ ಟಿಪ್ಪಣಿ ಕಳಿಸಿದ್ದಾರೆ. ಈ ಟಿಪ್ಪಣಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಟಿಪ್ಪಣಿಯಲ್ಲೇನಿದೆ?

 

ಕನ್ನಡ ಪುಸ್ತಕೋದ್ಯಮಕ್ಕೆ ಚೈತನ್ಯ ತುಂಬುವ ಕುರಿತು ಈ ಹಿಂದೆ ಪತ್ರ ಬರೆಯಲಾಗಿತ್ತು. ಈ ಪತ್ರದಲ್ಲಿ ಡಾ ಸತೀಶ್‌ಕುಮಾರ್‍‌ ಹೊಸಮನಿ ಅವರ ಕುರಿತು ತನಿಖೆ ಕೈಗೊಳ್ಳುವಂತೆ ಹೇಳಲಾಗಿತ್ತು. ಆದರೆ ನೈಜ ಪರಿಸ್ಥಿತಿ ಪರಿಶೀಲಿಸಿದಾಗ ಈಗಾಗಲೇ ಮಹಾಲೇಖಪಾಲರು ಮತ್ತು ಸ್ಥಳೀಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಪ್ರತಿ ವರ್ಷ ತಪಾಸಣೆ ಕೈಗೊಳ್ಳಲಾಗುತ್ತಿದ್ದು ಯಾವುದೇ ದೋಷಾರೋಪಣೆಗಳು ಇರುವುದಿಲ್ಲ ಎಂದುತ ತಿಳಿದು ಬಂದಿರುತ್ತದೆ.

 

ಸರ್ಕಾರದ ಮಾರ್ಗದರ್ಶನದಂತೆ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪುಸ್ತಕ ಖರೀದಿ ಪ್ರಕ್ರಿಯೆಗಳನ್ನು ನಿರ್ವಹಿಸಲಾಗಿದ್ದು ಲೆಕ್ಕ ತನಿಖಾ ವರದಿಗಳಲ್ಲಿ ಯಾವುದೇ ಆಕ್ಷೇಪಣೆಗಳು ವ್ಯಕ್ತವಾಗಿರುವುದಿಲ್ಲ. ಆದ್ದರಿಂದ ಈ ವಾಸ್ತವಾಂಶಗಳನ್ನು ಗಮನದಲ್ಲಿರಿಸಿಕೊಂಡು ನಿರ್ದೇಶಕರ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ಕೈಬಿಡುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌ ವಿಶ್ವನಾಥ್‌ ಅವರು  ಕೋರಿರುತ್ತಾರೆ.

 

‘ಇವರ ಕೋರಿಕೆ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರಿಂದ ನಿರ್ದೇಶಿಸಲ್ಪಟ್ಟಿದ್ದೇನೆ,’ ಎಂದು ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿಯಲ್ಲಿ ಸೂಚಿಸಿರುವುದು ಗೊತ್ತಾಗಿದೆ.

 

ವಿಶೇಷವೆಂದರೇ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್‌ ವಿಶ್ವನಾಥ್‌ ಪತ್ರ ಬರೆದಿದ್ದರು. ಆದರೀಗ ತನಿಖೆಯನ್ನೇ ಕೈಬಿಡಬೇಕು ಮತ್ತು ಅದೇ ಹುದ್ದೆಯಲ್ಲಿಯೇ ಮುಂದುವರೆಸಲು ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಗೆ 2024ರ ಜನವರಿ 10ರಂದು ‌ ಪತ್ರ ಬರೆದಿದ್ದರು. ವಿಶ್ವನಾಥ್‌ ಅವರ ಈ ನಡೆಯು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿತ್ತು.

https://stack.thefile.in/2024/01/governance/21778/

 

ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಹಣ ದುರುಪಯೋಗ, ಡಿಜಿಟಲ್‌ ಗ್ರಂಥಾಲಯ ವಿದ್ಯುನ್ಮಾನ ಉಪಕರಣಗಳ ಖರೀದಿಯಲ್ಲಿ ಅಕ್ರಮ ಸೇರಿದಂತೆ ಇನ್ನಿತರೆ ಗುರುತರವಾದ ಆಪಾದನೆಗಳಿಗೆ ಸತೀಶ್‌ ಕುಮಾರ್‍‌ ಹೊಸಮನಿ ಅವರು ಗುರಿಯಾಗಿದ್ದಾರೆ. ಈ ಎಲ್ಲಾ ಆಪಾದನೆಗಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಕಾವೇರಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

 

ಸತೀಶ್‌ಕುಮಾರ್‍‌ ಹೊಸಮನಿ ಅವರ ವಿರುದ್ಧ ಆಪಾದನೆಗಳ ಪಟ್ಟಿ ಸಮೇತ ವಿಶ್ವನಾಥ್‌ ಅವರು 2023ರ ನವೆಂಬರ್‍‌ನಲ್ಲಿ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಪತ್ರಗಳನ್ನು (728/ಅಎಚ್‌ವಿ/ಕವಿಪಸ/2022-23 ದಿನಾಂಕ 03/11/2023) ಬರೆದಿದ್ದರು. ಈ ಪತ್ರವನ್ನಾಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ನಿರ್ದೇಶನ ನೀಡಿದ್ದರು.

 

ಸಿದ್ದರಾಮಯ್ಯರ ಮೊದಲ  ಟಿಪ್ಪಣಿಯಲ್ಲೇನಿತ್ತು?

 

ಗ್ರಂಥಾಲಯ ಇಲಾಖೆಗೆ ಸೆಸ್‌ ರೂಪದಲ್ಲಿ ಹಣ ಸಂಗ್ರಹವಾಗುತ್ತಿದ್ದು ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ಪುಸ್ತಕಗಳನ್ನು ಖರೀದಿಸಿರುವುದಿಲ್ಲ. ಈ ಸಂಬಂಧ ಯಾವುದೇ ಕ್ರಮವಹಿಸದೇ ಕೋಟ್ಯಂತರ ರುಪಾಯಿ ಹಣವನ್ನು ಡಿಜಿಟಲ್‌ ಗ್ರಂಥಾಲಯದ ಹೆಸರಿನಲ್ಲಿ ಪೋಲು ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಅಧಿಕಾರಿ ವಿರುದ್ಧ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಸಮಿತಿ ರಚಿಸಿ ಎಲ್ಲಾ ಚಟುವಟಿಕೆಗಳನ್ನು ಕೂಲಂಕಷವಾಗಿ ತನಿಖೆಗೊಳಪಡಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಕೋರಿದ್ದಾರೆ.

 

ಗ್ರಂಥಾಲಯಗಳಿಗೆ ಬಾಕಿ ಇರುವ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಲು ಹಾಗೂ ಇನ್ನು ಮುಂದೆ ಕನ್ನಡ ಪುಸ್ತಕಗಳ ಬೆಲೆಗಳನ್ನು ಮುದ್ರಣ ಕಾಗದ ಬೆಲೆಗನುಗುಣವಾಗಿ ಕಾಲಕಾಲಕ್ಕೆ ಪರಿಷ್ಕರಿಸಬೇಕು.  ಪ್ರಕಟವಾದ ವರ್ಷವೇ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಅಗತ್ಯ ಕ್ರಮ ವಹಿಸಬೇಕು.

 

ಹಾಗೂ ಒಂದು ಉನ್ನತ ಮಟ್ಟದ ಸಮಿತಿ ರಚಿಸಿ ಗ್ರಂಥಾಲಯ ಇಲಾಖೆಯ ನಿರ್ದೇಶಕರ ಕರ್ತವ್ಯಲೋಪ, ಹಣ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ವಿವರವಾದ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು.

 

 

ಸಿದ್ದರಾಮಯ್ಯ ಅವರ ಟಿಪ್ಪಣಿಯಲ್ಲಿನ ನಿರ್ದೇಶನದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೀಶ್‌ಕುಮಾರ್‍‌ ಸಿಂಗ್‌ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ ಬಿ ಕಾವೇರಿ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು.

 

ಗ್ರಂಥಾಲಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ನಿರ್ದೇಶಕ  ಸತೀಶ್‌ ಕುಮಾರ್‍‌ ಹೊಸಮನಿ ಅವರು  ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ಸಲ್ಲಿಕೆಯಾಗಿತ್ತು.

 

https://stack.thefile.in/2023/11/governance/19918/

 

ಇದರ ಬೆನ್ನಲ್ಲೇ ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‍‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆದಿತ್ತು.

 

https://stack.thefile.in/2023/11/governance/19974/

 

ವಿಶೇಷವೆಂದರೆ ಈ ಹಗರಣದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎನ್ನಲಾಗಿದ್ದ ಬಹುತೇಕ ಅಧಿಕಾರಿಗಳು ನಿವೃತ್ತಿಯಾಗಿದ್ದರು.

 

https://stack.thefile.in/2023/11/governance/20028/

 

ಕಂಪ್ಯೂಟರ್‍‌ ಮತ್ತಿತರೆ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಕುರಿತು ಕೆಲ ಅಧಿಕಾರಿಗಳಿಗೆ ಆರೋಪ ಪಟ್ಟಿಯೂ ಜಾರಿಯಾಗಿತ್ತು.

 

https://stack.thefile.in/2024/01/governance/21493/

ಹಿಂದಿನ ಬಿಜೆಪಿ ಸರ್ಕಾರದಲ್ಲಿಯೂ ಡಿಸಿಎಂಗಳ ಹೆಸರಿನಲ್ಲಿ 5 ಕೋಟಿ ಸಂಗ್ರಹಿಸಲು ಕೆಳ ಹಂತದ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

 

https://stack.thefile.in/2021/02/governance/6525/

 

'ಹಲವು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಹೊಸಮನಿ ಅವರ ವಿರುದ್ಧ ತನಿಖೆ ನಡೆಯುತ್ತಿದೆಯಾದರೂ ನಿರ್ದೇಶಕರ ಹುದ್ದೆಯಲ್ಲಿಯೇ ಸರ್ಕಾರವು ಮುಂದುವರೆಸಿರುವುದು ಸರಿಯಲ್ಲ. ಆರೋಪಿತ ವ್ಯಕ್ತಿಯು ಅದೇ ಹುದ್ದೆಯಲ್ಲಿ ಮುಂದುವರೆದರೆ ದಾಖಲೆ, ಸಾಕ್ಷ್ಯ ನಾಶವಾಗಲಿದೆ. ಕನಿಷ್ಠ ವಿಚಾರಣೆ ಪೂರ್ಣಗೊಳ್ಳುವವರೆಗಾದರೂ ನಿರ್ದೇಶಕರನ್ನು ರಜೆ ಮೇಲೆ ತೆರಳಲು ನಿರ್ದೇಶಿಸಬೇಕಿತ್ತು, 'ಎನ್ನುತ್ತಾರೆ ಗ್ರಂಥಾಲಯ ಇಲಾಖೆಯ ಅಧಿಕಾರಿಯೊಬ್ಬರು.

Tags: bjpchief ministerD K ShivakumarDR C N Ashwath Narayaneducationh d kumarswamyH VishwanathinvestigationLibraryMadhu BangarappaNotePublicSatish Kumar HosamaniSchoolSiddaramaiahaಅಡಗೂರುಆಪ್ತ ಕಾರ್ಯದರ್ಶಿಆರ್‌ ಅಶೋಕ್‌ಎಚ್‌ ವಿಶ್ವನಾಥ್‌ಕುಮಾರಕೇಂದ್ರಗ್ರಂಥಾಲಯಗ್ರಂಥಾಲಯ ಕರತನಿಖಾ ವರದಿತನಿಖೆನಿರ್ದೇಶಕಬಿಜೆಪಿಮಧು ಬಂಗಾರಪ್ಪಲೆಕ್ಕಲೆಕ್ಕ ಪರಿಶೋಧನೆಲೈಂಗಿಕ ದೌರ್ಜನ್ಯವಿಚಾರಣೆಸತೀಶ್‌ಸಾಕ್ಷರತೆಸಾರ್ವಜನಿಕಸಿಎಂಸಿಎಜಿಹಳ್ಳಿ ಹಕ್ಕಿಹಾಡುಹೊಸಮನಿ
Advertisement Banner
Previous Post

‘ದೊಡ್ಡ ಪ್ರಮಾಣದಲ್ಲಿ 2023-2028ರವರೆಗೆ ಆಯ್ಕೆಯಾಗಿ ಬಂದಿದ್ದೇವೆ, ನಮ್ಮ ಪರಿಸ್ಥಿತಿ ಏನು?’

Next Post

ಅಲ್ಪಸಂಖ್ಯಾತರ ಸ್ಲಮ್‌, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆ; ಪ್ರಗತಿಯಿಲ್ಲ, ಶೂನ್ಯ ಸಂಪಾದನೆಯೇ ಎಲ್ಲ

thefilestack

thefilestack

Next Post

ಅಲ್ಪಸಂಖ್ಯಾತರ ಸ್ಲಮ್‌, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆ; ಪ್ರಗತಿಯಿಲ್ಲ, ಶೂನ್ಯ ಸಂಪಾದನೆಯೇ ಎಲ್ಲ

Recommended

ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್‌ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ

2 years ago

ಕಾಕಂಬಿ ಹಗರಣ; ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಅಧಿಕಾರ ಹಿಡಿದು ತಿಂಗಳಾದರೂ ಉಸಿರೆತ್ತದ ಕಾಂಗ್ರೆಸ್‌

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd