the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

5 ಲಕ್ಷ ಸುಲಿಗೆ ಆರೋಪ; ಸಿಪಿಐ, ಎಎಸ್‌ಐ ವಿರುದ್ಧ ಶಿಸ್ತುಕ್ರಮ, ಐಪಿಎಸ್‌ಗೆ ಕ್ಲೀನ್‌ಚಿಟ್‌

thefilestack by thefilestack
January 26, 2022
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ ಲಕ್ಷಾಂತರ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಅಧಿಕಾರಿಗಳ ಪೈಕಿ ಐಪಿಎಸ್‌ ಅಧಿಕಾರಿಯೊಬ್ಬರಿಗೆ ಕ್ಲೀನ್‌ ಚಿಟ್‌ ನೀಡಿರುವ ಪೊಲೀಸ್‌ ಇಲಾಖೆಯು ಇದೇ ಪ್ರಕರಣದಲ್ಲಿ ಸಿಪಿಐ ಮತ್ತು ಎಎಸ್‌ಐಗಳಿಬ್ಬರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದೆ.

ಕ್ರಷರ್‌ ಉದ್ಯಮಿಯೊಬ್ಬರು ನೀಡಿದ್ದ ದೂರನ್ನಾಧರಿಸಿ ಕ್ರಮಕೈಗೊಳ್ಳಬೇಕಿದ್ದ ಪೊಲೀಸ್‌ ಅಧಿಕಾರಿಗಳು ಆರೋಪಿಗಳೊಂದಿಗೆ ಶಾಮೀಲಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬೆಂಗಳೂರು ಕೇಂದ್ರ ವಲಯದ ಐಜಿಪಿ ಎಂ ಚಂದ್ರಶೇಖರ್‌ ಅವರು ವಿಚಾರಣೆ ನಡೆಸಿ ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಸಲ್ಲಿಸಿದ್ದಾರೆ. ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಪ್ರಕಟಿಸದಂತೆ ಐಪಿಎಸ್‌ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಡೆಯಾಜ್ಞೆ ತಂದಿರುವುದರಿಂದ ಅವರ ********** ಹೆಸರನ್ನು ಮತ್ತು ದೂರುದಾರರ ಹೆಸರನ್ನು ಇಲ್ಲಿ ಉಲ್ಲೇಖಿಸಿಲ್ಲ. ಹಾಗೆಯೇ ಐಜಿಪಿ ಚಂದ್ರಶೇಖರ್‌ ಅವರು ವರದಿ ಜತೆ ಸಲ್ಲಿಸಿರುವ ಪತ್ರದಲ್ಲಿ ಐಪಿಎಸ್‌ ಅಧಿಕಾರಿ ********** ಹೆಸರು ಇರುವ ಕಾರಣ ಪತ್ರವನ್ನೂ ಇಲ್ಲಿ ಪ್ರಕಟಿಸುತ್ತಿಲ್ಲ.

 

5 ಲಕ್ಷ ಪಡೆದಿದ್ದು ಸಾಬೀತು!

 

ಅಂದಾಜು 5 ಕೋಟಿ ರು. ವಂಚನೆ ಮಾಡಲಾಗಿದೆ ಎಂದು ಕ್ರಷರ್‌ ಉದ್ಯಮಿಯೊಬ್ಬರು ಸಲ್ಲಿಸಿದ್ದ ದೂರಿನ ಮೇರೆಗೆ ವಿಚಾರಣೆ ಕೈಗೊಂಡು ಆರೋಪಿಯನ್ನು ಬಂಧಿಸಬೇಕಿದ್ದ ಪೊಲೀಸ್‌ ಅಧಿಕಾರಿಗಳು 5 ಲಕ್ಷ ರು.ಗಳನ್ನು ದೂರುದಾರರಿಂದಲೇ ವಸೂಲು ಮಾಡಿದ್ದರು ಎಂಬುದು ವಿಚಾರಣೆ ವೇಳೆಯಲ್ಲಿ ದೃಢಪಟ್ಟಿರುವುದು ಐಜಿಪಿ ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

 

ಬೆಂಗಳೂರು ಜಿಲ್ಲೆಯ ಡಿಸಿಐಬಿಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಟಿ ಶ್ರೀನಿವಾಸ್‌ (ಹಾಲಿ ವಿಜಯಪುರ ಸಿಪಿಐ) ಅವರು ಎಎಸ್‌ಐ ಎನ್ ಶುಭ ಮತ್ತು ಕೆ ಜಿ ಅನಿತಾ ಅವರ ಮುಖೇನ 5,00,000 ರು.ಗಳನ್ನು ಪಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಐಜಿಪಿ ಚಂದ್ರಶೇಖರ್‌ ಅವರು ಪೊಲೀಸ್‌ ಮಹಾನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

 

ವಿಚಾರಣೆ ವೇಳೆಯಲ್ಲಿ ಐಜಿಪಿ ಚಂದ್ರಶೇಖರ್‌ ಅವರು ಐಪಿಎಸ್‌ ಅಧಿಕಾರಿ ********** ಅವರ ಹೇಳಿಕೆಯ ಪಡೆದಿದ್ದಾರೆ. ‘ತಾವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರತಿನಿತ್ಯ ಹಲವಾರು ಜನ ಅರ್ಜಿದಾರರು ತಮ್ಮ ದೂರುಗಳನ್ನು ಸಲ್ಲಿಸಲು ಕಚೇರಿಗೆ ಬರುತ್ತಿದ್ದು ಅದರಂತೆ ಅರ್ಜಿದಾರರು ದೂರನ್ನು ಕೊಟ್ಟಾಗ ಅದನ್ನು ಸೂಕ್ತ ಕ್ರಮಕ್ಕಾಗಿ ಅತ್ತಿಬೆಲೆ ಪೊಲೀಸ್‌ ಠಾಣೆಗೆ ತದನಂತರ ಸಿಇಎನ್‌ ಪೊಲೀಸ್‌ ಠಾಣೆಗೆ ರವಾನಿಸಲಾಗಿತ್ತು. ಉಳಿದಂತೆ ಯಾವುದೇ ವಿಚಾರಗಳು ತನಗೆ ಸಂಬಂಧಿಸಿರುವುದಿಲ್ಲ,’ ಎಂದು ಐಪಿಎಸ್‌ ಅಧಿಕಾರಿ ********** ಎಂದು ತಿಳಿಸಿರುವುದನ್ನು ಐಜಿಪಿ ಪ್ರಸ್ತಾಪಿಸಿರುವುದು ಪತ್ರದಿಂದ ಗೊತ್ತಾಗಿದೆ.

 

‘ಇವರ ಹೇಳಿಕೆಯನ್ನು ಪರಿಶೀಲಿಸಿದ್ದು ಮತ್ತು ವರದಿಯಲ್ಲಿನ ಅಂಶಗಳಿಂದ ಈ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ********** ಪಾತ್ರವು ಕಂಡುಬರುವುದಿಲ್ಲ,’ ಎಂದು ಐಜಿಪಿ ಚಂದ್ರಶೇಖರ್‌ ಅವರು ಉಲ್ಲೇಖಿಸಿದ್ದಾರೆ.

 

‘ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳಾದ ಟಿ ಶ್ರೀನಿವಾಸ್‌, ಎಎಸ್‌ಐ ಎನ್‌ ಶುಭ, ಮತ್ತು ಕೆ ಜಿ ಅನಿತಾ ಇವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಜರುಗಿಸಲು ಕೋರಲಾಗಿದೆ,’ ಬೆಂಗಳೂರು ಕೇಂದ್ರ ವಲಯದ ಪೊಲೀಸ್‌ ಮಹಾನಿರೀಕ್ಷಕ ಎಂ ಚಂದ್ರಶೇಖರ್‌ ಅವರು ಪತ್ರದಲ್ಲಿ ಡಿಜಿಐಜಿಪಿಯನ್ನು ಕೋರಿದ್ದಾರೆ.

 

ಪ್ರಕರಣದ ಹಿನ್ನೆಲೆ

 

ಹಲವರಿಂದ 3.96 ಕೋಟಿ ವಂಚನೆಯಾಗಿದೆ ಎಂದು ಕ್ರಷರ್‌ ಉದ್ಯಮಿಯೊಬ್ಬರು 2021ರ ಸೆಪ್ಟಂಬರ್‌ 28ರಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರಿಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅದೇ ದೂರಿನ ಮೇಲೆ ಸೂಚಿಸಿದ್ದರು.

 

ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸಲು ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ದೂರಲಾಗಿತ್ತು. ಇವರಿಗೆ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಅವರೊಂದಿಗೆ ನಡೆಸಿದ್ದ ಸಂಭಾಷಣೆಯ ಧ್ವನಿಮುದ್ರಿಕೆಯೂ ತಮ್ಮ ಬಳಿ ಇದೆ ಎಂದು ದೂರುದಾರರು ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದಿದ್ದರು.

 

‘ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನೂ ಮುಂದಿರಿಸುತ್ತೇನೆ. ಪ್ರಕರಣವನ್ನು ವಿಶೇಷ ತನಿಖಾ ತಂಡ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು,’ ಎಂದು ದೂರಿನಲ್ಲಿ ಕೋರಿದ್ದರು.

 

ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್‌ ಅಧಿಕಾರಿಗಳು ಬೇಡಿಕೆ ಇರಿಸಿದ್ದ ಹಣವನ್ನು ನೀಡಿದ್ದೇನೆ. ಆಭರಣಗಳ ಮಾರಾಟದಿಂದ ಬಂದ ಹಣವನ್ನು ನೀಡಿದ್ದರೂ ಪೊಲೀಸ್‌ ಅಧಿಕಾರಿಗಳು ಆರೋಪಿಗಳಿಗೆ ಸಹಕರಿಸಿದ್ದಾರೆ. ಐಪಿಎಸ್‌ ಅಧಿಕಾರಿ ********** ಗೆ 25.00 ಲಕ್ಷ, ಡಿವೈಎಸ್ಪಿಗೆ 15 ಲಕ್ಷ ಮತ್ತು ಡಿವೈಎಸ್ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರು.ಗಳನ್ನು ನೀಡಲಾಗಿದೆ ಎಂದು ಆರೋಪಿಗಳ ಪೈಕಿ ಒಬ್ಬಾತ ಬಾಯ್ಬಿಟ್ಟಿದ್ದಾನೆ,’ಎಂದು ಅರ್ಜಿದಾರರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿದ್ದರು.

 

ವಂಚನೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನವೇ ಐಪಿಎಸ್‌ ಅಧಿಕಾರಿ ********** ಹೆಸರಿನಲ್ಲಿ 5.00 ಲಕ್ಷ ರು.ಗಳಿಗೆ ಬೇಡಿಕೆ ಇರಿಸಲಾಗಿತ್ತು. ಈ ಪೈಕಿ 4 ಲಕ್ಷ ರು.ಗಳನ್ನು ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌ ಎಂಬುವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬುವರಿಗೆ ತಲುಪಿಸಲಾಗಿತ್ತು. ಹಣ ತಲುಪಿರುವ ಬಗ್ಗೆ ಶುಭಾ ಎಂಬುವರು ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌ ಅವರಿಗೆ ಮೊಬೈಲ್‌ ಫೋನ್‌ ಮೂಲಕ ಖಚಿತಪಡಿಸಿದ್ದರು. ಬೇಡಿಕೆ ಇರಿಸಿದ್ದ ಒಟ್ಟು 5 ಲಕ್ಷ ರು. ಪೈಕಿ ಇನ್ನೂ ಒಂದು ಲಕ್ಷ ರು. ಬಾಕಿ ಹಣವನ್ನು ಐಪಿಎಸ್‌ ಅಧಿಕಾರಿ ********** ಕೇಳಿದ್ದರು ಎಂದು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

Tags: Araga JnanendraBengaluru Central RangeBengaluru Rural DistrictBribecbiChandraShekharChief SecretaryCIDD K ShivakumarDGIGPExtortionExtrotionh d kumarswamyhome departmentHome MinisterIGPIndustrialistJalli CrusherPraveen SoodSiddaramaiahಆರಗ ಜ್ಞಾನೇಂದ್ರಉದ್ಯಮಿಎಚ್‌ ಡಿ ಕುಮಾರಸ್ವಾಮಿಎಫ್‌ಐಆರ್‌ಐಜಿಪಿಒಳಾಡಳಿತ ಇಲಾಖೆಕೈಗಾರಿಕೋದ್ಯಮಿಗೃಹ ಇಲಾಖೆಚಂದ್ರಶೇಖರ್‌ಜಲ್ಲಿ ಕ್ರಷರ್‌ಡಾ ರಜನೀಶ್‌ ಗೋಯಲ್‌ಡಿ ಕೆ ಶಿವಕುಮಾರ್ಡಿಜಿಐಜಿಪಿಪಿ ರವಿಕುಮಾರ್‌ಪ್ರವೀಣ್‌ ಸೂದ್‌ಬೆಂಗಳೂರು ಕೇಂದ್ರ ವಲಯಬೆಂಗಳೂರು ಗ್ರಾಮಾಂತರ ಜಿಲ್ಲೆಮುಖ್ಯ ಕಾರ್ಯದರ್ಶಿಲಂಚಸಿಐಡಿಸಿದ್ದರಾಮಯ್ಯಸಿಬಿಐಸುಲಿಗೆ
Advertisement Banner
Previous Post

ಸಮವಸ್ತ್ರ ಕಡ್ಡಾಯವಿಲ್ಲದಿದ್ದರೂ ವಸ್ತ್ರಸಂಹಿತೆ ನಿಗದಿ; ಹಿಜಾಬ್‌ ಪ್ರಕರಣದಲ್ಲಿ ನಿರ್ದೇಶಕರ ಸೂಚನೆ ಉಲ್ಲಂಘನೆ

Next Post

ಆನಂದ್‌ ತೇಲ್ತುಂಬೆ ಪರ ಸಹಿ ಸಂಗ್ರಹ; ಸಂಘಟನೆಗಳ ಚಟುವಟಿಕೆ ಕುರಿತು ರಾಜ್ಯ ಗುಪ್ತಚರ ಇಲಾಖೆ ವರದಿ

thefilestack

thefilestack

Next Post

ಆನಂದ್‌ ತೇಲ್ತುಂಬೆ ಪರ ಸಹಿ ಸಂಗ್ರಹ; ಸಂಘಟನೆಗಳ ಚಟುವಟಿಕೆ ಕುರಿತು ರಾಜ್ಯ ಗುಪ್ತಚರ ಇಲಾಖೆ ವರದಿ

Recommended

ಅಕ್ರಮ ಗಣಿಗಾರಿಕೆ; 1,552.94 ಕೋಟಿ ನಷ್ಟ, 12.11 ಕೋಟಿ ಮೌಲ್ಯದ ಆಸ್ತಿಯಷ್ಟೇ ಮುಟ್ಟುಗೋಲು

7 months ago

ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd