the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಶೇಕಡ 40ರ ಲಂಚದ ಆರೋಪ; ರೇವಣ್ಣರ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳಿಗೆ ವಾರದ ಗಡುವು

thefilestack by thefilestack
February 8, 2022
in GOVERNANCE
0

photo credit; times now

0
SHARES
0
VIEWS
Share on FacebookShare on Twitter

ಬೆಂಗಳೂರು; ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಸಂಬಂಧ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಜೆಡಿಎಸ್‌ನ ಎಚ್‌ ಡಿ ರೇವಣ್ಣ ಅವರು ಕೇಳಿದ್ದ ಪ್ರಶ್ನೆಗೆ ಆರ್ಥಿಕ ಇಲಾಖೆಯು ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.

 

ಶೇಕಡ 40ರಷ್ಟು ಕಮಿಷನ್‌ ಬೇಡಿಕೆ ಕುರಿತು 2021ರ ಡಿಸೆಂಬರ್‌ 4ರಂದು ಕೇಳಿದ್ದ ಚುಕ್ಕೆ ಗುರುತಿಲ್ಲದ (1560) ಪ್ರಶ್ನೆಗೆ 2 ತಿಂಗಳಾದರೂ ಉತ್ತರ ಒದಗಿಸಿಲ್ಲ. ಈ ಸಂಬಂಧ ಕ್ರೋಢೀಕರಿಸಿದ ಮಾಹಿತಿಯನ್ನು ತುರ್ತಾಗಿ ಒಂದು ವಾರದಲ್ಲಿ ಒದಗಿಸಬೇಕು ಎಂದು ಆರ್ಥಿಕ ಇಲಾಖೆಯ ವೆಚ್ಚ 1ರಿಂದ 12ರವರೆಗಿನ ಶಾಖೆಯ ಶಾಖಾಧಿಕಾರಿಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ರಾಜಮ್ಮ ಅವರು 2022ರ ಫೆ.4ರಂದು ಪತ್ರ (ಸಂಖ್ಯೆ; ಆಇ 343 ಸಿಡಿಎನ್‌ 2021) ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆರ್ಥಿಕ ಇಲಾಖೆಯ ಶಾಖಾಧಿಕಾರಿಗಳಿಗೆ ಬರೆದಿರುವ ಪತ್ರದ ಪತ್ರಿ

 

ಸಾರ್ವಜನಿಕ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್‌ ಪಡೆದಿರುವ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದರೆ ಅದು ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರದ ಮರಣಶಾಸನವನ್ನು ಸಾಬೀತುಪಡಿಸುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಎಚ್ಚರಿಸಿದ್ದರ ಬೆನ್ನಲ್ಲೇ ಎಚ್‌ ಡಿ ರೇವಣ್ಣ ಅವರು ಕೇಳಿರುವ ಪ್ರಶ್ನೆಗಳಿಗೆ ಒಂದು ವಾರದಲ್ಲಿ ಉತ್ತರ ಒದಗಿಸಬೇಕು ಎಂದು ಆರ್ಥಿಕ ಇಲಾಖೆಯು ತನ್ನ ಅಧೀನ ಅಧಿಕಾರಿಗಳಿಗೆ ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

 

ರೇವಣ್ಣ ಅವರು ಕೇಳಿದ್ದ ಪ್ರಶ್ನೆಯಲ್ಲೇನಿತ್ತು?

 

1. ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದಲ್ಲಿ ಗುತ್ತಿಗೆದಾರರು ಟೆಂಡರ್‌ ಪಡೆಯಲು ಮತ್ತು ಟೆಂಡರ್‌ ಪಡೆದ ನಂತರ ಭರವಸೆ ಪತ್ರ ತರಲು, ತದನಂತರ ಹಣ ಬಿಡುಗಡೆ ಪಡೆಯಲು ಟೆಂಡರ್‌ ಮೊತ್ತದ ಶೇಕಡಾ ಸುಮಾರು 30ರಿಂದ 40ರವರೆಗೆ ಹೆಚ್ಚುವರಿ ಹಣ ನೀಡಬೇಕಾಗಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿಲ್ಲವೆಂದು ಆರೋಪಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ (ಸಂಪೂರ್ಣ ಮಾಹಿತಿ ನೀಡುವುದು)

 

2. ಈ ಆಪಾದನೆಗಳುಳ್ಳ ಮನವಿಗಳನ್ನು ಪ್ರಧಾನಮಂತ್ರಿಯವರ ಕಾರ್ಯಾಲಯದಿಂದ ಮತ್ತು ರಾಜಭವನದಿಂದ ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಪತ್ರ ಬರೆಯಲಾಗಿದೆಯೇ, ಹಾಗಿದ್ದಲ್ಲಿ ಈ ಬಗ್ಗೆ ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳೇನು?

 

ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಬರೆದಿರುವ ಪತ್ರದ ಪ್ರತಿ

 

3. ರಾಜ್ಯದ ವಿವಿಧ ಅಭಿವೃದ್ಧಿ ಇಲಾಖೆಗಳಲ್ಲಿ ಟೆಂಡರ್‌ ಮುಖೇನ ಗುತ್ತಿಗೆ ಪಡೆದಿರುವ ಕಂಟ್ರಾಕ್ಟರ್‌ಗಳಿಗೆ ಮುಖ್ಯಮಂತ್ರಿಗಳು ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂಬ ಆರೋಪ ಸತ್ಯವೇ, ವಿವಿದ ಇಲಾಖೆಗಳ ಅಡಿಯಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳು ಸೇರಿದಂತೆ ಒfಟು 20,000 ಕೋಟಿ ಬಾಕಿ ಇರುವುದು ನಿಜವೇ, ಹಾಗಿದ್ದಲ್ಲಿ ಇಲಾಖಾವಾರು ಬಾಕಿ ಇರುವ ಮೊತ್ತದ ಸಂಪೂರ್ಣ ಮಾಹಿತಿ ನೀಡುವುದು

 

4. ಸ್ಟೇಟ್‌ ಕಂಟ್ರಾಕ್ಟರ್‌ ಅಸೋಸಿಯೇಷನ್‌ ಅವರು ನೀಡಿರುವ ಮನವಿಯಲ್ಲಿ ಇಲಾಖಾ ಅಧಿಕಾರಿಳು, ಕೆಲವೊಂದು ಮಂತ್ರಿಗಳು ಮತ್ತು ಶಾಸಕರು ಒಳಗೊಂಡಂತೆ ತಮ್ಮ ಕ್ಷೇತ್ರಗಳಲ್ಲಿ ಗುತ್ತಿಗೆದಾರರನ್ನು ಹಿಂಸಿಸುತ್ತಿರುವುದಾಗಿ ಆಪಾದಿಸಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳೇನು, ಮತ್ತು ಪ್ರಧಾನಮಂತ್ರಿ, ರಾಜ್ಯಪಾಲರಿಗೆ ಗುತ್ತಿಗೆದಾರರು ನೀಡಿರುವ ಮನವಿ ಮೇಲೆ ಕ್ರಮ ಜರುಗಿಸುವ ಬಗ್ಗೆ ವರದಿ ನೀಡಲಾಗಿದೆಯೇ, ಹಾಗಿದ್ದಲ್ಲಿ ಸಂಪೂರ್ಣ ಮಾಹಿತಿ ನೀಡುವುದು.

 

ಬೆಳಗಾವಿಯಲ್ಲಿ 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಎಚ್‌ ಡಿ ರೇವಣ್ಣ ಅವರು ಪ್ರಶ್ನೆ ಕೇಳಿದ್ದರು. ಆದರೆ 2 ತಿಂಗಳಾದರೂ ಈ ಪ್ರಶ್ನೆಗಳಿಗೆ ಆರ್ಥಿಕ ಇಲಾಖೆಯು ಯಾವುದೇ ಉತ್ತರ ಒದಗಿಸಿಲ್ಲ ಎಂಬುದು ಪತ್ರದಿಂದ ತಿಳಿದು ಬಂದಿದೆ.

 

ಗುತ್ತಿಗೆ ಕಾಮಗಾರಿಗಳ ಮೊತ್ತದಲ್ಲಿ ಶೇಕಡ 40ರಷ್ಟು ಹಣಕ್ಕೆ ಬೇಡಿಕೆ ಇರಿಸಿದ್ದು ಚರ್ಚೆಗೆ ಕಾರಣವಾಗಿತ್ತು. ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪಗಳನ್ನಾಧರಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವು ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು.

 

ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌, ನಗರಾಭಿವೃದ್ಧಿ, ಆರೋಗ್ಯ, ಲೋಕೋಪಯೋಗಿ ಇಲಾಖೆಗಳಲ್ಲಿ ವಿವಿಧ ರೀತಿಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಮಾಡುವ ಸಂದರ್ಭದಲ್ಲೇ ಶೇಕಡಾ 40ರಷ್ಟು ಹಣವನ್ನು ಲಂಚದ ರೂಪದಲ್ಲಿ ಬೇಡಿಕೆ ಇರಿಸಲಾಗಿತ್ತು ಎಂದು ಗುತ್ತಿಗೆದಾರರ ಸಂಘವು ಮಾಡಿದ್ದ ಆರೋಪವು ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

 

ಅನುದಾನ ಮಂಜೂರಾತಿ, ಹಂಚಿಕೆ, ಬಿಡುಗಡೆ, ಬಿಲ್‌ ಮೊತ್ತ ಗುತ್ತಿಗೆದಾರರಿಗೆ ಪಾವತಿ ಆಗುವ ಎಲ್ಲಾ ಹಂತಗಳಲ್ಲೂ ಶೇಕಡಾ 40ರಷ್ಟು ಹಣಕ್ಕೆ ಲಂಚ ರೂಪದಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ಪ್ರಧಾನಿಗೆ ಬರೆದಿದ್ದ ಪತ್ರದಲ್ಲಿ ಆರೋಪಿಸಲಾಗಿತ್ತು.

 

ಹಲವು ಬಗೆಯ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರು ಸದಸ್ಯರಾಗಿರುವ 52 ಸಂಘಗಳು ರಾಜ್ಯ ಗುತ್ತಿಗೆದಾರರ ಸಂಘದ ಸದಸ್ಯತ್ವ ಪಡೆದಿವೆ. ಅಂದಾಜು 1 ಲಕ್ಷಕ್ಕೂ ಅಧಿಕ ಗುತ್ತಿಗೆದಾರರು ಸದಸ್ಯರಾಗಿರುವ ಈ ಸಂಘ ಸರ್ಕಾರದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮೊದಲ ಬಾರಿಗೆ ಲಿಖಿತ ಪತ್ರದ ಮೂಲಕ ಆರೋಪಿಸಿತ್ತು.

 

ಶೇ 40ರಷ್ಟು ಹಣವನ್ನು ಲಂಚದ ರೂಪದಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ನೀಡಬೇಕಾಗಿದೆ. ಹೀಗಾಗಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಲಂಚಕ್ಕೆ ಕಡಿವಾಣ ಹಾಕಿದರೆ ಮುಂದಿನ ದಿನಗಳಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರೀಕ್ಷಿಸಬಹುದು’ ಎಂದು ಮನವಿಯಲ್ಲಿ ಉಲ್ಲೆಖಿಸಿದ್ದನ್ನು ಸ್ಮರಿಸಬಹುದು.

Tags: 40% commissionB S YediyurappaBJP governmentBJP leaders demandBommai GovtClean ImageClear BillsCommissionscongressCorruptionD K ShivakumarD. KempannaDemand for commissionGovind KarajolGovt Tendersh d kumarswamyHarass for PaymentHarassmentIrrigationKarnataka Contractors Associationmedicalnarendra modiPrime MinisterPWDSiddaramaiahTender AmountWater Resouresಎಚ್‌ ಡಿ ಕುಮಾರಸ್ವಾಮಿಕಮಿಷನ್‌ಕಮಿಷನ್‌ಗೆ ಬೇಡಿಕೆಕರ್ನಾಟಕ ಗುತ್ತಿಗೆದಾರರ ಸಂಘಕಾಂಗ್ರೆಸ್‌ಗುತ್ತಿಗೆದಾರರಿಗೆ ಕಿರುಕುಳಗೋವಿಂದ ಕಾರಜೋಳಜಲ ಸಂಪನ್ಮೂಲಟೆಂಡರ್ ಮೊತ್ತಡಿ ಕೆ ಶಿವಕುಮಾರ್ಡಿ ಕೆಂಪಣ್ಣನರೇಂದ್ರ ಮೋದಿನೀರಾವರಿ ಇಲಾಖೆಪಿಡಬ್ಲ್ಯೂಡಿಪ್ರಧಾನಮಂತ್ರಿಬಿಜೆಪಿ ನಾಯಕರ ಬೇಡಿಕೆಬಿಜೆಪಿ ಸರ್ಕಾರಬಿಲ್‌ಗಳ ವಿಲೇವಾರಿಬೊಮ್ಮಾಯಿ ಸರ್ಕಾರಭ್ರಷ್ಟಾಚಾರಭ್ರಷ್ಟಾಚಾರ ತಡೆ ತಿದ್ದುಪಡಿ ಕಾಯ್ದೆಲೋಕೋಪಯೋಗಿವೈದ್ಯಕೀಯಶೇ. 40ರಷ್ಟು ಲಂಚಸರ್ಕಾರಿ ಟೆಂಡರ್‌ಗಳುಸಿದ್ದರಾಮಯ್ಯ
Advertisement Banner
Previous Post

ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

Next Post

ಸಂಸ್ಕೃತಕ್ಕೆ 392.64 ಕೋಟಿ, ಕನ್ನಡಕ್ಕೆ 25 ಕೋಟಿ; ವಿ.ವಿ.ಗಳಿಂದ ಅನುದಾನದ ಬೇಡಿಕೆ ಮಂಡನೆ

thefilestack

thefilestack

Next Post

ಸಂಸ್ಕೃತಕ್ಕೆ 392.64 ಕೋಟಿ, ಕನ್ನಡಕ್ಕೆ 25 ಕೋಟಿ; ವಿ.ವಿ.ಗಳಿಂದ ಅನುದಾನದ ಬೇಡಿಕೆ ಮಂಡನೆ

Recommended

ಕೋವಿಡ್‌ ಸಂಕಷ್ಟ; ಬಿಎಸ್‌ಎನ್‌ಎಲ್‌ಗೆ 38.54 ಕೋಟಿ ರು. ಬಾಕಿ ಉಳಿಸಿಕೊಂಡ ಸರ್ಕಾರ

6 years ago

ಅನುದಾನ ಕೊರತೆ; ಆರ್ಥಿಕ ಸಂಕಷ್ಟದಲ್ಲಿರುವ ಕಿಮ್ಸ್‌ನತ್ತ ತಲೆ ಹಾಕದ ಸರ್ಕಾರ?

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd