the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಐಎಎಸ್‌ ತಿವಾರಿ ಅಸಹಜ ಸಾವು ಪ್ರಕರಣ; ಸಿಬಿಐಗೆ ಬರೆದಿದ್ದ ಗೌಪ್ಯ ಪತ್ರ ಬಹಿರಂಗ

thefilestack by thefilestack
September 6, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಉತ್ತರಪ್ರದೇಶದ ಲಖನೌದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರು ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಯಾವುದೇ ಹಗರಣಗಳನ್ನು ಗುರುತಿಸಿರಲಿಲ್ಲ ಮತ್ತು ಈ ಕುರಿತು ಯಾವುದೇ ಚರ್ಚೆಯನ್ನೂ ಮಾಡಿರಲಿಲ್ಲ ಎಂದು ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಸಿಬಿಐಗೆ ಮಾಹಿತಿ ಒದಗಿಸಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.

 

ಅನುರಾಗ್‌ ತಿವಾರಿ ಅವರ ಸಾವಿನ ಕುರಿತು ಮಾಹಿತಿ ಕೇಳಿ ಸಿಬಿಐ 2018ರ ಏಪ್ರಿಲ್‌ 4ರಂದು ರಾಜ್ಯ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಈ ಸಂಬಂಧ 2018ರ ಆಗಸ್ಟ್‌ 4ರಂದು ಮುಖ್ಯ ಕಾರ್ಯದರ್ಶಿ ಸಿಬಿಐನ ಇನ್ಸ್‌ಪೆಕ್ಟರ್‌ ಪುರನ್‌ ಕುಮಾರ್‌ ಅವರಿಗೆ ಗೌಪ್ಯ ಪತ್ರ ಬರೆದಿದ್ದರು. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಗೌಪ್ಯ ಪತ್ರದಲ್ಲೇನಿದೆ?

ಮುಖ್ಯ ಕಾರ್ಯದರ್ಶಿ 2018ರ ಆಗಸ್ಟ್‌ 4ರಂದು ಸಿಬಿಐ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದಿದ್ದರು. ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕ ನಿರ್ದೆಶಕರಾಗಿದ್ದ ಅವಧಿಯಲ್ಲಿ (2017 ಜನವರಿ 1ರಿಂದ 2017ರ ಮೇ 17ರವರೆಗೆ) ಬೃಹತ್‌ ಪ್ರಮಾಣದಲ್ಲಿ ನಡೆದಿದೆ ಎನ್ನಲಾಗಿದ್ದ ಭ್ರಷ್ಟಾಚಾರ ಪ್ರಕರಣ ಕುರಿತು ಪತ್ರ ವ್ಯವಹಾರ ನಡೆಸಿದ್ದರೇ ಮತ್ತು ತಮ್ಮ ಜೀವಕ್ಕೆ ಬೆದರಿಕೆ ಇತ್ತು ಎಂದು ಸರ್ಕಾರದ ಜತೆ ತಿವಾರಿ ಪತ್ರ ವ್ಯವಹಾರ ನಡೆಸಿದ್ದರೇ ಎಂದು ಸಿಬಿಐ ಮಾಹಿತಿ ಕೇಳಿತ್ತು.

ಅಲ್ಲದೆ ಈ ಸಂಬಂಧ ಹಿರಿಯ ಐಎಎಸ್‌ ಅಧಿಕಾರಿ ಹರ್ಷ ಗುಪ್ತ ಅವರ ವಿರುದ್ಧ ತಿವಾರಿ ಅವರು ಯಾವುದಾದರೂ ದೂರು ಸಲ್ಲಿಸಿದ್ದರೇ ಎಂದು ಮಾಹಿತಿ ಕೇಳಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ‘ಇಲ್ಲ’ ಎಂದಷ್ಟೇ ಮಾಹಿತಿ ಒದಗಿಸಿದ್ದರು.

ಹಾಗೆಯೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಆಯುಕ್ತ ಅನುರಾಗ್‌ ತಿವಾರಿ ಅವರು ತಮ್ಮ ಅವಧಿಯಲ್ಲಿ ಯಾವುದೇ ಹಗರಣಗಳನ್ನು ಗುರುತಿಸಿರುವುದಿಲ್ಲ. ಮತ್ತು ಕಚೇರಿಯ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಯಾವುದೇ ಹಗರಣಗಳ ಬಗ್ಗೆ ಚರ್ಚೆ ಮಾಡಿರುವುದಿಲ್ಲ ಹಾಗೂ ಅಂತಹ ಯಾವುದೇ ಟಿಪ್ಪಣಿ ತಯಾರಿಸಿರುವುದಿಲ್ಲ ಎಂದು ಇಲಾಖೆಯ ಹೆಚ್ಚುವರಿ ನಿರ್ದೇಶಕರು ಆಯುಕ್ತರಿಗೆ ಪತ್ರ ಬರೆದಿದ್ದರು.

ಉತ್ತರ ಪ್ರದೇಶದ ಲಖನೌದಲ್ಲಿರುವ ವಿಐಪಿ ಅತಿಥಿ ಗೃಹದ ಹೊರಗೆ ಅನುರಾಗ್ ತಿವಾರಿ ಅವರ ದೇಹ ಪತ್ತೆಯಾಗಿತ್ತು. ಮೃತದೇಹದ ಮರಣೋತ್ತರ ವರದಿಯಲ್ಲಿ ಆಸ್ಪಿಕ್ಸಿಯಾದ ಕಾರಣ ಈ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತು. ಮೃತರ ಕುಟುಂಬದವರು ಒತ್ತಡ ಹಾಕಿದ್ದ ಕಾರಣ ಐಎಎಸ್ ಅಧಿಕಾರಿಯ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಅಷ್ಟೇ ಅಲ್ಲದೆ ಐಪಿಸಿ ಸೆಕ್ಷನ್ 302ರ ಅನುಸಾರ ಅಪರಿಚಿತ ಅಪರಾಧಿಯ ವಿರುದ್ಧ ಲಖನೌ ಪೋಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು

ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಕರ್ನಾಟಕದ ಬೀದರ್‌ನಲ್ಲಿ ತನಿಖೆ ನಡೆಸಿತ್ತು. ಅಲ್ಲದೆ ಸಾವಿನ ತನಿಖೆಯನ್ನು ಉತ್ತರ ಪ್ರದೇಶದ ವಿಶೇಷ ತನಿಖಾ ದಳ(ಎಸ್ಐಟಿ) ಕೈಗೆತ್ತಿಕೊಂಡಿತ್ತು. ತಿವಾರಿ ಅವರ ಸಾವಿನ ತನಿಖೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಫೋನ್ ಕರೆ ಮಾಡಿ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ಯೋಗಿ ಆದಿತ್ಯನಾಥ್‌ ಅವರು ತನಿಖೆ ತೀವ್ರಗೊಳಿಸಲು ಸೂಚಿಸಿದ್ದರು.

ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ಬೆಂಬಲವಿರುವ ಸಾವಿರಾರು ಕೋಟಿ ರುಪಾಯಿ ಹಗರಣ ಬಯಲಿಗೆಳೆಯಲು ಐಎಎಸ್ ಅಧಕಾರಿ ಅನುರಾಗ್ ತಿವಾರಿ ಸಜ್ಜಾಗಿದ್ದರು ಎಂದು ಉತ್ತರ ಪ್ರದೇಶ ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಆರೋಪಿಸಿದ್ದರು. ಆದರೆ, ಈ ಆರೋಪವನ್ನು ಕರ್ನಾಟಕ ಸರ್ಕಾರ ತಳ್ಳಿ ಹಾಕಿತ್ತು.

ತಿವಾರಿ ಅವರು ಕರ್ನಾಟಕ ಕೇಡರ್‌ನಲ್ಲಿ ಸೇವೆಯಲ್ಲಿದ್ದರು. ಆದರೆ ಅವರ ಶವ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ. ಹೀಗಾಗಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ ಸಾವಿನ ಹಿಂದೆ ಆಹಾರ ಧಾನ್ಯ ಕಳ್ಳಸಾಗಣೆ ಮಾಫಿಯಾದ ಕೈವಾಡವಿರುವ ಶಂಕೆಯೂ ಕೇಳಿ ಬರುತ್ತಿದೆ. ಹೀಗಾಗಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರಿಂದ ಸಿಬಿಐ ತನಿಖೆ ಅಗತ್ಯವಿದೆ,’ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದನ್ನು ಸ್ಮರಿಸಬಹುದು.

Tags: Aaraga JnanendraAnna Bhagya SchemeB S YediyurappaBasavaraj BommaicbiChief SecretaryCorruptionD K ShivakumarFood And Civil Supplyh d kumarswamyHarsha Gupta IASHome MinisterLucknowShobha KarandlajeSiddaramaiahUttara PradeshVartika Katiyarಅನುರಾಗ್‌ ತಿವಾರಿ ಐಎಎಸ್‌ಆರಗ ಜ್ಞಾನೇಂದ್ರಆಹಾರ ನಾಗರಿಕ ಸರಬರಾಜುಉತ್ತರ ಪ್ರದೇಶಎಚ್‌ ಡಿ ಕುಮಾರಸ್ವಾಮಿಡಿ ಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಮುಖ್ಯ ಕಾರ್ಯದರ್ಶಿಲಕ್ನೋವರ್ತಿಕಾ ಕಟಿಯಾರ್‌ಶೋಭಾ ಕರಂದ್ಲಾಜೆಸಿದ್ದರಾಮಯ್ಯಸಿಬಿಐ
Advertisement Banner
Previous Post

ಐಎಎಸ್‌ ತಿವಾರಿ ಅಸಹಜ ಸಾವು ಪ್ರಕರಣ; ಸಿಬಿಐಗೆ ಬರೆದಿದ್ದ ಗೌಪ್ಯ ಪತ್ರ ಬಹಿರಂಗ

Next Post

ದಾಸೋಹ ದಿನ; ರಾಜ್ಯಮಟ್ಟದ ದಿನಾಚರಣೆಯಾಗಿ ಘೋಷಿಸುವ ಪ್ರಸ್ತಾವನೆಯೇ ಅಲ್ಲ!

thefilestack

thefilestack

Next Post

ದಾಸೋಹ ದಿನ; ರಾಜ್ಯಮಟ್ಟದ ದಿನಾಚರಣೆಯಾಗಿ ಘೋಷಿಸುವ ಪ್ರಸ್ತಾವನೆಯೇ ಅಲ್ಲ!

Discussion about this post

Recommended

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

6 years ago

ಅಪೆಕ್ಸ್‌ ಬ್ಯಾಂಕ್‌ ಅಕ್ರಮಗಳು; ‘ದಿ ಫೈಲ್‌’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd