the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

thefilestack by thefilestack
June 27, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಒಂದು ವರ್ಷ 4 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಯೋಜನಾ ಮುಖ್ಯಸ್ಥರು, ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಪತ್ರ ಬರೆದಿದ್ದರು ಸಹ ಇವರ ಹುದ್ದೆಗೆ ನಾಲ್ವರು ಲೆಕ್ಕಪರಿಶೋಧನಾಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿರುವುದು ನಾಲ್ವರು ಅಧಿಕಾರಿಗಳ ಮಧ್ಯೆಯೇ ಪೈಪೋಟಿ ಸೃಷ್ಟಿಸಿದಂತಾಗಿದೆ.

 

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಟಿಪ್ಪಣಿಗಳು ಮತ್ತು ಇಲಾಖೆಯ ಮುಖ್ಯಸ್ಥರು ಬರೆದಿರುವ ಪತ್ರದ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದಲೇ ಅಧಿಕಾರಿ ನೌಕರರ ವರ್ಗಾವಣೆಗೆ ಶಿಫಾರಸ್ಸು ಪತ್ರಗಳು ಹೊರಬೀಳುತ್ತಿವೆ ಮತ್ತು ಗೃಹ ಕಚೇರಿಯನ್ನು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರು ನಿಯಂತ್ರಿಸುತ್ತಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಅಧಿಕಾರಿಗಳ ಪೈಪೋಟಿಗೆ ಕಾರಣವಾಗಿರುವ ಮುಖ್ಯಮಂತ್ರಿಗಳ ಟಿಪ್ಪಣಿ ಪತ್ರಗಳು ಮುನ್ನೆಲೆಗೆ ಬಂದಿವೆ.

 

ಇರುವ ಒಂದು ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸ್ಸು

 

ಬಿಬಿಎಂಪಿಯಲ್ಲಿ ಲೆಕ್ಕ ಪರಿಶೋಧನಾಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ ಕೆ ಜಗದೀಶ್‌ ಅವರನ್ನು ರಾಜ್ಯ ರಸ್ತೆ ಅಭಿವೃದ್ದಿ ನಿಗಮದಲ್ಲಿ ಎಂ ಜಿ ಮಂಜುನಾಥ್ ಇವರ ಸ್ಥಳಕ್ಕೆ ವರ್ಗಾಯಿಸಲು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಿಂದ ಟಿಪ್ಪಣಿ ಹೊರಡಿಸಲಾಗಿದೆ.

 

ಇದೇ ಹುದ್ದೆಗೆ ಬಿಬಿಎಂಪಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಬ್ಬ ಲೆಕ್ಕಪರಿಶೋಧನಾಕಾರಿ ಕೆ ಎಚ್‌ ಶ್ರೀನಿವಾಸ್‌ ಅವರನ್ನು ಎಂ ಜಿ ಮಂಜುನಾಥ್‌ ಅವರ ಹುದ್ದೆಯ ಜಾಗಕ್ಕೆ ವರ್ಗಾಯಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಇದನ್ನು ಪರಿಗಣಿಸಿ ಎಂದು ಷರಾ ಬರೆದಿರುವುದು ಗೊತ್ತಾಗಿದೆ.

 

ಅದೇ ರೀತಿ ಪೊಲೀಸ್‌ ಮಹಾನಿರ್ದೇಶಕರ ಕಚೇರಿಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ ನಾಗರಾಜು ಅವರು ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಮಂಜುನಾಥ್‌ ಅವರ ಜಾಗಕ್ಕೆ ಪರಿಗಣಿಸಿ ಎಂದು 2023ರ ಜೂನ್‌ 8ರಂದು ಷರಾ ಬರೆದಿದ್ದಾರೆ.

 

ಅದೇ ರೀತಿ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಎಸ್‌ ಪ್ರತಿಭ ಅವರನ್ನೂ ಮಂಜುನಾಥ ಜಿ ಇವರ ಸ್ಥಳಕ್ಕೆ ನಿಯುಕ್ತಿಗೊಳಿಸಲು ಸಿದ್ದರಾಮಯ್ಯ ಅವರು ಟಿಪ್ಪಣಿಯಲ್ಲಿ ಸೂಚಿಸಿರುವುದು ಟಿಪ್ಪಣಿ ಪ್ರತಿಯಿಂದ ಗೊತ್ತಾಗಿದೆ.

 

ಆದರೆ ಮಂಜುನಾಥ್‌ ಅವರ ಕಾರ್ಯಕ್ಷಮತೆ ಬಗ್ಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದ ಯೋಜನಾ ಮುಖ್ಯಸ್ಥರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಇವರ ವರ್ಗಾವಣೆ ಸುಳಿವು ಹಿಡಿದ ಯೋಜನಾ ಮುಖ್ಯಸ್ಥರು ಕರ್ನಾಟಕ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ 2023ರ ಜೂನ್‌ 23ರಂದು ಪತ್ರವನ್ನೂ ಬರೆದಿದ್ದಾರೆ.

 

ಪತ್ರದಲ್ಲೇನಿದೆ?

 

ಇಲಾಖೆಯಲ್ಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರನ್ನು ಇದೇ ಹುದ್ದೆ ಮತ್ತು ಇದೇ ಕಚೇರಿಯಲ್ಲಿಯೇ ಮುಂದುವರೆಸಬೇಕು. ಇವರು ಕಳೆದ 1 ವರ್ಷ 4 ತಿಂಗಳಿನಿಂದ ಲೆಕ್ಕಾಧಿಕಾರಿಯಾಗಿ ಈ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.

 

ಇವರು ಯೋಜನೆಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಪರಿಣಿತಿ ಹೊಂದಿರುವದುರಿಂದ ಹಾಗೂ ಪ್ರಾಜೆಕ್ಟ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಅಡಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಕಾ:ಲಬದ್ಧ ಯೋಜನೆಯ ಕಾಮಗಾರಿಗಳನ್ನು ಪರಿಣಾಮಕಗಾರಿಯಾಗಿ ಅನುಷ್ಠಾನಗೊಳ್ಳಲು ಸಹಕಾರಿಯಾಗಿರುತ್ತದೆ.

 

ಈ ಕಚೇರಿ ವ್ಯಾಪ್ತಿಯ ಹಂತ 1,ಹಂತ 2 ಮತ್ತು ಹಂತ 3ರ ಕಾಮಗಾರಿಗಳ ಅಂತಿಮ ಬಿಲ್‌ಗಳನ್ನು ತೀರುವಳಿಗೊಳಿಸಲು ಹಂತ 4 ಘಟ್ಟ 1 ಮತ್ತು ಘಟ್ಟ 2 ರ ಗುತ್ತಿಗೆ ಬಿಲ್‌ಗಳನ್ನು ಪಾವತಿಸಲು ಇವರ ಸೇವೆಯು ಈ ಕಚೇರಿಗೆ ಅತ್ಯವಶ್ಯಕವಾಗಿರುತ್ತದೆ. ಆದ್ದರಿಂದ ಮುಖ್ಯ ಯೋಜನಾಧಿಕಾರಿಯವರ ಅವರನ್ನು ಯೋಜನಾ ಅನುಷ್ಠಾನ ಘಟಕದಲ್ಲಿಯೇ ಮುಂದುವರೆಸಲು ಈ ಮೂಲಕ ತಮ್ಮಲ್ಲಿ ಕೋರಿದೆ ಎಂದು ರಾಜ್ಯ ಲೆಕ್ಕಪತ್ರ ಇಲಾಖೆ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

Tags: Basavanagouda Patil YatnalBasavaraj Bommaichief ministerD K ShivakumarDevelopmentDR Yathindra Siddaramaiahah d kumarswamyHome OfficekarnatakaKarnataka State AcccountsKRDILKrishnaRoadSiddaramaiahaTransfersಅರ್ಥಿಕ ಇಲಾಖೆಒಂದೇ ಹುದ್ದೆಕೃಷ್ಣಾಗೃಹ ಕಚೇರಿಟಿಪ್ಪಣಿದಂಧೆನಾಲ್ವರುಬಸವನಗೌಡ ಪಾಟೀಲ್‌ ಯತ್ನಾಳ್‌ಬಸವರಾಜ ಬೊಮ್ಮಾಯಮುಖ್ಯಮಂತ್ರಿಮುಖ್ಯಮಂತ್ರಿ ಕಚೇರಿಯತೀಂದ್ರ ಸಿದ್ದರಾಮಯ್ಯಲೆಕ್ಕಪತ್ರ ಇಲಾಖೆಲೆಕ್ಕಾಧಿಕಾರಿವರ್ಗಾವಣೆವರ್ಗಾವರ್ಗೀಶಿಫಾರಸ್ಸುಸಿದ್ದರಾಮಯ್ಯ
Advertisement Banner
Previous Post

ಅಬಕಾರಿ ಭದ್ರತಾ ಚೀಟಿ ಮುದ್ರಣ ಟೆಂಡರ್‌ನಲ್ಲಿ ಅಕ್ರಮ; ಹೆಚ್ಚಿನ ದರ ನಮೂದು, 51.26 ಕೋಟಿ ನಷ್ಟ

Next Post

ಕಾಕಂಬಿ ಹಗರಣ; ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಅಧಿಕಾರ ಹಿಡಿದು ತಿಂಗಳಾದರೂ ಉಸಿರೆತ್ತದ ಕಾಂಗ್ರೆಸ್‌

thefilestack

thefilestack

Next Post

ಕಾಕಂಬಿ ಹಗರಣ; ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಅಧಿಕಾರ ಹಿಡಿದು ತಿಂಗಳಾದರೂ ಉಸಿರೆತ್ತದ ಕಾಂಗ್ರೆಸ್‌

Recommended

ಅನ್ನಭಾಗ್ಯ ಹಣಪಾವತಿಯಲ್ಲಿ ವಿಳಂಬ; ಛತ್ತೀಸ್‌ಗಡ್‌ ಆಹಾರ ನಿಗಮಕ್ಕೆ 5.25 ಕೋಟಿ ಬಡ್ಡಿ ಪಾವತಿ

4 years ago

ಕೋವಿಡ್‌ ಸಾವು ಪರಿಹಾರ;ಅತ್ಯಲ್ಪ ಅವಧಿಯಲ್ಲೇ 2 ಆದೇಶ ಹೊರಡಿಸಿ ರಾಗಬದಲಾಯಿಸಿದ ಸರ್ಕಾರ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd