the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ

thefilestack by thefilestack
July 19, 2023
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಎಪಿಪಿ ಮತ್ತು ಎಜಿಪಿ ನೇಮಕಾತಿಯಲ್ಲಿ ಆಗಿರುವ ಅಕ್ರಮಗಳು, ಅಭಿಯೋಜನಾ ಇಲಾಖೆಯಲ್ಲಿ ಎಸಗಿರುವ ಇತರೆ ಅಕ್ರಮಗಳಲ್ಲಿ ನೇಮಕಾತಿ ಸಮಿತಿ ಅಧ್ಯಕ್ಷ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ರಜನೀಶ್‌ ಗೋಯಲ್‌ ಮತ್ತು ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕಾನೂನು ಇಲಾಖೆಯ ವಿಶೇ‍ಷ ಕಾರ್ಯದರ್ಶಿಯೂ ಆಗಿರುವ ಹೆಚ್‌ ಕೆ ಜಗದೀಶ್‌ ಅವರ ವಿರುದ್ಧ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಅಭಿಯೋಜನಾ ಇಲಾಖೆಯ ಅಧಿಕಾರಿ, ನೌಕರರೇ ಲಿಖಿತ ದೂರು ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.

 

ಕಾನೂನು ಇಲಾಖೆಯ ವಿಶೇಷ ಕಾರ್ಯದರ್ಶಿ ಹೆಚ್‌ ಕೆ ಜಗದೀಶ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಟಿಪ್ಪಣಿ ಹೊರಡಿಸಿದ್ದಾರಾದರೂ ತಮಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಜನೀಶ್‌ ಗೋಯಲ್‌ ಅವರನ್ನು ಈಗಲೂ ಮುಂದುವರೆಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

 

ಅಭಿಯೋಜನಾ ಇಲಾಖೆಯ ಅಧಿಕಾರಿ ಮತ್ತು ನೌಕರರು ಹೆಚ್‌ ಕೆ ಜಗದೀಶ್‌ ವಿರುದ್ಧ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ 2022ರ ಡಿಸೆಂಬರ್‍‌ 22 ಮತ್ತು 2023ರ ಜೂನ್‌ 7ರಂದೇ ಲಿಖಿತ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ಕಾನೂನು ಇಲಾಖೆಯು ( ಕಡತ ಸಂಖ್ಯೆ; LAW-LC3/19/2023-ADMIN-LAW SEC (COMPUTER NUMER 1006157) ವಿಚಾರಣೆ ನಡಸುತ್ತಿದೆ. ಇಲಾಖೆಯ ಅಧಿಕಾರಿ ನೌಕರರು ಸಲ್ಲಿಸಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಲ್ಲದೇ ಗುತ್ತಿಗೆ ಆಧಾರದ ಮೇಲೆ ನೇಮಕವಾಗಿರುವ ವಕೀಲರ ಪೈಕಿ 250 ಮಂದಿ ಆರ್‍‌ಎಸ್‌ಎಸ್‌ ಮತ್ತು ಬಿಜೆಪಿ ಹಿನ್ನೆಲೆಯವರು. ಇದರಲ್ಲಿಯೂ ರಜನೀಶ್‌ ಗೋಯಲ್‌ ಅವರು ಶಾಮೀಲಾಗಿದ್ದಾರೆ ಎಂದು 2023ರ ಜೂನ್‌ 7ರಂದು ಸಲ್ಲಿಸಿರುವ ದೂರಿನಲ್ಲಿ ವಿವರಿಸಿದ್ದರೂ ಇದುವರೆಗೂ ಗೋಯಲ್‌ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸದೆಯೇ ಕೇವಲ ಹೆಚ್‌ ಕೆ ಜಗದೀಶ್‌ ಅವರನ್ನಷ್ಟೇ ಬಿಡುಗಡೆಗೊಳಿಸಲಾಗಿದೆ. ಮತ್ತು ಈ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಅಧಿಕಾರಿ ನೌಕರರು ಲಿಖಿತ ದೂರು ನೀಡಿದ್ದರೂ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದಿರುವುದು ಹಲವು ಸಂಶಯಗಳಿಗೆ ಬಲ ನೀಡಿದಂತಾಗಿದೆ.

 

 

‘ಎಪಿಪಿ ಮತ್ತು ಎಜಿಪಿಗಳ ನೇಮಕಾತಿಗೆ ಸಂಬಂಧಪಟ್ಟಂತೆ ನೇಮಕಾತಿ ಸಮಿತಿ ಅಧ್ಯಕ್ಷ ರಜನೀಶ್‌ ಗೋಯಲ್‌ ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಹೆಚ್‌ ಕೆ ಜಗದೀಶ್‌ ಅವರನ್ನು ಪ್ರಸ್ತುತ ಇರುವ ಹುದ್ದೆಗಳಲ್ಲಿ ಮುಂದುವರೆಸಿದಲ್ಲಿ ನೇಮಕಾತಿ ಅಕ್ರಮಗಳಿಗೆ ಸಂಬಂಧಪಟ್ಟಂತೆ ಎಲ್ಲಾ ದಾಖಲಾತಿಗಳನ್ನು ಮತ್ತು ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಹೀಗಾಗಿ ನ್ಯಾಯದ ಹಿತದೃಷ್ಟಿಯಿಂದ ಇಬ್ಬರೂ ಅಧಿಕಾರಿಗಳನ್ನು ಸದರಿ ಹುದ್ದೆಗಳಿಂದ ತೆರವುಗೊಳಿಸಿ ನ್ಯಾಯಯುತ ತನಿಖೆ ನಡೆಸಬೇಕು,’ ಎಂದು ಅಭಿಯೋಜನಾ ಇಲಾಖೆಯ ಅಧಿಕಾರಿ, ನೌಕರರು ದೂರಿನಲ್ಲಿ ಕೋರಿರುವುದು ಗೊತ್ತಾಗಿದೆ.

 

ವರ್ಗಾವಣೆ ದಂಧೆ

 

ಅಭಿಯೋಜನಾ ಇಲಾಖೆಯಲ್ಲಿ ನಡೆಯುವ ಎಲ್ಲಾ ಅಧಿಕಾರಿ/ನೌಕರರ ವರ್ಗಾವಣೆಗಳನ್ನು ಇವರಿಬ್ಬರ ಶಿಫಾರಸ್ಸಿನಂತೆ ಇವರಿಗೆ ಹಣ ಕೊಟ್ಟವರನ್ನು ಮಾತ್ರ ಅಧಿಕಾರಿ, ನೌಕರರಿಗೆ ಬೇಕಾದ ಸ್ಥಳಗಳಿಗೆ ವರ್ಗಾವಣೆ ಮಾಡಲು ವರ್ಗಾವಣೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಗೃಹ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿಂದಿನ ಸರ್ಕಾರದ ಗೃಹ ಸಚಿವರ ಕಚೇರಿಯಲ್ಲಿ ಇವರು ಹೇಳಿದ ರೀತಿಯಲ್ಲಿ ವರ್ಗಾವಣೆ ಮಾಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.

 

ಅಲ್ಲದೇ ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕಾತಿ ಮಾಡುವಾಗ ಖಾಸಗಿ ವಕೀಲರಾದ ಪ್ರಸನ್ನಕುಮಾರ್‍‌ ಅವರನ್ನು ಅನೇಕ ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿದೆ. ನ್ಯಾಯಾಲಯದಲ್ಲಿ ತಮಗೆ ಹಾಗೂ ಸರ್ಕಾರಕ್ಕೆ ಬೇಕಾದ ರೀತಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುತ್ತಾರೆ. ‘ತಾವು ಪರಿಶೀಲಿಸಬೇಕಾದಲ್ಲಿ ಸಬ್‌ ಇನ್ಸ್‌ಪೆಕ್ಟರ್ ಅಕ್ರಮ ನೇಮಕಾತಿ ಪ್ರಕರಣದಲ್ಲಿನ ಕಡತಗಳನ್ನು ಸಿಐಡಿ ಪೊಲೀಸರಿಂದ ಪಡೆದು ಪರಿಶೀಲಿಸಬಹುದಾಗಿದೆ,’ ಎಂದು ಅಧಿಕಾರಿ ನೌಕರರು ದೂರಿನಲ್ಲಿ ಗಮನಸೆಳೆದಿರುವುದು ತಿಳಿದು ಬಂದಿದೆ.

Tags: APP ScamChief SecretaryCIDCriminal CasesD K ShivakumarDR Rajanish Goelh d kumarswamyH K JagadishH K PatilProceuctionPublic ProsecutorsRSSs r hiremathSiddaramaiahaSpecial SecretaryVandita SharmaVidhana Soudhaಅಭಿಯೋಜನೆಅರ್‌ಎಸ್‌ಎಸ್‌ಎಪಿಪಿ ಹಗರಣಎಪಿಪಿಗಳ ನೇಮಕಎಸ್‌ ಆರ್‌ ಹಿರೇಮಠ್ಒಳಾಡಳಿತಕಾನೂನು ಇಲಾಖೆಕ್ರಿಮಿನಲ್‌ ಪ್ರಕರಣಗಳುಡಾ ಜಿ ಪರಮೇಶ್ವರ್‌ಡಾ ರಜನೀಶ್‌ ಗೋಯಲ್‌ಡಿ ಕೆ ಶಿವಕುಮಾರ್ಮುಖ್ಯ ಕಾರ್ಯದರ್ಶಿವಂದಿತಾ ಶರ್ಮಾವಿಚಾರಣೆವಿಧಾನ ಸೌಧವಿಶೇಷ ಕಾರ್ಯದರ್ಶಿಸರ್ಕಾರಿ ಅಭಿಯೋಜಕರುಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

Next Post

ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ

thefilestack

thefilestack

Next Post

ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ

Recommended

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

5 years ago

ರಾಜಕೀಯ ಕಾರ್ಯದರ್ಶಿಗಳ ಸಲಹೆಗಳೂ ‘ಗೌಪ್ಯ ದಾಖಲೆ’; ಮಾಹಿತಿಯನ್ನೇ ಮುಚ್ಚಿಟ್ಟ ಕಾಂಗ್ರೆಸ್‌ ಸರ್ಕಾರ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd