the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಶಾಸಕರಿಗೆ ‘ನಿದ್ರಾ’ ಮಾದರಿ ಹಾಸಿಗೆ, ದಿಂಬು ಖರೀದಿ; ಕಾಯರ್ ಬೋರ್ಡ್‌ ಬದಿಗಿರಿಸಿದ ಸರ್ಕಾರ

thefilestack by thefilestack
January 10, 2024
in RTI
0
0
SHARES
1
VIEWS
Share on FacebookShare on Twitter

ಬೆಂಗಳೂರು; ಶಾಸಕರಿಗೆ  ‘ನಿದ್ರಾ’ ಮಾದರಿಯ ಹಾಸಿಗೆ, ದಿಂಬು, ತಲೆದಿಂಬು, ಸೋಫಾ, ಡೋರ್‍‌ ಫುಟ್‌ ಮ್ಯಾಟ್‌, ಟರ್ಕಿ ಟವಲ್‌, ಉಲ್ಲನ್‌ ಬೆಡ್‌ ಶೀಟ್‌ ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು 1.60 ಕೋಟಿ ರು. ವೆಚ್ಚದಲ್ಲಿ ಖರೀದಿಸಲು ಸರ್ಕಾರವು ಹೆಚ್ಚುವರಿ ಅನುದಾನವನ್ನು ಮಂಜೂರು ಮಾಡಿದೆ.

 

ಶಾಸಕರ ಭವನಕ್ಕೆ 2012ರಿಂದ 2023ರವರೆಗೂ  ಸಿಂಗಲ್‌ ಬೆಡ್‌, ಡಬಲ್‌ ಬೆಡ್‌ , ಸೋಫಾ ಲೂಸ್‌ ಕುಷನ್‌, ತಲೆದಿಂಬು, ಡೋರ್‍‌ ಫುಟ್‌ ಮ್ಯಾಟ್‌ಗಳನ್ನು ಸಾರ್ವಜನಿಕ ಉದ್ದಿಮೆಯಾದ ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮದಿಂದಲೇ ಹಾಸಿಗೆಗಳನ್ನು ಖರೀದಿಸಲಾಗುತ್ತಿತ್ತು.

 

ಆದರೆ ಇವುಗಳು ಸರಿ ಇಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಕ್ಷೇಮ ವನದಲ್ಲಿ ಬಳಸಿದ್ದ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಕೊಯಮತ್ತೂರಿನ ಖಾಸಗಿ ಕಂಪನಿಯಿಂದ ಖರೀದಿಸಲು ಮುಂದಾಗಿದೆ.

 

ಶಾಸಕರ ಕೊಠಡಿಗಳಿಗೆ ಅಗತ್ಯವಿರುವ ಸಿಂಗಲ್‌, ಡಬಲ್‌ ಹಾಸಿಗೆ, ದಿಂಬು ಸೇರಿದಂತೆ ಮತ್ತಿತರ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿದೆ. ಈ ಸಂಬಂಧ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ದಾಖಲೆಗಳನ್ನು ಪಡೆದಿದೆ.

 

ಹಾಸಿಗೆ ಹಾಗೂ ಇನ್ನಿತರೆ ವಸ್ತುಗಳನ್ನು ಕೂಡಲೇ ಬದಲಾಯಿಸಿ ಹೊಸದಾದ ಹಾಸಿಗಗಳನ್ನು ನೀಡಬೇಕು ಎಂದು ಶಾಸಕರ ಒತ್ತಡ ಹೇರಿದ್ದರು.  ಇದಕ್ಕೆ  ಮಣಿದಿರುವ ವಿಧಾನಸಭೆ ಸಚಿವಾಲಯವು, ಆರ್ಥಿಕ ಇಲಾಖೆಗೆ 4(ಜಿ) ವಿನಾಯಿತಿಗಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ತಿಳಿದು ಬಂದಿದೆ.

 

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಅನುಮೋದನೆ ನೀಡಿದ್ದಾರೆ.

 

ಮೊದಲ ಬಾರಿಗೆ ಆಯ್ಕೆಯಾದ ಶಾಸಕರುಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಆಯುರ್ವೇದಿಕ್‌ ಕ್ಷೇಮ ವನದಲ್ಲಿ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ನೀಡಿದ್ದ ನಿದ್ರಾ ಮಾದರಿ ಹಾಸಿಗೆಗಳನ್ನೇ ಒದಗಿಸಬೇಕು ಎಂದು ಶಾಸಕರು ಬೇಡಿಕೆ ಇರಿಸಿದ್ದರು. ಹೀಗಾಗಿ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಖರೀದಿಸಲು ವಿಧಾನಸಭೆ ಸಚಿವಾಲಯವು ದರ ಪಟ್ಟಿ ಪಡೆದಿತ್ತು.

 

‘ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರುಗಳಿಗೆ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚೋರಪತಿ ಆಯುರ್ವೇದಿಕ್‌ ಸೆಂಟರ್‍‌ನ ಕ್ಷೇಮ ವನದಲ್ಲಿ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಸಭಾಧ್ಯಕ್ಷ ಯು ಟಿ ಖಾದರ್‌ ಸೇರಿದಂತೆ ಶಾಸಕರು   ಹಾಗೂ ಸಚಿವಾಲಯದ ಅಧಿಕಾರಿಗಳು ಅಲ್ಲಿ ಬಳಕೆ ಮಾಡುತ್ತಿರುವ ಹಾಸಿಗೆಗಳನ್ನು ಪರಿಶೀಲಿಸಿದ್ದರು.

 

ಈ ಹಾಸಿಗೆಗಳು ದೇಹಾರೋಗ್ಯಕ್ಕೆ ಸೂಕ್ತವಾದಂತಹ ಮತ್ತು ಆರಾಮದಾಯಕವಾಗಿರುವಂತಹ ನಿದ್ರಾ ಮಾದರಿಯ ಹಾಸಿಗೆಗಳೆಂದು ತಿಳಿದು ಬಂದಿರುತ್ತದೆ,’ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರಿಗೆ ಪ್ರಸ್ತಾವನೆಯಲ್ಲಿ ವಿವರಿಸಿದ್ದರು.

 

300 ಸಂಖ್ಯೆಯ ಸಿಂಗಲ್‌ ಹಾಶಿಗೆ, 150 ಸಂಖ್ಯೆಯ ಡಬಲ್‌ ಹಾಸಿಗೆ ಹಾಗೂ 1,250 ಸಂಖ್ಯೆಯ ದಿಂಬು, 50 ಸೆಟ್‌ ಸೋಫಾ ಲೂಸ್‌ ಕುಷನ್‌, 200 ಸಂಖ್ಯೆಯ ಡೋರ್‍‌ ಫುಟ್‌ ಮ್ಯಾಟ್‌, 1,000 ಸಂಖ್ಯೆಯ ರಬ್ಬರ್‍‌ ಫುಟ್‌ ಮ್ಯಾಟ್‌, 1,250 ಸಂಖ್ಯೆಯ ಸಿಂಗಲ್‌ ಬೆಡ್‌ಶೀಟ್‌, 600 ಸಂಖ್ಯೆಯ ಡಬಲ್‌ ಬೆಡ್‌ಶೀಟ್‌, 250 ಸಂಖ್ಯೆ ಟರ್ಕಿ ಟವಲ್‌, 600 ಸಂಖ್ಯೆಯ ಉಲ್ಲನ್‌ ಬೆಡ್‌ ಶೀಟ್‌, ಬ್ಲಾಂಕೇಟ್‌ಗಳನ್ನು ಕೊಯಮತ್ತೂರಿನ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ನೇರವಾಗಿ ಖರೀದಿಸಲು ಪ್ರಸ್ತಾವನೆಯಲ್ಲಿ ಕೋರಿದ್ದರು ಎಂಬುದು ತಿಳಿದು ಬಂದಿದೆ.

 

ರೆಸ್ಟೋಲೆಕ್ಸ್‌, ಬೆಂಗಳೂರಿನ ಸದಾಶಿವನಗರದಲ್ಲಿರುವ ಜತ್ತಿ ಟ್ರಾಕ್ಸ್‌ ಎಲ್ಎಲ್‌ಪಿ ನಿಂದ ದರ ಪಟ್ಟಿ ಪಡೆದಿತ್ತು. ಈ ಪೈಕಿ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿದೆ ಎಂಬುದು ಗೊತ್ತಾಗಿದೆ.

Tags: AyurvedicbjpcongressD K ShivakumarDharmastalaFinanceh d kumarswamyjdsKshemavanaL K AteqLegislators HouseNachorapatiSiddaramaiahaSpeakarU T Khaderಅನುಮೋದನೆಅರಣ್ಯ ಕಾಯ್ದೆಆಯುರ್ವೇದಿಕ್‌ಆರ್ಥಿಕ ಇಲಾಖೆಕಾಯ್ದೆಕೆಟಿಪಿಪಿಕ್ಷೇಮವನಡಬಲ್‌ ಹಾಸಿಗೆಡಿ ಕೆ ಶಿವಕುಮಾರ್ಡೋರ್‌ ಫುಟ್‌ ಮ್ಯಾಟ್‌ದಿಂಬುಧರ್ಮಸ್ಥಳನಿದ್ರಾನ್ಯಾಚರೋಪತಿಮಂಚಮಂಜುನಾಥೇಶ್ವರಶಾಸಕರ ಭವನಸಿದ್ದರಾಮಯ್ಯಹಾಸಿಗೆಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

‘ಚನ್ನಮ್ಮನ ಕಿತ್ತೂರು ತಾಲೂಕು’; ಮರು ನಾಮಕರಣಗೊಳಿಸಲು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

Next Post

ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್‌ ನಿರ್ದೇಶಕರ ಎಚ್ಚರಿಕೆ

thefilestack

thefilestack

Next Post

ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್‌ ನಿರ್ದೇಶಕರ ಎಚ್ಚರಿಕೆ

Recommended

ಅಂತರ್ಜಾತಿ ದಂಪತಿ ಕೊಲೆ ಪ್ರಕರಣ; ವರದಿ ನೀಡದ ಸರ್ಕಾರದ ವಿರುದ್ಧ ಆಯೋಗ ಗರಂ, ಇಲಾಖೆಗೆ ಎಚ್ಚರಿಕೆ

1 year ago

ಲೋಕಾಯುಕ್ತರ ಪತ್ನಿ ವಿರುದ್ಧ ಪ್ರಕರಣ; ದೂರರ್ಜಿ ಮೇಲೆ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸದ ಐಜಿ ಕಚೇರಿ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd