the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

thefilestack by thefilestack
October 5, 2024
in GOVERNANCE
0
ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?
0
SHARES
1
VIEWS
Share on FacebookShare on Twitter

ಬೆಂಗಳೂರು; ಇಲಾಖೆಗಳಲ್ಲಿ ವಿಲೇವಾರಿ ಆಗದೇ ಇರುವ ಕಡತಗಳ ಸಂಖ್ಯೆ ಬೆಟ್ಟದಷ್ಟು ಬೆಳೆದು ನಿಂತಿದ್ದರೇ ಇತ್ತ ಬಿಡುಗಡೆ ಮಾಡಿದ್ದ  ಅನುದಾನದ ಪೈಕಿ  22 ಇಲಾಖೆಗಳು ಅರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ  32,250.02 ಕೋಟಿಯಷ್ಟು ಖರ್ಚು ಮಾಡದೇ ಹಾಗೇ ಇಟ್ಟಿವೆ.

 

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ 2024ರ ಅಕ್ಟೋಬರ್‍‌ 1ರಂದು ನಡೆದಿದ್ದ ಸರ್ಕಾರದ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ 32,250.02 ಕೋಟಿ ರು. ಖರ್ಚಾಗದೇ ಬಾಕಿ ಇರುವ ಸಂಗತಿ ಕುರಿತು ಚರ್ಚೆಯಾಗಿದೆ.

 

ಈ ಸಭೆಗೆ ಇಲಾಖೆಗಳು ಮಂಡಿಸಿದ್ದ ಅಂಕಿ ಅಂಶಗಳ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಡತಗಳನ್ನು ಬಾಕಿ ಉಳಿಸಿಕೊಳ್ಳುವುದರಲ್ಲಿ ಪೈಪೋಟಿ ಒಡ್ಡಿರುವ ಇಲಾಖೆಗಳು, ಅನುದಾನವನ್ನು ಖರ್ಚು ಮಾಡುವುದರಲ್ಲಿ ಮಾತ್ರ ಹಿಂದೆ ಬಿದ್ದಿವೆ. 22 ಇಲಾಖೆಗಳ ಪೈಕಿ ಒಂದು ಇಲಾಖೆಯೂ ಶೇ.50ರ ಗಡಿಯನ್ನೂ ದಾಟಿಲ್ಲ.

 

ಸಚಿವ ಜಮೀರ್‍‌ ಅಹ್ಮದ್‌ ಖಾನ್‌, ಬೋಸರಾಜು, ಡಾ ಶರಣ ಪ್ರಕಾಶ್‌ ಪಾಟೀಲ್‌, ಕೆ ಹೆಚ್‌ ಮುನಿಯಪ್ಪ, ಹೆಚ್‌ ಕೆ ಪಾಟೀಲ್‌, ಸಂತೋಷ್‌ ಲಾಡ್‌, ಎಂ ಬಿ ಪಾಟೀಲ್‌, ಕೆ ವೆಂಕಟೇಶ್‌ ಅವರು ಸಚಿವರಾಗಿರುವ ಇಲಾಖೆಗಳೇ ಅತೀ ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿದೆ.

 

ಸಣ್ಣ ನೀರಾವರಿ, ತೋಟಗಾರಿಕೆ, ಪಶು ಸಂಗೋಪನೆ, ಕರ್ನಾಟಕ ವಿಧಾನಸಭೆ, ಪರಿಷತ್‌, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಆಹಾರ, ಯುವ ಸಬಲೀಕರಣ, ಪ್ರವಾಸೋದ್ಯಮ, ರೇಷ್ಮೆ, ಮೀನುಗಾರಿಕೆ, ವಾರ್ತಾ, ವಾಣಿಜ್ಯ ಕೈಗಾರಿಕೆ, ಮೂಲಭೂತ ಸೌಕರ್ಯ, ಪರಿಶಿಷ್ಟ ಪಂಗಡ, ಇಂಧನ, ಕನ್ನಡ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಕಾರ್ಮಿಕ ಇಲಾಖೆಯಲ್ಲಿ  ಒಟ್ಟಾರೆಯಾಗಿ 2024ರ ಸೆ.21ರ ಅಂತ್ಯಕ್ಕೆ 32,250.02 ಕೋಟಿ ರು. ಖರ್ಚಾಗದೇ ಹಾಗೇ ಉಳಿದುಕೊಂಡಿರುವುದು ಗೊತ್ತಾಗಿದೆ.

 

2024-25ನೇ ಸಾಲಿನಲ್ಲಿ ಒಟ್ಟು 3.28 ಲಕ್ಷ ಕೋಟಿ ರು ಅನುದಾನವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಸೆ.21ರ ಅಂತ್ಯಕ್ಕೆ 1.26 ಲಕ್ಷ ಕೋಟಿ ರು. ಬಿಡುಗಡೆ ಆಗಿತ್ತು. ಇದು ಒಟ್ಟು ಅನುದಾನಕ್ಕೆ ಶೇ. 40.67ರಷ್ಟಿತ್ತು ಈ ಪೈಕಿ 1.11 ಲಕ್ಷ ಕೋಟಿ ರು. ಒಟ್ಟು ವೆಚ್ಚವಾಗಿದೆ. ಇದು ಸಹ ಒಟ್ಟು ಅನುದಾನಕ್ಕೆ ಶೇ. 34.00 ರಷ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗೆ ಬಿಡುಗಡೆಯಾಗಿದ್ದ ಒಟ್ಟು ಅನುದಾನದ ಪೈಕಿ ಶೇ. 27.37ರಷ್ಟು ಮಾತ್ರ ವೆಚ್ಚವಾಗಿದೆ ಎಂದು ತಿಳಿದು ಬಂದಿದೆ.

 

ಸಣ್ಣ ನೀರಾವರಿ ಇಲಾಖೆಗೆ ಹಂಚಿಕೆಯಾಗಿದ್ದ ಒಟ್ಟು 2,388.49 ಕೋಟಿ ರು. ಅನುದಾನದ ಪೈಕಿ 1,003.54 ಕೋಟಿ ರು (ಶೇ.42.02) ಬಿಡುಗಡೆಯಾಗಿದೆ. ಇದರಲ್ಲಿ ಸೆ.21ರ ಅಂತ್ಯಕ್ಕೆ 761.92 ಕೋಟಿ ರು. ಮಾತ್ರ ಖರ್ಚಾಗಿದೆ. ಖರ್ಚು ಮಾಡಲು ಇನ್ನೂ 241.63 ಕೋಟಿ ರು. ಬಾಕಿ ಇರುವುದು ಗೊತ್ತಾಗಿದೆ.

 

ತೋಟಗಾರಿಕೆ ಇಲಾಖೆಯಲ್ಲಿ 221.35 ಕೋಟಿ, ಪಶು ಸಂಗೋಪನೆಯಲ್ಲಿ 162.16 ಕೋಟಿ, ಕರ್ನಾಟಕ ವಿಧಾನಸಭೆ, ಪರಿಷತ್‌ 159.69 ಕೋಟಿ, ವೈದ್ಯಕೀಯ ಶಿಕ್ಷಣದಲ್ಲಿ 140.07 ಕೋಟಿ, ವಾಣಿಜ್ಯ ಕೈಗಾರಿಕೆ (ಬೃಹತ್‌) 134.70 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 133.05 ಕೋಟಿ, ಆಹಾರ ಇಲಾಖೆ 94.82 ಕೋಟಿ, ವಾಣಿಜ್ಯ ಕೈಗಾರಿಕೆ (ಸಣ್ಣ, ಜವಳಿ, ಗಣಿ) 82.86 ಕೋಟಿ, ಕಾರ್ಮಿಕ ಇಲಾಖೆ 76.25 ಕೋಟಿ ರು ಬಾಕಿ ಇದೆ.

 

ಯುವಸಬಲೀಕರಣದಲ್ಲಿ 72.78 ಕೋಟಿ, ಮೂಲಭೂತ ಸೌಕರ್ಯ 58.07 ಕೋಟಿ, ಪ್ರವಾಸೋದ್ಯಮ 45.12 ಕೋಟಿ, ಪರಿಶಿಷ್ಟ ಪಂಗಡಗಳು 33.01 ಕೋಟಿ, ರೇಷ್ಮೆ 30.49 ಕೋಟಿ, ಇಂಧನ 23.26 ಕೋಟಿ, ಮೀನುಗಾರಿಕೆ 20.30 ಕೋಟಿ, ಇ-ಆಡಳಿತ16.04 ಕೋಟಿ, ಸಿಬ್ಬಂದಿ ಆಡಳಿತ ಸುಧಾರಣೆ (ಆಡಳಿತ ಸುಧಾರಣೆ) 13.24 ಕೋಟಿ, ಕನ್ನಡ ಸಂಸ್ಕೃತಿ 11.78 ಕೋಟಿ, ವಾರ್ತಾ 9.12 ಕೋಟಿ, ಮಾಹಿತಿ ತಂತ್ರಜ್ಞಾನ 1.46 ಕೋಟಿ ರು. ಖರ್ಚಾಗದೇ ಬಾಕಿ ಇರುವುದು ತಿಳಿದು ಬಂದಿದೆ.

 

2023-24ನೇ ಸಾಲಿಗೆ ಹೋಲಿಸಿದರೇ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 31ರಷ್ಟು ಅನುದಾನ ಖರ್ಚು ಮಾಡಿತ್ತು. 2024-25ನೇ ಸಾಲಿನ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 34.96ರಷ್ಟಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಶೇ.3ರಷ್ಟು ಮಾತ್ರ ಖರ್ಚಾಗಿರುವುದು ಗೊತ್ತಾಗಿದೆ.

Tags: AnimalAnimal husbandryBasanagoudabjpBudgetcommerceD K ShivakumareducationFishersfoodgrantsHorticultureIndustrialmedicalminesMinoritesMinorityPatilr ashokSiddaramaiahaSpentUn SpentYatnalಅನುದಾನಅಲ್ಪಸಂಖ್ಯಾತರ ಕಲ್ಯಾಣಆಯವ್ಯಯಆರ್‌ ಅಶೋಕ್‌ಉಳಿಕೆಕಡತಕಾಂಗ್ರೆಸ್‌ಖರ್ಚುಜಮೀರ್‌ ಅಹ್ಮದ್‌ ಖಾನ್‌ಜೆಡಿಎಸ್‌ಡಾ ಶರಣ ಪ್ರಕಾಶ್‌ ಪಾಟೀಲ್‌ಡಿ ಕೆ ಶಿವಕುಮಾರ್ಬಜೆಟ್‌ಬಿಜೆಪಿಮೀನುಗಾರಿಕೆಮೈಗಳ್ಳರುರಾಶಿವೈದ್ಯಕೀಯಸಣ್ಣ ನೀರಾವರಿಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಕಲ್ಲೇಶ್‌ ಅಮಾನತು ಕಡತ; ಸಾರ್ವಜನಿಕ ಹಿತಾಸಕ್ತಿಯಿಲ್ಲ, ವೈಯಕ್ತಿಕ ಮಾಹಿತಿಯೆಂದು ಪುನರುಚ್ಛರಿಸಿದ ಸರ್ಕಾರ

Next Post

69 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ; ರಾಜ್ಯಪಾಲರ ಪತ್ರ ಬೆನ್ನಲ್ಲೇ ಸಿದ್ಧಗೊಂಡ ಪಟ್ಟಿ

thefilestack

thefilestack

Next Post
69 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ; ರಾಜ್ಯಪಾಲರ ಪತ್ರ ಬೆನ್ನಲ್ಲೇ  ಸಿದ್ಧಗೊಂಡ ಪಟ್ಟಿ

69 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ; ರಾಜ್ಯಪಾಲರ ಪತ್ರ ಬೆನ್ನಲ್ಲೇ ಸಿದ್ಧಗೊಂಡ ಪಟ್ಟಿ

Recommended

ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು

2 years ago

ಶಾಸಕರ ವಿಶ್ವಾಸ ಪಡೆಯದೇ ಎಡವಿ ಬಿದ್ದ ಈಶ್ವರಪ್ಪ?; ಗ್ರಾಮೀಣಕ್ಕಿಲ್ಲ ‘ಸುಮಾರ್ಗ’

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd