the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ರ‍್ಯಾಪಿಡ್ ಆಟಿಜೆನ್‌ ಕಿಟ್‌ ಪೂರೈಕೆ ಆದೇಶ ರದ್ದು; ಕಮಿಷನ್‌ ವ್ಯವಹಾರ ಕುದುರದಿರುವುದು ಕಾರಣವೇ?

ಜಿ ಮಹಂತೇಶ್ by ಜಿ ಮಹಂತೇಶ್
August 20, 2020
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವ ಉದ್ದೇಶದಿಂದ 13.50 ಕೋಟಿ ಮೊತ್ತದಲ್ಲಿ 3 ಲಕ್ಷ ರ‍್ಯಾಪಿಡ್ ಆಟಿಜೆನ್‌ ಕಿಟ್‌ಗಳನ್ನು ಖರೀದಿಸಲು ಆಸ್ಚೋ ಏಜೆನ್ಸಿಗೆ (ಎಲ್‌-1) ನೀಡಿದ್ದ ಆದೇಶವನ್ನು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ರದ್ದುಗೊಳಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ರ‍್ಯಾಪಿಡ್ ಆಟಿಜೆನ್‌ ಕಿಟ್‌ ಮೂಲಕ ನಡೆಸುವ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿರುವ ಗುರಿ ತಲುಪುತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಹೇಳಿಕೆ ನೀಡಿದ್ದರ ಬೆನ್ನಲ್ಲೇ 3 ಲಕ್ಷ ಕಿಟ್‌ ಖರೀದಿಗೆ ನೀಡಿದ್ದ ಆದೇಶವನ್ನು ಒಮ್ಮೆಲೆ ರದ್ದುಗೊಳಿಸಿರುವುದು ಪರೀಕ್ಷೆ ಸಂಖ್ಯೆಗಳು ಇನ್ನಷ್ಟು ಇಳಿಮುಖವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಆಸ್ಚೋ ಏಜೆನ್ಸಿಸ್‌ಗೆ ತಡವಾಗಿ ಆದೇಶದ ಪ್ರತಿಯನ್ನು ನೀಡಿತ್ತು. ಬಳಿಕ ಉಪಕರಣಗಳನ್ನು ನಿಗದಿತ ಅವಧಿಯಲ್ಲಿ ಪೂರೈಕೆ ಮಾಡಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಆದೇಶವನ್ನು ರದ್ದುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ ಏಜೆನ್ಸಿಯು ಅಧಿಕಾರಿಗಳಿಗೆ ಕಮಿಷನ್‌ ನೀಡದಿರುವುದೇ ಆದೇಶ ರದ್ದುಗೊಳ್ಳಲು ಮೂಲ ಕಾರಣ ಎಂದು ಹೇಳಲಾಗುತ್ತಿದೆ.

ಪ್ರಕರಣದ ಹಿನ್ನೆಲೆ

ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಒಟ್ಟು 13.50 ಕೋಟಿ ಮೊತ್ತದ 5 ಲಕ್ಷ ಪ್ರಮಾಣದ ಕಿಟ್‌ ಖರೀದಿಗೆ 2020ರ ಜುಲೈ 28ರಂದು ಕೊಟೇಷನ್‌ ಕರೆದಿತ್ತು. ಇದರಲ್ಲಿ ಎಲ್‌-1 ಆಗಿದ್ದ ಆಸ್ಚೋ ಏಜೆನ್ಸೀಸ್‌ಗೆ ಆಗಸ್ಟ್‌ 5ರಂದು ಸರಬರಾಜು ಆದೇಶ ನೀಡಿತ್ತು. ಕೆಡಿಲ್‌ಡಬ್ಲ್ಯೂಎಸ್‌ ಕಂಪನಿಯ ಅಧಿಕೃತ ಈ-ಮೈಲ್‌ಗೆ ಆಗಸ್ಟ್‌ 8ಕ್ಕೆ ಮೇಲ್‌ ಕಳಿಸಿತ್ತು ಎಂದು ತಿಳಿದು ಬಂದಿದೆ.

ಆಗಸ್ಟ್‌ 5ರಂದು ನೀಡಿರುವ ಆದೇಶದ ಪ್ರಕಾರ ಉಪಕರಣಗಳನ್ನು ಆಗಸ್ಟ್‌ 11ರೊಳಗೆ ಸರಬರಾಜು ಮಾಡಬೇಕು. ಆದರೆ ಕೆಡಿಎಲ್‌ಡಬ್ಲ್ಯೂಎಸ್‌ನ ಮೂಲಗಳ ಪ್ರಕಾರ ಈ ಕಂಪನಿಗೆ ಆಗಸ್ಟ್‌ 8ರಂದು ಸರಬರಾಜು ಆದೇಶದ ಈ-ಮೈಲ್‌ ತಲುಪಿತ್ತು ಎಂದು ಗೊತ್ತಾಗಿದೆ.

ಕಂಪನಿ ಅಧಿಕೃತ ಈ-ಮೇಲ್‌ಗೆ ಆದೇಶ ತಲುಪಿದ ನಂತರ ಉಪಕರಣಗಳನ್ನು ಸರಬರಾಜು ಮಾಡಲು 7 ದಿನ ಅವಧಿ ಕಾಲಾವಕಾಶ ಇರುತ್ತೆ. ಆದರೆ ಕಂಪನಿಯ ಅಧಿಕೃತ ಈ-ಮೈಲ್‌ಗೆ ಆಗಸ್ಟ್‌ 8ರಂದು ಆದೇಶ ತಲುಪಿದೆ ಎಂದು ಹೇಳಲಾಗಿದೆ. ಇದರ ಪ್ರಕಾರ ಉಪಕರಣಗಳನ್ನು ಅಗಸ್ಟ್‌ 14ರೊಳಗೆ ಸರಬರಾಜು ಮಾಡಬೇಕು. ಆದರೆ ಈ ಅವಧಿ ಪೂರ್ಣಗೊಳ್ಳುವ ಮುನ್ನವೇ ಅಂದರೆ ಆಗಸ್ಟ್‌ 12ರಂದೇ ಸರಬರಾಜು ಆದೇಶವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂಬ ವಾದಗಳು ಕೇಳಿ ಬಂದಿವೆ. ಅಧಿಕಾರಿಗಳ ಈ ನಡೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಇನ್ನು 5 ಲಕ್ಷದ ಉಪಕರಣಗಳಿಗೆ ಕೊಟೇಷನ್‌ ಕರೆದಿದ್ದ ಸೊಸೈಟಿಯು ಈ ಪ್ರಮಾಣಕ್ಕೆ ಏಜೆನ್ಸಿಯಿಂದ 67.50 ಲಕ್ಷ ರು.ಗಳನ್ನು ಭದ್ರತಾ ಠೇವಣಿ ರೂಪದಲ್ಲಿರಿಸಿದೆ ಎಂದು ಗೊತ್ತಾಗಿದೆ. ಆದರೆ ಏಜೆನ್ಸಿಗೆ 5 ಲಕ್ಷದ ಬದಲಿಗೆ 3 ಲಕ್ಷ ಉಪಕರಣಗಳಿಗಷ್ಟೇ ಆದೇಶ ನೀಡಿದೆ. ಇದು ಕೂಡ ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ. 3 ಲಕ್ಷ ಉಪಕರಣಗಳಿಗಷ್ಟೇ ಆದೇಶ ನೀಡುವ ಉದ್ದೇಶವಿದ್ದರೆ ಈ ಪ್ರಮಾಣಕ್ಕೆ ತಕ್ಕಂತೆ ಭದ್ರತಾ ಠೇವಣಿ ಹಣವನ್ನೇಕೆ ಪಡೆದಿಲ್ಲ ಎಂಬ ಪ್ರಶ್ನೆಯೂ ಎದುರಾಗಿದೆ.

ಕೆಡಿಎಲ್‌ಡಬ್ಲ್ಯೂಎಸ್‌ನಲ್ಲಿ ಇಷ್ಟೆಲ್ಲಾ ಅಪರಾತಪರಾಗಳು ನಡೆಯುತ್ತಿದ್ದರೂ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಗಮನಿಸದಿರುವುದು ಕೂಡ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಕಾರ್ಯ ತ್ವರಿತವಾಗಿ ಮುಗಿಸಲು ರ‍್ಯಾಪಿಡ್ ಆಟಿಜೆನ್‌ ಕಿಟ್‌ನ ಮೂಲಕ ಪರೀಕ್ಷೆ ನಡೆಯಲಿದೆ. ಇದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿತ್ತು. ರಾಜ್ಯದ ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳು ಈ ಕಿಟ್‌ ಬಳಸಿ ಪರೀಕ್ಷೆ ನಡೆಸಲು ಮುಂದಾಗಿದ್ದವು. ಕಂಟೈನ್ಮೆಂಟ್‌ ವಲಯಗಳು ಅಥವಾ ಹಾಟ್ ಸ್ಟಾಟ್‌ ವಲಯಗಳು, ಅನಾರೋಗ್ಯದಂತಹ ಐಎಲ್‌ಐ ಸೇರಿ ಎಲ್ಲ ರೋಗ ಲಕ್ಷಣದ ಜನರನ್ನು ಈ ಕಿಟ್‌ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ರ‍್ಯಾಪಿಡ್ ಆಂಟಿಜೆನ್‌ ಟೆಸ್ಟ್‌ ಬಳಕೆ ಆರಂಭವಾದರೆ, ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಆಗಸ್ಟ್‌ 18-19ರ 24 ಗಂಟೆಯಲ್ಲಿ 30,399 ಸೇರಿದಂತೆ ಈವರೆವಿಗೆ ಒಟ್ಟು 5,82,124 ಪರೀಕ್ಷೆಗಳನ್ನು ನಡೆಸಲಾಗಿದೆ.

Tags: Ashco AgenciesB S YediyurapaB SriramuluContact TracingCovid-19Dr. K. SudhakarExpert Committeeh d kumarswamyHospitalsJawaidAktharkarnatakaManjusriPankajkumarpandeyPositive CasesRapid Antigen TestsRapid Antigen Tests KitsRT-PCRSiddaramaiahಆರ್‌ಟಿ-ಪಿಸಿಆರ್‌ಕರೊನಾ ವೈರಸ್‌ಕೋವಿಡ್‌-19ಜಾವೇದ್‌ ಅಖ್ತರ್‌ಡಾ ಕೆ ಸುಧಾಕರ್‌ಪಂಕಜಕುಮಾರ್‌ ಪಾಂಡೆಬಿ ಎಸ್‌ ಯಡಿಯೂರಪ್ಪಬಿ ಶ್ರೀರಾಮುಲುಮಂಜುಶ್ರೀರ‍್ಯಾಪಿಡ್ ಆಟಿಜೆನ್‌ ಕಿಟ್‌ಸಿದ್ದರಾಮಯ್ಯ
Advertisement Banner
Previous Post

‘ದಿ ಫೈಲ್‌’ ವರದಿ ಪರಿಣಾಮ; ಪುಸ್ತಕಗಳ ತರಾತುರಿ ಆಯ್ಕೆಗೆ ತಡೆ, ಅವಧಿ ವಿಸ್ತರಣೆ

Next Post

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?

ಜಿ ಮಹಂತೇಶ್

ಜಿ ಮಹಂತೇಶ್

Next Post

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?

Discussion about this post

Recommended

ತಮಿಳುನಾಡು ಮೂಲದ ಕಂಪನಿಗೆ ಬಂದರು ಭೂಮಿ ಮಂಜೂರು; ಲಂಚಗುಳಿತನ, ಅವ್ಯವಹಾರ ಆರೋಪ

3 years ago

ಅನುದಾನ ಲಭ್ಯವಿಲ್ಲದಿದ್ದರೂ ಖರ್ಗೆ ಕುಟುಂಬ ಸದಸ್ಯರ ಸೊಸೈಟಿಗೆ 2 ವರ್ಷದಲ್ಲಿ 9.9 ಕೋಟಿ ಅನುದಾನ

10 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd