the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ಸಿ’ ಗುಂಪಿನ ನೌಕರ ‘ಎ’ದರ್ಜೆಯಲ್ಲಿ ಕಾರ್ಯಭಾರ?; ಆರೋಗ್ಯ ಇಲಾಖೆಯಲ್ಲಿ ಅನರ್ಹರಿಗೂ ಮುಂಬಡ್ತಿ?

thefilestack by thefilestack
September 18, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸರ್ಕಾರದ ಯಾವುದೇ ಆದೇಶವಿಲ್ಲದೆ ‘ಸಿ’ ಗ್ರೂಪ್‌ಗೆ ಸೇರಿದ ನೌಕರ ಶಿವಕುಮಾರ್‌ ಎಂಬುವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳೆದ 2 ವರ್ಷದಿಂದಲೂ ಅನಧಿಕೃತವಾಗಿ ಪತ್ರಾಂಕಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ.

ಕಳೆದ 15 ವರ್ಷಗಳಿಂದಲೂ ಮೇಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ನಿಯೋಜನೆ ಮೇರೆಗೆ ‘ಎ’ ದರ್ಜೆಯ ಹುದ್ದೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದಾರೆ ಎಂಬ ಆರೋಪಕ್ಕೂ ಗುರಿಯಾಗಿರುವ ಇವರನ್ನೀಗ ಸೇವಾ ಅಭಿಯಂತರ ಹುದ್ದೆಗೆ ಬಡ್ತಿ ನೀಡುವ ಅರ್ಹತಾ ಪಟ್ಟಿಯಲ್ಲಿಯೂ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮುಖ್ಯ ಖರೀದಿ ಅಧಿಕಾರಿ ಹುದ್ದೆಯು ‘ಎ’ ಗುಂಪಿಗೆ ಶ್ರೇಣಿಗೆ ಸೇರಿದೆ. ಸ್ಕಿಲ್‌ ಟ್ರೇಡ್‌ಮನ್‌ ಹುದ್ದೆಯಲ್ಲಿರುವ ಶಿವಕುಮಾರ್‌ ಅವರು ಮುಖ್ಯ ಖರೀದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು, ಮುಖ್ಯ ಜಾಗೃತ ಅಧಿಕಾರಿ, ಮುಖ್ಯ ಆಡಳಿತಾಧಿಕಾರಿ, ಸರ್ಕಾರದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈವರೆವಿಗೂ ಕ್ರಮಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಇದಷ್ಟೇ ಅಲ್ಲ, ಮಾನ್ಯತೆ ಇಲ್ಲದ ಸಂಸ್ಥೆಯಿಂದ ಬಿ ಟೆಕ್‌ ಪದವಿ ಪ್ರಮಾಣ ಪತ್ರ ನೀಡಿ ಬಡ್ತಿಯನ್ನು ಪಡೆದಿದ್ದರು ಎಂದು ಒಪ್ಪಿಕೊಂಡಿದ್ದರು. ಮಾನ್ಯತೆ ಇಲ್ಲದೆ ಸಂಸ್ಥೆಯಿಂದ ಬಿ ಟೆಕ್‌ ಪದವಿ ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಸ್ವತಃ ಶಿವಕುಮಾರ್‌ ಅವರು ಒಪ್ಪಿಕೊಂಡಿದ್ದರೂ ಮುಂಬಡ್ತಿಯನ್ನೂ ಹಿಂಪಡೆದಿದ್ದರು. ಆದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ಜರುಗಿಸಿರಲಿಲ್ಲ.

ಇಲಾಖೆ ವಿಚಾರಣೆಯಲ್ಲೂ ಸಾಬೀತಾಗಿತ್ತು ಆರೋಪ

ಈ ಪ್ರಕರಣದ ಮತ್ತೊಂದು ವಿಶೇಷವೆಂದರೆ ಸ್ಕಿಲ್ಡ್‌ ಟ್ರೇಡ್ಸ್‌ಮನ್‌ ವೃಂದದಿಂದ ಸೇವಾ ಅಭಿಯಂತರ ಹುದ್ದೆಗೆ ಪದನ್ನೋತಿ ಕೋರಿ ಸಲ್ಲಿಸಿದ್ದ 11 ಸಿಬ್ಬಂದಿಗಳ ಪೈಕಿ ಶಿವಕುಮಾರ್‌ ಅವರ ವಿರುದ್ಧದ ದೂರು ಕೂಡ ಸಾಬೀತಾಗಿತ್ತು. ಮುಖ್ಯ ಜಾಗೃತಾಧಿಕಾರಿಗಳು ನೀಡಿದ್ದ ವರದಿ ಆಧರಿಸಿ ಶಿಸ್ತು ಕ್ರಮ ಜರುಗಿಲು ಕಡತವೂ ಚಾಲನೆಯಲ್ಲಿದೆ ಎಂಬುದು ಪದನ್ನೋತಿ ಸಭೆಯ ರಹಸ್ಯ ವರದಿಯಿಂದ ತಿಳಿದು ಬಂದಿದೆ.

ಇನ್ನು, ಪದನ್ನೋತಿಯನ್ನು ಹಿಂಪಡೆದಿದ್ದ ಇಲಾಖೆಯ ನಿರ್ದೇಶಕರು ಶಿವಕುಮಾರ್‌ ವಿರುದ್ಧ ದೋಷಾರೋಪಣೆಯನ್ನು ಕೈಬಿಟ್ಟಿದ್ದರಲ್ಲದೆ ಇಡೀ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಸ್ಕಿಲ್‌ ಟ್ರೇಡ್‌ಮನ್‌ ಹುದ್ದೆಯಿಂದ ಸೇವಾ ಅಭಿಯಂತರ ಹುದ್ದೆಗೆ ಪದನ್ನೋತಿ ನೀಡುವ ಸಂಬಂಧ ನೌಕರರ ರಹಸ್ಯ ವರದಿ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದ್ದ ಇಲಾಖೆಯ ಕಾರ್ಯದರ್ಶಿ ಪಂಕಜಕುಮಾರ್‌ ಪಾಂಡೆ ಅವರ ಅಧ್ಯಕ್ಷತೆಯ ಸಮಿತಿಯು 2020ರ ಜೂನ್‌ 8ರಂದು ನಡೆಸಿದ್ದ ಸಭೆಯಲ್ಲಿ 10 ಮಂದಿಯ ಅರ್ಹತಾ ಪಟ್ಟಿಯಲ್ಲಿ ಶಿವಕುಮಾರ್‌ ಅವರು ಅರ್ಹರಿರುತ್ತಾರೆ ಎಂದು ಉಲ್ಲೇಖಿಸಿ ಅವರ ಹೆಸರನ್ನೂ ಸೇರ್ಪಡೆಗೊಳಿಸಿತ್ತು ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

‘ಎ’ ದರ್ಜೆಯ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಅನರ್ಹರಾಗಿದ್ದರೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿಯೂ ಕರ್ತವ್ಯ ನಿಭಾಯಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಆರೋಗ್ಯ ಇಲಾಖೆಯಲ್ಲಿ ಇಂತಹ ಹಲವು ಪ್ರಕರಣಗಳಿದ್ದರೂ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಈವರೆವಿಗೂ ಗಮನಹರಿಸದಿರುವುದು ಇಲಾಖೆ ಸಚಿವ ಶ್ರೀರಾಮುಲು ಅವರಿಗೆ ಇಲಾಖೆ ಮೇಲೆ ಯಾವುದೇ ಹಿಡಿತವಿಲ್ಲ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Tags: B S YediyurappaB SriramuluChief Secretaryh d kumarswamyhealth departmentJawaid AktharKDLWSPankaj Kumar PandeyShivakumarSiddramaihಆರೋಗ್ಯ ಇಲಾಖೆಕೆಡಿಎಲ್‌ಡಬ್ಲ್ಯೂಎಸ್‌ಡಿಪಿಎಆರ್‌ಪಂಕಜ್‍ಕುಮಾರ್ ಪಾಂಡೆಬಿ ಎಸ್‌ ಯಡಿಯೂರಪ್ಪಬಿ ಶ್ರೀರಾಮುಲುಮುಖ್ಯ ಕಾರ್ಯದರ್ಶಿಶಿವಕುಮಾರ್‌ಸಿದ್ದರಾಮಯ್ಯ
Advertisement Banner
Previous Post

ಸ್ಟೀಲ್ ಫರ್ನಿಚರ್ಸ್ ಕಂಪನಿಯಿಂದಲೂ ಫಿಂಗರ್ ಟಿಪ್ ಪಲ್ಸ್ ಆಕ್ಸಿಮೀಟರ್ ಖರೀದಿ; ಪೂರ್ವ ನಿರ್ಧರಿತ ಒಪ್ಪಂದವೇ?

Next Post

ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ, ಅನುದಾನವೂ ಇಲ್ಲ; ಬಜೆಟ್‌ನಲ್ಲಿ ಹೇಳಿದ್ದೆಲ್ಲವೂ ಸುಳ್ಳೇ ಸುಳ್ಳು!

thefilestack

thefilestack

Next Post

ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ, ಅನುದಾನವೂ ಇಲ್ಲ; ಬಜೆಟ್‌ನಲ್ಲಿ ಹೇಳಿದ್ದೆಲ್ಲವೂ ಸುಳ್ಳೇ ಸುಳ್ಳು!

Discussion about this post

Recommended

6 ತಿಂಗಳಾದರೂ ಪ್ರಗತಿಯ ಹಳಿ ಹತ್ತದ ಬಿಜೆಪಿ ಸರ್ಕಾರ; ಬಯಲಾಯಿತು ಅಧಿಕಾರಿಗಳ ಮೈಗಳ್ಳತನ

6 years ago

Crispy Air Fryer Parmesan And Thyme Roasted Wedge Fries

7 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd