the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕರ್ನಾಟಕದ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಅಕ್ರಮ; ಆರ್‌ಬಿಐ ಗೌಪ್ಯ ವರದಿ ಬಹಿರಂಗ

ಜಿ ಮಹಂತೇಶ್ by ಜಿ ಮಹಂತೇಶ್
June 19, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ರಾಜ್ಯದ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌ ಸೇರಿದಂತೆ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳು ಸಾಲ, ಮುಂಗಡ, ಹೂಡಿಕೆ, ನಗದು ನಿರ್ವಹಣೆ, ಅನುಮಾನಸ್ಪದ ವಹಿವಾಟು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪಕ್ಕೆ ಗುರಿಯಾಗಿವೆ.

ಈ ಕುರಿತು ಭಾರತೀಯ ರಿಸರ್ವ್‌ಬ್ಯಾಂಕ್‌ 2020ರ ಮಾರ್ಚ್‌ನ ವಿವಿಧ ದಿನಾಂಕಗಳಲ್ಲಿ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಅವರಿಗೆ ಸಲ್ಲಿಸಿರುವ ‘ಗೌಪ್ಯ’ ವರದಿ, ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿನ ಹಲವು ನಿಯಮಬಾಹಿರ ಚಟುವಟಿಕೆ ಮತ್ತು ದೊಡ್ಡ ಮೊತ್ತದ ವಂಚನೆ ಪ್ರಕರಣಗಳನ್ನು ಹೊರಗೆಡವಿದೆ. ಈ ಎಲ್ಲಾ ಗೌಪ್ಯ ವರದಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಯ ವಿಪರೀತ ಹಸ್ತಕ್ಷೇಪ ಮತ್ತು ಆರ್ಥಿಕ ಅಶಿಸ್ತಿನ ಕಾರಣಗಳಿಂದಾಗಿ ಎನ್‌ಪಿಎ ಪ್ರಮಾಣವನ್ನು ಹೆಚ್ಚಿಸಿಕೊಂಡಿದೆ ಎಂದು ಆರ್‌ಬಿಐ ಗೌಪ್ಯ ವರದಿಯಲ್ಲಿ ವಿವರಿಸಿದೆ. 2019ರ ಮಾರ್ಚ್‌ ಅಂತ್ಯದ ಹಣಕಾಸಿನ ವರ್ಷಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಿರುವ ಆರ್‌ಬಿಐ, ವರದಿ ಆಧರಿಸಿ ಸೂಕ್ತ ಕ್ರಮ ಜರುಗಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದು ವರದಿಯಿಂದ ಗೊತ್ತಾಗಿದೆ.

ರಾಯಚೂರು ಮಸ್ಕಿಯ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌, ಬನಹಟ್ಟಿಯ ಕಾಡಸಿದ್ದೇಶ್ವರ, ಬಸವನಬಾಗೇವಾಡಿಯ ಬಸವೇಶ್ವರ ಸಹಕಾರ ಬ್ಯಾಂಕ್‌, ಹಡಗಲಿ ಅರ್ಬನ್‌ಕೋ ಆಪರೇಟೀವ್‌ ಬ್ಯಾಂಕ್‌, ಮಡಿಕೇರಿಯ ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌, ತಾಳಿಕೋಟೆಯ ತಾಳಿಕೋಟೆ ಸಹಕಾರಿ ಬ್ಯಾಂಕ್‌, ಕಲಬುರಗಿಯ ಛತ್ರಪತಿ ಶಿವಾಜಿ ಮಹಾರಾಜ ಸಹಕಾರಿ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ಕುರಿತು ತಪಾಸಣೆ ನಡೆಸಿರುವ ಆರ್‌ಬಿಐ ಅಧಿಕಾರಿಗಳು, ಅಲ್ಲಿನ ಹಲವು ಲೋಪಗಳನ್ನು ಪತ್ತೆ ಹಚ್ಚಿರುವುದು ವರದಿಯಿಂದ ತಿಳಿದು ಬಂದಿದೆ.

ಬಂಡವಾಳ ಮತ್ತು ಮೂಲ ಬಂಡವಾಳ ಮೊತ್ತದಲ್ಲಿ ಭಾರೀ ವ್ಯತ್ಯಾಸಗಳನ್ನು ಹೊರಗೆಡವಿರುವ ಆರ್‌ಬಿಐ ತಪಾಸಣೆ ತಂಡ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ನಾನ್‌ ಎಸ್‌ಎಲ್‌ಆರ್‌ನಲ್ಲಿ ಹೂಡಿಕೆ ಮಾಡಿರುವ ಮೊತ್ತ ಶೇಕಡವಾರು ಹೆಚ್ಚಿದೆ ಎಂದು ಪತ್ತೆ ಹಚ್ಚಿರುವುದು ವರದಿಯಿಂದ ಗೊತ್ತಾಗಿದೆ.

ಅದೇ ರೀತಿ ಪಟ್ಟಣ ಸಹಕಾರ ಬ್ಯಾಂಕ್‌ಗಳು ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲವಲ್ಲದೆ ಬಹುತೇಕ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ವೆಚ್ಚವನ್ನು ಆಡಳಿತ ಮಂಡಳಿಗಳು ಪ್ರತಿ ವರ್ಷವೂ ಹೆಚ್ಚಿಸಿದೆ. ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆದಿರುವ ಸಮವರ್ತಿತ ಲೆಕ್ಕಪರಿಶೋಧನೆಯೂ ಕ್ರಮ ಬದ್ಧವಾಗಿಲ್ಲ ಎಂಬ ಅಂಶ ಆರ್‌ಬಿಐನ ಗೌಪ್ಯ ವರದಿಯಿಂದ ತಿಳಿದು ಬಂದಿದೆ.

ಇನ್ನು, ಹಲವು ಬ್ಯಾಂಕ್‌ಗಳು ಹೂಡಿರುವ ಮೊತ್ತದಿಂದ ಬಿಡಿಗಾಸು ಲಾಭಾಂಶ ಗಳಿಸಿಲ್ಲ. ಹೀಗಾಗಿ ಹೂಡಿಕೆ ಮೊತ್ತ ಅನುತ್ಪಾದಕವಾಗಿದೆ. ಆಡಳಿತ ಮಂಡಳಿಯ ಅನುಮತಿ ಇಲ್ಲದೇ ಸಾಲ ನೀಡಿರುವ ಪಟ್ಟಣ ಸಹಕಾರ ಬ್ಯಾಂಕ್‌ಗಳು, ಆಸ್ತಿ ಹೊಣೆಗಾರಿಕೆ ಸಮಿತಿಗಳನ್ನೇ ರಚಿಸಿಲ್ಲ.

ಎನ್‌ಪಿಎ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಆರ್‌ಬಿಐ ನೀಡಿದ್ದ ಕಟ್ಟುನಿಟ್ಟಿನ ಸೂಚನೆಯನ್ನು ಪಟ್ಟಣ ಸಹಕಾರ ಬ್ಯಾಂಕ್‌ಗಳು ಪಾಲಿಸಿಲ್ಲ. ಹಳೆ ಗ್ರಾಹಕರ ಖಾತೆಯನ್ನು ಸರಿಯಾಗಿ ನಿರ್ವಹಿಸದಿರುವುದು, ಅನುಮಾನಸ್ಪದ ವಹಿವಾಟು ನಡೆಸಿರುವುದು, ಠೇವಣಿಗೆ ವಿರುದ್ಧವಾಗಿ ಮುಂಗಡ ನೀಡಿರುವುದು, ಬಡ್ಡಿ ರಹಿತ ವೆಚ್ಚದಲ್ಲಿನ ಏರಿಕೆ, ಹೊಸ ಖಾತೆಗಳನ್ನು ಮರು ಪರೀಕ್ಷಿಸದಿರುವುದು ಸೇರಿದಂತೆ ಹಲವು ಅಕ್ರಮಗಳು ನಡೆದಿರುವುದು ಆರ್‌ಬಿಐ ತಪಾಸಣೆಯಿಂದ ಗೊತ್ತಾಗಿದೆ.

ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆಸಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಗೂ ಆರ್‌ಬಿಐ ತಪಾಸಣೆ ವರದಿ ಮಧ್ಯೆ ಭಾರೀ ವ್ಯತ್ಯಾಸಗಳು ಕಂಡು ಬಂದಿವೆ. ಎನ್‌ಪಿಎಗೆ ಸಂಬಂಧಿಸಿದಂತೆ ನಡೆದಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಯನ್ನು ಬದಿಗೆ ಸರಿಸಿರುವ ಆರ್‌ಬಿಐ ತಪಾಸಣೆ ತಂಡ, ಹೆಚ್ಚಿನ ಮೊತ್ತ ಎನ್‌ಪಿಎ ಆಗಿರುವುದನ್ನು ಪತ್ತೆ ಹಚ್ಚಿದೆ. ಅದೇ ರೀತಿ ನಷ್ಟಕ್ಕೆ ಸಂಬಂಧಿಸಿದಂತೆ ಶಾಸನಬದ್ಧ ಲೆಕ್ಕ ಪರಿಶೋಧನೆ ನೀಡಿರುವ ವರದಿಯ ನೈಜತೆಯನ್ನು ಒರೆಗೆ ಹಚ್ಚಿದೆಯಲ್ಲದೆ ನಷ್ಟದ ಮೊತ್ತದಲ್ಲಿ ಹೆಚ್ಚಳವಾಗಿರುವುದನ್ನು ಬೆಳಕಿಗೆ ತಂದಿರುವುದು ವರದಿಯಿಂದ ತಿಳಿದು ಬಂದಿದೆ.

Tags: B S YediyurappaCaptial AdequacyCash Reserve RatiochiefsecretaryCo Operative BanksConfidentialDCCBForeign Exchangeh d kumarswamyInspectionInvestmentskarnatakaKYCLoan AdvancesManagementNetWorthPattana Sahakari BanksRBIS T SoamshekharSharessiddaramaihaSLR SecuritiesUrban
Advertisement Banner
Previous Post

ಕರ್ನಾಟಕದ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಅಕ್ರಮ; ಆರ್‌ಬಿಐ ಗೌಪ್ಯ ವರದಿ ಬಹಿರಂಗ

Next Post

ರಾಮನಗರ, ಕಲ್ಬುರ್ಗಿಗೆ ಕಳಪೆ ಸ್ಯಾನಿಟೈಸರ್‌ ಪೂರೈಕೆ; ಔಷಧ ನಿಯಂತ್ರಣ ಪ್ರಾಧಿಕಾರ ವರದಿ

ಜಿ ಮಹಂತೇಶ್

ಜಿ ಮಹಂತೇಶ್

Next Post

ರಾಮನಗರ, ಕಲ್ಬುರ್ಗಿಗೆ ಕಳಪೆ ಸ್ಯಾನಿಟೈಸರ್‌ ಪೂರೈಕೆ; ಔಷಧ ನಿಯಂತ್ರಣ ಪ್ರಾಧಿಕಾರ ವರದಿ

Discussion about this post

Recommended

ಲೋಕಾಯುಕ್ತರ ಆಸ್ತಿ ವಿವರ; ಸ್ಪಷ್ಟ ಅಭಿಪ್ರಾಯ ನೀಡಲು ರಿಜಿಸ್ಟ್ರಾರ್‌ಗೆ ನಿರ್ದೇಶನ

4 years ago

ಬೇಲೇಕೇರಿ; ವಿಚಾರಣೆ ಪೂರ್ಣಗೊಳ್ಳದಿದ್ದರೂ ಅದಿರು ಹರಾಜಿಗೆ ಕಸರತ್ತು?

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd