the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಡೆತ್‌ ಆಡಿಟ್‌ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್‌ ಸಾವು

thefilestack by thefilestack
August 17, 2021
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ರಾಜ್ಯದಲ್ಲಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಯುಷ್ಮಾನ್‌ ಭಾರತ್‌ (ಎಬಿ) ಯೋಜನೆಯಡಿ ಕ್ಲೈಮ್‌ ಮಾಡಿರುವ 2,34,247 ಪ್ರಕರಣಗಳ ಪೈಕಿ ಕೇವಲ 14,371 ಮಂದಿಯಷ್ಟೇ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಕ್ಲೈಮ್‌ಗಳ ಪೈಕಿ ಸಾವಿನ ಪ್ರಮಾಣ ಶೇಕಡವಾರು 6ರಷ್ಟಿದೆ. ಅದೇ ರೀತಿ ಕೋವಿಡ್‌ ಬುಲೆಟಿನ್‌ನಲ್ಲಿ (2021ರ ಆಗಸ್ಟ್‌ 2) ನಮೂದಿಸಿರುವ ಸಾವಿನ ಸಂಖ್ಯೆ ಮತ್ತು ಡೆತ್‌ ಆಡಿಟ್‌ನಲ್ಲಿ ಒದಗಿಸಿರುವ ಸಾವಿನ ಸಂಖ್ಯೆ ನಡುವೆ 1,471ಯಷ್ಟೇ ಅಂತರವಿದೆ.

ರಾಜ್ಯದಲ್ಲಾದ ಕೋವಿಡ್‌ ಸಾವಿನ ಬಗ್ಗೆ ನಿಖರವಾದ ಮಾಹಿತಿ (ಡೆತ್‌ ಆಡಿಟ್‌) ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಸಿರುವ ವರದಿಯಿಂದ ಈ ಮಾಹಿತಿ ತಿಳಿದು ಬಂದಿದೆ. ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

2021ರ ಜುಲೈ 31ರ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟು 35,141 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್‌ ಬುಲೆಟಿನ್‌ ಪ್ರಕಾರ 2021ರ ಆಗಸ್ಟ್‌ 2ರ ಅಂತ್ಯಕ್ಕೆ 36,612 ಕೋವಿಡ್‌ ಸಾವು ಸಂಭವಿಸಿದೆ ಎಂದು ಡೆತ್‌ ಆಡಿಟ್‌ನಲ್ಲಿ ಮಾಹಿತಿ ಒದಗಿಸಿರುವುದು ವರದಿಯಿಂದ ತಿಳಿದು ಬಂದಿದೆ.

ಡೆತ್‌ ಆಡಿಟ್‌ನಲ್ಲಿ ನಮೂದಿಸಿರುವ ಕೋವಿಡ್‌ ಸಾವಿನ ಸಂಖ್ಯೆಗೂ ಮತ್ತು ಇದೇ ವರದಿಯಲ್ಲಿ ಕೋವಿಡ್‌ ಬುಲೆಟಿನ್‌ನಲ್ಲಿ ನಮೂದಿಸಿರುವ ಸಾವಿನ ಸಂಖ್ಯೆ ನಡುವೆ ಕೇವಲ 1,471 ವ್ಯತ್ಯಾಸವಿರುವುದು ಕಂಡು ಬಂದಿದೆ. ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ ಸಾವು ಸಂಭವಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವ ಹೊತ್ತಿನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡೆತ್‌ ಆಡಿಟ್‌ನಲ್ಲಿ ಒದಗಿಸಿರುವ ಮಾಹಿತಿಯು ನೈಜತೆಯಿಂದ ಕೂಡಿದೆಯೇ ಎಂಬ ಪ್ರಶ್ನೆಯೂ ಎದುರಾಗಿದೆ.

ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ದಾಖಲಾಗಿ ಸಾವನ್ನಪ್ಪಿರುವ ಕೋವಿಡ್‌ ರೋಗಿಗಳ ಸಂಖ್ಯೆಯೂ ಸೇರಿದಂತೆ ಒಟ್ಟಾರೆ ಕೋವಿಡ್‌ ಸಾವಿನ ಬಗ್ಗೆ ಇಲಾಖೆ ಒದಗಿಸಿರುವ ನಿಖರವಾದ ಮಾಹಿತಿ (ಡೆತ್‌ ಆಡಿಟ್‌)ಯಲ್ಲಿ ಕೋವಿಡ್ ಸಾವುಗಳ ಲೆಕ್ಕವನ್ನು ಕಡಿಮೆ ತೋರಿಸಲಾಗಿದೆ ಎಂಬ ಅನುಮಾನಗಳಿಗೆ ಮತ್ತಷ್ಟು ಪುಷ್ಠೀಕರಿಸಿದಂತಿದೆ.

ಕೋವಿಡ್‌ ಮೊದಲ ಅಲೆ (2020ರ ಜುಲೈನಿಂದ 2021ರ ಜುಲೈವರೆಗೆ)ಯಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಒಟ್ಟು 1,32,409 ಕ್ಲೈಮ್‌ ಮಾಡಲಾಗಿದ್ದರೆ ಈ ಪೈಕಿ 5,220 ಮಾತ್ರ (ಶೇ.4ರಷ್ಟು) ಮತ್ತು ಕೋವಿಡ್‌ ಎರಡನೇ ಅಲೆಯಲ್ಲಿ ವರದಿ ಸಲ್ಲಿಸಿರುವ ದಿನಾಂಕದವರೆಗೆ (2021ರ ಆಗಸ್ಟ್‌ 17) 1,01,938 ಕ್ಲೈಮ್‌ಗಳ ಪೈಕಿ 9,151 ಸೇರಿದಂತೆ ಒಟ್ಟು 14,371 ಮಂದಿ ಮಾತ್ರ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಮಾಹಿತಿ ಒದಗಿಸಿರುವುದು ವರದಿಯಿಂದ ಗೊತ್ತಾಗಿದೆ.

ಕೋವಿಡ್‌ ಸಾವಿನ ಬಗ್ಗೆ ನಿಖರವಾದ ಮಾಹಿತಿ (ಡೆತ್‌ ಆಡಿಟ್‌) ಪ್ರಕಾರ 2021ರ ಜುಲೈ 31ಕ್ಕೆ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟು 35,141 ಸಾವು ಸಂಭವಿಸಿದೆ. ಅಲ್ಲದೇ ಇದೇ ವರದಿಯಲ್ಲಿ 2021ರ ಆಗಸ್ಟ್‌ 2ರ ಅಂತ್ಯಕ್ಕೆ ಒಟ್ಟು ಕೋವಿಡ್‌ ಬುಲೆಟಿನ್‌ ಪ್ರಕಾರ ಸಾವುಗಳ ಸಂಖ್ಯೆ 36,612 ಎಂದು ನಮೂದಿಸಿದೆ. ಇವೆರಡರ ಮಧ್ಯೆ 1,471 ವ್ಯತ್ಯಾಸವಿರುವುದು ವರದಿಯಿಂದ ತಿಳಿದು ಬಂದಿದೆ.

ಡೆತ್‌ ಆಡಿಟ್‌ನಲ್ಲಿ ನಮೂದಿಸಿರುವ ಕೋವಿಡ್‌ ಬುಲೆಟಿನ್ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 2021ರ ಆಗಸ್ಟ್‌ 2ರ ಅಂತ್ಯಕ್ಕೆ 15,885 ಸಾವಿನ ಸಂಖ್ಯೆ ಇದ್ದರೆ 2021ರ ಜುಲೈ 31ರ ಅಂತ್ಯದ ಡೆತ್‌ ಆಡಿಟ್‌ ಪ್ರಕಾರ 15,809 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಇಲಾಖೆಯು ದಾಖಲಿಸಿದೆ.

ಅದೇ ರೀತಿ ಡೆತ್‌ ಆಡಿಟ್‌ ಪ್ರಕಾರ ಮೈಸೂರಿನಲ್ಲಿ 2,078, ದಕ್ಷಿಣ ಕನ್ನಡದಲ್ಲಿ 1,341, ಹಾಸನದಲ್ಲಿ 1,127, ತುಮಕೂರಿನಲ್ಲಿ 1,072, ಧಾರವಾಡದಲ್ಲಿ 1,262, ಶಿವಮೊಗ್ಗದಲ್ಲಿ 1,041 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಇನ್ನುಳಿದ ಜಿಲ್ಲೆಗಳಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಮೂರಂಕಿ ದಾಟಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ಕೋವಿಡ್ ಸಾವುಗಳ ಲೆಕ್ಕವನ್ನು ಕಡಿಮೆ ತೋರಿಸಲಾಗುತ್ತಿದೆ ಎಂದು ಹಲವು ಅಧ್ಯಯನ ಸಂಸ್ಥೆಗಳು ವರದಿ ಪ್ರಕಟಿಸುತ್ತಲೇ ಬಂದಿವೆ. ಕೋವಿಡ್‌ ಎರಡನೇ ಅಲೆಯಲ್ಲಿ ಇಡೀ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದೂ ವರದಿಗಳು ಹೇಳಿದ್ದವು.

ಆದರೆ ಇವುಗಳನ್ನು ಕೋವಿಡ್‌ ಸಾವು ನೋಂದಣಿ ಮಾರ್ಗಸೂಚಿಯ ಅನ್ವಯ ನೋಂದಣಿ ಮಾಡದೇ ಇರುವ ಕಾರಣ ಎಲ್ಲಾ ಕೋವಿಡ್‌ ಸಾವುಗಳು ಲೆಕ್ಕಕ್ಕೇ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಜಿಲ್ಲಾಡಳಿತಗಳು ನೀಡುತ್ತಿರುವ ಸಾವಿನ ಲೆಕ್ಕಕ್ಕೂ, ಚಿತಾಗಾರ ಮತ್ತು ಸ್ಮಶಾನಗಳಲ್ಲಿ ನಡೆದ ಅಂತ್ಯಕ್ರಿಯೆಗಳ ಸಂಖ್ಯೆಗೂ ಭಾರಿ ಅಂತರವಿದೆ ಎಂಬ ಮಾತುಗಳು ಕೇಳಿ ಬಂದಿತ್ತು.

Tags: Basavaraj BommaiChief SecretaryCovid Death AuditCovid DeathsCovid19D K ShivakumarDR C N Ashwath Narayandr k sudhakarh d kumarswamyN Ravikumar MLCP RavikumarPublic Accounts CommitteeR Ramlinga ReddySiddaramaiahSuvarna Aarogya Suraksha TrustTrilokChandra IASಆರ್‌ ರಾಮಲಿಂಗಾರೆಡ್ಡಿಎಚ್‌ ಡಿ ಕುಮಾರಸ್ವಾಮಿಎನ್‌ ರವಿಕುಮಾರ್‌ ಎಂಎಲ್‌ಸಿಕೋವಿಡ್‌ 19ಕೋವಿಡ್‌ ಸಾವುಗಳುಕೋವಿಡ್‌ ಸಾವುಗಳೂಡಾ ಕೆ ಸುಧಾಕರ್‌ಡಾ ಸಿ ಎನ್ ಅಶ್ವಥ್‌ನಾರಾಯಣ್ಡಿ ಕೆ ಶಿವಕುಮಾರ್ತ್ರಿಲೋಕ್‌ಚಂದ್ರ ಐಎಎಸ್‌ಪಿ ರವಿಕುಮಾರ್‌ಬಸವರಾಜ ಬೊಮ್ಮಾಯಿಮುಖ್ಯ ಕಾರ್ಯದರ್ಶಿಸಾರ್ವಜನಿಕ ಲೆಕ್ಕಪತ್ರ ಸಮಿತಿಸಿದ್ದರಾಮಯ್ಯಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌
Advertisement Banner
Previous Post

ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್‌ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ

Next Post

ಬ್ಯಾಂಕ್‌ ಖಾತೆಗಳ ವಿವರ ಪಡೆಯದೇ ಜಮಖಂಡಿ ಷುಗರ್ಸ್‌ಗೆ 272 ಕೋಟಿ ಸಾಲ ಮಂಜೂರು

thefilestack

thefilestack

Next Post

ಬ್ಯಾಂಕ್‌ ಖಾತೆಗಳ ವಿವರ ಪಡೆಯದೇ ಜಮಖಂಡಿ ಷುಗರ್ಸ್‌ಗೆ 272 ಕೋಟಿ ಸಾಲ ಮಂಜೂರು

Discussion about this post

Recommended

40 ತಹಶೀಲ್ದಾರ್‍‌ಗಳ ವರ್ಗಾವಣೆಗೆ ಸಿಎಂ, ಸಚಿವರು, ಶಾಸಕರ ಶಿಫಾರಸ್ಸು;ಶುರುವಾದ ವರ್ಗಾವರ್ಗೀ ದಂಧೆ

3 years ago

ಅಧಿಕಾರಶಾಹಿ ನಿರ್ಲಕ್ಷ್ಯ; ಐಎಎಸ್‌ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯರಿಂದ ಹಕ್ಕುಚ್ಯುತಿ?

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd