the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಬೊಕ್ಕಸಕ್ಕೆ 2,362 ಕೋಟಿ ಹೊರೆ; ಸುಗ್ರೀವಾಜ್ಞೆ ಬೆನ್ನಲ್ಲೇ ತಿದ್ದುಪಡಿ ವಿಧೇಯಕ ಮಂಡನೆಗೆ ಸಿದ್ಧತೆ

thefilestack by thefilestack
December 6, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಈಗಾಗಲೇ ಸಂಗ್ರಹಿಸಿರುವ 2,362 ಕೋಟಿ ರು.ಗಳ ಮರು ಪಾವತಿ ಮಾಡುವುದರಿಂದ ಎದುರಾಗುವ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ 2021ನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಡೆಸಿದ್ದ ಸಿದ್ಧತೆಯು ಅಂತಿಮ ಹಂತಕ್ಕೆ ತಲುಪಿದೆ.

ಈ ವಿಧೇಯಕಕ್ಕೆ ಈಗಾಗಲೇ ಸುಗ್ರೀವಾಜ್ಞೆ ಮೂಲಕ ರಕ್ಷಣೆ ಪಡೆದಿದ್ದ ಸರ್ಕಾರವು ಇದೀಗ ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಮುಂದಾಗಿದೆ. ಈ ವಿಧೇಯಕವು ಅಧ್ಯಾದೇಶದ ಬದಲಿ ವಿಧೇಯಕವಾಗಿದೆ. ಇದರ ಕರಡು ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮೂಲಕ ಸಂಗ್ರಹಿಸಲಾದ ಶುಲ್ಕವನ್ನು ಈಗಾಗಲೇ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಉಪಯೋಗಿಸಿಕೊಂಡಿರುವುದರಿಂದ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಗೆ ಅದನ್ನು ಮರು ಪಾವತಿಸಲು 2,362 ಕೋಟಿ ಆರ್ಥಿಕ ಹೊರೆ ಉದ್ಭವಿಸಲಿದೆ.

ಹೀಗಾಗಿ ‘ ಬಿಬಿಎಂಪಿಯು ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಪ್ರಾರಂಭ ಪ್ರಮಾಣಪತ್ರದ ಅನುಮತಿ ಹಾಗೂ ಕಟ್ಟಡ ಮುಕ್ತಾಯ ಪ್ರಮಾಣಪತ್ರವನ್ನು ಮಂಜೂರು ಮಾಡುವ ಸಮಯದಲ್ಲಿ ಸಂಗ್ರಹಿಸಲಾದ ಫೀಜು ಮತ್ತು ದಂಡಗಳನ್ನು ಮಾನ್ಯಗೊಳಿಸುವುದಕ್ಕಾಗಿ ಹಾಗೂ ಮಂಡಳಿ, ನಿಗಮ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಮಾಲೀಕತ್ವವಿರುವ ಅಥವಾ ನಿಯಂತ್ರಣದಲ್ಲಿರುವ ಸಂಸ್ಥೆಗೆ ಅಂಥ ಶುಲ್ಕದ ಪಾವತಿಯಿಂದ ವಿನಾಯಿತಿ ನೀಡಿರುವುದನ್ನು ಸಹ ಪೂರ್ವಾನ್ವಯವಾಗಿ ಜಾರಿಗೆ ತರಲು ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976 (1977ರ ಕರ್ನಾಟಕ ಅಧಿನಿಯಮ 14) ಮತ್ತು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಅಧಿನಿಯಮ, 2020(2020ರ ಕರ್ನಾಟಕ ಅಧಿನಿಯಮ 53)ನ್ನು ತಿದ್ದುಪಡಿ ಮಾಡುವುದು ಅವಶ್ಯಕ ಎಂದು ಪರಿಗಣಿಸಿದೆ,’ ಎಂದು ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಿತ್ತು. ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿತ್ತು ಅಧ್ಯಾದೇಶಕ್ಕೆ ರಾಜ್ಯಪಾಲರು ಇತ್ತೀಚೆಗಷ್ಟೇ ಅಂಕಿತ ಹಾಕಿದ್ದರು.

ಪರವಾನಗಿ ಶುಲ್ಕ, ಪರವಾನಗಿ ಪಡೆದು ನಿರ್ಮಿಸಿದ ಕಟ್ಟಡ ಸುರಕ್ಷತೆ, ಮಂಜೂರಾದ ನಕ್ಷೆಗೆ ಅನುಗುಣವಾಗಿ ಕಟ್ಟಡ ನಿರ್ಮಾಣವಾಗಿರುವುದನ್ನು‌ ಖಚಿತಪಡಿಸಲು ಭದ್ರತೆ, ಪ್ರಾರಂಭಿಕ ಪ್ರಮಾಣಪತ್ರ, ಅಧಿಭೋಗ ಪ್ರಮಾಣಪತ್ರ, ನೆಲಬಾಡಿಗೆ ಮತ್ತಿತರ ರೂಪದಲ್ಲಿ ಈವರೆಗೆ ಸುಮಾರು 2,362 ಕೋಟಿ ರು. ಸಂಗ್ರಹಿಸಿದೆ.

ವಲಯ ರಚನೆ, ಕಟ್ಟಡ ಉಪ ವಿಧಿಗಳಲ್ಲಿ ನಿರ್ದಿಷ್ಟಪಡಿಸಬಹುದಾದ ನಿರ್ಬಂಧಗಳಿಗೆ ಮತ್ತು ಷರತ್ತುಗಳಿಗೆ ಒಳಪಟ್ಟು ಭೂಮಿಯ ನಿವೇಶನ ನಕ್ಷೆ, ಭೂ ನಕ್ಷೆ, ಕಟ್ಟಡದ ಎತ್ತರಿಸುವಿಕೆ, ವಿಭಾಗದೊಂದಿಗೆ ಕಾಮಗಾರಿಯನ್ನು ಕಾರ್ಯಗತಗೊಳಿಸಲು ಆಯುಕ್ತರು ಅನುಮತಿ ನೀಡಬಹುದು. ಅಥವಾ 303ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಷರತ್ತುಗಳಿಗೆ ಒಳಪಟ್ಟು ಅಂತಹ ಲೈಸೆನ್ಸ್‌ನ್ನು ನೀಡಲು ನಿರಾಕರಿಸಬಹುದು ಎಂದು ತಿದ್ದುಪಡಿ ವಿಧೇಯಕದ 299ಎ ನಲ್ಲಿ ವಿವರಿಸಲಾಗಿದೆ.

ಅದೇ ರೀತಿ ನಕ್ಷೆ ಅನುಮೋದಿಸಲು, ಮಂಜೂರು ಮಾಡುವುದು ಅಥವಾ ಪ್ರಾರಂಭ ಪ್ರಮಾಣಪತ್ರ, ಪೂರ್ಣಗೊಳಿಸಿದ ಪ್ರಮಾಣಪತ್ರವನ್ನು ನೀಡಲು ಕರ್ನಾಟಕ ಸ್ಟಾಂಪ್‌ ಅಧಿನಿಯಮ, 1957ರ ಉಪಬಂಧಗಳ ಅಡಿಯಲ್ಲಿ ಸ್ಟಾಂಪ್‌ಗಳು ಮತ್ತು ನೋಂದಣಿ ಇಲಾಖೆ ನಿಗದಿಪಡಿಸಿದ ಮಾರ್ಗಸೂಚಿ ಮೌಲ್ಯವನ್ನಾಧರಿಸಿದಂಥ ದರಗಳಲ್ಲಿ ಶುಲ್ಕವನ್ನು ವಿಧಿಸಬಹುದು ಮತ್ತು ವಸೂಲು ಮಾಡಬಹುದು ಎಂದು ಹೇಳಲಾಗಿದೆ.

ಮಾರ್ಗಸೂಚಿ ಮೌಲ್ಯದ ಪ್ರಕಾರ ಈ ದರ ನಿಗದಿಗೆ ಬಿಬಿಎಂಪಿ ತನ್ನ ಬೈಲಾದಲ್ಲಿ ಅವಕಾಶ ಮಾಡಿಕೊಂಡಿತ್ತು. ಶುಲ್ಕ ವಸೂಲಿಯು ಕಾನೂನು ಬಾಹಿರ ಎಂದು ಹಲವರು ನ್ಯಾಯಾಲಯದ ಕಟಕಟೆಯೇರಿದ್ದರು. ಅಲ್ಲದೆ ಶುಲ್ಕ ವಸೂಲಾತಿಯು ಬೈಲಾದಲ್ಲಿದೆಯೇ ಹೊರತು ಕಾಯ್ದೆ ಬದ್ಧವಾಗಿಲ್ಲ ಎಂಬುದು ಪರಿಶೀಲನೆ ವೇಳೆ ದೃಢಪಟ್ಟಿತ್ತು. ಒಂದೊಮ್ಮೆ ಹೈಕೋರ್ಟ್ ಆದೇಶ ಹೊರಡಿಸಿದರೆ ವಸೂಲಿ ಮಾಡಿರುವ 2, 362 ಕೋಟಿ ರು.ಗಳನ್ನು ತೆರಬೇಕಾಗುತ್ತದೆ.

ಹೀಗಾಗಿ ಬಿಬಿಎಂಪಿಯ ಮೇಲೆ ಬೀಳುವ ಆರ್ಥಿಕ ಹೊರೆ ತಪ್ಪಿಸಲು ಸರ್ಕಾರ ಧಾವಿಸಿತ್ತು. ಅಲ್ಲದೆ ಕಾಯ್ದೆ ತಿದ್ದುಪಡಿ ಅಧ್ಯಾದೇಶ ಹೊರಡಿಸಿತ್ತು. ಈಗಾಗಲೇ ವಸೂಲು ಮಾಡಿರುವ ಶುಲ್ಕವನ್ನು ಮರು ಸಂದಾಯ ಮಾಡುವಂತೆ ಕೇಳುವಂತಿಲ್ಲ. ಯಾವುದೇ ನ್ಯಾಯಾಲಯ ಈ ಕುರಿತು ಡಿಕ್ರಿ ಅಥವಾ ಆದೇಶ ಹೊರಡಿಸುವಂತಿಲ್ಲ ಎಂದು ಸುಗ್ರೀವಾಜ್ಞೆ ಹೊರಡಿಸಲಾಗಿತ್ತು.

Tags: B S YediyurappaBasavaraj BommaiBBMPByratiBasavarajChief SecretaryD K Shivakumarh d kumarswamyMuncipal CorporationSiddaramaiahUrban Developmentಅಧ್ಯಾದೇಶಎಚ್‌ ಡಿ ಕುಮಾರಸ್ವಾಮಿಕರ್ನಾಟಕ ನಗರಪಾಲಿಕೆಗಳ ಅಧಿನಿಯಮಡಿ ಕೆ ಶಿವಕುಮಾರ್ತಿದ್ದುಪಡಿ ವಿಧೇಯಕಪರವಾನಿಗೆ ಶುಲ್ಕಬಿ ಎಸ್‌ ಯಡಿಯೂರಪ್ಪಮುಖ್ಯ ಕಾರ್ಯದರ್ಶಿರಾಜ್ಯಪಾಲರುಸಚಿವ ಸಂಪುಟಸಿದ್ದರಾಮಯ್ಯಸುಗ್ರೀವಾಜ್ಞೆ
Advertisement Banner
Previous Post

ಚರ್ಚ್‌ಗಳ ಮೇಲೆ ಗೂಢಚಾರಿಕೆ; ಒಳಾಡಳಿತ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ

Next Post

ನೇರ ನಗದು ವರ್ಗಾವಣೆ; ಇಲಾಖೆಗಳಲ್ಲಿಲ್ಲ ತಂತ್ರಾಂಶ, ಸರ್ಕಾರದ ಮುಖವಾಡ ಕಳಚಿತು ಇ-ಆಡಳಿತ

thefilestack

thefilestack

Next Post

ನೇರ ನಗದು ವರ್ಗಾವಣೆ; ಇಲಾಖೆಗಳಲ್ಲಿಲ್ಲ ತಂತ್ರಾಂಶ, ಸರ್ಕಾರದ ಮುಖವಾಡ ಕಳಚಿತು ಇ-ಆಡಳಿತ

Recommended

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

9 months ago

ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd